HOLY ROSARY CHURCH, KUNDAPUR – 450 th JUBILEE SOUVENIR 2021

ಶ್ರೀನಿವಾಸಪುರ : ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

ಶ್ರೀನಿವಾಸಪುರ : ಪುರಸಭಾ ಕಚೇರಿಯ  ಸಭಾಂಗಣದಲ್ಲಿಂದು ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ,ಚಾಲನೆ ನೀಡಿದರು

ಕಚೇರಿ ವ್ಯವಸ್ಥಾಪಕರಾದ ಶ್ರೀ ನವೀನ್ ಚಂದ್ರ,ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ಕೆ ಜಿ. ರಮೇಶ್,ಕಂದಾಯ ನಿರೀಕ್ಷಕ ಎನ್.ಶಂಕರ್ ಸರ್ಕಾರಿ ಬಾಲಕಿಯರ  ಕಾಲೇಜಿನ ಶಿಕ್ಷಕಿ ಶ್ರೀಮತಿ ಮಂಜುಳಾ,ಸ್ವಚ್ಛ ಭಾರತ್ ರಾಯಬಾರಿ ಶ್ರೀಮತಿ ಮಾಯಾ ಬಾಲಚಂದ್ರ,,ನಂದಿನಿ ಅರ್ಜುನ್ ಸೇರಿದಂತೆ ಸರ್ಕಾರಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಫಾದರ್ ಮ್ಯಾಥ್ಯು ವಾಸ್ ಮೆಮೊರಿಯಲ್‍ ಇಂಟರ್ ಪ್ಯಾರಿಶ್‍ ಟೂರ್ನಮೆಂಟ್


ಸಮಾಜ ಮತ್ತು ಕಥೊಲಿಕ್ ಸಭೆಗಾಗಿ ನಿಸ್ವಾರ್ಥಸೇವೆ ನೀಡಿದ ಕಮ್ಯೂನಿಟಿ ಎಂಪವರ್‍ಮೆಂಟ್ ಟ್ರಸ್ಟಿನ ಸ್ಥಾಪಕ ಟ್ರಸ್ಟಿ, ಫಾದರ್ ಮ್ಯಾಥ್ಯು ವಾಸ್‍ಇವರ ಸ್ಮರಣಾರ್ಥವಾಗಿ ಕಮ್ಯುನಿಟಿಎಂಪವರ್‍ಮೆಂಟ್‍ಟ್ರಸ್ಟ್ (ರಿ) ಮಂಗಳೂರು, ಕ್ರಿಶ್ಚಿಯನ್ ಸ್ಪೋಟ್ರ್ಸ್ ಅಸೋಶಿಯೇಶನ್ ಮಂಗಳೂರು, ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಮತ್ತುಕಥೊಲಿಕ್ ಸಭಾ,ಉಡುಪಿ ಪ್ರದೇಶ (ರಿ) ಇವರ ಸಹಯೋಗದಲ್ಲಿ ಇಂಟರ್ ಪ್ಯಾರಿಶ್ ಫುಟ್‍ಬಾಲ್ (ಪುರುಷರಿಗೆ) ಮತ್ತು ತ್ರೋಬಾಲ್ (ಮಹಿಳೆಯರಿಗೆ)ಟೂರ್ನಮೆಂಟ್‍ಅಕ್ಟೋಬರ್ 22, 2023ರ ಭಾನುವಾರದಂದು ಸಂತ ಅಲೋಶಿಯಸ್ ಪಿಯುಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪದಕಗಳನ್ನು ಗೆದ್ದ ಕಥೊಲಿಕ್ ಸಮುದಾಯದ ಕ್ರೀಡಾಳುಗಳನ್ನು ಸನ್ಮಾನಿಸಲು ಯೋಜಿಸಲಾಗಿದೆ. 01.10.2022ರಿಂದ30.09.2023ರವರೆಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪದಕಗಳನ್ನು ಗೆದ್ದ ಕ್ರೀಡಾಳುಗಳ ಹೆಸರನ್ನು ಅಕ್ಟೋಬರ್ 15, 2023 ರೊಳಗೆ ಕಮ್ಯೂನಿಟಿ ಎಂಪವರ್‍ಮೆಂಟ್‍ ಟ್ರಸ್ಟ್, ಮಿಲಾಗ್ರಿಸ್, ಮಂಗಳೂರು ಇಲ್ಲಿಗೆ ತಲುಪಿಸಬಹುದು ಅಥವಾ ದೂರವಾಣಿ/ವಾಟ್ಸ್‍ಆ್ಯಪ್ ಸಂಖ್ಯೆ : 9448379689, 9844502279 ಮೂಲಕವೂ ತಿಳಿಸಬಹುದಾಗಿದೆ.
ಟೂರ್ನಮೆಂಟಿನ ವಿವರ ಮತ್ತು ನಿಬಂಧನೆಗಳನ್ನು ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಚರ್ಚ್‍ಗಳಿಗೆ ಕಳುಹಿಸಲಾಗಿದೆ. ಟೂರ್ನಮೆಂಟನಲ್ಲಿ ಭಾಗವಹಿಸುವ ಪಂಗಡಗಳು 15.10.2023ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಕೋರಲಾಗಿದೆ.
ಪ್ರತಿವಿಜೇತ ಪಂಗಡಗಳಿಗೆ ರೂ.25000 (ಪ್ರಥಮ), ರೂ.15000 (ದ್ವಿತೀಯ), ರೂ.7500 (ತೃತೀಯ) ಬಹುಮಾನಗಳಿದ್ದು ಪ್ರಶಸ್ತಿ ಫಲಕವನ್ನು ನೀಡಲಾಗುವುದು. ಎಂದು ತಿಳಿಸಲಾಯಿತು.


ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದವರು:
ಅನಿಲ್ ಲೋಬೊ – ಸಂಚಾಲಕರು, ಫಾದರ್ ಮ್ಯಾಥ್ಯೂ ವಾಸ್ ಮೆಮೋರಿಯಲ್‍ಇಂಟರ್ ಪ್ಯಾರಿಶ್‍ಟೂರ್ನಮೆಂಟ್
ಸೆಲೆಸ್ಟಿನ್ ಡಿಸೋಜ- ಮ್ಯಾನೆಜಿಂಗ್ ಟ್ರಸ್ಟಿ, ಕಮ್ಯೂನಿಟಿಎಂಪವರ್‍ಮೆಂಟ್‍ಟ್ರಸ್ಟ್, ಮಂಗಳೂರು
ಆಲ್ವಿನ್‍ಡಿಸೋಜ- ಅಧ್ಯಕ್ಷರು, ಕ್ಯಾಥೊಲಿಕ್ ಸಭಾ, ಮಂಗಳೂರು ಪ್ರದೇಶ (ರಿ)
ಸಂತೋμïಕರ್ನೆಲಿಯೊ-ಅಧ್ಯಕ್ಷರು, ಕ್ಯಾಥೊಲಿಕ್ ಸಭಾ, ಉಡುಪಿ ಪ್ರದೇಶ (ರಿ)
ಮೆಲ್ವಿನ್ ಪೆರಿಸ್-ಕೋಶಾಧಿಕಾರಿ, ಕ್ರಿಶ್ಚಿಯನ್ ಸ್ಪೋಟ್ರ್ಸ್ ಅಸೋಸಿಯೇಶನ್, ಮಂಗಳೂರು

ಸಮಾಜ ಸೇವೆಗೆ ಮತ್ತೊಂದು ಹೆಸರು ಆಸ್ಕರ್ ಫೆರ್ನಾOಡಿಸ್ : ಎಂ.ಎ. ಗಪೂರ್

ಉಡುಪಿ : ಕೇಂದ್ರ ರಾಜ್ಯದಲ್ಲಿ ನಿಸ್ವಾರ್ಥ ರಾಜಕಾರಣ ಮಾಡಿರುವ ಕೇಂದ್ರದ ಮಾಜಿ ಸಚಿವ ದಿವಂಗತ ಆಸ್ಕರ್ ಫೆರ್ನಾOಡಿಸ್ ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರಣಕರ್ತರು. ಯಾವುದೇ ಪ್ರಚಾರ ಬಯಸದ ಆಸ್ಕರ್ ಫೆರ್ನಾOಡಿಸ್ ನಿಜವಾಗಿಯೂ ಸಮಾಜಸೇವೆಗೆ ಮತ್ತೊಂದು ಹೆಸರು ಎಂದು ಕೆಪಿಸಿಸಿ ಕಾರ್ಯದರ್ಶಿ ಎಂಎ ಗಪೂರ್ ತಿಳಿಸಿದರು.

ಅವರು ದಿವಂಗತ ಆಸ್ಕರ್ ಫೆರ್ನಾOಡಿಸ್ ಅಭಿಮಾನಿ ಬಳಗ ಮತ್ತು ಮಾನವ ಬಂಧುತ್ವ ವೇದಿಕೆ ಉಡುಪಿ ಜಿಲ್ಲಾ ಸಂಚಲನ ಸಮಿತಿ ನೇತೃತ್ವದಲ್ಲಿ ದಿವಂಗತ ಆಸ್ಕರ್ ಫೆರ್ನಾOಡಿಸ್ ರವರ ದ್ವಿತೀಯ ಪುಣ್ಯತಿಥಿಯ ಸ್ಮರಣಾರ್ಥ ಉದ್ಯಾವರ ಸಂಪಿಗೆ ನಗರದ ‘ಸ್ನೇಹಲಯ’ದಲ್ಲಿ ದಿನಸಿ ವಸ್ತುಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿದರು.

ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ಅಸ್ಕರ್ ಫೆರ್ನಾOಡಿಸ್ ರವರು ಕೇಂದ್ರ ಸಚಿವರಾಗಿದ್ದಾಗ ಮಧ್ಯರಾತ್ರಿಯವರೆಗೂ ತನ್ನ ಕಚೇರಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿದ್ದರು. ಅವರ ಕೆಲಸ ಕಾರ್ಯಗಳೇ ನನ್ನ ಸಾಮಾಜಿಕ ಕೆಲಸಗಳಿಗೆ ಪ್ರೇರಣೆ ಎಂದರು.

ಈ ಸಂದರ್ಭದಲ್ಲಿ ದಿನಸಿ ವಸ್ತುಗಳ ಪ್ರಾಯೋಜಕರೂ, ಮಾನವ ಬಂಧುತ್ವ ವೇದಿಕೆ ಇದರ ರಾಜ್ಯ ಸಮಿತಿ ಸದಸ್ಯರಾಗಿರುವ ರೊನಾಲ್ಡ್ ಮನೋಹರ್ ಕರ್ಕಡ, ಕಡೆಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಮಂಜೀತ್ ನಾಗರಾಜ್, ಮಹಮ್ಮದ್ ಶೀಶ್, ಜೂಲಿಯನ್ ದಾಂತಿ, ಚಾಲ್ಸ್ ಅಂಬ್ಲರ್, ರಿಯಾಜ್ ಪಳ್ಳಿ, ಸುಹೇಲ್ ಅಬ್ಬಾಸ್, ಪ್ರೇಮ್ ಮಿನೆಜಸ್, ಸಿಸ್ಟರ್ ಲೀನಾ ಮತ್ತಿತರರು ಉಪಸ್ಥಿತರಿದ್ದರು. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.

ಪಡುಕೋಣೆ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಪಡುಕೋಣೆ: 2023-24 ದಿನಾಂಕ 13-9-2023 ರಂದು ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆ ಪಡುಕೋಣೆಯಲ್ಲಿ ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯದ ಆಶ್ರಯದಲ್ಲಿ ಪಡುಕೋಣೆ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಸಂಚಾಲಕರಾದ ವಂದನೀಯ ಫ್ರಾನ್ಸಿಸ್‌ ಕರ್ನೇಲಿಯೊ ಅಧ್ಯಕ್ಷತೆ ವಹಿಸಿದ್ದರು. ನಾಡಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಪಾರ್ವತಿ ಉದ್ಭ್ಬಾಟನೆ ನೆರವೇರಿಸಿದರು. ವಾರ್ಡ್‌ ಮೆಂಬರ್‌ ಸುಧಾಕರ ಶೆಟ್ಟಿ ಮತ್ತು ಜ್ಯೋತಿ, ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್‌ ಪೂಜಾರಿ ಮತ್ತು ಗಿರಿಜಾ, ಅಚ್ಯುತ್‌ ಬಿಲ್ಲವ, ಆಡಳಿತ ಮಂಡಳಿಯವರಾದ ಪ್ರಭು ಕೆನೆಡಿ ಪಿರೇರಾ, ಅಲೆಕ್ಸ್‌ ಆಂಟನಿ ಡಿಸೋಜಾ , ವಿನ್ಸೆಂಟ್‌ ಡಿಸೋಜಾ , ಫಿಲಿಪ್‌ ಡಿಸಿಲ್ವ, ಜೋಸೆಫ್‌ ಡಿಸಿಲ್ವ, ಸ್ಟೀವನ್‌ ಡಿಸೋಜಾ, ನಿವ್ರತ್ತ ಶಿಕ್ಷಕ ಸ್ಟಾನಿ ಲುವಿಸ್‌, ಸಿಸ್ಟರ್‌ ಮೋರ್ಸಿ, ಕಿರಣ್‌ ಲೋಬೊ , ಹೆಮ್ಮಾಡಿ ವ್ರತ್ತ ಸಂಯೋಜಕ ಯೋಗೀಶ್‌, ೦೫೧ ರಾಮನಾಥ ಮೇಸ್ತ ಹಾಗೂ ಮುಖ್ಯ ಶಿಕ್ಷಕಿ ಶಾಂತಿ ಪಾಯ್ಬ್‌ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತ, ಹಳೆಯ ಕಾಲದ ವಸ್ತು ಪ್ರದರ್ಶನ, ಸೆಲ್ಟಿ ಬೂತ್‌ ನಲ್ಲಿ ಚಂದ್ರಯಾನದ ರಾಕೆಟ್‌ ಮಾದರಿ ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 16 ಶಾಲೆಗಳ ಮಕ್ಕಳು ಮತ್ತು ಇತರರೂ ಸೇರಿ 400 ಕ್ಕೂ ಮಿಕ್ಕಿದ ಜನರು ಸಂಭ್ರಮದಿಂದ ಪಾಲ್ಗೊಂಡಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ನಾಡಾ ಸಿಬ್ಬಂದಿ ಸಹಕರಿಸಿದರು . ಶಿಕ್ಷಕಿ ಸರಿಟಾ ಪಾಯ್ಸ್‌ ಮತ್ತು ಶರ್ಮಿಳಾ ನಿರೂಪಣೆ ಮಾಡಿದರು. ಮುಖ್ಯ ಶಿಕ್ಷಕಿ ಶಾಂತಿ ಪಾಯ್ಸ್‌ ಸ್ವಾಗತ ಭಾಷಣ ಮಾಡಿದರು.CRP ರಾಮನಾಥ ಮೇಸ್ತ ಧನ್ಯವಾದ ಅರ್ಪಿಸಿದರು.

ಮಾದರಿ ಶಿಕ್ಷಕಿಯಾಗುವ ಕನಸು ಕಾಣುತ್ತಿರುವ ವಿಶೇಷ ಚೇತನೆ ಯಶೋದಾ

ಬರಹ : ಶಬೀನಾ. ವೈ.ಕೆ

“ಈ ಮಗುವನ್ನು ದೊಂಬರಾಟ ಆಡುವವರಿಗೆ ಕೊಟ್ಟು ಬಿಡಿ” ಎಂದು ಒಬ್ಬ ಮಹಿಳೆ ಹೇಳಿ ಬಿಟ್ಟರು. ಇದರಿಂದ ಕುಪಿತರಾದ ವಿಠ್ಠಪ್ಪ “ಅವಳು ನನ್ನ ಮಗಳು. ಬದುಕಿರುವ ತನಕ ನಾನೇ ಸಾಕುತ್ತೇನೆ” ಎಂದು ಬಂದವರ ಬಾಯಿ ಮುಚ್ಚಿಸಿ ಬಿಟ್ಟರು.

ಯಶೋದ ಕುಮಾರಿ ಹುಟ್ಟಿನಿಂದಲೇ ವಿಶೇಷಚೇತನರು. ಅವರ ಎಡಗಾಲು ಸಂಪೂರ್ಣ ರೂಪು ಪಡೆದಿರಲಿಲ್ಲ; ಇದ್ದ ಬಲಗಾಲಿಗೂ ಪೋಲಿಯೋ ಘಾಸಿ ನೀಡಿತ್ತು. ಹುಟ್ಟಿದ ಮಗುವನ್ನು ಜನರು ವೀಕ್ಷಿಸಲೆಂದೇ ಮೂರು ದಿನಗಳ ಕಾಲ ಹೊರಗಡೆ ತೊಟ್ಟಿಲಲ್ಲಿ ಇಟ್ಟಿದ್ದರು. ಆಗ ಮಗುವನ್ನು ನೋಡಲು ಬಂದವರೆಲ್ಲ ಶಾಪ ಹಾಕಿ ಹೋಗುತ್ತಿದ್ದರು. ಇಂತಹ ಕೊಂಕು ಮಾತುಗಳನ್ನು ಕುಟುಂಬ ಅದೇಷ್ಟೋ ಸಹಿಸಿಕೊಂಡಿತ್ತು.

ಆದರೆ, ಯಶೋದರ ತಾಯಿ ಜನರ ಮಾತಿನ ಆಘಾತದಿಂದ ಹೊರ ಬಂದಿರಲಿಲ್ಲ. ಬಹುಶಃ ತನಗೆ ಹುಟ್ಟುವ ಮಕ್ಕಳೆಲ್ಲ ಹೀಗೆ ಹುಟ್ಟುತ್ತವೆಯೋ ಎಂಬ ಹಣೆಪಟ್ಟಿಯೂ ಅವರಿಗೆ ಸಮಾಜ ನೀಡಿದ್ದುರ ಫಲವಾಗಿರಬಹುದು. ಪತಿಯ ಬಳಿ ” ನೀವು ಬೇರೊಂದು ಮದುವೆ ಮಾಡಿಕೊಳ್ಳಿ” ಎಂದು ಹೇಳಿದರು.  ಅದಕ್ಕೆ ವಿಠ್ಠಪ್ಪ‌ರವರು ” ನಾನು ಬೇರೆ ಮದುವೆಯಾಗುವುದಿಲ್ಲ. ಹುಟ್ಟಿದರೆ ಇಂತಹ ಮಕ್ಕಳೇ ಹುಟ್ಟಲಿ… ನಾವು ಸಾಕೋಣ” ಎಂದು ತಾಯಿಯನ್ನು ಸಂತೈಸಿದರು. ನನ್ನ ತಂದೆ- ತಾಯಿ ತಳೆದ ಈ ತೀರ್ಮಾನದಿಂದಾಗಿಯೇ ನಾನಿಂದು ಜೀವಿಸುತ್ತಿದ್ದೇನೆ ಎಂದು ಯಶೋದ ಹಳೆಯ ನೆನಪುಗಳನ್ನು ಮೆಲುಕು ಹಾಕಿ ಸಂತಸ ವ್ಯಕ್ತಪಡಿಸುತ್ತಾರೆ.

ವಿಕಲಚೇತನರು ಅದರಲ್ಲೂ ಮಹಿಳೆ ವಿಕಲಚೇತನಳಾದರೆ ಸಮಾಜ ಕಾಣುವ ದೃಷ್ಟಿಕೋನದ ಬವಣೆಯನ್ನು ಯಶೋದ ಕೂಡ ಅನುಭವಿಸಿದರು. ತನ್ನಷ್ಟಕ್ಕೆ ತಾನು ವಾಹನದಲ್ಲಿ ಹೋಗುತ್ತಿದ್ದರೆ, 

“ಯವ್ವಾ , ಕಾಲು ಇಲ್ಲ ಏನಿಲ್ಲ ಎಲ್ಲಿ ಓಡಾಡ್ತೀಯಾ? ಸುಮ್ನೆ ಮನೇಲಿ ಕುತ್ಕೋಬಾರ್ದಾ” ಎಂದು ಒಬ್ಬ ಅಜ್ಜಿ ಹಾಗೂ ಮಹಿಳೆ ಹೀಯಾಳಿಸಿದ್ದು ಅವರ ನೆನಪಿನಲ್ಲಿ ಇನ್ನೂ ಅಚ್ಚಾಗಿಯೇ ಉಳಿದಿದೆ. ಹಾಗೆಯೇ ತನ್ನ ಸಹೋದರ  ತನ್ನನ್ನು ಹೊತ್ತುಕೊಂಡು ಸಿಂಗಬಾಲದಲ್ಲಿರುವ ದೇವಸ್ಥಾನದ 250 ಮೆಟ್ಟಿಲುಗಳನ್ನು ಹತ್ತಿದ ಸವಿನೆನಪುಗಳೂ ಯಶೋದರ ಮನದಲ್ಲಿ ಮನೆ ಮಾಡಿವೆ. 

ಶೈಕ್ಷಣಿಕ ಜೀವನದಲ್ಲಿ ಯಶೋದ ಅನುಭವಿಸಿದ ನೋವುಗಳೇ ಅಪಾರ. ಅಂಗವಿಕಲರಿಗೆ ಸೂಕ್ತವಾದ ವಿಶೇಷಚೇತನ ಸ್ನೇಹಿ ಶೌಚಾಲಯ, ರ್ಯಾಂಪ್ ರೈಲಿಂಗ್, ಅದರಲ್ಲಿಯೂ ಮುಖ್ಯವಾಗಿ ವ್ಹೀಲ್‌ಚೇರ್ ಸೌಲಭ್ಯ ಇಲ್ಲದಿರುವುದು ಗೆಳತಿಯರ ಜೊತೆ ಓಡಾಡಲೋ ಆಟವಾಡಲೋ ಸಾಧ್ಯವಾಗದೇ ಒಬ್ಬಂಟಿಯಾಗಿ ಕುಳಿತು ನೋಡುವಂತಾಯ್ತು. ಬೆಳ್ಳಿಗ್ಗೆ ಮನೆಯಲ್ಲೇ ಶೌಚಾಲಯಕ್ಕೆ ಹೋಗಿ ಶಾಲೆ ಬಿಡುವವರೆಗೂ ದೈನಂದಿನ ಅಗತ್ಯತೆಗಳನ್ನು ಕಟ್ಟಿಹಾಕಬೇಕಾಯ್ತು. ಹೆತ್ತವರು ಮಗಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂಬ ಮಹದಾಸೆ ಇಟ್ಟುಕೊಂಡಿದ್ದರು. ಆದರೆ, ಯಶೋದರ ದೈನಂದಿನ ಬೇಡಿಕೆಗಳು ದೈಹಿಕ ಅಗತ್ಯತೆಗಳು ಪಿಯುಸಿಗೆ ಶಿಕ್ಷಣವನ್ನು ಕೊನೆಗೊಳುಸುವಂತೆ ಮಾಡಿದವು. ಮಗಳು ಉತ್ತಮ ಶಿಕ್ಷಣ ಪಡೆಯಲಿ ಎಂಬ ಆಸೆಯಿಂದ ಹೆತ್ತವರು ಶತಪ್ರಯತ್ನ ಮಾಡಿ ಕಾಲೇಜಿಗೆ ಕರೆದುಕೊಂಡು ಹೋದರಾದರೂ, ಎರಡನೇ ಅಂತಸ್ತಿನಲ್ಲಿರುವ ತರಗತಿಗಳಿಗೆ ಮೆಟ್ಟಿಲುಗಳನ್ನು ಹತ್ತಲು ಯಶೋದಾರಿಂದ ಸಾಧ್ಯವಾಗಲಿಲ್ಲ. ಶೌಚಾಲಯವೂ ಇಲ್ಲದಿರುವುದು ಶಿಕ್ಷಣವನ್ನು ಮೊಟಕುಗೊಳಿಸಲು ಬಹು ಮುಖ್ಯ ಕಾರಣವಾಯ್ತು. ಹೀಗಾಗಿಯೇ ಶಾಲಾ-ಕಾಲೇಜುಗಳು, ದೇವಸ್ಥಾನ, ಸಾರ್ವಜನಿಕ ಸ್ಥಳಗಳು, ಬಸ್ ಹಾಗೂ ಇತರ ಸಾರಿಗೆ ವ್ಯವಸ್ಥೆ, ಖಾಸಗಿ ಸಂಘ-ಸಂಸ್ಥೆ, ಮನೋರಂಜನಾ ಸ್ಥಳಗಳು ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ವಿಕಲಚೇತನರಿಗೆ ಬೇಕಾಗುವ ಒಂದಿಷ್ಟು ಶೌಚಾಲಯ, ರ್ಯಾಂಪ್, ರೈಲಿಂಗ್, ವ್ಹೀಲ್‌ಚೇರ್‌ಗಳು ಇದ್ದಲ್ಲಿ ವಿಶೇಷಚೇತನರಿಗೂ ತಾವು ಸಮಾಜದಿಂದ ಬೇರ್ಪಟ್ಟಿಲ್ಲ ಎಂಬ ಭಾವನೆಯನ್ನು ಮೂಡಿಸಲು ಸಕಾರವಾಗಬಹುದು ಎಂದು ಯಶೋದ ಹೇಳುತ್ತಾರೆ. 

ವಿಕಲಚೇತನರ ಕಲ್ಯಾಣಕ್ಕಾಗಿ ಮುಂದಡಿ ಇರಿಸಿದ ಯಶೋದ 15 ರಿಂದ 20 ವಿಕಲಚೇತನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ನೀಡಿ ಉದ್ಯೋಗ ಕಲ್ಪಿಸಿದ್ದಾರೆ. ಹಿರಿಯ ನಾಗರಿಕರಿಗೆ ಮಾಸಾಶನ ಮಾಡಿಸುವುದು, ಆಕ್ಸೆಸಿಬಿಲಿಟಿ ಸೌಲಭ್ಯಗಳ ಮಾಹಿತಿ ಪಡೆದ ಬಳಿಕ ಎಂಆರ್‌ಡಬ್ಲ್ಯೂ ವಿಆರ್‌ಡಬ್ಲ್ಯೂ ಸಿಬ್ಬಂದಿಗಳೊಂದಿಗೆ  ಸೇರಿ ಮತಗಟ್ಟಗಳಲ್ಲಿ ವಿಶೇಷಚೇತನರಿಗೆ ಬೇಕಾಗುವ ಸೌಲಭ್ಯಗಳನ್ನು ಕಲ್ಪಿಸಲು ಚರ್ಚಿಸಿದರು. 

 ಶಿಕ್ಷಣ ಮೊಟಕುಗೊಳಿಸಿ ವರ್ಷಗಳು ಕಳೆದಿದ್ದರೂ ಓದಿಗೆ ವಯಸ್ಸಿನ ಮಿತಿ ಇಲ್ಲ, ಅಂಗವಿಕಲತೆಯೂ ಅಡ್ಡಿಯಲ್ಲ ಎಂಬುದನ್ನು  ಯಶೋದ ಮತ್ತೊಮ್ಮೆ ನಿರೂಪಿಸಲು ಮುಂದಡಿ ಇರಿಸಿದ್ದಾರೆ‌. ಪ್ರಸ್ತುತ ಸ್ಪೆಷಲ್ ಡಿ.ಎಡ್ ಕೋರ್ಸ್‌ ಮಾಡುತ್ತಿರುವ ಅವರು ಅಂಗವಿಕಲ ಮಕ್ಕಳಿಗೆ ಒಬ್ಬ ಉತ್ತಮ ಮಾದರಿ ಶಿಕ್ಷಕಿಯಾಗುವ ಕನಸ್ಸನ್ನು ಕಾಣುತ್ತಿದ್ದಾರೆ‌.‌ ಹಲವು ವರ್ಷಗಳ ಬಳಿಕ ಬಾಗಲಕೋಟೆಯಿಂದ ಬಲು ದೂರದಲ್ಲಿರುವ ದಾವಣೆಗೆರೆಗೆ ಮಗಳು ಕಲಿಯಲು ಹೋಗುತ್ತೇನೆ ಎಂದಾಗ ತಂದೆ ಸಮ್ಮತಿ ನೀಡಿದರು‌. ಆದರೆ, ತಾಯಿಗಾದರೋ ಮಗಳಿಗೆ ಬೇಕಾದ ಸೌಲಭ್ಯಗಳು ಅಲ್ಲಿ ಸಿಗುತ್ತವೋ, ಇಲ್ಲವೋ ಎಂಬುದರ ಬಗ್ಗೆ ಆತಂಕ ಮನೆ ಮಾಡಿತ್ತು. ಸ್ನೇಹಿತರ ಜೊತೆ ರೂಮ್ ಮಾಡಿಕೊಂಡು ವಿದ್ಯಾಭ್ಯಾಸ ಮಾಡುತ್ತಿರುವ ಯಶೋದರಿಗೆ ತಾವು ಕಲಿಯುತ್ತಿರುವ ಸಂಸ್ಥೆಯಲ್ಲಿ ಇರುವ ಆಕ್ಸೆಸಿಬಿಲಿಟಿ ಸೌಲಭ್ಯಗಳು, ವಿಕಲಚೇತನ ಸ್ನೇಹಿ ಶೌಚಾಲಯಗಳು ವ್ಹೀಲ್ ಚೇರ್ ಹಾಗೂ ಇತರ ಸೌಲಭ್ಯಗಳಿರುವುದು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಯಶೋದ, ಪ್ರಸ್ತುತ ಕರ್ನಾಟಕ ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್‌ನ ಉಪಾಧ್ಯಕ್ಷೆಯಾಗಿದ್ದಾರೆ. ಅವರ ಶೈಕ್ಷಣಿಕ ಜೀವನದ ಕನಸು ಸಾಕಾರವಾಗಲಿ ಎಂಬ ಹಾರೈಕೆ ನಮ್ಮೆಲ್ಲರದ್ದಾಗಲಿ.

ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಗೌತಮ್ ಶೆಟ್ಟಿ ಕುಂದಾಪುರ, ಆಯ್ಕೆ

ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಟೊರ್ಪೆಡೋಸ್ ಇವರು ಕರ್ನಾಟಕ ಟೇಬಲ್ ಟೆನ್ನಿಸ್ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಗೌತಮ್ ಶೆಟ್ಟಿ ಅವರು ಭಾನುವಾರ ಧಾರವಾಡದಲ್ಲಿ ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು ಮುಂದಿನ ನಾಲ್ಕು ವರ್ಷಗಳ ಕಾಲ ಅವರು ಅಧಿಕಾರದಲ್ಲಿ ಇರಲಿದ್ದಾರೆ.

ಆಯ್ಕೆಯ ಬಳಿಕ ಸ್ಪೋರ್ಟ್ಸ್ ಕನ್ನಡದೊಂದಿಗೆ ಮಾತನಾಡಿದ ಗೌತಮ್ ಶೆಟ್ಟಿ “ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇದು ಪ್ರಯೋಜನಕಾರಿ,ಏಕಾಗ್ರತೆ ಹೆಚ್ಚಿಸುವ ಆಟಗಳಲ್ಲಿ ಟೇಬಲ್ ಟೆನಿಸ್ ಕೂಡ ಒಂದಾಗಿದ್ದು, ಯುವಕರನ್ನು ಪ್ರೋತ್ಸಾಹಿಸುವ ಮೂಲಕ ಕ್ರೀಡೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸುವುದಾಗಿ ಹೇಳಿದರು.

ನೂತನವಾಗಿ ಆಯ್ಕೆಗೊಂಡ KTTA ತಂಡಕ್ಕೆ ಸ್ಪೋರ್ಟ್ಸ್ ಕನ್ನಡ ಮತ್ತು ಸ್ಟಾರ್ ವರ್ಟೆಕ್ಸ್-ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಲೈವ್ ಚಾನೆಲ್ ವತಿಯಿಂದ ಶುಭಾಶಯಗಳು.

ಕುಂದಾಪುರ ಕಾಂಗ್ರೆಸ್ ಕಛೇರಿಯಲ್ಲಿ ಆಸ್ಕರ್ ಫರ್ನಾಂಡಿಸ್ ಪುಣ್ಯಸ್ಮರಣೆ

ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ ಕೇಂದ್ರ ಸರಕಾರದ ಮಾಜಿ ಸಚಿವ ದಿI ಆಸ್ಕರ್ ಫೆರ್ನಾಂಡಿಸ್ ರವರ 2 ನೇ ಪುಣ್ಯತಿಥಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಚರಿಸಲಾಯಿತು .

ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಕೆ. ಪ್ರತಾಪ ಚಂದ್ರ ಶೆಟ್ಟಿಯವರು ಈ ಸಂದರ್ಭದಲ್ಲಿ ಆಸ್ಕರ್ ಫೆರ್ನಾಂಡಿಸರವರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸರಳ ವ್ಯಕ್ತಿತ್ವದ ಮೂಲಕ ಪಕ್ಷ , ಜಿಲ್ಲೆ, ರಾಜ್ಯ , ಮತ್ತು ರಾಷ್ಟ್ರಕ್ಕೆ ಅವರು ಪ್ರಚಾರವಿಲ್ಲದೇ ಅನೇಕ ಕೆಲಸ ಮಾಡಿದ್ದರು ಮತ್ತು ಸಾಮಾನ್ಯ ಕಾರ್ಯಕರ್ತರೊಂದಿಗೆ ಉತ್ತಮ ಬಾಂದವ್ಯವಿಟ್ಟುಕೊಂಡ ರಾಜಕಾರಣಿಯೆಂದು ಸ್ಮರಿಸಿಕೊಂಡರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪಕ್ಷದ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ , ಎಂ. ದಿನೇಶ ಹೆಗ್ಡೆ ಆಸ್ಕರ್ ರವರನ್ನು ಸ್ಮರಿಸಿಕೊಂಡರು.

ಪಕ್ಷದ ಮುಖಂಡರಾದ ಅಶೋಕ ಪೂಜಾರಿ ಬೀಜಾಡಿ , ದೇವಕಿ ಸಣ್ಣಯ್ಯ , ಗಂಗಾಧರ ಶೆಟ್ಟಿ , ಚಂದ್ರ ಕಾಂಚನ್ ಕಾಸನಕಟ್ಟೆ , ಪ್ರಭಾವತಿ ಶೆಟ್ಟಿ , ನಾರಾಯಣ ಆಚಾರ್ , ಶಶಿರಾಜ ಪೂಜಾರಿ , ರಮೇಶ ಶೆಟ್ಟಿ ವಕ್ವಾಡಿ , ಚಂದ್ರ ಅಮಿನ್ , ಅಶೋಕ , ಚಂದ್ರಶೇಖರ ಶೆಟ್ಟಿ , ಅಭಿಜಿತ್ ಪೂಜಾರಿ , ದರ್ಮಪ್ರಕಾಶ , ವಿವೇಕಾನಂದ , ಕೇಶವ ಭಟ್ , ಸುನೀಲ್ ಪೂಜಾರಿ , ಸುರೇಶ ಶೆಟ್ಡಿ , ಕಿಶೋರ್ ಮಂದಾರ್ತಿ , ವಿಜಯ ಪೂಜಾರಿ ಉಳ್ತೂರು , ಸದಾನಂದ ಖಾರ್ವಿ , ಸಂತೋಷ್ , ಸುರೇಶ್ ಶೆಟ್ಟಿ , ರಾದಾಕ್ರಷ್ಣ ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಉಪಾದ್ಯಕ್ಷ ಚಂದ್ರಶೇಖರ ಖಾರ್ವಿ ಸ್ವಾಗತಿಸಿ , ಕಾರ್ಯದರ್ಶಿ ಆಶಾ ಕರ್ವೆಲ್ಲೋ ವಂದಿಸಿದರು . ಅಶೋಕ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಶ್ರೀನಿವಾಸಪುರ ನಂಬಿಹಳ್ಳಿ : ವಿಚ್ಛೇದಿತ ಪತ್ನಿ ಹಾಗೂ ಮಾವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ

ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ವಿಚ್ಛೇದಿತ ಪತ್ನಿ ಹಾಗೂ ಮಾವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.
ರಾಧಾ ಹಾಗೂ ಅವರ ತಂದೆ ಮುನಿಯಪ್ಪ ಕೊಲೆಯಾದವರು. ಶ್ರೀನಿವಾಸಪುರದ ಮಾಂಸದ ವ್ಯಾಪಾರಿ ನಾಗೇಶ್ ಕೊಲೆ ಆರೋಪಿ.
ನಾಗೇಶ ತನ್ನ ಮೊದಲ ಪತ್ನಿ ರಾಧಾಗೆ ವಿಚ್ಛೇದನ ನೀಡಿದ್ದ, ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುತ್ತಿದ್ದ. ಎರಡನೇ ಪತ್ನಿಯೊಂದಿಗೆ ಶ್ರೀನಿವಾಸಪುರದಲ್ಲಿ ವಾಸವಾಗಿದ್ದ. ಮಂಗಳವಾರ ನಂಬಿಹಳ್ಳಿಗೆ ಬಂದ ನಾಗೇಶ, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವಿಚ್ಛೇದಿತ ಪತ್ನಿ ರಾಧಾ ಮತ್ತು ಮಾವನ ತಲೆಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ರಾಧಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುನಿಯಪ್ಪ ಶ್ರೀನಿವಾಸಪುರದ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಕೃತ್ಯ ತಡೆಯಲು ಬಂದ ರಾಧಾ ಅವರ ಸಹೋದರಿ ಹಾಗೂ ಮಾವ ಸಹ ಗಾಯಗೊಂಡಿದ್ದಾರೆ.
ಗ್ರಾಮಸ್ಥರು ಆರೋಪಿಯನ್ನು ಹಿಡಿಯಲು ದೊಣ್ಣೆಗಳೊಂದಿಗೆ ಧಾವಿಸಿದಾಗ, ಮನೆಯೊಂದರಲ್ಲಿ ಸೇರಿಕೊಂಡ ಕೊಲೆ ಆರೋಪಿ, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಮತ್ತು ಬೆಂಕಿ ಪೆಟ್ಟಿಗೆ ಕೈಯಲ್ಲಿ ಹಿಡಿದು, ಯಾರಾದರೂ ಮುಂದೆ ಬಂದರೆ ಸಿಲಿಂಡರ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಆರೋಪಿ ಕಾಲಿಗೆ ಗುಂಡು: ಸ್ಥಳಕ್ಕೆ ಸಿಬ್ಬಂದಿಯೊಂದಿಗೆ ಆಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಅವರು, ಮನೆಯಲ್ಲಿ ಅವಿತು ಕುಳಿತಿದ್ದ ಆರೋಪಿಗೆ ಶರಣಾಗಲು ಸೂಚಿಸಿದರು. ಆದರೆ ಆರೋಪಿ ನಾಗೇಶ ಪೊಲೀಸರ ಮೇಲೆ ಮಾರಕಾಯುಧದಿಂದ ದಾಳಿ ಮಾಡಲು ಯತ್ನಿಸಿದಾಗ, ಎಂ.ನಾರಾಯಣ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದರು. ಕೆಳಗೆ ಬಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದರು ಎಂಬುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.
ಡಿವೈಎಸ್‍ಪಿ ನಂದಕುಮಾರ್, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಆರ್.ದಯಾನಂದ, ಲೋಕೇಶ್, ವೆಂಕಟೇಶ್, ಪೊಲೀಸ್ ಸಬ್ ಇನ್ಸ್‍ಪೆಕ್ಟರ್‍ಗಳಾದ ಈಶ್ವರ್, ರಾಮ ಮತ್ತು ಸಿಬ್ಬಂದಿ ಇದ್ದರು.

ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 26ನೇ ವಾರ್ಷಿಕ ಮಹಾಸಭೆ- ಶೇ.20 ಡಿವಿಡೆಂಡ್ ಘೋಷಣೆ


ಉಡುಪಿ: 26ನೇ ವಾರ್ಷಿಕ ಮಹಾಸಭೆ- ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ನಿಂದ ಶೇ.20 ಡಿವಿಡೆಂಡ್ ಘೋಷಣೆ
ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 26ನೇ ವಾರ್ಷಿಕ ಮಹಾಸಭೆಯು ದಿನಾಂಕ 10/09-2023ನೇ ಆದಿತ್ಯವಾರದಂದು ಉಡುಪಿ ಶೋಕಮಾತಾ ಇಗರ್ಜಿಯ “ಆವೆ ಮರಿಯಾ” ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಡಿ’ಅಲ್ಮೇಡಾ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಅಧ್ಯಕ್ಷರು ಎಲ್ಲರನ್ನೂ ಸಭೆಗೆ ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು. ಕಾರ್ಯದರ್ಶಿ ಸಂದೀಪ್
ಫೆರ್ನಾಂಡೀಸ್ ರವರು ವಾರ್ಷಿಕ ವರದಿಯನ್ನು ಮಂಡಿಸಿದರು.
ಶೇ.20 ಡಿವಿಡೆಂಡ್ ಘೋಷಣೆ : ಸಂಘವು 2022-23 ನೇ ವರದಿ ಸಾಲಿನಲ್ಲಿ ಕಳೆದ ಸಾಲಿಗೆ ಹೋಲಿಸಿದಾಗ ದ್ವಿ-ಗುಣ ರೂ. 83.81 ಲಕ್ಷ ಲಾಭಾಂಶವನ್ನು ಗಳಿಸಿದ್ದು, ಅಧ್ಯಕ್ಷರು ಪಾಲುದಾರರಿಗೆ ಶೇ 20 ಡಿವಿಡೆಂಡ್‍ನ್ನು ಘೋಷಿಸಿದರು.
“ಸಾಧನಾ ಪ್ರಶಸ್ತಿ” ಹಸ್ತಾಂತರ : ಶೋಕಮಾತಾ ಇಗರ್ಜಿಯ ಸಹಾಯಕ ಧರ್ಮಗುರುಗಳಾದ ವಂದನೀಯ ರೋಯ್ ಲೋಬೋ ರವರು ಸಂಘವು 2022-23ನೇ ಸಾಲಿನಲ್ಲಿ ತೋರ್ಪಡಿಸಿದ ಸಾಧನೆಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್,ಮಂಗಳೂರು ಇವರಿಂದ ಪಡೆದ “ಸಾಧನಾ ಪ್ರಶಸ್ತಿ”ಯನ್ನು ಅಧ್ಯಕ್ಷರು,ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರಿಗೆ ಹಸ್ತಾಂತರಿಸುತ್ತಾ ಸಂಘದ ಅಭಿವೃಧ್ದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.
ಸಂಘದ ವತಿಯಿಂದ ಸನ್ಮಾನ : ಸಂಘದ ನಿರ್ದೇಶಕರಲ್ಲಿ ಒಬ್ಬರಾದ ಡಾ// ನೇರಿ ಕರ್ನೇಲಿಯೋ ರವರು ಲಯನ್ಸ್ ಕ್ಲಬ್ ಇದರ ಜಿಲ್ಲಾ ಗವರ್ನರ್ 317 ಸಿ ಹುದ್ದೆಯನ್ನು ಅಲಂಕರಿಸಿದ ಕಾರಣ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ವಿದ್ಯಾರ್ಥಿ ವೇತನ ಹಾಗೂ ಸಹಾಯಧನ ವಿತರಣೆ : ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿರುವ ಸಂಘದ “ಅ” ವರ್ಗದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಹಾಗೂ ಮಾನಸ ನಿರ್ಮಿತಿ ಮತ್ತು ಪುನರ್ವಸತಿ ಕೇಂದ್ರ,ಪಾಂಬೂರು ಇವರಿಗೆ ಸಹಾಯಧನವನ್ನು ವಿತರಿಸಲಾಯಿತು.
ಮುಂದಿನ ಯೋಜನೆಗಳು : ಉಪಾಧ್ಯಕ್ಷರಾದ ಶ್ರೀ ಲೂವಿಸ್ ಲೋಬೋರವರು ಸಂಘದ ಮುಂದಿನ ಯೋಜನೆಗಳಾದ ಸಂಘದ ಕಾರ್ಯವ್ಯಾಪ್ತಿಯನ್ನು ಜಿಲ್ಲಾ ಮಟ್ಟಕ್ಕೆ ಏರಿಸುವುದು ಮತ್ತು ಹೊಸ ಶಾಖೆಗಳನ್ನು ಸ್ವಂತ ಕಟ್ಟಡಗಳಲ್ಲಿ ತೆರೆಯುವ ಬಗ್ಗೆ ಸಭೆಗೆ ಮಾಹಿತಿಯನ್ನು ನೀಡಿದರು. ಸಂಘದ ಏಳಿಗೆ ಹಾಗೂ ಶ್ರೇಯಾಭಿವೃದ್ಧಿ ಕುರಿತು ಸದಸ್ಯದ ಮನವಿ,ಅನಿಸಿಕೆಗಳನ್ನು ಸ್ವೀಕರಿಸಲಾಯಿತು. ನಂತರ ಉಪಾಧ್ಯಕ್ಷರು ಎಲ್ಲರಿಗೂ ಧನ್ಯವಾದಗಳನ್ನು ಸಮರ್ಪಿಸಿದರು.
ನಿರ್ದೇಶಕರಾದ ಇಗ್ನೇಷಿಯಸ್ ಮೋನಿಸ್, ಪರ್ಸಿ ಜೆ ಡಿಸೋಜ, ಜೇಮ್ಸ್ ಡಿ’ಸೋಜ, ಆರ್ಚಿಬಾಲ್ಡ್ ಎಸ್ ಡಿ’ಸೋಜ, ಫ್ರೆಕ್ಲೀನ್ ಮಿನೇಜಸ್, ಜೆಸಿಂತಾ ಡಿ’ಸೋಜ, ಗಿಲ್ಬರ್ಟ್ ಫೆರ್ನಾಂಡೀಸ್ ಮತ್ತು ಲೋಯ್ಸೆಟ್ ಜೆ ಕರ್ನೇಲಿಯೊ, ಶಾಖಾ ವ್ಯವಸ್ಥಾಪಕರಾದ ನೈನಾ ಮಿನೇಜಸ್, ಸುನಿಲ್ ಡಿ’ಸೋಜ, ಜೆನೆಟ್ ಡಿ’ಸೋಜ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು. ಶಿರ್ವ ಶಾಖಾ ವ್ಯವಸ್ಥಾಪಕಿ ಶೀತಲ್ ಮರಿಯಾ ಡಿ’ಸೋಜರವರು ಕಾರ್ಯಕ್ರಮವನ್ನು ನಿರೂಪಿಸಿದರು.