HOLY ROSARY CHURCH, KUNDAPUR – 450 th JUBILEE SOUVENIR 2021

ಉಡುಪಿ ಸೈಂಟ್ ಮೇರೀಸ್ ಆ.ಮಾ. ಶಾಲಾ ಕ್ರೀಡಾಕೂಟ – “ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಜೀವನ ಕೌಶಲ್ಯ ವೃದ್ಧಿ”: ಗೌತಮ್ ಶೆಟ್ಟಿ ಟೊರ್ಪೆಡೋಸ್

ಉಡುಪಿ-“ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಸಾಮರ್ಥ್ಯ ಹಾಗೂ ಆತ್ಮಸ್ಥೈರ್ಯ ಹೆಚ್ಚಿ ಜೀವನ ಕೌಶಲ್ಯ ವೃದ್ಧಿಯಾಗುತ್ತದೆ.ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಲೀಗ್ ಪ್ರಾರಂಭವಾಗಿದ್ದು,ಕ್ರೀಡಾಪಟುಗಳಿಗೆ ಕ್ರೀಡೆಯ ಮೂಲಕ ವೃತ್ತಿಗೂ ಹೆಚ್ಚಿನ ಸಹಕಾರಿಯಾಗಲಿದೆ” ಎಂದು ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಛೇರ್ಮನ್ ಗೌತಮ್ ಶೆಟ್ಟಿ ತಿಳಿಸಿದರು.

ಇವರು ಅಕ್ಟೋಬರ್ 21 ಶುಕ್ರವಾರ ಉಡುಪಿಯ ಕನ್ನರ್ಪಾಡಿಯ ಸೈಂಟ್ ಮೇರೀಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ,ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭ ಸಂಚಾಲಕರಾದ ರೆವರೆಂಡ್ ಫಾದರ್ ಚಾರ್ಲ್ಸ್ ಮೆನೇಜಸ್,ಪ್ರಾಂಶುಪಾಲ ರಾದ ರೆವರೆಂಡ್ ಫಾದರ್ ಜಾನ್ಸನ್ ಸೀಕ್ವೇರಾ,ಉಪಾಧ್ಯಕ್ಷ ಬೋನಿಫಸ್ ಡಿಸೋಜಾ,ಶ್ರೀಮತಿ ಬೆನೆಡಿಕ್ಟಾ ಫೆರ್ನಾಂಡಿಸ್,ಚರ್ಚ್ ಆಡಳಿತ ಮಂಡಳಿ ಕಾರ್ಯದರ್ಶಿ ಮತ್ತು ಉಪ ಪ್ರಾಂಶುಪಾಲರಾದ ಶ್ರೀಮತಿ ರೀಟಾ ಕ್ವಾಡ್ರಸ್ ಉಪಸ್ಥಿತರಿದ್ದರು.
ದೈಹಿಕ ನಿರ್ದೇಶಕ ಜೆರಾಲ್ಡ್ ಪಿಂಟೊ ಸ್ವಾಗತಿಸಿದರು. ಕ್ರೀಡಾ ಸಮಾರೋಪ ಸಮಾರಂಭದಲ್ಲಿ ಶಾಲಾ ಹಳೆ ವಿದ್ಯಾರ್ಥಿನಿ ಅಶ್ಮಿತಾ ರೆಬೆಲ್ಲೊ ಮುಖ್ಯ ಅತಿಥಿಗಳಾಗಿದ್ದರು.

ಕಿನ್ನಿಕಂಬಳ: ರೋಸಾ ಮಿಸ್ಟಿಕಾ ಪಿಯು ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮಚಾರಣೆ

ಕಿನ್ನಿಕಂಬಳ: ರೋಸಾ ಮಿಸ್ಟಿಕಾ ಪಿಯು ಕಾಲೇಜು ಕಿನ್ನಿಕಂಬಳದಲ್ಲಿ ಸಾಂಪ್ರದಾಯಿಕ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳು  ಸಾಂಪ್ರದಾಯಿಕ ಉಡುಗೆ ದರಿಸಿ ಬಂದಿದ್ದರು.. ಅವರು ಸಾಮೂಹಿಕವಾಗಿ ಪ್ರದರ್ಶಿಸಿದ ಮತ್ತು ಭಾರತದ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಬಣ್ಣ ಬಣ್ಣದ ವಿವಿಧ ಶೈಲಿಯ ಅವರ ಉಡುಪು ಸರಳವಾಗಿ ಅದ್ಭುತವಾಗಿದ್ದವು. ಸಮಾರಂಭವು ಪ್ರಾರ್ಥನೆ ಗೀತೆಯ ಮೂಲಕ ದೇವರ ಆಶೀರ್ವಾದವನ್ನು ಬೇಡಿಕೊಳ್ಳುವುದರೊಂದಿಗೆ ಪ್ರಾರಂಭವಾಯಿತು. 12 ನೇ ತರಗತಿಯ ವಿದ್ಯಾರ್ಥಿಗಳು ಸ್ವಾಗತ ನೃತ್ಯವನ್ನು ಪ್ರಸ್ತುತಪಡಿಸಿದರು.

ಶ್ರೀ ಜೇಸನ್ ಮೊಂತೇರೊ ಕಾರ್ಯಕ್ರಮದ ಗೌರವ ಅತಿಥಿಯಾಗಿದ್ದರು. ಮುಖ್ಯ ಅತಿಥಿ ಮತ್ತು ಪ್ರಾಂಶುಪಾಲರಾದ ಸಿಸ್ಟರ್ ಸಾಧನಾ ಅವರು ಅಧ್ಯಾಪಕರೊಂದಿಗೆ ವಿಶೇಷ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಸಮಾರಂಭವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿ ಶ್ರೀ ಜೇಸನ್ ಮೊಂತೆರೊ ಅವರು ವಿದ್ಯಾರ್ಥಿಗಳಿಗೆ ತಮ್ಮ ಭಾಷಣದಲ್ಲಿ ಸಾಮಾಜಿಕ ಮಾಧ್ಯಮವನ್ನು ಸರಿಯಾಗಿ ಬಳಸಿಕೊಳ್ಳಬೇಕು ಏಕೆಂದರೆ ಆ ವೇದಿಕೆಗಳು ಯುವ ಮನಸ್ಸುಗಳನ್ನು ಹಿಡಿದಿಟ್ಟುಕಳ್ಳಲು ಸಹಾಯ ಮಾಡುತ್ತದೆ. ಜೀವನಕ್ಕೆ ಸರಿಯಾದ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಸರಿಯಾದ ಮಾಹಿತಿಯನ್ನು ಸಂಗ್ರಹಿಸಿಕೊಳ್ಳಬೇಕು” ಎಂದು ಸಂದೇಶ ನೀಡಿ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಾಲೇಜನ ವಿದ್ಯಾರ್ಥಿಗಳನ್ನು ಮುಖ್ಯ ಅತಿಥಿಗಳು ಸನ್ಮಾನಿಸಿದರು.

ಪ್ರಾಂಶುಪಾಲರಾದ ಸಿಸ್ಟರ್ ಸಾಧನಾ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ನಮ್ಮ ಕಾಲೇಜಿಗೆ ಕೀರ್ತಿ ತಂದಿರುವುದಕ್ಕೆ ನಮಗೆ ಹೆಮ್ಮೆ ಎಂದು ಭಾಗವಹಿಸಿದ ವಿದ್ಯಾರ್ಥಿಗಳನ್ನು ಶ್ಲಾಘಿಸಿ, ಹಾಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸಿ ನಮ್ಮ ಸಂಪ್ರದಾಯಗಳನ್ನು ರಕ್ಷಿಸಲು ಕರೆ ನೀಡಿದರು.

ಕಾರ್ಯಕ್ರಮದ ಎರಡನೇ ಭಾಗವಾಗಿ ಸಾಂಪ್ರದಾಯಿಕ ರ್ಯಾಂಪ್ ವಾಕ್ ಮಾಡಿ. Mr. Mystican ಮತ್ತು Ms Mystican ಪ್ರಶಸ್ತಿಯನ್ನು ಗೆಲ್ಲಲು ವಿದ್ಯಾರ್ಥಿಗಳು ಹುಮ್ಮಸಿನಲ್ಲಿದ್ದರು, ವಿದ್ಯಾರ್ಥಿಗಳು ಇದರಲ್ಲಿ ಉತ್ಸಾಹದಲ್ಲಿ ಭಾಗವಹಿಸಿದ್ದು. ಅಂತಿಮವಾಗಿ ಈ ಸ್ಪರ್ಧೆಯಲ್ಲಿ “ರಿಯಾ ಕುಟಿನ್ಹಾ” ಮಿಸ್ ಮಿಸ್ಟಿಕನ್ ಆಗಿ ಮತ್ತು “ಶ್ರೀ ರೊನಾಲ್ಡ್ ಡಿಸೋಜಾ” ಮಿಸ್ಟರ್ ಮಿಸ್ಟಿಕನ್ ಪ್ರಶಸ್ತಿ ಪಡೆದುಕೊಂಡರು. ಶ್ರೀಮತಿ ಕಾರ್ಮೆಲಾ ತಾವ್ರೊ ಸ್ವಾಗತ ಕೋರಿದರು ಕಾರ್ಯಕ್ರಮವನ್ನು ಶ್ರೀ ಫೆರ್ನಾಂಡಿಸ್ ಸಂಯೋಜಿಸಿದ್ದರು.ಮಿಸ್ ಇಶಾ ಡಿಸೋಜಾ ಧನ್ಯವಾದ ಸಮರ್ಪಿಸಿದರು.

ರಾಷ್ಟ್ರ ಮಟ್ಟದಲ್ಲಿ ಆರ್‍ಪಿಐ ಪಕ್ಷವನ್ನು ಸಂಘಟಿಸಲಾಗುವುದು. ರಾಜ್ಯ ಸಮಿತಿ ಪದಾಧಿಕಾರಿಗಳಿಗೆ ಮಾರ್ಗದರ್ಶನ:ಡಾ. ಎಂ.ವೆಂಕಟಸ್ವಾಮಿ

ಶ್ರೀನಿವಾಸಪುರ: ರಾಷ್ಟ್ರ ಮಟ್ಟದಲ್ಲಿ ಆರ್‍ಪಿಐ ಪಕ್ಷವನ್ನು ಸಂಘಟಿಸಲಾಗುವುದು. ರಾಜ್ಯ ಸಮಿತಿ ಪದಾಧಿಕಾರಿಗಳಿಗೆ ಮಾರ್ಗದರ್ಶನ ಮಾಡಲಾಗುವುದು. ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪೂರಕವಾಗಿ ಕಾರ್ಯಕ್ರಮ ರೂಪಸಿ ಜಾರಿಗೊಳಿಸಲಾಗುವುದು ಎಂದು ಆರ್‍ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ. ಎಂ.ವೆಂಕಟಸ್ವಾಮಿ ಹೇಳಿದರು.
ಪಟ್ಟಣದಲ್ಲಿ ಡಾ. ಎಂ.ವೆಂಕಟಸ್ವಾಮಿ ಅಭಿಮಾನಿ ಬಳಗ ಹಾಗೂ ಪ್ರಗತಿಪರ ಸಂಘಟನೆಗಳಿಂದ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಆರ್‍ಪಿಐ ದೇಶದ 31 ರಾಜ್ಯಗಳಲ್ಲಿ ಅಸ್ತಿತ್ವದಲ್ಲಿದ್ದು, ತುಳಿತಕ್ಕೆ ಒಳಗಾದ ಜನರ ಪರ ಧ್ವನಿಯೆತ್ತಿದೆ ಎಂದು ಹೇಳಿದರು.
ನಾನು ನೂತನ ಆರ್‍ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷನಾಗಿ ಆಂತರಿಕ ಪ್ರಜಾಪ್ರಭುತ್ವ ಹಾಘೂ ಸಾಮೂಹಿಕ ನಾಯಕತ್ವ ಬೆಂಬಲಿಸುತ್ತೇನೆ. ರಾಜ್ಯದಲ್ಲಿ ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುತ್ತೇನೆ. ಅವರ ಗೆಲುವಿಗಾಗಿ ಕಾರ್ಯಕರ್ತರು ಹೆಗಲು ನೀಡಿ ಶ್ರಮಿಸಬೇಕು ಎಂದು ಹೇಳಿದರು.
ಮುಖಂಡರಾದ ಜಿ.ಸಿ.ವೆಂಕಟರವಣಪ್ಪ, ಎಸ್.ನಾರಾಯಣಸ್ವಾಮಿ, ಶಿವಪ್ರಸಾದ್ ಡಾ, ಎಂ.ವೆಂಕಟಸ್ವಾಮಿ ಅವರ ಸೇವೆ ಹಾಗೂ ಸಾಧನೆ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಡಾ. ಎಂ.ವೆಂಕಟಸ್ವಾಮಿ ಅವರನ್ನು, ಅವರ ಅಭಿಮಾನಿ ಬಳಗ ಹಾಗೂ ಪ್ರಗತಿಪರ ಸಂಘಟನೆಗಳಿಂದ ಸನ್ಮಾನಿಸಲಾಯಿತು.
ಮುಖಂಡರಾದ ಪ್ರಸನ್ನ, ಡಿ.ಎಂ.ಅಂಬರೀಶ್, ಎನ್.ತಿಮ್ಮಯ್ಯ, ರಾಮಾಂಜಮ್ಮ, ಈರಪ್ಪ, ಚಲಪತಿ, ಎನ್.ಪಾಪಣ್ಣ, ಶ್ರೀನಿವಾಸ್, ವೆಂಕಟೇಶ್, ರವಿ, ಆರ್.ಚಂದ್ರಶೇಖರ್, ಶಿವಣ್ಣ, ಬ್ಯಾಟರಾಜ್ ಮತ್ತಿತರರು ಇದ್ದರು.
ಮೆರವಣಿಗೆ: ಪಟ್ಟಣದ ಮುಳಬಾಗಲು ವೃತ್ತದಿಂದ ಎಂಜಿ ರಸ್ತೆ ಮೂಲಕ ಸಮಾರಂಭ ಏರ್ಪಡಿಸಿದ್ದ ಸ್ಥಳಕ್ಕೆ ಡಾ. ಎಂ. ವೆಂಕಟಸ್ವಾಮಿ ಅವರನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.

ಅ.27 ರಿಂದ ಜಿಲ್ಲೆಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪುತ್ಥಳಿ ರಥಯಾತ್ರೆ
ವರ್ತೂರು ಪ್ರಕಾಶ್‍ಗೆ ಕೋಲಾರ ತಾಲ್ಲೂಕಿನ ಉಸ್ತುವಾರಿ-ಸಚಿವ ಮುನಿರತ್ನ ಸೂಚನೆ

ಕೋಲಾರ:- ಜಿಲ್ಲೆಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪುತ್ಥಳಿ ರಥಯಾತ್ರೆ ಅ.27 ರಿಂದ ನ.7 ರವರೆಗೂ 12 ದಿನಗಳ ಕಾಲ ಸಾಗಿ ಬರುವ ಹಿನ್ನಲೆಯಲ್ಲಿ ಸಚಿವ ಮುನಿರತ್ನ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಸಚಿವರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೋಲಾರ ತಾಲ್ಲೂಕಿನಲ್ಲಿ ರಥಯಾತ್ರೆಯ ಉಸ್ತುವಾರಿಯನ್ನು ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೆ ವಹಿಸಿಕೊಳ್ಳುವಂತೆ ಸಚಿವ ಮುನಿರತ್ನ ಸೂಚಿಸಿದರು.
ಬೆಂಗಳೂರಿನ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ 12 ದಿನಗಳ ಕಾಲ ಸಂಚರಿಸುವ ರಥಯಾತ್ರೆ ದಿನಕ್ಕೆ 15 ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಲಿದ್ದು, ಆ ವ್ಯಾಪ್ತಿಯ ಪ್ರಸಿದ್ದ ಕ್ಷೇತ್ರಗಳ ಮೃತ್ತಿಗೆ ಹಿಡಿಮಣ್ಣನ್ನು ಸಂಗ್ರಹಿಸಿ ರಥದಲ್ಲಿ ಕೊಂಡೊಯ್ಯಲಾಗುವುದು ಎಂದು ತಿಳಿಸಿದರು.

ಅ.27 ಕೋಲಾರದಲ್ಲಿ ರಥಯಾತ್ರೆ ಸಂಚಾರ


ಕೋಲಾರ ತಾಲ್ಲೂಕಿನಲ್ಲಿ ಅ.27 ರಂದು ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪುತ್ಥಳಿಯ ರಥಯಾತ್ರೆ ಸರ್ಕಾರಿ ರಥವಾಗಿ ಆಗಮಿಸಿದ್ದು, ಸಚಿವ ಮುನಿರತ್ನ, ಸಂಸದ ಎಸ್.ಮುನಿಸ್ವಾಮಿ, ಸರ್ಕಾರದ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್, ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಮಾಜಿ ಅಧ್ಯಕ್ಷರಾದ ಎಸ್.ಕೃಷ್ಣಾರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ಕೃಷ್ಣಮೂರ್ತಿ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ಕೋಲಾರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವ ವಹಿಸಲಿದ್ದು, ತಾಲ್ಲೂಕಿನ 15 ಗ್ರಾಮ ಪಂಚಾಯತಿಗಳಲ್ಲಿ ರಥ ಸಂಚರಿಸಲಿದ್ದು, ಅ.27 ಮತ್ತು 28 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ನಡೆಯಲಿದೆ. ಈ ಸಂದರ್ಭದಲ್ಲಿ ತಾಲ್ಲೂಕಿನ ಪ್ರಸಿದ್ದ ಪುಣ್ಯಕ್ಷೇತ್ರಗಳ ಮೃತ್ತಿಕೆ ಸಂಗ್ರಹಕ್ಕೆ ಕ್ರಮ ವಹಿಸಲಾಗಿದೆ ಎಂದು ವರ್ತೂರು ಪ್ರಕಾಶ್ ತಿಳಿಸಿದ್ದಾರೆ.
ರಥಯಾತ್ರೆ ಸಾಗಿ ಬಂದಾಗ ತಾಲ್ಲೂಕಿನ ಸಾವಿರಾರು ಕಾರ್ಯಕರ್ತರು,ಸಾರ್ವಜನಿಕರು ಜತೆಗಿದ್ದು, ಅದ್ದೂರಿಯಾಗಿ ಸ್ವಾಗತಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವುದಾಗಿ ವರ್ತೂರು ಪ್ರಕಾಶ್ ತಿಳಿಸಿ, ಹೆಚ್ಚಿನ ಜನ ಭಾಗವಹಿಸಲಿದ್ದು, ಅಗತ್ಯವಾಗಿ ಊಟ,ತಿಂಡಿ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ತಿಳಿಸಿದರು.

ಅ,29,30 ರಂದು ಶ್ರೀನಿವಾಸಪುರದಲ್ಲಿ


ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪುತ್ಥಳಿಯ ರಥಯಾತ್ರೆ ಅ.29 ಹಾಗೂ 30 ರಂದು ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಸಂಚರಿಸಲಿದ್ದು, ಸರ್ಕಾರದ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ ನೇತೃತ್ವ ವಹಿಸುವರು. ಅಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಉಪಸ್ಥಿತರಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸುವಾಗ ಸಾವಿರಾರು ಜನ ಭಾಗವಹಿಸಲು ವ್ಯವಸ್ಥೆ ಮಾಡಲಿದ್ದಾರೆ.

ಮುಳಬಾಗಿಲಿಗೆ ಅ.31, ನ.1 ರಂದು


ಮುಳಬಾಗಿಲು ತಾಲ್ಲೂಕಿಗೆ ರಥಯಾತ್ರೆ ಅ.31 ಮತ್ತು ನ.1 ರಂದು ಆಗಮಿಸಿ ಇಡೀ ತಾಲ್ಲೂಕಿನಲ್ಲಿ ಸಂಚಾರ ನಡೆಸಲಿದ್ದು, ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್.ನಾಗೇಶ್ ನೇತೃತ್ವ ವಹಿಸುವರು.
ಹಾಗೆಯೇ ಕೆಜಿಎಫ್ ತಾಲ್ಲೂಕಿನಲ್ಲಿ ನ.2 ಮತ್ತು 3 ರಂದು ಯಾತ್ರೆ ಸಾಗಿ ಬರಲಿದ್ದು, ಮಾಜಿ ಶಾಸಕ ವೈ.ಸಂಪಂಗಿ ನೇತೃತ್ವ ವಹಿಸಲಿದ್ದಾರೆ. ಯಾತ್ರೆ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಸಂಚರಿಸಲಿದೆ.
ಬಂಗಾರಪೇಟೆ ತಾಲ್ಲೂಕಿನಲ್ಲಿ ಯಾತ್ರೆ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ನೇತೃತ್ವದಲ್ಲಿ ಸಾಗಿ ಬರಲಿದ್ದು, ನ.4 ಮತ್ತು 5 ರಂದು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.
ಮಾಲೂರು ತಾಲ್ಲೂಕಿನಲ್ಲಿ ನ.6 ಮತ್ತು 7 ರಂದು ನಾಡಪ್ರಭುವಿನ ರಥ ಯಾತ್ರೆ ಸಂಚರಿಸಲಿದ್ದು, ಮಾಜಿ ಶಾಸಕ ಮಂಜುನಾಥಗೌಡ, ಮುಖಂಡ ಹೂಡಿ ವಿಜಯಕುಮಾರ್ ನೇತೃತ್ವ ವಹಿಸುವರು.

ಕಲಾ ತಂಡಗಳ ಭವ್ಯ ಮೆರವಣಿಗೆ


ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪುತ್ಥಳಿಯ ರಥಯಾತ್ರೆಯಲ್ಲಿ ನಾಡಪ್ರಭುವಿನ ಪುತ್ಥಳಿ ಹೊತ್ತ ರಥ, ಡಿಜಿ ಸೆಟ್, ಬ್ಯಾಂಡ್ ಸೆಟ್, ಕಲಾ ತಂಡಗಳು, ಡೊಳ್ಳುಕುಣಿತ, ಮೊಬೈಲ್ ಆರ್ಕೆಸ್ಟ್ರಾ, ತಮಟೆಗಳ ನಾದ ಜತೆ ಸಾಗಿ ಬರಲಿದೆ.
ರಥವನ್ನು ಸುರಕ್ಷಿತ ಸ್ಥಳದಲ್ಲಿ ಗೌರವಯುತವಾದ ರೀತಿಯಲ್ಲಿ ಸೂಕ್ತ ರಕ್ಷಣೆಯೊಂದಿಗೆ ನಿಲುಗಡೆ ಮಾಡಲು ಕ್ರಮವಹಿಸಬೇಕು ಎಂದು ಸಚಿವರು ಸಭೆಯಲ್ಲಿ ಸೂಚಿಸಿದರು.
ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ಮೆರವಣಿಗೆಯಲ್ಲಿ ರಥಯಾತ್ರೆಯೊಂದಿಗೆ ಸಾವಿರದಿಂದ 5 ಸಾವಿರ ಮಂದಿ ಪಾಲ್ಗೊಳ್ಳಬೇಕು. ಪ್ರತಿ ದಿನ ಸಾವಿರ ಮಂದಿಗೆ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಿದ್ದು, ಇದು ಸರ್ಕಾರಿ ಪ್ರಯೋಜಿತ ರಥಯಾತ್ರೆಯಾಗಿರುವುದರಿಂದ ಇದರಲ್ಲಿ ಸರ್ಕಾರದ ಆಡಳಿತ ಯಂತ್ರ ಬಳಸಿಕೊಳ್ಳಬಹುದು ಎಂದು ತಿಳಿಸಿದರು.
ಸಚಿವ ಮುನಿರತ್ನ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಸದ ಎಸ್.ಮುನಿಸ್ವಾಮಿ, ಸರ್ಕಾರದ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ, ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಶಾಸಕರಾದ ವೈ.ಸಂಪಂಗಿ, ಬಿ.ಪಿ.ವೆಂಕಟಮುನಿಯಪ್ಪ, ಮಂಜುನಾಥಗೌಡ, ಹೂಡಿ ವಿಜಯಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್,ಬಿಜೆಪಿ ಮುಖಂಡರಾದ ಮಾಗೇರಿ ನಾರಾಯಣಸ್ವಾಮಿ, ಎಸ್.ಕೃಷ್ಣಾರೆಡ್ಡಿ ಮತ್ತಿತರರಿದ್ದರು.

ಅಧಿಕಾರಿಗಳು ರಾಷ್ಟ್ರೀಯ ಹಬ್ಬಗಳು ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು:ಶಿರಿನ್ ತಾಜ್

ಶ್ರೀನಿವಾಸಪುರ: ಅಧಿಕಾರಿಗಳು ರಾಷ್ಟ್ರೀಯ ಹಬ್ಬಗಳು ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸಕಾರಣವಿಲ್ಲದೆ ಗೈರು ಹಾಜರಾಗಬಾರದು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಮಾಡಬೇಕು. ನ.1ರಂದು ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಪಟ್ಟಣದಲ್ಲಿ ಮೆರವಣಿಗೆ ಏರ್ಪಡಿಸಲಾಗಿದೆ. ತಾಲ್ಲೂಕಿನ 27 ಇಲಾಖೆಗಳಿಂದ ತಯಾರಿಸಲಾದ ತಲಾ ಒಂದು ಸ್ಥಬ್ಧ ಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಬೇಕು. ನಾಡು ನುಡಿ ಮಹತ್ವ ಸಾರುವ ವಿಷಯ ಒಳಗೊಂಡಿರಬೇಕು. ಯಾವುದೇ ಇಲಾಖೆಗೆ ಇದರಿಂದ ವಿನಾಯಿತಿ ಇರುವುದಿಲ್ಲ ಎಂದು ಹೇಳಿದರು.
ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ರಾಜ್ಯೋತ್ಸವ ಆಚರಣೆಯಲ್ಲಿ ಕನ್ನಡ ಪರ ಸಂಘಟನೆಗಳನ್ನು ತೊಡಗಿಸಿಕೊಳ್ಳಲಾಗುವುದು ಎಂದು ಹೇಳಿದರು.
ವಿವಿಧ ಇಲಾಖೆಗಳ ಅಧಿಕಾರಿಗಳಾದ ವಿ.ಉಮಾದೇವಿ, ಡಾ. ಎಂ.ಸಿ.ವಿಜಯ, ಡಾ. ಮಂಜುನಾಥರೆಡ್ಡಿ, ಎಂ.ಶ್ರೀನಿವಾಸನ್, ಬಿ.ವಿ.ಮುನಿರೆಡ್ಡಿ, ಕೃಷ್ಣಪ್ಪ, ಕೆ.ಸಿ.ಮಂಜುನಾಥ್, ಲಿಖಿತ, ಭಾವನಾ, ನಂಜುಂಡೇಶ್ವರ, ಎ.ಈಶ್ವರ್, ನರಸಿಂಹಮೂರ್ತಿ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಇದ್ದರು.

ರಾಷ್ಟ್ರೀಯ ಹೆದ್ದಾರಿ ಸರಿಪಡಿಸುವವರೆಗೂ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿ ಜನರ ಪ್ರಾಣ ರಕ್ಷಿಸಿ:ರೈತ ಸಂಘ ಆಗ್ರಹ

ನಂಗಲಿ, ಅ-21,ಮುಳಬಾಗಿಲು ಬೈಪಾಸ್‍ನಿಂದ ನಂಗಲಿ ಗಡಿಭಾಗದವರೆಗೂ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ ಸರಿಪಡಿಸುವವರೆಗೂ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿ ಜನ ಸಾಮಾನ್ಯರ ಅಮೂಲ್ಯ ಪ್ರಾಣವನ್ನು ರಕ್ಷಣೆ ಮಾಡಬೇಕೆಂದು ರೈತ ಸಂಘದಿಂದ ಟೋಲ್ ಮೇನೇಜರ್ ಅಜಿತ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.
ರಾಷ್ಟ್ರೀಯ ಹೆದ್ದಾರಿ ತಪ್ಪು ಮಾಡದ ಜನ ಸಾಮಾನ್ಯರ ಪ್ರಾಣ ತೆಗೆಯುವ ಯಮದೂತ ರಸ್ತೆಯಾಗಿ ಮಾರ್ಪಟ್ಟಿದೆ. ಸಾವಿರಾರು ಕೋಟಿ ಜನರ ತೆರಿಗೆ ಹಣದಲ್ಲಿ ಅಭಿವೃದ್ದಿ ಪಡಿಸಿದರುವ ರಸ್ತೆಯಲ್ಲಿ ತಾನು ದುಡಿದ ಹಣವನ್ನು ನೀಡಿ ಅಮೂಲ್ಯವಾದ ಪ್ರಾಣವನ್ನು ತನ್ನ ಕೈಯಾರೆ ಕಳೆದುಕೊಳ್ಳುವ ಮಟ್ಟಕ್ಕೆ ರಸ್ತೆ ಹದಗೆಟ್ಟಿದರೂ ಸರಿಪಡಿಸಬೇಕಾದ ಅಧಿಕಾರಿಗಳು ನಾಪತ್ತೆಯಾಗಿದ್ದಾರೆಂದು ರೈತ ಸಂಘದ ಯುವ ರೈತ ಮುಖಂಡ ನಂಗಲಿ ನಾಗೇಶ್ ಹಾಗೂ ಪದ್ಮಘಟ್ಟ ಧರ್ಮ ರಸ್ತೆ ಅವ್ಯವಸ್ಥೆ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಸಾವಿರಾರು ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯದ ಆರ್ಥಿಕತೆಯ ಅಭಿವೃದ್ದಿಗೆ ಪ್ರಮುಖ ಪಾತ್ರ ವಹಿಸುವ ರಸ್ತೆ ಅಭಿವೃದ್ದಿಗೆ ಹಣವನ್ನು ಬಿಡುಗಡೆ ಮಾಡುತ್ತಿದ್ದರೂ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಒಳ ಒಪ್ಪಂದದಿಂದ ಕಮೀಷನ್ ಹಾವಳಿ ಹೆಚ್ಚಾಗಿ ಅಭಿವೃದ್ದಿ ಪಡಿಸಬೇಕಾದ ರಸ್ತೆಗಳು ಯಮದೂತ ರಸ್ತೆಗಳಾಗಿ ಮಾರ್ಪಟ್ಟಿವೆ ಎಂದು ಆರೋಪ ಮಾಡಿದರು.
ಸಮರ್ಪಕವಾದ ರಾಜಕಾಲುವೆಗಳ ನಿರ್ವಹಣೆ ಇಲ್ಲದೆ ಹೆದ್ದಾರಿಯಲ್ಲಿ ಮಳೆ ಸುರಿದರೆ ಮಳೆ ನೀರು ಸರಾಗವಾಗಿ ಹರಿಯಲು ರಾಜ ಕಾಲುವೆಗಳು ಇಲ್ಲದೆ ರಸ್ತೆಗಳಿಗೆ ನುಗ್ಗಿ ಕೆರೆ ಕುಂಟೆಗಳಾಗಿ ಮಾರ್ಪಟ್ಟು ವಾಹನ ಸವಾರರಿಗೆ ರಸ್ತೆಯೋ, ಕೆರೆಯೋ ತಿಳಿಯದೇ ಅಪಘಾತಗಳಾಗಿ ಕೈಕಾಲು ಕಳೆದುಕೊಳ್ಳುವ ಜೊತೆಗೆ ತಮ್ಮ ಅಮೂಲ್ಯ ಪ್ರಾಣವನ್ನು ಕಳೆದುಕೊಂಡು ಅವರನ್ನೇ ನಂಬಿರುವ ಕುಟುಂಬವನ್ನು ಬೀದಿಪಾಲು ಮಾಡುವ ಮಟ್ಟಕ್ಕೆ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿ ಅಮಾಯಕರ ಪ್ರಾಣದ ಜೊತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಚಲ್ಲಾಟವಾಡುತ್ತಿದ್ದಾರೆಂದು ಕಿಡಿಕಾಡಿದರು.
ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಪ್ರತಿ ವರ್ಷ ನಡೆಯುವ ರಸ್ತೆ ಸುರಕ್ಷಾ ಸಾಪ್ತಾಹ ಜಿಲ್ಲಾಧಿಕಾರಿಗಳ ಕಛೇರಿಗೆ ಸೀಮಿತವಾಗಿದೆ. ಕಾನೂನಿನ ಪ್ರಕಾರ ಹೆದ್ದಾರಿಯಲ್ಲಿ ಯಾವುದೇ ಗುಂಡಿಗಳು ಇರಬಾರದು ಜೊತೆಗೆ ಪ್ರತಿ ರಾತ್ರಿ ವಿದ್ಯುತ್ ದೀಪಗಳು ನಿರಂತರವಾಗಿ ಉರಿಯಬೇಕು. ಹೆದ್ದಾರಿಯಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಅನುಕೂಲವಾಗಲು ಪ್ರತಿ ಗೇಟ್‍ಬಳಿ ತಂಗುದಾಣ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಆದರೆ ಎನ್.ಹೆಚ್.ಎ.ಐ ಅಧಿಕಾರಿಗಳ ಭ್ರಷ್ಟಾಚಾರ ಗುತ್ತಿಗೆದಾರರ ಬೇಜವಾಬ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಗಳ ಹೆದ್ದಾರಿಯಾಗಿ ಮಾರ್ಪಟ್ಟಿದ್ದರೂ ಸರಿಪಡಿಸಬೇಕಾದ ಅಧಿಕಾರಿಗಳ ನಾಪತ್ತೆಯಾಗಿದ್ದು, ಗುತ್ತಿಗೆದಾರರು ಮಾತ್ರ ವಾಹನ ಸವಾರರ ಬಳಿ ಹಗಲು ದರೋಡೆ ಮಾಡುತ್ತಿದ್ದಾರೆಂದು ಆರೋಪ ಮಾಡಿದರು.
ಹೆದ್ದಾರಿ ಅವ್ಯವಸ್ಥೆ ಯಾವ ಮಟ್ಟಕ್ಕೆ ಹದಗೆಟ್ಟಿದೆ ಎಂದರೆ ಹೆದ್ದಾರಿ ಪಕ್ಕದಲ್ಲಿ ಅಕ್ರಮ ಡಾಬಾಗಳು ವಾಣಿಜ್ಯ ಮಳಿಗೆಗಳು ಮದುವೆ ಮಂಟಪದ ಮಾಲೀಕರು ಪಾದಾಚಾರಿ ರಸ್ತೆಯಲ್ಲಿ ಒತ್ತುವರಿ ಮಾಡಿಕೊಂಡಿದ್ದರೂ ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ಅಕ್ರಮ ಒತ್ತುವರಿದಾರರಿಗೆ ನೊಟೀಸ್ ಸಹ ನೀಡದೆ ಬೇಜವಾಬ್ದಾರಿಯಿಂದ ಲ್ಯಾಂಕೋ ಅಧಿಕಾರಿಗಳು ವರ್ತನೆ ಮಾಡುವ ಜೊತೆಗೆ ಅಪಘಾತವಾದಾಗ ತುರ್ತು ಪರಿಸ್ಥಿತಿಯಲ್ಲಿ ಅವಶ್ಯಕತೆ ಇರುವ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡುತ್ತಿಲ್ಲ. ಇದರಿಂದ ರಾಷ್ಟ್ರೀಯ ಹೆದ್ದಾರಿ ಯಮದೂತ ಹೆದ್ದಾರಿಯಾಗಿ ಮಾರ್ಪಟ್ಟಿದೆ ಎಂದು ಕಿಡಿಕಾರಿದರು.
ಒಂದು ವಾರದೊಳಗೆ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ಸರಿಪಡಿಸಿ ರಾತ್ರಿವೇಳೆ ವಿದ್ಯುತ್‍ದೀಪ ನಿರಂತರವಾಗಿ ಉರಿಯಬೇಕು. ಒತ್ತುವರಿ ತೆರವುಗೊಳಿಸಿ ಮಳೆ ನೀರು ರಸ್ತೆ ಮೇಲೆ ಬರದೆ ಸರಾಗವಾಗಿ ಕೆರೆಗಳಿಗೆ ಹರಿಯುವಂತೆ ಅಭಿವೃದ್ದಿ ಪಡಿಸಬೇಕು. ಇಲ್ಲವಾದರೆ ಜಾನುವಾರುಗಳ ಸಮೇತ ಟೋಲ್ ಸಂಗ್ರಹದ ಕೇಂದ್ರಗಳ ಮುಂದೆ ಆಹೋರಾತ್ರಿ ದರಣಿ ಮಾಡುವ ಎಚ್ಚರಿಕೆಯೊಂದಿಗೆ ಮನವಿ ನೀಡಿ ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಟೋಲ್ ಮ್ಯಾನೇಜರ್ ಅಜಿತ್ ರವರು ರಸ್ತೆಯಲ್ಲಿ ಅವ್ಯವಸ್ಥೆ ಇರುವುದು ಸತ್ಯ ವ್ಯವಸ್ಥಾಪಕರ ಗಮನಕ್ಕೆ ತಂದು ಸಮಸ್ಯೆ ಬಗೆ ಹರಿಸುವ ಭರವಸೆಯನ್ನು ನೀಡಿದರು.
ಮನವಿ ನೀಡುವಾಗ ಮುಳಬಾಗಿಲು ತಾಲ್ಲೂಕು ಯಲುವಳ್ಳಿ ಪ್ರಭಾಕರ್, ಕುರುಬರಹಳ್ಳಿ ರಾಮಕೃಷಣಪ್ಪ, ವೆಂಕಟೇಶಪ್ಪ, ರಾಜ್ಯ ಪ್ರ.ಕಾರ್ಯದರ್ಶಿ ಪಾರುಕ್‍ಪಾಷ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಬಂಗಾರಿ ಮಂಜು, ಭಾಸ್ಕರ್, ಬಾಬು, ರಾಜೇಶ್, ಗುರುಸ್ವಾಮಿ, ಸುನಿಲ್‍ಕುಮಾರ್, ಆಜಿಲ್‍ಪಾಷ, ವಿಶ್ವ, ವಿಜಯ್‍ಪಾಲ್, ಜಿಲ್ಲಾ ಕಾರ್ಯಾಧ್ಯಕ್ಷ ಹೆಬ್ಬಣಿ ಆನಂದರೆಡ್ಡಿ, ರಾಮಮೂರ್ತಿ, ಶ್ರೀಕಾಂತ್, ಮಾಲೂರು ತಾಲ್ಲೂಕು ಅಧ್ಯಕ್ಷ ಯಲ್ಲಣ್ಣ, ಅಂಬ್ಲಿಕಲ್ ಮಂಜುನಾಥ, ಮುಂತಾದವರು ಇದ್ದರು.

Cluster level athletic competition

St Lawrence English Medium school primary Boys sports team emerged as Mangalore North Zonal champions. 

October 19, Boys team of St Lawrence English Medium school bagged 3 Golds, 2 Silver and 1 bronze in primary section. 

Mohammed Shami of 7th STD won 3 golds;  in 100mtrs Race,  200Mtrs Race also in long jump. Gagan of 6th standard won silver in High jump and bronze in hurdles. And also, the relay team won silver. Thus the primary Boys school team  emerged as Mangalore North Zonal champions. 

Among the High school students Manvith of 8th std won gold in High jump and Pratham won gold in 400 Mtrs Race, Sumuk of 10th std won Silver in discuss throw and bronze in shot put throw.  Josik of 10th std won bronze in triplet jump. 

 These students were trained under Mr Yogesh the physical trainer of the school. The management, parents and teachers and entire student body congratulates our proud winners.

ಬೆಂಗಳೂರು ಗ್ರಾ.ಜಿ.ಸ.ಒ.ನಿ. ಬೆಂಗಳೂರು ಆಡಳಿತ ಮಂಡಳಿ ಅಧ್ಯಯನ ಪ್ರವಾಸದಲ್ಲಿ – ಕುಂದಾಪುರ ರೋಜರಿ ಸೊಸೈಟಿಗೆ ಭೇಟಿ

ಕುಂದಾಪುರ, ಅ.22:  ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಬೆಂಗಳೂರು ಇದರ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು ನಿರ್ದೇಶಕರುಗಳು ಮತ್ತು ನಿರ್ವಹಣಾಧಿಕಾರಿಗಳು ಹಾಗೂ ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರು ಅಧ್ಯಯನ ಪ್ರವಾಸವನ್ನು ಕೈಗೊಂಡಿದ್ದು ಇದರ ನಿಮಿತ್ತ ಕುಂದಾಪುರ ರೋಜರಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಲಿ. ಗೆ (ಅ.19 ರಂದು)  ಭೇಟಿ ನೀಡಿ ಸಂಘ ನಡೆದು ಬಂದ ದಾರಿ ಸದಸ್ಯರಿಗೆ ಸಂಘದಿಂದ ದೊರಕುವ ವಿವಿಧ ಯೋಜನೆ ಗಳು, ಸಾಲ ವಿತರಣೆ, ಠೇವಣಿಗಳ ಸಂಗ್ರಹಣೆ, ವಸುಲಾತಿ ಮತ್ತು ಸಂಘದ ಮೇಲ್ವಿಚಾರಣೆ ಕುರಿತು ಚರ್ಚಿಸಲಾಯಿತು, ಸಂಘದ ಗ್ರಾಹಕರಿಗೆ,  ಸದಸ್ಯರಿಗೆ ಸಾರ್ವಜನಿಕ ಉಪಕಾರ ನಿಧಿ, ಧರ್ಮದ ನಿಧಿ  ಜೋಡಣೆ ಮತ್ತು ಅನುಷ್ಠಾನದ ಕುರಿತು ಚರ್ಚಿಸಲಾಯಿತು.

    ರೋಜರಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಉತ್ತಮ ಯೋಜನೆಗಳ ಬಗ್ಗೆ ತಿಳಿದುಕೊಂಡು, ಅವರ ಯೋಜನೆಗಳ ಬಗ್ಗೆ ಬಹಳ ಆಸಕ್ತಿ ಹೊಂದಿ, ಸೊಸೈಟಿಯ ಏಳಿಗೆ ಬಗ್ಗೆ ಶ್ಲಾಘಿಸಿ ಸಂಘದ ಅಧ್ಯಕ್ಷರಾದ ಶ್ರೀ ಜಾನ್ಸನ್ ಡಿ ಅಲ್ಮೆಡಾ ಇವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಪರವಾಗಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ನಿರ್ದೇಶಕರಾಗಿರುವಂತಹ ಗೌರವಾನ್ವಿತ ಶ್ರೀ ಎ ಸಿ.ನಾಗರಾಜುರವರು ಸನ್ಮಾನಿಸಿ ಶುಭವನ್ನ ಕೋರಿದರು.

    ಸನ್ಮಾನ ಸ್ವೀಕರಿಸಿದ ರೋಜರಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಜಾನ್ಸನ್ ಡಿ ಅಲ್ಮೆಡಾ ನಮ್ಮ ಸೊಸೈಟಿ ಕೇವಲ ಹಣದ ವ್ಯವಹಾರ ಮಾಡದೆ, ಸಾಮಾಜಿಕ ಹಿತದ್ರಷ್ಟಿಯಿಂದ ಬಡವರಿಗೆ, ರೋಗಿಗಳಿಗೆ, ಸಂಘ ಸಂಸ್ಥೆಗಳಿಗೆ ಸಹಾಯಧನವನ್ನು ನೀಡುತ್ತದೆ, ಸದಸ್ಯರ ಮಕ್ಕಳಿಗೆ ವಿಧ್ಯಾಭಾಸಕ್ಕಾಗಿ ವಿಶೇಷವಾದ ಸಾಲದ ಯೋಜನೆಗಳನ್ನು ಹಮ್ಮಿಕೊಂಡ್ಡಿದ್ದೆವೆ. 1 ಮುಖ್ಯ ಕಚೇರಿ ಮತ್ತು 8 ಬ್ರಾಂಚಗಳನ್ನು  ಹೊಂದಿಕೊಂಡು, ಅದರಲ್ಲಿ ಹೆಚ್ಚಿನವು ನಾವು ನಮ್ಮ ಸ್ವಂತ ಕಟ್ಟಡಗಳಲ್ಲಿ ವ್ಯವಹಾರ ಮಾಡುತ್ತಿದೆವೆ” ಎಂದು ತಿಳಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೇಬಲ್ ಡಿ ಅಲ್ಮೆಡಾ ರೋಜರಿ ಸೊಸೈಟಿಯ ಲೇವಾ ದೆವಿಯ ಬಗ್ಗೆ ವಿವರ ನೀಡಿದರು.     

    ಈ ಸಂದರ್ಭದಲ್ಲಿ ರೋಜರಿ ಸೊಸೈಟಿಯ ಉಪಾಧ್ಯಕ್ಷಾರಾದ ಶ್ರೀ ಕಿರಣ್ ಲೋಬೊ, ಒಝ್ಲಿನ್ ರೆಬೆಲ್ಲೊ, ಶಾಂತಿ ಆರ್. ಕರ್ವಾಲ್ಲೊ ಮತ್ತಿತರು  ನಿರ್ದೇಶಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.

    ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟದ   ಭೇಟಿಯ ಸಂದರ್ಭದಲ್ಲಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ನಿರ್ದೇಶಕರಾಗಿರುವಂತಹ  ಗೌರವಾನ್ವಿತ ಶ್ರೀ ಎ ಸಿ.ನಾಗರಾಜುರವರು ಮತ್ತು  ಉಪಾಧ್ಯಕ್ಷರಾದ ಶ್ರೀ. ಬಿ ಟಿ ಶ್ರೀನಿವಾಸ್ ಮೂರ್ತಿ ಅವರು ಹಾಗೂ ನಿರ್ದೇಶಕರುಗಳಾದ ಶ್ರೀ ಎನ್. ಹೆಚ್. ಜಯದೇವಯ್ಯ, ಕೆ.ಮುನಿರಾಜು, ಎಸ್.ರಮೇಶ್, ಲಕ್ಷ್ಮೀಗೌಡ, ಮಂಡಿಬೆಲೆ ರಾಜಣ್ಣ, ಶ್ರೀಮತಿ ಆರ್. ರುಕ್ಮಿಣಿ ಭಾಯಿ, ಮಾಜಿ ನಿರ್ದೇಶಕರಾದ ಜಿ. ಸಂಪಂಗಿ ಗೌಡ ಹಾಗೂ ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಮಾಜಿ ಅಧ್ಯಕ್ಷರು ಶ್ರೀಮತಿ ಫಾತಿಮಾ ಲಾರೆನ್ಸ್ , ಶ್ರೀ ಪುರುಷೋತ್ತಮ್ ಎಸ್ ಪಿ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಸುವರ್ಣ ಪಂಕಜಾಕ್ಷಿ, ಆರ್. ನಾಗರಾಜು, ದಿನೇಶ್, ಕೆ. ಮಂಜುನಾಥ್ ಸಿಬ್ಬಂದಿಗಳು ಹಾಜರಿದ್ದರು. ರೋಜರಿ ಸಒಸೈಟಿಯ ನಿರ್ದೇಶಕಿ ಡಯಾನಾ ಆಲ್ಮೇಡಾ ವಂದಿಸಿದರು.

ರೋಟರಿ ಶ್ರೀನಿವಾಸಪುರ ಸೆಂಟ್ರಲ್ ನ 2022-23ನೇ ಸಾಲಿನ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಶ್ರೀನಿವಾಸಪುರ: ಸದಸ್ಯರು ಸ್ವಯಂ ಪ್ರೇರಿತರಾಗಿ ಸದಸ್ಯತ್ವ ಪಡೆದುಕೊಂಡು ಯಾವುದೇ ಅಪೇಕ್ಷೆಯಿಲ್ಲದೆ ಸೇವಾ ಮನೋಬಾವದಿಂದ ಎಲ್ಲಾ ಸದಸ್ಯರ ಪರಸ್ಪರ ಸಹಕಾರದಿಂದ ಸಮಾಜದ ಒಳಿತಿಗಾಗಿ ಅನೇಕ ಜನಪರ ಸೇವಾ ಕಾರ್ಯಗಳಾದ ಶಿಕ್ಷಣ, ಆರೋಗ್ಯ, ಬಡ ಜನತೆಗೆ ಉಪಯೋಗವಾಕತಕ್ಕಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು 2022-23ನೇ ಸಾಲಿನ ಅದ್ಯಕ್ಷರಾದ ಸಿ.ಆರ್. ಶಿವರಾಜ್ ತಿಳಿಸಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ನ 2022-23ನೇ ಸಾಲಿನ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿ ಮಾತನಾಡಿದ ಶಿವರಾಜ್, ರೋಟರಿ ಸಂಸ್ಥೆಯಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸದಸ್ಯತ್ವ ಪಡೆದುಕೊಂಡು ಸೇವಾ ಮನೋಬಾವದಿಂದ ಎಲ್ಲಾ ಸದಸ್ಯರÀ ಸಹಕಾರ ಹಾಗೂ ಮಾರ್ಗದರ್ಶನವನ್ನು ಪಡೆದು ಕಳೆದ 7 ವರ್ಷಗಳಿಂದ ಈ ತಾಲ್ಲೂಕಿನಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಮುಖಾಂತರ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳನ್ನು ಮುಂದುವರೆಸಿ ಅದೇ ರೀತಿ ಸಮಾಜದ ಒಳಿತಿಗಾಗಿ ಅನೇಕ ಜನಪರ ಸೇವಾ ಕಾರ್ಯಗಳಾದ ಶಿಕ್ಷಣ, ಆರೋಗ್ಯ, ಬಡ ಜನತೆಗೆ ಉಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಮುಳಬಾಗಿಲಿನ ಡಿ.ವೈ.ಎಸ್.ಪಿ. ಜಯಂಶಕರ್ ಮಾತನಾಡಿ, ನಾನು ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದು ಅನೇಕ ರೋಟರಿ ಕಾರ್ಯಕ್ರಮಗಳಲ್ಲೂ ಸಹ ಭಾಗವಹಿಸಿದ್ದೇನೆ, ಕೋಲಾರ ಜಿಲ್ಲೆಯಲ್ಲಿ ರೋಟರಿ ಸಂಸ್ಥೆಯ ಮುಖಾಂತರ ಅನೇಕ ಬಡಜನತೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ನನಗೆ ಸಂತಸ ತಂದಿದ್ದು, 2022-23ನೆ ಸಾಲಿಗೆ ಅಧಿಕಾರ ಸ್ವೀಕರಿಸಿರುವ ಶಿವರಾಜ್ ಈ ತಾಲ್ಲೂಕಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಒಳ್ಳೆಯ ಹೆಸರನ್ನು ಪಡೆಯಬೇಕೆಂದು ಆಶಿಸಿ, ನಮ್ಮ ಇಲಾಖೆಯು ಸಹ ನಿಮ್ಮ ಸೇವಾ ಕಾರ್ಯಗಳಿಗೆ ಬೆನ್ನೆಲುಬಾಗಿ ಇರುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಹಿಂದಿನ ಸಾಲಿನ ಸದಸ್ಯರು ಮತ್ತು ನೂತನ ಸದಸ್ಯರಿಗೆ ರೋಟರ್ ಪಿನ್ ಮಾಡುವ ಮುಖಾಂತರ ಪದಗ್ರಹಣವನ್ನು ಬಿ.ಆರ್. ದೆಪ್ಯೂಟಿ ಡಿ.ಆರ್.ಎಫ್.ಸಿ. ಆರ್.ಐ. 3190 ರೋ. ಶ್ರೀಧರ್ ನೆರವೇರಿಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಡಿ.ಆರ್.ಎಫ್.ಸಿ. ಆರ್.ಐ. 3190 ರೋ. ಶ್ರೀಧರ್, ಜೋನಲ್ ಗೌರ್ನರ್ ಆಮು. ಲಕ್ಷ್ಮೀನಾರಾಯಣ ಮಾತನಾಡಿ ಶುಭ ಕೋರಿದರು.
ಈ ಕಾರ್ಯಕ್ರಮವನ್ನು ಜೋನಲ್ ಕಾನ್‍ಫ್ರೆಂಸ್ ಎಸ್. ಶಿವಮೂರ್ತಿ ಕಾರ್ಯಕ್ರಮದ ನಿರೂಪಣೆಯನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಗೌರ್ನರ್ ಎಸ್.ಎನ್. ಮಂಜುನಾಥರೆಡ್ಡಿ, ಸರಿತಾ ಬಾಲಾಜಿ, ನಾಗಶೇಕರ್, ಕೋಲಾರ ರೋಟರಿ ಸಂಸ್ಥೆಯ ಎಸ್.ವಿ. ಸುಧಾಕರ್, ರವೀಂದ್ರನಾಥ್, ಮುಳಬಾಗಿಲಿನ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಅರುಣ್, ಮಾಜಿ ಅಧ್ಯಕ್ಷರಾದ ಎನ್.ಆರ್. ಸತ್ಯಣ್ಣ, ಹಾಗೂ ಸದಸ್ಯರು, ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಚಾರ್ಟರ್ಡ್ ಅಧ್ಯಕ್ಷರಾದ ಎಲ್.ಗೋಪಾಲಕೃಷ್ಣ ಹಾಗೂ ಹಿಂದಿನ ಸಾಲಿನ ಅಧ್ಯಕ್ಷರುಗಳು, ಕಾರ್ಯದರ್ಶಿಗಳು ಹಾಗೂ 22-23ನೇ ಸಾಲಿನ ಕಾರ್ಯದರ್ಶಿ ಶ್ರೀನಿವಾಸರರೆಡ್ಡಿ ಹಾಗೂ ಅನೇಕ ಸದಸ್ಯರು ಹಾಜರಿದ್ದರು.