HOLY ROSARY CHURCH, KUNDAPUR – 450 th JUBILEE SOUVENIR 2021

ಶ್ರೀನಿವಾಸಪುರದಲ್ಲಿ ಪುನೀತ್ ರಾಜ್‍ಕುಮಾರ್ ಪುಣ್ಯತಿಥಿ ಪ್ರಯುಕ್ತ ಅಪ್ಪು ಅಭಿಮಾನಿಗಳ ಸಂಘದಿಂದ ಅನ್ನದಾನ

ಶ್ರೀನಿವಾಸಪುರದಲ್ಲಿ ಪುನೀತ್ ರಾಜ್‍ಕುಮಾರ್ ಪುಣ್ಯತಿಥಿ ಪ್ರಯುಕ್ತ ಅಪ್ಪು ಅಭಿಮಾನಿಗಳ ಸಂಘದಿಂದ ಶನಿವಾರ ಏರ್ಪಡಿಸಿದ್ದ ಅನ್ನದಾನ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಚಾಲನೆ ನೀಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ಸಂಘದ ಅಧ್ಯಕ್ಷ ಎಸ್.ಎಚ್.ನಾರಾಯಣಮೂರ್ತಿ ಇದ್ದರು.

ಕೆಂಪೇಗೌಡರ ಆಡಳಿತ ಮಾದರಿಯಾಗಿದೆ : ಡಾ. ವೈ.ಎ.ನಾರಾಯಣಸ್ವಾಮಿ

ಶ್ರೀನಿವಾಸಪುರ: ಕೆಂಪೇಗೌಡರ ಆಡಳಿತ ಮಾದರಿಯಾಗಿದೆ.ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಬಾಲಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಸ್ಥಾಪನೆ ಪ್ರಯುಕ್ತ ಶನಿವಾರ ಏರ್ಪಡಿಸಿದ್ದ ಮೃತ್ತಿಕೆ ಸಂಗ್ರಹ ರಥಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ಸಮೀಪ ಕೆಂಪೇಗೌಡರ ಪುತ್ಥಳಿ ಸ್ಥಾಪನೆ ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.
ಪುತ್ಥಳಿ ಅನಾವಣರಣ ಕಾರ್ಯಕ್ರಮ ನ.11 ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಪುತ್ಥಳಿ ಅನಾವರಣಗೊಳ್ಳಲಿದೆ. ಕಾರ್ಯಕ್ರಮ ಜಾತ್ಯಾತೀತ ಹಾಗೂ ಪಕ್ಷಾತೀತವಾಗಿದ್ದು, ಸಮಾಜದ ಎಲ್ಲ ವರ್ಗದ ಜನರೂ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು. ನಾಡಿನ ಘನತೆ ಎತ್ತಿಹಿಡಿಯಬೇಕು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್, ಮಾಜಿ ಶಾಸಕ ಬಿ.ಬಿ.ವೆಂಕಟಮುನಿಯಪ್ಪ, ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ತಾಲ್ಲೂಕು ಒಕ್ಕಲಿಗರ ಸಂಘದ ಮುಖಂಡರಾದ ದಿಂಬಾಲ ಅಶೋಕ್, ಡಾ. ವೈ.ವಿ.ವೆಂಕಟಾಚಲ, ಎನ್.ಹನುಮೇಶ್ ವೇಣುಗೋಪಾಲರೆಡ್ಡಿ, ಸತ್ಯನಾರಾಯಣ, ಮುಖಂಡರಾದ ಕೆ.ಕೆ.ಮಂಜುನಾಥರೆಡ್ಡಿ, ಎಂ.ಲಕ್ಷ್ಮಣಗೌಡ, ಜೆಸಿಬಿ ಅಶೋಕ್‍ರೆಡ್ಡಿ, ವಾಸುದೇವ್, ಅಶೋಕ್‍ರೆಡ್ಡಿ, ವಿ.ನಿಶಾಂತ್ ಕುಮಾರ್ ಪುರಸಭೆ ಮುಖ್ಯಾಧಿಕಾರಿ ಎಂ.ಜಯರಾಂ ಮತ್ತಿತರರು ಇದ್ದರು.

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿದ್ದು, ಎಲ್ಲ ವರ್ಗದ ಜನರೂ ಅವರನ್ನು ಬೆಂಬಲಿಸಬೇಕು:ಶಾಸಕ ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿದ್ದು, ಎಲ್ಲ ವರ್ಗದ ಜನರೂ ಅವರನ್ನು ಬೆಂಬಲಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ, ತಾಲ್ಲೂಕು ವಾಲ್ಮೀಕಿ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕೈಗೊಂಡ ನಿರ್ಧಾರದಿಂದಾಗಿ ಬಡವರು, ಅನ್ನ ತಿನ್ನುವಂತಾಗಿದೆ. ಬಡವರಿಗೆ ಅಕ್ಕಿ ನೀಡಿದ ಪರಿಣಾಮವಾಗಿ ಹಸಿವು ಮುಕ್ತ ಕರ್ನಾಟಕದ ಕನಸು ನನಸಾಗಿದೆ. ಬಡವರ ಪರ ಕಾಳಜಿ ಇರುವ ಸಿದ್ದರಾಮಯ್ಯ ಅವರನ್ನು ಆರಿಸಿ ಕಳುಹಿಸಿದರೆ ಹೆಚ್ಚಿನ ಪ್ರಯೋಜನವಾಗುತ್ತದೆ ಎಂದು ಹೇಳಿದರು.
ರಾಮಾಯಣ ಮಹಾಕಾವ್ಯ ನೀಡಿದ ಮಹರ್ಷಿ ವಾಲ್ಮೀಕಿ ನಿತ್ಯ ಸ್ಮರಣೀಯರು. ಅವರು ರಚಿಸಿದ ಮಹಾಕಾವ್ಯ ನಿತ್ಯ ನೂತನವಾಗಿದೆ. ವಾಲ್ಮೀಕಿ ಸಮುದಾಯ ಸಂವಿಧಾನ ನೀಡಿರುವ ಹಕ್ಕುಗಳಿಗಾಗಿ ಸಾಂಘಿಕ ಪ್ರಯತ್ನ ನಡೆಸಬೇಕು. ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಮಹರ್ಷಿ ವಾಲ್ಮೀಕಿ ತಮ್ಮ ಕೃತಿಯ ಮೂಲಕ ಸಮಾಜದ ಎಲ್ಲ ವರ್ಗದ ಜನರ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರ ಕಾವ್ಯ ಹಲವು ಶತಮಾನಗಳಿಂದ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್, ಸಮಾಜ ಕಲ್ಯಾಣ ಅಧಿಕಾರಿ ಶಿಕುಮಾರ್, ಮುಖಂಡರಾದ ಮ್ಯಾಕಲ ನಾರಾಯಣಸ್ವಾಮಿ, ಗೋವಿಂದಸ್ವಾಮಿ, ಅಂಬರೀಶ್, ದಿಂಬಾಲ ಅಶೋಕ್, ಎನ್.ಹನುಮೇಶ್, ನರೇಶ್, ಎಚ್.ಎನ್.ಆಂಜಿನಪ್ಪ, ರೋಣೂರು ಚಂದ್ರಶೇಖರ್, ಕೆ.ನಾಗರಾಜ ನಾಯಕ್, ರಾಮಕೃಷ್ಣ, ವಿಠ್ಠಲ್ ನಾರಾಯಣ್, ಕೆ.ಕೆ.ಮಂಜು, ಸರಸ್ವತಮ್ಮ, ರಾಮಾಂಜಮ್ಮ ಇದ್ದರು.
ಮೆರವಣಿಗೆ: ಪಟ್ಟಣದ ತಾಲ್ಲೂಕಿನ ಬೇರೆ ಬೇರೆ ಕಡೆಗಳಿಂದ ವಾಹನಗಳಲ್ಲಿ ತರಲಾಗಿದ್ದ ವಾಲ್ಮೀಕಿ ಭಾವ ಚಿತ್ರ ಮೆರವಣಿಗೆ ಏರ್ಪಡಿಸಲಾಗಿತ್ತು. ಮೆರವಣಿಗೆಯಲ್ಲಿ ಕಲಾ ತಂಡಗಳು ಭಾಗವಹಿಸಿ ಪ್ರದರ್ಶನ ನೀಡಿದವು. ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಜನರು ಭಾಗವಹಿಸಿದ್ದರು.

ಡಾ. ರಾಜ್ ಸಂಘಟನೆಯಿಂದ ಪುನೀತ ರಾಜ್ ಕುಮಾರ್ ಸ್ಮರಣೆ

ಕುಂದಾಪುರ : ಎಷ್ಟೋ ಜನರ ಬಾಳಿಗೆ ಬೆಳಕಾಗಿದ್ದ ಅಪ್ಪು ಇಲ್ಲದೆ ವರುಷವೊಂದು ಕಳೆದು ಹೋಗಿದೆ ಕನ್ನಡ ಚಿತ್ರರಂಗದ ದಂತ ಕತೆಯಾಗಿರುವ ಪುನೀತ್ ರಾಜ್ ಕುಮಾರ್ ಸೂರ್ಯ ಚಂದ್ರರಿರುವ ತನಕ ಅಭಿಮಾನಿಗಳ ಹೃದಯದಲ್ಲಿ ಸದಾ ಜೀವಂತರಾಗಿರುತ್ತಾರೆ. ಎಂದು ಕನ್ನಡಾಭಿಮಾನಿ ಡಾ.ರಾಜ್ ಸಂಘಟನೆಯ ಅಧ್ಯಕ್ಷ ರತ್ನಾಕರ ಪೂಜಾರಿಯವರು ಹೇಳಿದರು.ಅವರು ಸಂಘ ವತಿಯಿಂದ ಕುಂದಾಪುರ ಹೊಸ ಬಸ್ ನಿಲ್ದಾಣದಲ್ಲಿ ಆಯೋಜಿಸಲಾದ ಪುನೀತ ಸ್ಮರಣೆ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಚಿತ್ರಕ್ಕೆ ದೀಪ ಹಚ್ಚಿ ಮಾತನಾಡಿದರು.
ಮೊಂಬತ್ತಿ ಬೆಳಗಿಸುವುದರ ಮೂಲಕ ಒಂದು ನಿಮಿಷ ಮೌನವನ್ನುಆಚರಿಸಲಾದ ಕಾರ್ಯಕ್ರಮದಲ್ಲಿ ಸಂಘದ ಅಗಸ್ಟಿನ್ ಡಿಸೋಜಾ,ದುಂಡಿರಾಜ್, ಹರ್ಷ ಖಾರ್ವಿ,ಶ್ರೀಧರ ಗಾಣಿಗ, ಗಾಳಿ ಮಾಧವ ಖಾರ್ವಿ,ಪ್ರಭಾಕರಖಾರ್ವಿ,ಕೋಡಿ ಶಂಕರ, ಸಂತೋಷ್ ಕುಂದೇಶ್ವರ್, ಗುರು ಖಾರ್ವಿ,ಕಿಶನ್ ಖಾರ್ವಿ,ನಾರಾಯಣ ಗಾಣಿಗ ತೆಕ್ಕಟ್ಟೆ ಸಹಿತ ಹಲವಾರು ಸಾರ್ವಜನಿಕರು ಭಾಗವಹಿಸಿದ್ದರು .ಸುನಿಲ್ ಕುಮಾರ್ ತಲ್ಲೂರು ಸ್ವಾಗತ ಕೋರಿದರು.ಪತ್ರಕರ್ತ ಮಝರ್ ಕುಂದಾಪುರ ನಿರೂಪಿಸಿದರು.

ಕುಂದಾಪುರ ಸೈಂಟ್ ಮೇರಿಸ್ ಸಮೂಹ ಸಂಸ್ಥೆ: ಕೋಟಿ ಕಂಠ ಗಾಯನ


ಕುಂದಾಪುರ:ಇಲ್ಲಿನ ಸೈಂಟ್ ಮೇರಿಸ್ ಸಮೂಹ ಸಂಸ್ಥೆಯಾದ ಸೈಂಟ್ ಮೇರಿಸ್ ಪ್ರೌಢಶಾಲೆ, ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ,ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜ್, ಹೋಲಿ ರೋಜರಿ ಆ.ಮಾ.ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬೃಹತ್ ಕೋಟಿ ಕಂಠ ಗಾಯನ ಕಾರ್ಯಕ್ರಮ ಶುಕ್ರವಾರ ಸಂಭ್ರಮದಿಂದ ನಡೆಯಿತು.

ಸೈಂಟ್ ಮೇರಿಸ್ ಸಮೂಹ ಸಂಸ್ಥೆಯ ಸಮಾರು 1300 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು.


ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ,ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಶುಂಪಾಲೆ ರೇಷ್ಮಾ ಫರ್ನಾಂಡೀಸ್, ಸೈಂಟ್ ಮೇರಿಸ್ ಹಿ.ಪ್ರಾ ಶಾಲಾ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್, ಹೋಲಿ ರೋಜರಿ ಆ.ಮಾ.ಶಾಲೆ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೆಜಾ ಶಾಂತಿ, ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಕಿ ಗೀತಾ ಸ್ವಾಗತಿಸಿದರು. ಎನ್‍ಸಿಸಿ ಹಿರಿಯ ಅಧಿಕಾರಿ ಭಾಸ್ಕರ ಗಾಣಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಸ್ಟರ್ ಚೇತನಾ ಸಂಕಲ್ಪವಿಧಿ ಭೋದಿಸಿದರು. ಶಿಕ್ಷಕ ಪ್ರಶಾಂತ್ ಲುಯಿಸ್ ವಂದಿಸಿದರು. ಉಪನ್ಯಾಸಕ ನಾಗರಾಜ ಶೆಟ್ಟಿಕಾರ್ಯಕ್ರಮ ನಿರೂಪಿಸಿದರು

ಕಥೊಲಿಕ್ ಸಭಾ ಕುಂದಾಪುರ ಘಟಕದಿಂದ ಸರಕಾರಿ ಅರೋಗ್ಯ ಕಾರ್ಡುಗಳ ನೋಂದಾವಣೆ ಕಾರ್ಯಕ್ರಮ


ಕುಂದಾಪುರ, ಅ.30: ಕಥೊಲಿಕ್ ಸಭಾ ಕುಂದಾಪುರ ಘಟಕದಿಂದ ಅರೋಗ್ಯ ಕಾರ್ಡ್ ನೋಂದಾವಣೆ ಕಾರ್ಯಕ್ರಮವು ಅ.30 ರಂದು ಕುಂದಾಪುರ ಚರ್ಚ್ ಆವರಣದಲ್ಲಿ ನಡೆಯಿತು. ಕಥೊಲಿಕ್ ಸಭಾ ಕುಂದಾಪುರ ಘಟಕದ ಕಾರ್ಯಕರ್ತರು ಸ್ಥಳದಲ್ಲೆ ಒನ್ ಲೈನಿನ ಮೂಲಕ, ಅಭಾ ಕಾರ್ಡ್, ಇ ಶ್ರಮ ಕಾರ್ಡಗಳ ನೋಂದಣಿಯ ಸೇವೆಯನ್ನು ಮಾಡಿದರು. ಇದರ ಉಪಯೋಗವನ್ನು ಹಲವಾರು ಜನರು ಪಡೆದುಕೊಂಡರು. ಬರುವ ನ. ಆದಿತ್ಯವಾರ ನ.6 ರಂದು ಕೂಡ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾನದ ತನಕ ನೋಂದಣಿ ಕಾರ್ಯಗಾರ ನಡೆಯಲಿರುವುದು ಹಾಗೇ ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು, ಕಥೊಲಿಕ್ ಸಭಾ ಕುಂದಾಪುರ ಘಟಕದ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ|ಸ್ಟ್ಯಾನಿ ತಾವ್ರೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕಾರ್ಯಗಾರದ ಸಂದರ್ಭದಲ್ಲಿ ಕಥೊಲಿಕ್ ಸಭಾ ಕುಂದಾಪುರ ಘಟಕದ ಅಧ್ಯಕ್ಷರು ಪದಾಧಿಕಾರಿಗಳು, ಮತ್ತು ಸದಸ್ಯರು ಉಪಸ್ಥಿತರಿದ್ದರು.
ಅಭಾ ಕಾರ್ಡ್ ಮತ್ತು ಇ ಶ್ರಮ ಕಾರ್ಡುಗಳ ಪ್ರಯೋಜನ ಮತ್ತು ಈ ಕಾರ್ಡುಗಳನ್ನು ಪಡೆಯಲು ಅವಶ್ಯವಿರುವ ಅಂಶಗಳನು ಕೆಳಗಿನ ಕರಪತ್ರದಲ್ಲಿ ನೀಡಲಾಗಿದೆ.

ದೀಪಾವಳಿಯ ಒಂದು ದಿನವನ್ನು ಬಲಿಪಾಡ್ಯಮಿ ಎಂದು ಬಲಿ ಚಕ್ರವರ್ತಿಯ ನೆನಪಿಗಾಗಿ ಆಚರಿಸಲಾಗುತ್ತದೆ:ಸತ್ಯನಾರಾಯಣಶಾಸ್ತ್ರಿ

ಶ್ರೀನಿವಾಸಪುರ 1 : ದೀಪಾವಳಿಯ ವೇಳೆ ಒಂದು ದಿನವನ್ನು ಬಲಿಪಾಡ್ಯಮಿ ಎಂದು ಬಲಿ ಚಕ್ರವರ್ತಿಯ ನೆನಪಿಗಾಗಿ ಆಚರಿಸಲಾಗುತ್ತದೆ ಎಂದು ಮೇಧಾ ಗುರು ಜ್ಯೋತಿರ್ವಿಜ್ಞಾನ ಕೇಂದ್ರದ ಸಂಸ್ಥಾಪಕ ವೆಲ್ಲಾಲ ಸತ್ಯನಾರಾಯಣಶಾಸ್ತ್ರಿ ತಿಳಿಸಿದರು.
ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿನ ಶ್ರೀ ಕಾಶೀವಿಶ್ವೇಶ್ವರ ದೇವಾಲಯದಲ್ಲಿ ಬುಧವಾರ ಬಲಿ ಪಾಡ್ಯಮಿ,ಬಲೀಂದ್ರ ಪೂಜಾ ಅಂಗವಾಗಿ ನಡೆದ ಗೋಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ದಿನ ಲಕ್ಷ್ಮೀ ಪೂಜೆ, ಗೋಪೂಜೆ ಇವುಗಳನ್ನು ಮಾಡಲಾಗುವುದು ಯಾಕೆಂದರೆ, ಬಲಿ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು, ಅದಕ್ಕೆ ಪೂಜೆಗಳನ್ನು ಆರಾಧನೆಯನ್ನು ಮಾಡಲಾಗುತ್ತಿತ್ತು. ಅದರ ಸವಿನೆನಪಿಗಾಗಿ ಬಲಿಪಾಡ್ಯಮಿ ದಿವಸ ಗೋವಿಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.
ಗೋವು ಐಶ್ವರ್ಯ ಮತ್ತು ಮೋಕ್ಷಕ್ಕೆ ಪ್ರತೀಕ . ಗೋವನ್ನು ಸವರುವುದರಿಂದ ಎಲ್ಲಾ ಪಾಪಕರ್ಮದಿಂದ ಮುಕ್ತಿ ಸಿಗುತ್ತದೆ ಗೋವಿನ ರಕ್ಷಣೆ ಕೊಡುವುದರಿಂದ , ಗೋಸೇವೆ ಮಾಡುವುದರಿಂದ ,ಗೋವುಗಳಿಗೆ ಹುಲ್ಲುನ್ನು ತಿನ್ನಿಸುವ್ಯದರಿಂದ,ಗೋಪೂಜೆ ಮಾಡುವುದರಿಂದ ಬಡತನ , ತಡ ವಿವಾಹ,ಆರೋಗ್ಯ ಸಮಸ್ಯೆ,ಶತ್ರುತ್ವ,ಪಿತೃ ಶಾಪ,ಶನಿ ದೋಷ ದೂರವಾಗುತ್ತದೆ ಹಾಗೂ ಹಿಂದಿನ ಜನ್ಮ ಮತ್ತು ಈ ಜನ್ಮದಲ್ಲಿ ಮಾಡಿದ ಪಾಪ ಕಾರ್ಯಗಳಿಗೆ ಪರಿಹಾರವಾಗುತ್ತದೆ ಎಂದು ಸ್ಕಂದಪುರಾಣ ಮತ್ತು ಕರ್ಮವಿಪಾಕದಲ್ಲಿ ಹೇಳಲಾಗಿದೆ ಎಂದರು.
ಗೋಪೂಜೆ ಮಾಡುವುದರಿಂದ ಸರ್ವಸಮೃದ್ಧಿಯುಂಟಾಗಿ , ದನಕರುಗಳ ವೃದ್ಧಿಯಾಗುವಂತೆ ಇದೇ ದಿನ ಧನಲಕ್ಷ್ಮಿ ಪೂಜೆಯ ಮೂಲಕ ಲಕ್ಷ್ಮಿಯನ್ನು ಒಲಿಸಿಕೊಳ್ಳಲಾಗುತ್ತದೆ. ಈ ರೀತಿ ಮಾಡುವುದರಿಂದ ಬಲಿ ಚಕ್ರವರ್ತಿಯ ರಾಜ್ಯದಲ್ಲಿದ್ದಂತೆ ಎಲ್ಲಾ ಸುಖೋಪಭೋಗಗಳು ದೊರೆಯುವುದು ಎಂಬ ನಂಬಿಕೆ ಜನರಲ್ಲಿದೆ ಎಂದು ಹೇಳಿದರು.
ಪ್ರಾಚೀನ ಕಾಲದಲ್ಲಿ ಪ್ರತಿ ಮನೆ-ಮನೆಯಲ್ಲಿಯೂ ಹಟ್ಟಿಯಲ್ಲಿ ಗೋಪೂಜೆ ನಡೆಯುತ್ತಿತ್ತು, ಇಂದೂ ಗೋವಿನ (ಸಂಕ್ರಾತಿ) ಹಬ್ಬದ ಸಮಯದಲ್ಲಿ ಭಾರತದಲ್ಲಿ ಗೋವಿನ ಪೂಜೆ ನಡೆಯುತ್ತಿದೆ ಅಷ್ಟೇ, ಆದರೆ ನಮ್ಮ ದೇಶಕ್ಕೆ ಹಿಂದಿನ ಮಹಿಮೆ ಮತ್ತು ಗೌರವ ಸಿಗಬೇಕಿದ್ದರೆ ನಾವು ಗೋವುಗಳನ್ನು ತಾಯಿಯಂತೆ ರಕ್ಷಿಸಿಬೇಕು.
ಹಾಗೂ ಇತ್ತೀಚಿಗೆ ಗೋವುಗಳನ್ನು ಬಾಧಿಸುತ್ತಿರುವ ಚರ್ಮದ ಗಂಟು ರೋಗದಿಂದಾಗಿ ಗೋವುಗಳು ರೋಗದಿಂದ ಬಳಲುತ್ತಿದ್ದು, ರೈತರು ರೋಗ ನಿರ್ಮೂಲನೆಗಾಗಿ ಪಶುಇಲಾಖೆಯು ಜಾರಿಗೆ ತಂದಿರುವ ಔಷದೋಪಚಾರವನ್ನು ಉಪಯೋಗಿಸುವಂತೆ ತಿಳಿಸಿದರು. ನಾವೆಲ್ಲೂರು ಸೇರಿ ರೋಗ ನಿರ್ಮೂಲನೆಗಾಗಿ ದೇವರನ್ನು ಪ್ರಾರ್ಥಿಸೋಣ ಎಂದು ಮನವಿ ಮಾಡಿದರು.
ಗ್ರಾಮದ ಗಂಗಮ್ಮ ಗುಡಿಯಲ್ಲಿ ಗೋ ಪೂಜೆ ನಡೆಯಿತು. ಮುಖಂಡರಾದ ಎಸ್.ಎನ್.ವೇಮನ್ನ, ಎಂ.ಎಸ್.ಮಹೇಶ್ , ರವಿ, ಯಂಡಗುಟ್ಟಪಲ್ಲಿ ನಾಗಾರ್ಜುನ, ಕಂದಾಯ ಇಲಾಖೆಯ ಗ್ರಾಮಸಹಾಯಕ ಆರ್.ವಿ.ಶ್ರೀರಾಮಪ್ಪ ಇದ್ದರು.

ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲಾ ಜನಾಂಗಕ್ಕೆ ಬೇಕಾದವರು :ವೈ.ಎ.ನಾರಾಯಣಸ್ವಾಮಿ

ಶ್ರೀನಿವಾಸಪುರ 1 : ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲಾ ಜನಾಂಗಕ್ಕೆ ಬೇಕಾದವರು ಆದ್ದರಿಂದ ತಾಲ್ಲೂಕಿನ ಎಲ್ಲಾ ಜನಾಂಗದವರು ಪಕ್ಷಾತೀತವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕು ಎಂದು ಸರ್ಕಾರದ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಬಾವಿ ಸಭೆಯಲ್ಲಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಗೆ ಮೃತ್ತಿಕೆ ಸಂಗ್ರಹ ಅಭಿಯಾನದ ಬಗ್ಗೆ ಮಾತನಾಡಿದರು.
ಇದೇ ತಿಂಗಳು 29.30 ರಂದು ತಾಲೂಕಿನ 5 ಹೋಬಳಿ ಕೇಂದ್ರಗಳಲ್ಲಿ ರಥವು ಸಂಚರಿಸಿ ಅಲ್ಲಿನ ಮೃತ್ತಿಕೆಯನ್ನು ಸಂಗ್ರಹಕ್ಕಾಗಿ ಬರುತ್ತಿದ್ದು, ಆಯಾ ಆಯಾ ಹೋಬಳಿ ಕೇಂದ್ರದಲ್ಲಿ 50 ಜನ ಮಾತೆಯರು ಪೂರ್ಣಕುಂಭಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸುವ ಕಾರ್ಯಕ್ರವನ್ನು ಸ್ಥಳೀಯ ಅಧಿಕಾರಿಗಳ ಜವಾಬ್ದಾರಿ ವಹಿಸಬೇಕು.
ಈ ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘದವರು, ಸ್ಥಳೀಯ ಆಶಾಕಾರ್ಯಕರ್ತೆಯರು, ಅಂಗನವಾಡಿ, ಕಾರ್ಯಕರ್ತೆಯರು, ಎನ್‍ಜಿಓ, ಮಾಜಿಸೈನಿಕರು, ಸಂಘ ಸಂಸ್ಥೆಗಳು ಹಾಗೂ ಪಕ್ಷಾತೀತವಾಗಿ ಜನಪ್ರತಿನಿದಿಗಳ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಜಿಲ್ಲೆಯಲ್ಲಿಯೇ ತಾಲ್ಲೂಕಿನ ಕಾರ್ಯಕ್ರಮವು ಮಾದರಿಯಾಗಿರಬೇಕು ಎಂದರು.
ಅಲ್ಲದೆ ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮವೊಂದನ್ನ ರೂಪಿಸುವ ಕಾರ್ಯಕ್ರಮವನ್ನು ಸ್ಥಳೀಯ ಅಧಿಕಾರಿಗಳು ಹಮ್ಮಿಕೊಳ್ಳಬೇಕು. ಅಲ್ಲದೆ ಕಾರ್ಯಕ್ರಮಕ್ಕೆ ಹೆಚ್ಚು ಸಾರ್ವಜನಿಕರು ಸೇರುವಂತೆ ಅಗತ್ಯ ಪ್ರಚಾರವನ್ನು ಹಮ್ಮಿಕೊಳ್ಳಬೇಕು. ಈ ಕೆಲಸವನ್ನು ತಹಶೀಲ್ದಾರ್ ನೇತೃತ್ವದಲ್ಲಿ ಇಒ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು, ಶಿಶುಅಭಿವೃದ್ಧಿ ಯೋಜನಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಪಾಲ್ಗುಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ತಹಶೀಲ್ದಾರ್ ಶರೀನಾತಾಜ್, ಇಒ ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ಎಂ.ಜಯರಾಮ್, ತಾಲೂಕಿನ ಎಲ್ಲಾ ಪಿಡಿಒಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.