HOLY ROSARY CHURCH, KUNDAPUR – 450 th JUBILEE SOUVENIR 2021

ವಿಮಾನದೊಳಗೂ ಗಂಡ ಹೆಂಡಿರ ನಡುವೆ ಜಗಳ:ವಿಮಾನ ನವದೆಹಲಿಯಲ್ಲಿ ತುರ್ತು ಭೂಸ್ಪರ್ಶ

ಉಡುಪಿ: ವಿದೇಶದಲ್ಲಿ ಉದ್ಯೋಗದ ಆಸೆ ತೋರಿಸಿ ಮೋಸ – ಇಬ್ಬರ ವಿರುದ್ಧ ದೂರು ದಾಖಲು

ಕೊಲೆಯಾದ ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸನ್ ಅವರ ಕೊಲೆ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು : ಎಂ.ವೆಂಕಟಸ್ವಾಮಿ ಆಗ್ರಹ

ಕುಂದಾಪುರ ರೊಜಾರಿ ಮಾತಾ ಇಗರ್ಜಿಯ ವಾರ್ಷಿಕ ಮಹಾ ಉತ್ಸವ – ನಾವು ಸಂಪೂರ್ಣವಾಗಿ ಮೇರಿ ಮಾತೆಗೆ ಸಮರ್ಪಿಸಿಕೊಳ್ಳೋಣ- ಮೊನ್ಸಿಂಜ್ಞೊರ್ ಫರ್ಡಿನಾಂಡ್

ಕುಂದಾಪುರ ತೆರಾಲಿಯ ಸಂಭ್ರಮ – ರೋಜರಿ ಜಪಮಣಿಯ ಪ್ರಾರ್ಥನೆಯಲ್ಲಿ ಬಹಳ ಶಕ್ತಿ ಇದೆ – ಫಾ|ಅಶ್ವಿನ್ ಡಿಸಿಲ್ವಾ

ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಮಾಡುವ ಕುಂದಾಪುರದ ಶಾಸಕರು:ಮೊಳಹಳ್ಳಿ ದಿನೇಶ್ ಹೆಗ್ಡೆ

ನಂಜನಗೂಡು ತಾಲೂಕಿನ ಮಹಿಳೆಯೊಬ್ಬರನ್ನು ಬಲಿ ಪಡೆದ ಸೆರೆ-ಕಾರ್ಯಾಚರಣೆಗೆ 200 ಸಿಬ್ಬಂದಿ, 3 ಆನೆ, ಡ್ರೋನ್ ಕ್ಯಾಮೆರಾ ಬಳಕೆ

ಹುಲಿ ದಾಳಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೀಪುರದ ಅರಣ್ಯಾಧಿಕಾರಿಗಳು ಮಿಡ್‌ನೈಟ್ ಆಪರೇಷನ್ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.ಸೆರೆಸಿಕ್ಕ ಹುಲಿ ಮಹಿಳೆಯ ಮೇಲೆ ದಾಳಿ ನಡೆಸಿ ಆಕೆಯನ್ನು ಬಲಿ ಪಡೆದಿತ್ತು. ಮಹಿಳೆ ಮಾತ್ರವಲ್ಲದೇ ಈ ಹುಲಿ ಎರಡು ಜಾನುವಾರುಗಳನ್ನೂ ಕೊಂದಿತ್ತು. ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳ ಸಭೆ ನಡೆಸಿ ಶೀಘ್ರವೇ ಹುಲಿ ಸೆರೆಗೆ ಸೂಚಿಸಿದ್ದರು. ಇದೀಗ ಬಂಡೀಪುರದ ಅರಣ್ಯಾಧಿಕಾರಿಗಳ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಸುಮಾರು 10 ವರ್ಷ ವಯಸ್ಸಿನ ಹುಲಿಯನ್ನು ರಾತ್ರಿ ಕಾರ್ಯಾಚರಣೆ ಮೂಲಕ ಸೆರೆಹಿಡಿದಿದ್ದಾರೆ.

ಈ ಹುಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿ ಬಳಿ ಮಹಿಳೆಯೊಬ್ಬರನ್ನು ಬಲಿ ಪಡೆದಿತ್ತು. ರಾತ್ರಿ 2 ಗಂಟೆ ಸಮಯದಲ್ಲಿ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದಿದ್ದಾರೆ. ಜಾನುವಾರು ಮಾಂಸ ತಿನ್ನಲು ಕಳೆದ ಎರಡು ದಿನದಿಂದ ಜಾನುವಾರು ಸತ್ತ ಸ್ಥಳದ ಬಳಿ ಹುಲಿಯ ಚಲನವಲನ ಪತ್ತೆಯಾಗಿತ್ತು. ಕ್ಯಾಮೆರಾ ಟ್ರ್ಯಾಪ್‌ನಲ್ಲೂ ಹುಲಿಯ ಚಲನವಲನ ಪತ್ತೆಯಾಗಿತ್ತು. ರಾತ್ರಿ ಬೋನಿನೊಳಗೆ ಸಿಬ್ಬಂದಿ ಇರಿಸಿ, ಮರೆಮಾಚಿ ನೈಟ್ ಆಪರೇಷನ್ ಮಾಡಲಾಗಿದೆ. ಪಶುವೈದ್ಯ ವಾಸೀಂ ಮಿರ್ಜಾ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಬೋನಿನೊಳಗೆ ಇರಿಸಿದ್ದರು. ರಾತ್ರಿ ಜಾನುವಾರು ಕೊಂದ ಸ್ಥಳಕ್ಕೆ ಮಾಂಸ ತಿನ್ನಲು ಹುಲಿ ಬಂದ ವೇಳೆ ವೈದ್ಯರು ಬೋನಿನಲ್ಲೇ ಕುಳಿತು ಅರವಳಿಕೆ ಚುಚ್ಚುಮದ್ದು ಕೊಟ್ಟಿದ್ದಾರೆ.

ಜನರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಸೆರೆಯಾಗಿದೆ. ಹುಲಿ ಸೆರೆಗೆ 200 ಸಿಬ್ಬಂದಿ, 3 ಆನೆ, ಕ್ಯಾಮೆರಾ ಟ್ರ‍್ಯಾಪ್, ಡ್ರೋನ್ ಬಳಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಡೀಪುರ ಅರಣ್ಯದ ಹೆಡಿಯಾಲ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಹುಲಿ ಸೆರೆಯಿಂದ ಕಾಡಂಚಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಹಿಡಿದ ಹುಲಿಯನ್ನು ಅಧಿಕಾರಿಗಳು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಬಿಟ್ಟಿದ್ದಾರೆ.

ಶಾಸಕ ಸುನೀಲ್ ಕುಮಾರ್ ಜಿಲ್ಲಾ ಎಸ್ಪಿ ಮೇಲೆ ಕ್ಷುಲ್ಲಕ ಕಾರಣಹೊರಿಸಿ ಹರಿಹಾಯ್ದ ಅಸಾಂವಿಧಾನಿಕ ನಡೆಯ ಹಿಂದೆ ಪೂರ್ವನಿಯೋಜಿತ ಸಂಚು ಅಡಗಿದೆ:ಅಶೋಕ್ ಕುಮಾರ್ ಕೊಡವೂರು

ಕ್ರಿಸ್ತರಾಜರ ಮಹೋತ್ಸವ ಪ್ರಯುಕ್ತ ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ