HOLY ROSARY CHURCH, KUNDAPUR – 450 th JUBILEE SOUVENIR 2021

ಇಸ್ರೇಲ್- ಪೆಲೆಸ್ತಿನ್ ಸಂಘರ್ಷ ಉಲ್ಬಣದ ಬಗ್ಗೆ ಉಡುಪಿ ಬಿಷಪ್ ಕಳವಳ – ಇಸ್ರೇಲನಲ್ಲಿ ವಾಸವಿರುವ ಉಡುಪಿ ಜಿಲ್ಲೆವರ ಮಾಹಿತಿಯನ್ನು ಕಂಟ್ರೋಲ್ ರೂಂ ಗೆ ನೀಡಿ – ಬಿಷಪ್ ಜೆರಾಲ್ಡ್

ಉಡುಪಿ: ಇಸ್ರೇಲ್- ಪೆಲೆಸ್ತಿನ್ ಸಂಘರ್ಷ ಉಲ್ಬಣದ ಬಗ್ಗೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ. ಡಾ. ಜೆರಾಲ್ಡ್ ಲೋಬೋರವರು ಕಳವಳ ವ್ಯಕ್ತ ಪಡಿಸಿದ್ದು ಶೀಘ್ರ ಕದನ ವಿರಾಮ ಏರ್ಪಟ್ಟು ಯುದ್ಧದ ನಿಲುಗಡೆ ಮತ್ತು ಶಾಂತಿಯ ಮರು ಸ್ಥಾಪನೆಯಾಗಲಿ ಎ೦ದು ಅವರು ಹಾರೈಸಿದ್ದಾರೆ.
ಉಡುಪಿ ಜಿಲ್ಲೆಯ ಸುಮಾರು 5 ಸಾವಿರ ಮಂದಿ ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದು ಅವರು ಮತ್ತು ಅವರ ಕುಟುಂಬದ ಸದಸ್ಯರು ಭಯಭೀತರಾಗಿದ್ದಾರೆ. ಅವರ ಸುರಕ್ಷತೆಗಾಗಿ ಮತ್ತು ಶಾಂತಿ ಸ್ಥಾಪನೆಗಾಗಿ ಎಲ್ಲರೂ ಪ್ರಾರ್ಥನೆ ಮಾಡೋಣ ಎ೦ದು ಪೂಜ್ಯ ಬಿಷಪರು ವಿನಂತಿ ಮಾಡಿದ್ದಾರೆ.


ಇಸ್ರೇಲ್ ದೇಶದ ಈಗಿನ ಪರಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಸ್ರೇಲ್ ಗೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಯವರು ತಮ್ಮ ಮಾಹಿತಿಯನ್ನು ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಗೆ ಮಾಹಿತಿ ನೀಡುವಂತೆ ಪೂಜ್ಯ ಬಿಷಪರು ವಿನಂತಿಸಿದ್ದಾರೆ.
ವಂ. ಡೆನಿಸ್ ಡೆಸಾ :ಸಾರ್ವಜನಿಕ ಸಂಪರ್ಕಾಧಿಕಾರಿ. ಉಡುಪಿ ಧರ್ಮಪ್ರಾಂತ್ಯ

“ಐಕ್ಯಂ”ನ ಅಂಗವಾಗಿ ಮೂಡ್ಲಕಟ್ಟೆ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್& ಕಾಮರ್ಸ್ ಕಾಲೇಜಿನ ಕ್ರೀಡೋತ್ಸವ ಗಾಂಧಿ ಮೈದಾನದಲ್ಲಿ ಜರುಗಿತು

ಕುಂದಾಪುರ: ಅ:06: ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್&ಕಾಮರ್ಸ್ ಕಾಲೇಜು ಮೂಡ್ಲಕಟ್ಟೆ, ಕುಂದಾಪುರದಲ್ಲಿ “ಐಕ್ಯಂ”ನ ಅಂಗವಾಗಿ ಕುಂದಾಪುರದ ಗಾಂಧಿ ಮೈದಾನದಲ್ಲಿ ಕ್ರೀಡೋತ್ಸವವು ಅತ್ಯುತ್ತಮವಾಗಿ ನೆರವೇರಿತು.

ಟಾರ್ಪಿಡೋಸ್ ಕ್ರಿಕೆಟ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ಗೌತಮ್ ಶೆಟ್ಟಿ ಇವರು ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ರೀಡೆಯಲ್ಲಿಯೂ ನಾವು ನಮ್ಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ. ನಮ್ಮನ್ನು ನಾವು ಮೊದಲು ಪ್ರೀತಿಸಿದರೆ ಜೀವನದಲ್ಲಿ ಎಲ್ಲವನ್ನೂ ಸಾಧ್ಯಗೊಳಿಸಬಹುದು.“ಎಲ್ಲವೂ ಸಾಧ್ಯ ಆದರೆ ಸುಲಭವಲ್ಲ”. ಮೊದಲು ನಾವು ನಮ್ಮನ್ನು ಪ್ರೀತಿಸುವುದನ್ನು ಕಲಿಯಬೇಕು ಮತ್ತು ನಮ್ಮಲ್ಲಿ ಧನಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಅಲ್ಲದೆ ನಾವು ನಿತ್ಯವೂ ಕ್ರೀಡೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ನಮ್ಮ ಬದುಕಿನಲ್ಲಿ ತೃಪ್ತಿ ಇರಬೇಕು.ಮುಂದೊಂದುದಿನ ನಾನು ಇನ್ನೂ ಉತ್ತಮವಾಗಿ ಆಡಬಹುದಿತ್ತು ಎನ್ನುವ ಆಲೋಚನೆ ನಮ್ಮಲ್ಲಿ ಬರಬಾರದು. ಸೋಲು ಗೆಲುವು ನಮ್ಮ ಬದುಕಿನ ಒಂದು ಭಾಗ, ಮರಳಿ ಪ್ರಯತ್ನವನ್ನು ನಾವು ಮಾಡಲೇಬೇಕು’ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ| ಪ್ರತಿಭಾ ಎಂ ಪಟೇಲ್ ಇವರು“ಕ್ರೀಡೆ ನಮ್ಮಲ್ಲಿನ ದೌರ್ಬಲ್ಯವನ್ನು ತೊರೆಯುವಂತೆ ಮಾಡಿ ಜೀವನದ ಮೌಲ್ಯಗಳನ್ನು ನಮಗೆ ಕಲಿಸುತ್ತದೆ”ಎಂದುತಿಳಿಸಿದರು.

ಕಾರ್ಯಕ್ರಮದಲ್ಲಿ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪ್ರೊ|ಜೆನಿಫರ್ಡ್ ಮಿನೇಜಸ್ ಹಾಗೂ ಐಎಂಜೆಐ ಎಸ್ಸಿಯ ಉಪ ಪ್ರಾಂಶುಪಾಲರಾದ ಪ್ರೊ|ಜಯಶೀಲ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಯುತ ಪ್ರವೀಣ್ ಖಾರ್ವಿ,ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಬಿಸಿಎ ವಿಭಾಗದ ವಿದ್ಯಾರ್ಥಿನಿಯರಾದ ಕು| ಸಿಂಚನ ಸ್ವಾಗತಿಸಿ,ವಂದಿಸಿದರು.ಕು|ಪ್ರತಿಭಾ ಗಣ್ಯರ ಕಿರು ಪರಿಚಯವನ್ನು ಮಾಡಿದರು. ಕು| ಭಾನುಮತಿ ಪ್ರಾರ್ಥಿಸಿದರು.ಕು|ರಶಿತಾ ನಿರ್ವಹಿಸಿದರು.

ದ್ವಿತೀಯ ಬಿ ಸಿ ಎ ವಿಭಾಗದ ವಿದ್ಯಾರ್ಥಿಗಳಾದ ಕು| ನಿರೋಷ ಮತ್ತು ಕು|ನಿತಿನ್ ರವರು ಚಾಂಪಿಯನ್ ಶಿಪ್ ಪಡೆದುಕೊಂಡರು. ಹಾಗೆಯೇ ಓವರಾಲ್ ಚಾಂಪಿಯನ್ಶಿಪ್ ಅನ್ನು ರೆಡ್ ಈಗಲ್ಸ್ ತಂಡಪಡೆದುಕೊಂಡಿತು.

ಇಸ್ರೇಲ್-ಪ್ಯಾಲೆಸ್ಟೈನ್ 3 ನೇ ದಿನದ ಸಂಘರ್ಷ ಇತ್ತೀನ ಸುದ್ದಿ ; ಹಮಾಸ್‌ನೊಂದಿಗಿನ ಯುದ್ಧದಲ್ಲಿ ಸಾವಿನ ಸಂಖ್ಯೆ 1,100 ಕ್ಕಿಂತ ಎರಿತು

ಹಮಾಸ್ ಇಸ್ರೇಲ್ ಮೇಲೆ ಸಾವಿರಾರು ರಾಕೆಟ್ ಗಳ ಸುರಿಮಳೆಗೈದ ಒಂದು ದಿನದ ನಂತರ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಷ್ಟ್ರವನ್ನು “ದೀರ್ಘ ಮತ್ತು ಕಷ್ಟಕರ” ಸ್ಥಿತಿಯಾಗಿದೆ, ಎಂದು ತಿಳಿಸಿ ಯುದ್ದಕ್ಕೆ ಪ್ರೇರಣೆಯನ್ನು ನೀಡಿದ್ದಾರೆ

ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಹಮಾಸ್ ಗುಂಪು ಗಾಜಾದಿಂದ ಹಠಾತ್ ದಾಳಿಯನ್ನು ಪ್ರಾರಂಭಿಸಿದ ನಂತರ ಸಂಘರ್ಷದ ಸಾವಿನ ಸಂಖ್ಯೆ 1,100 ಕ್ಕಿಂತ ಹೆಚ್ಚಾದ ಕಾರಣ ಇಸ್ರೇಲ್, ತನ್ನ ಭೂಪ್ರದೇಶದ ಮೇಲೆ ಮಾರಣಾಂತಿಕ ದಾಳಿಯಿಂದ ತತ್ತರಿಸಿದ್ದು, ಹಮಾಸ್ ಭಾನುವಾರದ ಮೇಲೆ ಯುದ್ಧ ಘೋಷಿಸಿತು.

ಹಮಾಸ್ ಇಸ್ರೇಲ್‌ನ ಮೇಲೆ ಸಾವಿರಾರು ರಾಕೆಟ್‌ಗಳ ಸುರಿಮಳೆಗೈದ ಮತ್ತು ನಾಗರಿಕರನ್ನು ಹೊಡೆದುರುಳಿಸಿದ ಮತ್ತು ಕನಿಷ್ಠ 100 ಒತ್ತೆಯಾಳುಗಳನ್ನು ತೆಗೆದುಕೊಂಡ ಹೋರಾಟಗಾರರ ಅಲೆಯನ್ನು ಕಳುಹಿಸಿದ ಒಂದು ದಿನದ ನಂತರ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಷ್ಟ್ರವನ್ನು “ದೀರ್ಘ ಮತ್ತು ಕಷ್ಟಕರ” ಯುದ್ಧಕ್ಕೆ ಪ್ರೇರಣೆಯನ್ನು ನೀಡಿದ್ದಾರೆ

ಇಸ್ರೇಲ್-ಪ್ಯಾಲೆಸ್ಟೈನ್ ಸಂಘರ್ಷ ಅಕ್ಟೋಬರ್ 8 ರ ಇತ್ತೀಚಿನ ಸುದ್ದಿಗಳು

ಸೋಮವಾರದಂದು ಇಸ್ರೇಲ್ ರಕ್ಷಣಾ ಪಡೆಗಳ (IDF) ಇತ್ತೀಚಿನ ಟೋಲ್ ಪ್ರಕಾರ ಹಮಾಸ್ ತನ್ನ ದೊಡ್ಡ-ಪ್ರಮಾಣದ ದಾಳಿಯನ್ನು ಪ್ರಾರಂಭಿಸಿದಾಗಿನಿಂದ 700 ಕ್ಕೂ ಹೆಚ್ಚು ಇಸ್ರೇಲಿಗಳು ಕೊಲ್ಲಲ್ಪಟ್ಟಿದ್ದಾರೆ — 1973 ರ ಅರಬ್-ಇಸ್ರೇಲಿ ಯುದ್ಧದ ನಂತರ ದೇಶಕ್ಕೆ ಅತ್ಯಂತ ಕೆಟ್ಟದಾದ  ನಷ್ಟ ಇದಾಗಿದೆ

ಗಾಜಾದ ಅಧಿಕಾರಿಗಳು 2.3 ಮಿಲಿಯನ್ ಜನರ ಬಡ ಮತ್ತು ನಿರ್ಬಂಧಿತ ಎನ್‌ಕ್ಲೇವ್‌ನಲ್ಲಿ ಕನಿಷ್ಠ 413 ಸಾವುಗಳನ್ನು ವರದಿ ಮಾಡಿದ್ದಾರೆ. ಇದು 800 ಜನರ ಗುರಿಗಳ ಮೇಲೆ ಇಸ್ರೇಲಿ ವೈಮಾನಿಕ ದಾಳಿಯಿಂದ ಸುತ್ತಿಗೆಗೆ ಒಳಗಾದ ನೆಲದ ಆಕ್ರಮಣ ಎಂದು ಅನೇಕರು ಭಯಪಡುತಿದ್ದಾರೆ. ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇಸ್ರೇಲ್ ‌ನಲ್ಲಿನ ಕನ್ನಡಿಗರಿಗಾಗಿ ರಾಜ್ಯ ಸರ್ಕಾರದಿಂದ ಹೆಲ್ಪ್ ಲೈನ್ ಆರಂಭ/Helpline launched by state government for Kannadigas in Israel

ಬೆಂಗಳೂರು: ಇಸ್ರೇಲ್ ಮೇಲೆ ಪ್ಯಾಲೇಸ್ತೀನಿನ ಹಮಾಸ್ ಉಗ್ರರು ಭೀಕರ ರಾಕೆಟ್ ದಾಳಿ ನಡೆಸಿದ್ದರಿಂದ ಇಸ್ರೇಲ್ ಯುದ್ಧ ಘೋಷಿಸಿದೆ. ಇದರಿಂದ ಇಸ್ರೇಲ್‌ ನಲ್ಲಿ ನೆಲೆಸಿರುವ ಕನ್ನಡಿಗರು ಸೇರಿ ಸಾವಿರಾರು ಭಾರತೀಯರು ಸಂಕಷ್ಟದಲ್ಲಿದ್ದಾರೆ. ಅದರಲ್ಲಿಯೂ ನಮ್ಮ ರಾಜ್ಯದ ದ.ಕನ್ನಡ ಉಡುಪಿ ಮತ್ತು ಉ.ಕನ್ನಡದವರು ಅನೇಕರಿದ್ದಾರೆ ಹೀಗಾಗಿ ಅಲ್ಲಿನ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿಯನ್ನು ತೆರೆದಿದೆ.

ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ನಿಕಟ ಸಂಪರ್ಕದಲ್ಲಿದ್ದೇವೆ. ಕೇಂದ್ರದ ಸಹಾಯವಾಣಿ 080 22340676 ಹಾಗೂ 080 22253707 ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Helpline launched by state government for Kannadigars in Israel

Bengaluru: Israel has declared war because Palestinian Hamas terrorists launched a terrible rocket attack on Israel. Due to this, thousands of Indians including Kannadigas living in Israel are suffering. There are many people from our state Kannada Udupi and U. Kannada, so the state government has opened a helpline for the help of Kannadigas there.

We are in close touch with the Union Ministry of External Affairs. Chief Minister Siddaramaiah said that the center’s helpline number 080 22340676 and 080 22253707 can be contacted.

ಶ್ರೀ ವೀರಾಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಪೂರ್ವಭಾವಿ ಸಭೆ

ಶ್ರೀ ವೀರಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸಾಂತಾವರ ಹಾಗೂ ಜೀರ್ಣೋದ್ಧಾರ ಸಮಿತಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 08-10-2023ರಂದು ನಡೆದ ಊರ ಗ್ರಾಮಸ್ಥರ ಹಾಗೂ ಸಾರ್ವಜನಿಕರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಬಗ್ಗೆ ಸಮಾಲೋಚನೆಯ ಪೂರ್ವಭಾವಿ ಸಭೆಯು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಎಸ್. ರತ್ನಾಕರ್ ಶೇರೆಗಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಾಸ್ತಾವಿಕವಾಗಿ ಕಂದಾವರ ಗ್ರಾಮ ಪಂಚಾಯತ್ ಸದಸ್ಯರು, ಬಸ್ರೂರು ವ್ಯವಸಾಯ ಸೇವಾ ಸಂಘದ ನಿರ್ದೇಶಕರು ಹಾಗೂ ಶ್ರೀ ವೀರಾಂಜನೇಯ ಮಿತ್ರ ವೃಂದ್ರ (ರಿ.) ಅಧ್ಯಕ್ಷರಾದ ಎಸ್. ಶೀನ ಪೂಜಾರಿ ಇವರು ದೇವಸ್ಥಾನದ ಈ ಹಿಂದೆ ನಡೆದು ಬಂದ ಬಗ್ಗೆ ಸವಿಸ್ತಾರವಾಗಿ ಹೇಳಿದರು.
ಜೀಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಪೂಜಾರಿಯವರು ದೇವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯದ ಬಗ್ಗೆ ಭಕ್ತಾದಿಗಳಿಂದ ಜೀರ್ಣೋದ್ಧಾರ ಕಾರ್ಯದಲ್ಲಿ ಸಹಕಾರ ನೀಡಬೇಕಾಗಿ ಕೇಳಿಕೊಂಡರು. ಧಾರ್ಮಿಕ ಮುಖಂಡ ಕೃಷ್ಣದೇವ ಕಾರಂತರು ಹೇಗೆ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಹೇಳಿದರು. ಪುರೋಹಿತರಾದ ಶ್ರೀಪತಿ ಕಂಬಿಕಲ್ಲಿ ಕಕ್ಕುಂಜಿ ಇವರು ದೇವಸ್ಥಾನ 800 ವರ್ಷಗಳ ಇತಿಹಾಸವುಳ್ಳ ಪ್ರಸಿದ್ಧ ವೀರಾಂಜನೇಯ ದೇವಸ್ಥಾನವಾಗಿರುತ್ತದೆ. ಧಾರ್ಮಿಕ ವಿಧಿ ವಿಧಾನ ದೇವಸ್ಥಾನದ ಮಹತ್ವದ ಬಗ್ಗೆ ಸವಿಸ್ತಾರವಾಗಿ ಹೇಳಿದರು. ವಕೀಲರಾದ ರತ್ನಾಕರ ಶೆಟ್ಟಿ ಸಟ್ವಾಡಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಸಭೆಯಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಜೀರ್ಣೋದ್ಧಾರದ ಕಾರ್ಯದಲ್ಲಿ ಸಹಕಾರ ನೀಡವುದಾಗಿ ಭರವಸೆಯನ್ನು ನೀಡಿರುತ್ತಾರೆ. ವೇದಿಕೆಯಲ್ಲಿ ಕಂದಾವರ ಗ್ರಾಮ ಪಂಚಾಯತಿನ ಅಧ್ಯಕ್ಷಾರಾ ಅನುಪಮ ಶೆಟ್ಟಿ, ಮಾಜಿ ಉಪಾಧ್ಯಕ್ಷ ಶೋಭಾ, ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಸಂಜೀವ ಮೇಸ್ತ, ಉದ್ಯಮಿ ದಿನಕರ ಶೆಟ್ಟಿ, ಗ್ರಾಮ ಪಂಚಾಯತಿನ ಸದಸ್ಯರಾದ ಅಭಿಜಿತ್ ಕೊಠಾರಿ, ಊರಿನ ಹಿರಿಯರಾದ ಗೋಪಾಲ ಎನ್. ಉಗ್ರಾಣಿ, ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು. ಸ್ವಾಗತವನ್ನು ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ವೀರಾಂಜನೇಯ ಮಿತ್ರ ವೃಂದ (ರಿ.) ಇದರ ಕಾರ್ಯದರ್ಶಿಯಾದ ಸುರೇಶ್ ಕೋಟೆಗಾರ್, ಜೀಣೋದ್ಧಾರ ಸಮಿತಿಯ ಕಾರ್ಯದರ್ಶಿ ದೇವೇಂದ್ರ ಎನ್. ಉಗ್ರಾಣಿ ನಿರೂಪಿಸಿದರು. ಸತ್ಯನಾರಾಯಣ ಜಿ. ಧನ್ಯವಾದ ಅರ್ಪಿಸಿದರು.

ಕಥೊಲಿಕ್ ಸಭಾ ಉಡುಪಿ ಪ್ರದೇಶ್ – ಜಾನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿಶೇಶ ಸಾಧನೆ ಮಾಡಿದವರಿಗೆ ಸನ್ಮಾನ

Photo: Richard Dsouza


ಉಡುಪಿ: ಅ.8: ನಮ್ಮ ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಸೇವೆಯತ್ತ ಆಸಕ್ತಿ ತೋರಬೇಕು. ನಮ್ಮಲ್ಲಿ ಡಾಕ್ಟರ್ ಎಂಜಿನಿಯರ್ ಮತ್ತು ಇತರ ಕ್ಷೇತ್ರಗಳಲ್ಲಿ ಇದ್ದಾರೆ, ಆದರೆ ಸರಕಾರಿ ಸೇವೆಯ ಕ್ಷೇತ್ರದಲ್ಲಿ ಬಹಳ ವಿರಳ ಅದರಲ್ಲಿ ನಮ್ಮ ಮಕ್ಕಳ ಆಸಕ್ತಿ ಹೆಚ್ಚಬೇಕು. ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅಂಬಾಗಿಲಿನಲ್ಲಿರುವ ಧರ್ಮಪ್ರಾಂತ್ಯದ ಪಾಲನಾ ಕೇಂದ್ರ ಅನುಗ್ರಹದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು. ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಅತೀ ಹೆಚ್ಚಿನ ಪರಿಶ್ರಮ ಪಟ್ಟು ಶಿಕ್ಷಣದಲ್ಲಿ ಸಾಧನೆ ತೋರಿದ್ದಲ್ಲಿ ಮುಂದಿನ ಜೀವನದಲ್ಲಿ ಉನ್ನತ ಸ್ಥಾನ ಗಳಿಸಬಹುದಾಗಿದೆ, ಶಿಕ್ಷಣ ಕ್ಷೇತ್ರ ವಿಸ್ತಾರವಾಗಿದ್ದು ಹೊಸ ಹೊಸ ಪ್ರಯೋಗಗಳಿಗೆ ಇಂದಿನ ವಿದ್ಯಾರ್ಥಿ ಸಮುದಾಯ ಆಸಕ್ತಿಯನ್ನು ತೋರಿದಾಗ ಉನ್ನತ ಸ್ಥಾನ ಲಭಿಸಲು ಸಾಧ್ಯವಿದೆ. ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಸೇವೆಯತ್ತ ಆಸಕ್ತಿ ತೋರಬೇಕು. ಸಮಾಜದಲ್ಲಿ ಹಲವಾರು ಅವಕಾಶಗಳಿದ್ದು ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕಾಗಿದೆ. .
ಭಾರತ ಸರಕಾರದ ಅಂಚೆ ಇಲಾಖಾ ಮಂಡಳಿಯ ಮಾಜಿ ಸದಸ್ಯ ನಿವೃತ್ತ ಸದಸ್ಯ ಡಾ| ಚಾರ್ಲ್ಸ್ ಲೋಬೊ ದಿಕ್ಸೂಚಿ ಭಾಷಣ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಂದಿನ ಮಕ್ಕಳು ಹೆಚ್ಚು ಹೆಚ್ಚು ಎದುರಿಸುವತ್ತ ಗಮನ ಹರಿಸಬೇಕು. ಕ್ರೈಸ್ತ ಸಮುದಾಯ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸರಕಾರಿ ಹುದ್ದೆಗಳತ್ತ ಆಸಕ್ತಿ ತೋರಬೇಕು ಇದಕ್ಕಾಗಿ ಹೆತ್ತವರ ಕರ್ತವ್ಯ ಹೆಚ್ಚಿದೆ, ಹೆತ್ತವರು ಅವರಲ್ಲಿ ಪ್ರೇರಣೆ ತುಂಬಬೇಕು, ಈ ವಿಶಯದಲ್ಲಿ ಪ್ರಾಥಮಿಕ ಹಂತದಲ್ಲಿಯೇ ಪ್ರಯತ್ನ ಮಾಡಿದಾಗ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿದೆ ಎಂದರು.
ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಡುಪಿ ಧರ್ಮಪ್ರಾಂತ್ಯ ವ್ಯಾಪ್ತಿಯ 53 ಚರ್ಚುಗಳಲ್ಲಿ ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾ ನೀಡಲಾಯಿತು. ಅಲ್ಲದೆ ವೀಶೆಷ ಸಾಧನೆ ಮಾಡಿದ ಪಿಎಚ್ ಡಿ ಪದವಿ ಪಡೆದ ಡಾ|ಸಿಂಡ್ರೆಲ್ಲಾ ಗೊನ್ಸಾಲ್ವಿಸ್ ಮತ್ತು ಚಾರ್ಟೆಡ್ ಅಕೌಂಟ್ ಪದವಿ ಪಡೆದ ವಿನಾರ್ಡ್ ಜೋಸೇಫ್ ಡಿಕೊಸ್ತಾ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಸಂತೋಷ್ ಕರ್ನೆಲಿಯೋ ವಹಿಸಿ ಹಲವಾರು ವರ್ಷಗಳಿಂದ ಈ ಕಾರ್ಯಕ್ರಮದಲಕ್ಕೆ ಸಹಾಯ ಧನ ನೀಡುವ ಜಾನ್ ಡಿಸಿಲ್ವಾ ಫೌಂಡೇಶನ್ ಅಧ್ಯಕ್ಷ ಜಾನ್ ಗ್ಲ್ಯಾಡಿಸ್ ಡಿಸಿಲ್ವಾ ಅವರಿಗೆ ಹ್ರತ್ಪೂರ್ವಕ ಧನ್ಯವಾದಗಳನ್ನು ನೀಡಿದರು.
ಜಾನ್ ಡಿಸಿಲ್ವಾ ಫೌಂಡೇಶನ್ ಅಧ್ಯಕ್ಷ ಜಾನ್ ಮಾತನಾಡಿ ನಮ್ಮ ಸಮುದಾಯದವರು ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ನೀಡಬೇಕು, ಅದರಲ್ಲಿಯೂ ಈಗ ರಕ್ಷಣ ವಿಭಾಗದಲ್ಲಿ ಕೊರತೆ ಕಾಣುತ್ತೀದೆ ಅದರಲ್ಲಿಯೂ ಆಸಕ್ತಿವಹಿಸಬೇಕು’ ಎಂದರು. ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಆಧ್ಯಾತ್ಮಿಕ ನಿರ್ದೇಶಕ, ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ “ಇವತ್ತು ಸಾಧನೆ ಮಾಡಿ ಸನ್ಮಾನ ಪಡೆದ ಸಿಂಡ್ರೆಲಾ ಮತ್ತು ವಿನಾರ್ಡ್ ಇಬ್ಬರೂ ನನಗೆ ತಿಳಿದಿರುವರು, ಅವರು ನಿರಂತರ ಕಲಿತು ಸಾಧನೆ ಮಾಡಿದವರು, ಅವರಂತೆ ಇವತ್ತು ವಿದ್ಯಾರ್ಥಿ ಪುರಸ್ಕಾರ ಪಡೆದ ಮಕ್ಕಳು ಪ್ರಯತ್ನಿಸಬೇಕು” ತಿಳಿಸಿದರು.
ನಿಯೋಜಿತ ಅಧ್ಯಕ್ಷರಾದ ರೊನಾಲ್ಡ್ ಆಲ್ಮೇಡಾ, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್, ಮಾಜಿ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಂಚಾಲಕರಾದ ಡಾ| ಜೆರಾಲ್ಡ್ ಪಿಂಟೊ ಸ್ವಾಗತಿಸಿ, ಕಾರ್ಯದರ್ಶಿ ಒಲಿವೀಯಾ ಡಿಮೆಲ್ಲೊ ವಂದಿಸಿದರು. ಲೆರಿಸ್ಸಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

ಪ್ರಿಯಾಂಕಾ ಗಾಂಧಿಯವರು ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದರು;ಬಿಸಿಯೂಟ ನೌಕರರಿಗೆ 6000 ವೇತನಕ್ಕೆ ಒತ್ತಾಯಿಸಿ ಪ್ರತಿಭಟನೆ

ಕೋಲಾರ ಅಕ್ಟೋಬರ್ 7 : ಪ್ರಜಾ ಸೇವಾ ಸಮಿತಿ ಸಂಯೋಜಿತ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಕ್ಷೇಮಾಭಿವೃದ್ಧಿ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ರವರ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಕೋಲಾರ ತಾಲೂಕು ಪಂಚಾಯಿತಿ ಕಾರ್ಯನಿವಾರಣಾಧಿಕಾರಿಗಳಾದ ಮುನಿಯಪ್ಪ ರವರ ಮುಖಾಂತರ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರಿಗೆ ಅಕ್ಷರ ದಾಸೋಹ ನೌಕರರ ಬೇಡಿಕೆಗಳ ಮನವಿ ಪತ್ರವನ್ನು ರವಾನೆ ಮಾಡಲಾಯಿತು
ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ಮಾತನಾಡಿ ಕಾಂಗ್ರೆಸ್ ವರಿಷ್ಠರಾದ ಪ್ರಿಯಾಂಕಾ ಗಾಂಧಿ ರವರು ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಅಕ್ಷರ ದಾಸೋಹ ನೌಕರರಿಗೆ 6000 ವೇತನವನ್ನು ಹೆಚ್ಚಳ ಮಾಡಲಾಗುವುದೆಂದು ಘೋಷಣೆ ಮಾಡಿದ್ದರು. ಈಗ ಅವರದೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಈಗ ಬಿಸಿಊಟ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲಾಯಿತು.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ಯುಕೆಜಿಯನ್ನ ಪ್ರಾರಂಭ ಮಾಡಲು ಸರ್ಕಾರ ಕ್ರಮ ವಹಿಸಬೇಕು ಸರ್ಕಾರಿ ನೌಕರರ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸುವ ಕಾನೂನನ್ನು ಸರ್ಕಾರ ರೂಪಿಸಬೇಕು. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರ್ಕಾರಿ ಕೆಲಸಗಳಲ್ಲಿ ಮೊದಲ ಆಧ್ಯತೆ ನೀಡಬೇಕು. ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರಿಗೆ ಸಿಜಿ ಬಿಲ್‍ನ್ನು ಸಹಿಯನ್ನು ಮಾಡುವುದನ್ನು ಹಿಂಪಡೆದು ಈ ಹಿಂದೆ ಇದ್ದ ರೀತಿ ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ಶಾಲೆಯ ಮುಖ್ಯ ಅಡಿಗೆಯವರಿಗೆ ಸಿಜಿ ಬಿಲ್ಲಿನ ಸಹಿ ಮಾಡುವ ಅಧಿಕಾರವನ್ನು ನೀಡಬೇಕು. ಅಕ್ಷರ ದಾಸೋಹ ನೌಕರರು ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಮತ್ತು ಕುಕ್ಕರ್ ಇಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಸಂಪೂರ್ಣವಾಗಿ ವಹಿಸಿಕೊಂಡು ಹೆಣ್ಣು ಮಕ್ಕಳು ಪರವಾಗಿ ನಿಲ್ಲಬೇಕು. ಬಿಸಿಯೂಟ ನೌಕರರಿಗೆ ಕೆಲವು ಕಡೆ ಎಸ್‍ಡಿಎಂಸಿ ಮತ್ತು ಕೆಲವು ಶಾಲಾ ಶಿಕ್ಷಕರುಗಳ ಕಡೆಯಿಂದ ತೊಂದರೆ ಆಗುತ್ತಿದ್ದು, ಅದನ್ನ ಸರಿಪಡಿಸಲು ಜಿಲ್ಲಾ ಮಟ್ಟದ ವಿಶೇಷ ತಂಡವನ್ನು ರಚನೆ ಮಾಡಬೇಕು ಎಂಬ ಒತ್ತಾಯಗಳನ್ನ ಸಲ್ಲಿಸಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿವಾರಣಅಧಿಕಾರಿ ಮುನಿಯಪ್ಪ ಅಕ್ಷರ್ ದಾಸೋಹ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಸುಬ್ರಮಣಿ ಮನವಿ ಪತ್ರವನ್ನು ಸ್ವೀಕರಿಸಿದರು ಹಾಗೂ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿವಾರಣಾಧಿಕಾರಿಗಳಾದ ಮುನಿಯಪ್ಪ ರವರು ಬಿಸಿಯೂಟ ನೌಕರರಿಗೆ ಸರಕಾರದಿಂದ ಬರುವ ಯೋಜನೆಗಳನ್ನು ಸಕಾಲಕ್ಕೆ ಅಡುಗೆಯವರಿಗೆ ತಲುಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಶಾಲೆಗಳಲ್ಲಿ ಏನಾದರೂ ಅಡುಗೆ ನೌಕರರಿಗೆ ಸಮಸ್ಯೆಯಾದಲ್ಲಿ ತಕ್ಷಣ ತಮ್ಮ ಗಮನಕ್ಕೆ ತರಲು ಅಡುಗೆ ನೌಕರರಿಗೆ ತಿಳಿಸಿದರು. ತಾಲೂಕು ಪಂಚಾಯಿತಿ ಹಂತದಲ್ಲಿ ಆಗಬೇಕಾದ ಕೆಲಸಗಳನ್ನ ಅಡುಗೆ ನೌಕರರಿಗೆ ಮಾಡಿಕೊಡುವುದಾಗಿ ಭರವಸೆ ನೀಡಿದರು
ಈ ಸಂದರ್ಭದಲ್ಲಿ ಕಲ್ವಮಂಜಲಿ ರಾಮುಶಿವಣ್ಣ ಕೋಲಾರ, ಜಿ ನಾರಾಯಣಸ್ವಾಮಿ, ಮಮತಾ, ಚಲ್ದಿಗಾನಹಳ್ಳಿ ಮಂಜುಳಮ್ಮ, ವಕ್ಕಲೇರಿ ನಾಗವೇಣಮ್ಮ, ಸುಗುಟೂರು ಶೋಭಾ, ಆರತಿ, ಗಿರಿಜಾ, ಅಂಜನಮ್ಮ, ಮಂಜುಳಾ, ಲಕ್ಷ್ಮಮ್ಮ, ರತ್ನಮ್ಮ, ಸುನಂದಮ್ಮ, ನಾರಾಯಣಮ್ಮ, ಮೀನಾಕ್ಷಿ, ಗೌರಮ್ಮ, ಶೈಲಮ್ಮ, ಅಂಬಿಕಾ, ಮುನಿರತ್ನಮ್ಮ, ಶೋಭಾ, ಅಖಿಲ, ಮಂಜುಳಮ್ಮ, ಸಾವಿತ್ರಮ್ಮ, ಕೋಕಿಲಮ್ಮ, ಆಶಾ, ಜಯಂತಿ, ಪಲ್ಲವಿ, ವರಲಕ್ಷ್ಮಿ, ಗೌರಮ್ಮ, ಶೈಲಮ್ಮ, ಮುನಿರತ್ನ, ಅನಿತಾ, ರಾಧಮ್ಮ, ಮುನಿಯಮ್ಮ, ಪ್ರಮೀಳಮ್ಮ, ಕನ್ಯಮ್ಮ, ಜರೀನಾ ಆಯುμï ಜಬೀನ ಫಾರಸ ಬೇಗಂ, ಕೀರ್ತಿ, ಗಿರಿಜಮ್ಮ, ಮಾಲಾಶ್ರೀ ಇನ್ನು ಮುಂತಾದ ನೌಕರರು ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ “ಆರಂಭ”

‘ಕುಂದಾಪುರ: ಅಕ್ಟೋಬರ್ 7ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ “ಆರಂಭ ” ಎಂಬ 2023-24 ನೇ ಸಾಲಿನ ಕಾರ್ಯಾಚಟುವಟಿಕೆಗಳನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಅವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.
ಸಂಪನ್ಮೂಲ ವ್ಯಕ್ತಿ ಆಗಿ ಆಗಮಿಸಿದ ಮೋಹನ್ ರಾವ್ “ಕೃತಕ ಬುದ್ಧಿಮತ್ತೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಬಗ್ಗೆ ನೀಡಿದರು.
ಚೆಂಡೆ ವಾದನ, ಬಲೂನ್ ಹಾರಾಟ ಬ್ಯಾನರ್ ಪ್ರದರ್ಶನ ಮತ್ತು ಹೂವು ಬಣ್ಣಗಳ ಚದಉರಇಸಉವಇಕಎಯ ಮೂಲಕ ವಿನೂತನ ರೀತಿಯಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ.ಗೊಂಡ ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಡಿ.ವಿಜಯ ಕುಮಾರ್ ಕೆ.ಎಂ. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥೆ ಅರ್ಚನಾ ಅರವಿಂದ್ ಕುಮಾರ್ , ವಿಭಾಗದ ಉಪನ್ಯಾಸಕರಾದ ಪ್ರಶಾಂತ ಹೆಗ್ಡೆ, ಅಂಜನ್ ಕುಮಾರ್, ಅಶ್ವಿನಿ ಉಪಸ್ಥಿತರಿದ್ದರು .
ವಿದ್ಯಾರ್ಥಿ ಗಳಾದ ಚೈತ್ರ, ಅಲೀಫಾ ಕಾರ್ಯಕ್ರಮ ನಿರೂಪಿಸಿದರು.

ಹೈದರ್ ಆಲಿ ಮೊಹಲ್ಲ ಹಾಗೂ ಜಾಕಿರ್ ಹುಸೆನ್ ಮೊಹಲ್ಲಾ ಉರ್ದು ಶಾಲೆಗಳಿಗೆ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ ಪಟ್ಟಣದ ಹೈದರ್ ಆಲಿ ಮೊಹಲ್ಲ ಹಾಗೂ ಜಾಕಿರ್ ಹುಸೆನ್ ಮೊಹಲ್ಲಾ ಉರ್ದು ಶಾಲೆಗಳಿಗೆ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ, ದುರಸ್ತಿ ಕಾಮಗಾರಿಗಳು ಹಾಗೂ ಶಾಲಾ ನಿರ್ವಹಣೆ ವೀಕ್ಷಣೆ ಮಾಡಿದರು.