HOLY ROSARY CHURCH, KUNDAPUR – 450 th JUBILEE SOUVENIR 2021

ಕುಂದಾಪುರ ರೊಜಾರಿ ಮಾತಾ ಇಗರ್ಜಿಯ ವಾರ್ಷಿಕ ಮಹಾ ಉತ್ಸವ – ನಾವು ಸಂಪೂರ್ಣವಾಗಿ ಮೇರಿ ಮಾತೆಗೆ ಸಮರ್ಪಿಸಿಕೊಳ್ಳೋಣ- ಮೊನ್ಸಿಂಜ್ಞೊರ್ ಫರ್ಡಿನಾಂಡ್

ಕುಂದಾಪುರ ತೆರಾಲಿಯ ಸಂಭ್ರಮ – ರೋಜರಿ ಜಪಮಣಿಯ ಪ್ರಾರ್ಥನೆಯಲ್ಲಿ ಬಹಳ ಶಕ್ತಿ ಇದೆ – ಫಾ|ಅಶ್ವಿನ್ ಡಿಸಿಲ್ವಾ

ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಮಾಡುವ ಕುಂದಾಪುರದ ಶಾಸಕರು:ಮೊಳಹಳ್ಳಿ ದಿನೇಶ್ ಹೆಗ್ಡೆ

ನಂಜನಗೂಡು ತಾಲೂಕಿನ ಮಹಿಳೆಯೊಬ್ಬರನ್ನು ಬಲಿ ಪಡೆದ ಸೆರೆ-ಕಾರ್ಯಾಚರಣೆಗೆ 200 ಸಿಬ್ಬಂದಿ, 3 ಆನೆ, ಡ್ರೋನ್ ಕ್ಯಾಮೆರಾ ಬಳಕೆ

ಹುಲಿ ದಾಳಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೀಪುರದ ಅರಣ್ಯಾಧಿಕಾರಿಗಳು ಮಿಡ್‌ನೈಟ್ ಆಪರೇಷನ್ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.ಸೆರೆಸಿಕ್ಕ ಹುಲಿ ಮಹಿಳೆಯ ಮೇಲೆ ದಾಳಿ ನಡೆಸಿ ಆಕೆಯನ್ನು ಬಲಿ ಪಡೆದಿತ್ತು. ಮಹಿಳೆ ಮಾತ್ರವಲ್ಲದೇ ಈ ಹುಲಿ ಎರಡು ಜಾನುವಾರುಗಳನ್ನೂ ಕೊಂದಿತ್ತು. ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳ ಸಭೆ ನಡೆಸಿ ಶೀಘ್ರವೇ ಹುಲಿ ಸೆರೆಗೆ ಸೂಚಿಸಿದ್ದರು. ಇದೀಗ ಬಂಡೀಪುರದ ಅರಣ್ಯಾಧಿಕಾರಿಗಳ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಸುಮಾರು 10 ವರ್ಷ ವಯಸ್ಸಿನ ಹುಲಿಯನ್ನು ರಾತ್ರಿ ಕಾರ್ಯಾಚರಣೆ ಮೂಲಕ ಸೆರೆಹಿಡಿದಿದ್ದಾರೆ.

ಈ ಹುಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿ ಬಳಿ ಮಹಿಳೆಯೊಬ್ಬರನ್ನು ಬಲಿ ಪಡೆದಿತ್ತು. ರಾತ್ರಿ 2 ಗಂಟೆ ಸಮಯದಲ್ಲಿ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದಿದ್ದಾರೆ. ಜಾನುವಾರು ಮಾಂಸ ತಿನ್ನಲು ಕಳೆದ ಎರಡು ದಿನದಿಂದ ಜಾನುವಾರು ಸತ್ತ ಸ್ಥಳದ ಬಳಿ ಹುಲಿಯ ಚಲನವಲನ ಪತ್ತೆಯಾಗಿತ್ತು. ಕ್ಯಾಮೆರಾ ಟ್ರ್ಯಾಪ್‌ನಲ್ಲೂ ಹುಲಿಯ ಚಲನವಲನ ಪತ್ತೆಯಾಗಿತ್ತು. ರಾತ್ರಿ ಬೋನಿನೊಳಗೆ ಸಿಬ್ಬಂದಿ ಇರಿಸಿ, ಮರೆಮಾಚಿ ನೈಟ್ ಆಪರೇಷನ್ ಮಾಡಲಾಗಿದೆ. ಪಶುವೈದ್ಯ ವಾಸೀಂ ಮಿರ್ಜಾ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಬೋನಿನೊಳಗೆ ಇರಿಸಿದ್ದರು. ರಾತ್ರಿ ಜಾನುವಾರು ಕೊಂದ ಸ್ಥಳಕ್ಕೆ ಮಾಂಸ ತಿನ್ನಲು ಹುಲಿ ಬಂದ ವೇಳೆ ವೈದ್ಯರು ಬೋನಿನಲ್ಲೇ ಕುಳಿತು ಅರವಳಿಕೆ ಚುಚ್ಚುಮದ್ದು ಕೊಟ್ಟಿದ್ದಾರೆ.

ಜನರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಸೆರೆಯಾಗಿದೆ. ಹುಲಿ ಸೆರೆಗೆ 200 ಸಿಬ್ಬಂದಿ, 3 ಆನೆ, ಕ್ಯಾಮೆರಾ ಟ್ರ‍್ಯಾಪ್, ಡ್ರೋನ್ ಬಳಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಡೀಪುರ ಅರಣ್ಯದ ಹೆಡಿಯಾಲ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಹುಲಿ ಸೆರೆಯಿಂದ ಕಾಡಂಚಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಹಿಡಿದ ಹುಲಿಯನ್ನು ಅಧಿಕಾರಿಗಳು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಬಿಟ್ಟಿದ್ದಾರೆ.

ಶಾಸಕ ಸುನೀಲ್ ಕುಮಾರ್ ಜಿಲ್ಲಾ ಎಸ್ಪಿ ಮೇಲೆ ಕ್ಷುಲ್ಲಕ ಕಾರಣಹೊರಿಸಿ ಹರಿಹಾಯ್ದ ಅಸಾಂವಿಧಾನಿಕ ನಡೆಯ ಹಿಂದೆ ಪೂರ್ವನಿಯೋಜಿತ ಸಂಚು ಅಡಗಿದೆ:ಅಶೋಕ್ ಕುಮಾರ್ ಕೊಡವೂರು

ಕ್ರಿಸ್ತರಾಜರ ಮಹೋತ್ಸವ ಪ್ರಯುಕ್ತ ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ಉಡುಪಿ ಧರ್ಮಪ್ರಾಂತ್ಯದಲ್ಲಿ ‘ಕ್ರಿಸ್ತ ಜಯಂತಿ ಜುಬಿಲಿ 2025’ರ ಸಿದ್ಧತೆಗೆ ವಿಧ್ಯುಕ್ತ ಚಾಲನೆ

ಬ್ರಾಹ್ಮಣ ಸಮುದಾಯ ಶಿಕ್ಷಣದ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು : ರಾಜ್ಯ ಯಾಜ್ಞವಲ್ಕ್ಯ ಸೇವಾ ದತ್ತಿ ಉಪಾಧ್ಯಕ್ಷ ವೈ.ವಿ.ಗೋಪಾಲಕೃಷ್ಣ

ಶ್ರೀನಿವಾಸಪುರ: ಬ್ರಾಹ್ಮಣ ಸಮುದಾಯ ಶಿಕ್ಷಣದ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು ಎಂದು ರಾಜ್ಯ ಯಾಜ್ಞವಲ್ಕ್ಯ ಸೇವಾ ದತ್ತಿ ಉಪಾಧ್ಯಕ್ಷ ವೈ.ವಿ.ಗೋಪಾಲಕೃಷ್ಣ ಹೇಳಿದರು.
ಪಟ್ಟಣದ ಜಗದ್ಗುರು ಶ್ರೀ ಭಾರತಿ ತೀರ್ಥ ಸಭಾ ಭವನದಲ್ಲಿ ತಾಲ್ಲೂಕು ಯಾಜ್ಞವಲ್ಕ್ಯ ಸೇವಾ ದತ್ತಿಯಿಂದ ಭಾನುವಾರ ಏರ್ಪಡಿಸಿದ್ದ ಯೋಗೀಶ್ವರ ಯಾಜ್ಞವಲ್ಕ್ಯ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.
ಬ್ರಾಹ್ಮಣ ಸಮುದಾಯ ತಮ್ಮೊಳಗೆ ಇರಬಹುದಾದ ಸಣ್ಣಪುಟ್ಟ ಭಿನ್ನಾಭಿಪ್ರಾಹ ಬದಿಗೊತ್ತಿ ಒಗ್ಗೂಡಬೇಕು. ಸಮಾಜದ ಎಲ್ಲ ರಂಗಗಳಲ್ಲೂ ಮುಂದೆ ಬರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಸಾಂಸ್ಕøತಿಕ ಪರಂಪರೆಗೆ ಬೆಲೆ ನೀಡಬೇಕು. ಮಾನವೀಯ ನೆಲೆಯಲ್ಲಿ ಬದುಕು ಸಾಗಿಸಬೇಕು ಎಂದು ಹೇಳಿದರು.
ತಾಲ್ಲೂಕು ಯಾಜ್ಞವಲ್ಕ್ಯ ಸೇವಾ ದತ್ತಿ ಅಧ್ಯಕ್ಷ ಗೋಪಿನಾಥರಾವ್ ಮಾತನಾಡಿ, ಬ್ರಾಹ್ಮಣ ಸಮುದಾಯ ಯಾಜ್ಞವಲ್ಕ್ಯ ಮಹರ್ಷಿ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ನಡೆ, ನುಡಿ, ಆಚಾರ, ವಿಚಾರ ದಲ್ಲಿ ಎಚ್ಚರ ವಹಿಸಬೇಕು. ಸ್ವಂತಿಕೆ ಉಳಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ತಾಲ್ಲೂಕು ಬ್ರಾಹ್ಮಣರ ಸಂಘದ ಅಧ್ಯಕ್ಷ ಕೆ.ದಿವಾಕರ್ ಮಾತನಾಡಿ, ಬ್ರಾಹ್ಮಣ ಸಮುದಾಯ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಸನಾತನ ಸಂಸ್ಕøತಿ ಬಗ್ಗೆ ಅಭಿಮಾನ ತಳೆಯಬೇಕು. ವೈದಿಕ ಆಚರಣೆಗಳಿಗೆ ಒತ್ತುನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿದ್ದ ಸಮುದಾಯದ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಸನ್ಮಾನಿಸಲಾಯಿತು.
ಸಮುದಾಯದ ಮುಖಂಡರಾದ ಜಿ.ಆರ್.ವಲ್ಲಬಣ್ಣ, ಶ್ರೀಧರ್, ಎಚ್.ಆರ್.ವೆಂಕಟೇಶ್, ರಮೇಶ್ ಬಾಬು, ಎಸ್.ಎನ್.ಗೋಪಾಲ್, ಕೆ.ಎಸ್.ರಾಘವೇಂದ್ರ, ಎಚ್.ಎಸ್.ಸುನಿಲ್, ಎಸ್.ಸುಬ್ರಮಣಿ, ಎಚ್.ಆರ್.ರಾಘವೇಂದ್ರ, ವೆಂಕಟೇಶಬಾಬು, ವೆಂಕಟಕೌಶಿಕ್, ಎಸ್.ಪಿ.ಕೃಷ್ಣಮೂರ್ತಿ, ಪಿ.ಎಸ್.ವೆಂಕಟರಾಘವೇಂದ್ರ ಇದ್ದರು.
ಮೆರವಣಿಗೆ: ಪಟ್ಟಣದಲ್ಲಿ ಯಾಜ್ಞವಲ್ಕ್ಯ ಮಹರ್ಷಿ ಭಾವಚಿತ್ರ ಮೆರವಣಿಗೆ ಏರ್ಪಡಿಸಲಾಗಿತ್ತು.

ವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ : ಜೆಎಂಎಫ್‍ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು