HOLY ROSARY CHURCH, KUNDAPUR – 450 th JUBILEE SOUVENIR 2021

ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಂ.ವಿ.ಶ್ರೀನಾಥ್, ಉಪಾಧ್ಯಕ್ಷೆಯಾಗಿ ರಾಮಕ್ಕ ಅವಿರೋಧ ಆಯ್ಕೆ

ಶ್ರೀನಿವಾಸಪುರ: ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಂ.ವಿ.ಶ್ರೀನಾಥ್, ಉಪಾಧ್ಯಕ್ಷೆಯಾಗಿ ರಾಮಕ್ಕ ಅವಿರೋಧ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಪ್ರತಿಸ್ಪರ್ಧಿಯಾಗಿದ್ದ ಕೃಷ್ಣಮ್ಮ ತಮ್ಮ ನಾಮಪತ್ರ ಹಿಂಪಡೆದ ಪರಿಣಾಮವಾಗಿ ಎಂ.ವಿ.ಶ್ರೀನಾಥ್ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಮೂವರು ಸ್ಪರ್ಧಿಸಿದ್ದರಾದರೂ, ಕೃಷ್ಣಮ್ಮ ಅವರ ನಾಮಪತ್ರ ತಿರಸ್ಕøತವಾಯಿತು. ನಜಿಮುನ್ನೀಸಾ ಅವರು ತಮ್ಮ ನಾಮಪತ್ರ ಹಿಂಪಡೆದರು. ಹಾಗಾಗಿ ರಾಮಕ್ಕ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು.
ಚುನಾವಣಾಧಿಕಾರಿ ಗಣೇಶ್, ಪಿಡಿಒ ಮಂಜುನಾಥಸ್ವಾಮಿ ಚುನಾವಣಾ ಕಾರ್ಯ ನಿರ್ವಹಿಸಿದರು. ಎ.ನಾಗೇಶ್ ಬಾಬು, ಕಾರಂಗಿ ರಮೇಶ್, ಹರೀಶ್, ಆಂಜಿ, ನಾಗರಾಜ್, ಎಂ.ಕೆ.ನಾರಾಯಣಸ್ವಾಮಿ, ಶ್ರೀನಿವಾಸ್, ರಮೇಶ್ ಇದ್ದರು.
ಚುನಾಣೆ ನಂತರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ವಿಜೇತ ಅಭ್ಯರ್ಥಿಗಳೊಂದಿಗೆ ವಿಜಯೋತ್ಸವ ಆಚರಿಸಿದರು.

ಮಾರ್ಕೆಟ್ ಬಾಯ್ಸ್ ಕುಂದಾಪುರ – 77 ನೇ ಸ್ವಾತಂತ್ರ್ಯ ದಿನಾಚರಣೆ

ಕುಂದಾಪುರ : ಮಾರ್ಕೆಟ್  ಬಾಯ್ಸ್ ಕುಂದಾಪುರ ಇವರ ಆಶ್ರಯದಲ್ಲಿ 77ನೇ ಸ್ವಾತಂತ್ರ ದಿನಾಚರಣೆಯನ್ನು ಫಿಶ್ ಮಾರ್ಕೆಟ್ ರಸ್ತೆ , ಕುಂದಾಪುರದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿ ಆಗಿ ಆಗಮಿಸಿದ ಸಿಟಿ ಜೆಸಿಐ ಕುಂದಾಪುರ ಇದರ ಅಧ್ಯಕ್ಷೆಯಾದ ಡಾಕ್ಟರ್ ಸೋನಿ ಡಿಕೋಸ್ತ ಧ್ವಜಾರೋಣ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರಕ್ಕಾಗಿ ತ್ಯಾಗ, ಬಲಿದಾನ ಮಡಿದ ವೀರ ಯೋಧರನ್ನು ಸ್ಮರಿಸಲಾಯಿತು. ಸ್ವತಂತ್ರ ಭಾರತದಲ್ಲಿ ಯುವಕರ ಜವಾಬ್ದಾರಿ ಕುರಿತು ಮಾತನಾಡಿದರು. ಸ್ವತಂತ್ರ ದಿನಾಚರಣೆಯನ್ನು ಅಚ್ಚು ಕಟ್ಟಾಗಿ ಆಚರಣೆ ಮಾಡುತ್ತಿರುವ ಮಾರ್ಕೆಟ್ ಬಾಯ್ಸ್ ನ ಸರ್ವ ಸದಸ್ಯರನ್ನು ಅಭಿನಂದಿಸಲಾಯಿತು.ಈ ಸಂದರ್ಭಲ್ಲಿ ಆಗಮಿಸಿದ ಎಲ್ಲ ಸಾರ್ವಜನಿಕರಿಗೆ ಸಿಹಿ ಹಂಚುದರ ಮೂಲಕ ಸಂಭ್ರಮಿಸಲಾಯಿತು ಮಾರ್ಕೆಟ್ ಬಾಯ್ಸ್ ಕಾರ್ಯದರ್ಶಿ ಪ್ರಶಾಂತ್ ಕಾರ್ಯಕ್ರಮ ನಿರ್ವಹಿಸಿದರು. ಅಧ್ಯಕ್ಷರಾದ ನಟೇಶ್ ಮುಖ್ಯ ಅತಿಥಿಯವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಕೋಲಾರ ಜಿಲ್ಲೆ ಬರಪೀಡಿತ ಘೋಷಶಿ, ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಪಂಚಾಯ್ತಿಗೊಂದು ಗೋಶಾಲೆ ತೆರೆಯಬೇಕು- ರೈತಸಂಘ

ಮುಳಬಾಗಿಲು-ಆ-18 ಕೋಲಾರ ಜಿಲ್ಲೆಯಲ್ಲಿ ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಿ ಬರನಿರ್ವಹಣೆಗೆ ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಪ್ರತಿ ಪಂಚಾಯ್ತಿಗೊಂದು ಗೋಶಾಲೆ ತೆರೆಯಬೇಕೆಂದು ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿ ಆ-21 ರ ಸೋಮವಾರ ಜಾನುವಾರುಗಳ ಸಮೇತ ರಾಜ್ಯ ಹೆದ್ದಾರಿ ವಡ್ಡಹಳ್ಳಿ ಕ್ರಾಸ್ ಬಂದ್ ಮಾಡಲು ಪ್ರವಾಸಿ ಮಂದಿರದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರು ಕೃಷಿ ಚಟುವಟಿಕೆಗೆ ಬಿತ್ತನೆ ಬೀಜ ರಸಗೊಬ್ಬರಗಳು ಖರೀದಿ ಮಾಡಿ ಕಾತುರದಿಂದ ಕಾಯುತ್ತಿರುವ ರೈತರ ಮೇಲೆ ವರುಣನ ಕೋಪ ಹೆಚ್ಚಾಗಿದೆ. ಇತ್ತ ಬೆಳೆಯು ಇಲ್ಲ ಅತ್ತ ಮಳೆಯು ಇಲ್ಲದೆ ನೊಂದ 18 ರೈತರು ಹಾವೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರೂ ರಾಜ್ಯ ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಸರ್ಕಾರಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಮುಂಗಾರು ಮಳೆ ಪ್ರಾರಂಭವಾಗಿ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿದ್ದ ರೈತಾಪಿ ವರ್ಗಕ್ಕೆ ಬರಸಿಡಲು ಬಡಿದಂತಾಗಿದೆ. ಬಿತ್ತನೆ ಮಾಡಿರುವ ರಾಗಿ, ನೆಲಗಡಲೆಗೆ ಮಳೆ ಇಲ್ಲದೆ ಶೇಕಡ 25 ರಷ್ಟು ನಷ್ಟವಾದರೆ ಇನ್ನು 75 ರಷ್ಟು ಬಿತ್ತನೆ ಮಾಡಲು ಮುಂದಾಗಿರುವ ರೈತರು ಆಕಾಶದತ್ತ ನೋಡುವಂತಾಗಿದೆ. ಆದರೂ ವರುಣನ ಕೃಪೆ ಜಿಲ್ಲೆಯ ಮೇಲೆ ಬೀಳದೆ ಕೆರೆ ಕುಂಟೆಗಳಲ್ಲಿ ನೀರು ಬತ್ತಿಹೋಗುತ್ತಿದ್ದು, ಮುಂದಿನ ಪರಿಸ್ಥಿತಿಯನ್ನು ಊಹೆ ಮಾಡಿಕೊಳ್ಳಲು ಸಾಧ್ಯವಾಗದ ಮಟ್ಟಕ್ಕೆ ವ್ಯವಸ್ಥೆ ಹದಗೆಟ್ಟಿದ್ದರೂ ಸರ್ಕಾರಗಳು ಜಿಲ್ಲೆಯಲ್ಲಿ ಕಾಡುತ್ತಿರುವ ಬರಗಾಲವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಪಲವಾಗಿದೆ ಎಂದು ಕಿಡಿಕಾರಿದರು.
ಪ್ರಕೃತಿ ವಿಕೋಪ ನಕಲಿ ಔಷಧಿ ಬಿತ್ತನೆ ಬೀಜದಿಂದ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ಬೆಳೆ ನಷ್ಟವಾಗಿ ಸಾಲದ ಸುಳಿಗೆ ಸಿಲುಕಿರುವ ರೈತನ ಹಣೆ ಬರಹದ ಜೊತೆ ಮುಂಗಾರು ಮಳೆ ಚಲ್ಲಾಟವಾಡುತ್ತಿದೆ. ಇತ್ತ ಬೆಳೆಯೂ ಇಲ್ಲ, ಅತ್ತ ಸಾಕುತ್ತಿರುವ ಜಾನುವಾರುಗಳಿಗೆ ಮೇವಿನ ಆಹಾಕಾರ ಉದ್ಭವಿಸುರುವುದರಿಂದ ಮುಂದಿನ ಜೀವನ ಹೇಗೆ ಎಂಬುದು ರೈತರ ಚಿಂತೆಯಾಗಿದೆ. ಜಿಲ್ಲೆಯಲ್ಲಿರುವ ಜನ ಪ್ರತಿನಿಧಿಗಳು ಜಿಲ್ಲೆಯ ವಾಸ್ತುವಾವಂಶ ಸರ್ಕಾರದ ಗಮನಕ್ಕೆ ತರುವಲ್ಲಿ ವಿಫಲವಾಗಿದ್ದಾರೆಂದು ಜನ ಪ್ರತಿನಿಧಿಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಮಳೆ ಕೊರತೆ ಪ್ರಮಾಣವನ್ನು ಮರುನಿಗದಿ ಮಾಡಿ ಶೇಕಡ 30 ಕ್ಕೆ ಇಳಿಸಬೇಕು. ಮೂರುವಾರ ಸತತ ಮಳೆಯಾಗಬಾರದು ಎನ್ನುವ ನಿಯಮವನ್ನು ಸಡಲಿಸಿ ಅದನ್ನು ಎರಡು ವಾರ ಎಂದು ಬದಲಿಸಬೇಕು. ಹಾಗೂ ಈಗ ಆಗಿರುವ ಬಿತ್ತನೆಯ ಪ್ರಮಾಣವನ್ನು ಮಾತ್ರ ಪರಿಗಣಿಸಿ ಬರ ಜಿಲ್ಲೆಯೆಂದು ಘೋಷಣೆ ಮಾಡುವಲ್ಲಿ ಸರ್ಕಾರ ಮುಂದಾಗಬೇಕೆಂದರು.
ತಾಲ್ಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್ ಮಾತನಡಿ ಕೇಂದ್ರ ಸರ್ಕಾರ ಕೂಡಲೇ ರಾಜ್ಯಕ್ಕೆ ಬರ ನಿರ್ವಹಣೆ ಘೋಷಣೆ ಮಾಡಲು ಮಾನದಂಡಗಳನ್ನು ಬಿಡುಗಡೆ ಮಾಡಿ ಕನಿಷ್ಠ ಒಂದು ಸಾವಿರ ಕೋಟಿ ಜಿಲ್ಲೆಯ ಬರ ನಿರ್ವಹಣೆಗೆ ಬಿಡುಗಡೆ ಮಾಡಬೇಕು. ಅದನ್ನು ಬಿಟ್ಟು ನಾವು ಶೇಕಡ 25 ರಷ್ಟು ಕೊಡುತ್ತೇವೆ ಜೊತೆಗೆ ಮುಂಗಾರು ಋತುವಿನಲ್ಲಿ ಶೇಕಡ 60 ರಷ್ಟು ಮಳೆ ಕೊರತೆ 59 ರಷ್ಟು ಬೆಳೆ ನಷ್ಟವಾಗಿರಬೇಕು. ಮತ್ತು ಮೂರು ವಾರ ಸತತವಾಗಿ ಮಳೆಯಾಗಿರಬಾರದು ಎಂದು ಷರತ್ತು ವಿಧಿಸುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದರು.
ತೀವ್ರ ಬರಗಾಲ ಆವರಿಸಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆ ಸ್ಥಗಿತವಾಗಿರುವುದರಿಂದ ಜಾನುವಾರುಗಳ ರಕ್ಷಣೆ ಸವಾಲಾಗಿದೆ. ಸರ್ಕಾರ ಮುನ್ನಚ್ಚರಿಕೆಯಾಗಿ ಪ್ರತಿ ಪಂಚಾಯಿಗೊಂದು ಘೋಶಾಲೆ ತೆರೆಯುವ ಮುಖಾಂತರ ಜಾನುವಾರುಗಳ ಮೇವು ಹಾಗೂ ನೀರನ್ನು ಒದಗಿಸುವ ಮುಖಾಂತರ ಮುಂಬರುವ ಬರಗಾಲವನ್ನು ಎದುರಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ಸಭೆಯಲ್ಲಿ ಒತ್ತಾಯಿಸಿದರು.
ಕೂಡೇ ಸರ್ಕಾರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಿ ಬರ ನಿರ್ವಹಣೆಗೆ ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿ ಪ್ರತಿ ಪಂಚಾಯ್ತಿಗೊಂದು ಘೋಶಾಲೆ ತೆರೆಯಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಆಗಸ್ಟ್-21 ರ ಸೋಮವಾರ ಜಾನುವಾರುಗಳು ಸಮೇತ ರಾಜ್ಯ ಹೆದ್ದಾರಿ ಬಂದ್ ಮಾಡುವ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು ಎಂದರು.
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಾರುಕ್‍ಪಾಷ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಹಿಳಾ ಜಿಲ್ಲಾಧ್ಯಕ್ಷ ಎ.ನಳಿನಿಗೌಡ, ಹೆಬ್ಬಣಿ ಆನಂದರೆಡ್ಡಿ, ವಿಜಯ್‍ಪಾಲ್, ಮಾಲೂರು ತಾಲ್ಲೂಕು ಅಧ್ಯಕ್ಷ ಯಲ್ಲಣ್ಣ, ಹರೀಶ್, ವಕ್ಕಲೇರಿ ಹನುಮಯ್ಯ, ಕೇಶವ, ಮಂಗಸಂದ್ರ ತಿಮ್ಮಣ್ಣ, ಕುವಣ್ಣ, ವಿಶ್ವ, ಮುನಿರಾಜು, ಮುನಿಕೃಷ್ಣ, ಕದರಿನತ್ತ ಅಪ್ಪೋಜಿರಾವ್, ರಾಮಸಾಗರ ವೇಣು, ಸುರೇಶ್‍ಬಾಬು, ಪಾರಂಡಹಳ್ಳಿ ಮಂಜುನಾಥ., ನಾಗಭೂಷಣ್, ತೆರ್ನಹಳ್ಳಿ ಆಂಜಿನಪ್ಪ, ಚಂದ್ರಪ್ಪ, ಯಾರಂಘಟ್ಟ ಗಿರೀಶ್, ನರಸಿಂಹಯ್ಯ, ನಾರಾಯಣಗೌಡ, ವೆಂಕಟೇಶಪ್ಪ, ಮುಂತಾದವರು ಇದ್ದರು.

ಸ್ಮಾರ್ಟ್ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಪ್ರವರ್ತಕ ಆವಿಷ್ಕಾರಗಳ ಕುರಿತು ಎಂ.ಐ.ಟಿ.ಕೆ ನಲ್ಲಿ ವಿಶೇಷ ಸಂವಾದ

ಸ್ಮಾರ್ಟ್ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಪ್ರವರ್ತಕ ಆವಿಷ್ಕಾರಗಳು ವಿಷಯದ ಕುರಿತು ವಿಶೇಷ ಭಾಷಣವನ್ನು MITK ಮೂಡ್ಲಕಟ್ಟೆಯಲ್ಲಿ ಸಂಸ್ಥೆಯ ಇನ್ನೋವೇಶನ್ ಮತ್ತು ಡೆವಲಪ್‌ಮೆಂಟ್ ಸೆಲ್ ವತಿಯಿಂದ ಏರ್ಪಡಿಸಲಾಗಿತ್ತು. ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದ ಡಾ.ರಮೇಶ ಶಿವಸಾಮಿ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಡಾ. ರಮೇಶ್ ಶಿವಸಾಮಿ ಅವರು ತಮ್ಮ ಭಾಷಣದಲ್ಲಿ, ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ಇಲಾಖೆ ಸೇರಿದಂತೆ ದೇಶಗಳು ಮತ್ತು ವಿಶ್ವಸಂಸ್ಥೆಯ ದಶಕಗಳ ಕೆಲಸದ ಮೇಲೆ ನಿರ್ಮಿಸಲಾದ 17 ಸುಸ್ಥಿರ ಅಭಿವೃದ್ಧಿ ಗುರಿಗಳ (SDG) ಕುರಿತು ಮಾತನಾಡಿದರು. ಅವರು ಯಾವುದೇ ಒಂದು ಅಥವಾ ಹೆಚ್ಚಿನ Sಆಉ ಗಳಲ್ಲಿ ಕೆಲಸ ಮಾಡಲು ಮತ್ತು ಸುಸ್ಥಿರ ಅಭಿವೃದ್ಧಿಗೆ ಕೊಡುಗೆ ನೀಡಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ಅವರು ಭಾರತ ಮತ್ತು ವಿದೇಶಗಳಲ್ಲಿ (ಚಿಲಿ, ದಕ್ಷಿಣ ಅಮೇರಿಕಾ) ಸಂಶೋಧನೆಯಲ್ಲಿ ಪಡೆದ ತಮ್ಮ ಅಪಾರ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು ಮತ್ತು ಹಿಂದೂಳಿದ ಪ್ರದೇಶ ಮತ್ತು ವಿನಮ್ರ ಹಿನ್ನೆಲೆಯಿಂದಲೂ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂಬುದನ್ನು ತಮ್ಮದೇ ಉದಾಹರಣೆಯನ್ನು ಉಲ್ಲೇಖಿಸಿ ವಿವರಿಸಿದರು. ಸಂಯೋಜಿತ ವಸ್ತುಗಳು ಮತ್ತು ಸೂಪರ್ ಕಂಡಕ್ಟರ್‌ಗಳ ಕ್ಷೇತ್ರದಲ್ಲಿ ಸಂಶೋಧನೆಯ ವ್ಯಾಪ್ತಿಯ ಬಗ್ಗೆಯೂ ಅವರು ಹೇಳಿದರು. ಸಂಸ್ಥೆಯ ಆವಿಷ್ಕಾರ ಮತ್ತು ಅಭಿವೃದ್ಧಿ ಕೋಶದ ಮುಖ್ಯಸ್ಥರು ಡಾ.ತಿಲಗ್ ರಾಜ್ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಬ್ರಾಂಡ್ ಬಿಲ್ಡಿಂಗ್, ಐಎಂಜೆ ಸಂಸ್ಥೆಗಳ ನಿರ್ದೇಶಕ ಡಾ.ರಾಮಕೃಷ್ಣ ಹೆಗಡೆ, ಸಿಬ್ಬಂದಿ ವರ್ಗ ಹಾಗೂ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬಸ್ರೂರು ಸ್ಪೋರ್ಟ್ಸ್ ಕ್ಲಬ್ : ಹಗ್ಗ ಜಗ್ಗಾಟ ಸ್ಪರ್ಧೆ, ಸೈನಿಕರಿಗೆ ಸಮ್ಮಾನ, ಅಶಕ್ತರಿಗೆ ಸಹಾಯಧನ

ಬಸ್ರೂರು, ಆ.18: ಬಸ್ರೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬಸ್ರೂರು ಬಿ.ಎಂ. ಶಾಲೆಯಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು, ಇದೇ ಸಂದರ್ಭದಲ್ಲಿ ಹಾಲಿ ಮತ್ತು ನಿವೃತ್ತ  ಸೈನಿಕರಿಗೆ ಸಮ್ಮಾನ ಹಾಗೂ ಅಶಕ್ತರಿಗೆ, ರೋಗಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ನಡೆಯತು. ಜಿಲ್ಲಾ ಯುವಜನ ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ   ರೋಶನ್‌ ಶೆಟ್ಟಿ, ರೇಷ್ಮೆ ಇಲಾಖೆಯ ಜಿ. ರಾಜೇಂದ್ರ ಶೆಟ್ಟಿಗಾರ್‌, ಉದ್ಯಮಿ ಹನೀಫ್ ಶೇಖ್ ಬಸ್ರೂರು, ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷ  ಬಿ. ಸತ್ಯನಾರಯಣ, ಉಪಾಧ್ಯಕ್ಷ ಶಾವೆಲ್ ಹಮೀದ್, ಕಾರ್ಯದರ್ಶಿ ವಿವೇಕಾನಂದ ಉಪಸ್ಥಿತರಿದ್ದರು. ರಮೇಶ್ ಗಾಣಿಗ ಪ್ರಸ್ತಾವನೆಗೈದರು, ಫ್ಲೈವನ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು. ಅಶೋಕ್ ಬಿ.ಕೆ ವಂದಿಸಿದರು.  

`ಕುಂದಾಪ್ರ ಕನ್ನಡ’ ನಿಘಂಟು ಸಂಪಾದಕ ಶ್ರೀ ಪಂಜು ಗಂಗೊಳ್ಳಿ ಅವರಿಗೆ ಜಿ.ವೆಂಕಟಸುಬ್ಬಯ್ಯ “ಭಾಷಾ ಸಮ್ಮಾನ್” ಪುರಸ್ಕಾರ

ನಿಘಂಟು ಬ್ರಹ್ಮ, ಭಾಷಾ ತಜ್ಞ ಕೀರ್ತಿಶೇಷ ಜಿ. ವೆಂಕಟಸುಬ್ಬಯ್ಯ ಅವರ ಸ್ಮರಣಾರ್ಥ, ಅವರ ಹೆಸರಿನಲ್ಲಿ ‘ಕಥೆಕೂಟ’ ಪ್ರಶಸ್ತಿಯೊಂದನ್ನು ಆರಂಭಿಸುತ್ತಿದೆ. ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ ಪ್ರತಿಭಾವಂತರಿಗೆ ಪ್ರತಿವರ್ಷ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ ನೀಡಿ ಗೌರವಿಸಲು ಕಥೆಕೂಟ ನಿರ್ಧರಿಸಿದೆ. ಈ ಪ್ರಶಸ್ತಿಯು ರೂ.10,000 ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ.

2023ನೇ ಸಾಲಿನ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರವನ್ನು `ಕುಂದಾಪ್ರ ಕನ್ನಡ’ ನಿಘಂಟು ಸಂಪಾದಕ ಶ್ರೀ ಪಂಜು ಗಂಗೊಳ್ಳಿ ಅವರಿಗೆ ನೀಡಲು ಭಾಷಾ ಸಮ್ಮಾನ್ ಪುರಸ್ಕಾರ ಸಮಿತಿ ಸಂತೋಷಿಸುತ್ತದೆ. ಸುಮಾರು 20 ವರ್ಷಗಳ ಅವಿರತ ಶ್ರಮ, ಅಧ್ಯಯನ, ಸಂಶೋಧನೆ ಮತ್ತು ಸಂಘಟನೆಯಿಂದ ಸಿದ್ಧವಾಗಿರುವ ಕುಂದಾಪ್ರ ಕನ್ನಡ ನಿಘಂಟು, ಕನ್ನಡ ಭಾಷೆಗೆ ಅತ್ಯುತ್ತಮ ಕೊಡುಗೆ. ಲಂಕೇಶ್ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿದ್ದ ಪಂಜು ಗಂಗೊಳ್ಳಿ ಪತ್ರಕರ್ತರು ಮತ್ತು ಲೇಖಕರು. ಸದ್ಯಕ್ಕೆ ಅವರು ಮುಂಬಯಿಯಲ್ಲಿ ವಾಸವಾಗಿದ್ದಾರೆ.
ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ, ಗಿರೀಶ್ ರಾವ್ ಹತ್ವಾರ್ (ಜೋಗಿ), ಗೋಪಾಲಕೃಷ್ಣ ಕುಂಟಿನಿ, ಜಿ ವಿ. ಅರುಣ ಇದ್ದರು.

ಈ ಪ್ರಶಸ್ತಿ ಪ್ರದಾನ ಸಮಾರಂಭವು ಜಿ ವಿ ಅವರ 111ನೇ ಹುಟ್ಟುಹಬ್ಬವಾದ 23.08.2023ರಂದು ಸಂಜೆ 6 ಗಂಟೆಗೆ ಪ್ರೊ. ಜಿವಿ ಜನ್ಮಶತಾಬ್ದಿ ಕಲಾ ಭವನ, ಜಯರಾಮ ಸೇವಾ ಮಂಡಳಿ, 492 / ಎ, ಒಂದನೇ ಮುಖ್ಯರಸ್ತೆ, ಎಂಟನೇ ಬ್ಲಾಕ್, ಜಯನಗರ, ಬೆಂಗಳೂರು- 560070- ಇಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶಸೇವೆಗೆ ತೆರಳುತ್ತಿರುವ ತರಬೇತೆ ಪಡೆದ ಅಗ್ನಿವೀರರಿಗೆ ಬೀಳ್ಕೊಡುಗೆಜಿಲ್ಲೆಯಿಂದ ಹೆಚ್ಚು ಯುವಕರು ದೇಶಸೇವೆಗೆ ತೆರಳಬೇಕು- ಸಾಮಾ ಅನಿಲ್

ಕೋಲಾರ:- ಕೋಲಾರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಯುವಕರು ಸೇನೆಗೆ ಆಯ್ಕೆಯಾಗುವ ಮೂಲಕ ದೇಶ ಸೇವೆಗೆ ತೆರಳಬೇಕು ಎಂದು
ಕೋಲಾರ ಕ್ರೀಡಾ ಸಂಘದ ಅಧ್ಯಕ್ಷರೂ ಹಾಗೂ ದಿಶಾ ಸಮಿತಿ ಸದಸ್ಯರಾದ ಸಾಮಾ ಅನಿಲ್ ಕುಮಾರ್ ಕರೆ ನೀಡಿದರು.
ಕೋಲಾರ ಕ್ರೀಡಾಸಂಘದಿಂದ ತರಬೇತಿ ಪಡೆದು ಸೈನ್ಯಕ್ಕೆ ಆಯ್ಕೆಯಾದ ಅಗ್ನಿವೀರರಿಗೆ ಆತ್ಮೀಯವಾಗಿ ಸನ್ಮಾನಿಸಿ ಮಾತಾಡಿದ ಅವರು, ಬೇರೆ ಜಿಲ್ಲೆಗಳಂತೆ ಇಂದು ಕೋಲಾರ ಜಿಲ್ಲೆಯಿಂದ ಹೆಚ್ಚು ಯುವಕರು ಸೈನ್ಯಕ್ಕೆ ಸೇರುತ್ತಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ಸಂಗತಿ. ಈಗ ಆಯ್ಕೆಯಾದ ಅಗ್ನಿವೀರರು ಜಿಲ್ಲೆಯ ಯುವ ಸಮುದಾಯಕ್ಕೆ ಮಾದರಿಯಾಗಬೇಕು ಎಂದು ಕಿವಿಮಾತು ಹೇಳಿದರು.
ನಮ್ಮ ಸಂಘದಿಂದ ಯುವಕರಿಗೆ ಸದಾ ಉಚಿತ ತರಬೇತಿ ಹಮ್ಮಿಕೊಳ್ಳಲಾಗುತ್ತದೆ. ಇವತ್ತಿನ ಈ ಸಾಧನೆಯ ಸಂಪೂರ್ಣ ಶ್ರೇಯಸ್ಸು ನಮ್ಮ ಹೆಮ್ಮೆಯ ತರಬೇತುದಾರರಾದ ಕೃಷ್ಣಮೂರ್ತಿ ಮತ್ತು ಸುರೇಶಬಾಬುರವರಿಗೆ ಸಲ್ಲಬೇಕು. ಹಾಗೆಯೇ ಈ ಸಂಘವನ್ನು ಕಟ್ಟಿ ಬೆಳೆಸಿ ಸದಾ ಸಂಘದ ಕಾರ್ಯಗಳಿಗೆ ಬೆನ್ನೆಲುಬಾಗಿ ನಿಲ್ಲುವ ಪುರುಷೋತ್ತಮ್ ರವರಿಗೆ ನಾವೆಲ್ಲರೂ ಚಿರಋಣಿಗಳಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಆರು ತಿಂಗಳ ತರಬೇತಿ ಮುಗಿಸಿ ಸೇನೆಯ ವಿವಿಧ ವಿಭಾಗಗಳಿಗೆ ಆಯ್ಕೆಯಾಗಿ ಇದೇ ಮೊದಲ ಬಾರಿಗೆ ದೇಶಸೇವೆಗೆ ಹೊರಟ ಅಗ್ನಿವೀರರಾದ ಚರಣ್, ಅಜಯ್, ಪ್ರಮೋದ್ ಮತ್ತು ನಿತ್ಯಾನಂದ ರವರನ್ನು ಕೋಲಾರ ಜಾರಿ ವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ದಯಾನಂದ್ ಸನ್ಮಾನಿಸಿ ಶುಭಹಾರೈಸಿದರು.
ದಿಶಾ ಸಮಿತಿ ಸದಸ್ಯ ಅಪ್ಪಿ ನಾರಾಯಣಸ್ವಾಮಿ ಮೈಸೂರಿನಲ್ಲಿ ನಡೆದ ಸೈನಿಕ ರ್ಯಾಲಿಯಲ್ಲಿ ಭಾಗವಹಿಸಿ ಆಯ್ಕೆಯಾದ ಯುವಕರಿಗೆ ಸನ್ಮಾನಿಸಿ ಶುಭಹಾರೈಸಿದರು.
ಮಾಜಿ ಸೈನಿಕರು, ಜಿ.ಪಂ. ಸಹಾಯಕ ಲೆಕ್ಕಾಧಿಕಾರಿಗಳು ಮತ್ತು ತರಬೇತುದಾರರಾದ ಕೃಷ್ನಮೂರ್ತಿ, ಸೇನೆಯಲ್ಲಿ ಯುವಕರು ಯಾವ ಯಾವ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸಬಹುದು. ಅಲ್ಲಿ ಸಿಗುವ ತರಬೇತಿಗಳನ್ನು ಹೇಗೆ ಪಡೆಯಬೇಕು, ಕಂಪ್ಯೂಟರ್ ಕಲಿಕೆಯಿಂದ ಆಗಬಹುದಾದ ಪ್ರಯೋಜನಗಳ ಕುರಿತು ಭಾವಿ ಸೈನಿಕರಿಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ಸೈನಿಕ ತರಬೇತಿಯಲ್ಲಿ ಭಾಗವಹಿಸಿ ಹಿಂದಿರುಗಿದ ಚರಣ್, ಅಜಯ್, ಪ್ರಮೋದ್ ಮತ್ತು ನಿತ್ಯಾನಂದರವರು ತರಬೇತಿಯನ್ನು ಹೇಗೆ ಎದುರಿಸಬೇಕು, ಅನುಸರಿಸಬೇಕಾದ ಶಿಸ್ತು ಮತ್ತಿತರ ವಿಷಯಗಳ ಬಗ್ಗೆ ಹೊಸದಾಗಿ ಆಯ್ಕಯಾದ ಯುವಕರಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಸದಸ್ಯರಾದ ಪುರುಷೋತ್ತಮ, ತರಬೇತುದಾರ ಸುರೇಶ್ ಬಾಬು (ಕಮಾಂಡೋ) ಖೋ-ಖೋ ತರಬೇತುದಾರ ರಾಧಣ್ಣ, ಬಾರ್ ವೇಣು, ವಾಕಿಂಗ್ ಕ್ಲಬ್‍ನ ಶಂಕರ್, ವೆಂಕಟರಮಣಪ್ಪ ಮತ್ತಿತರರು ಭಾಗವಹಿಸಿ ಶುಭ ಕೋರಿದರು. ಬಾರ್ ವೇಣುರವರು ಎಲ್ಲಾ ಅಗ್ನಿವೀರರಿಗೆ ಹೋಟೆಲ್ ಸಾಯಿಧಾಮದಲ್ಲಿ ಉಪಹಾರದ ವ್ಯವಸ್ಥೆ ಮಾಡಿದ್ದರು.

ಶೈಕ್ಷಣಿಕ ಇತಿಹಾಸದಲ್ಲೇ ಇದೇ ಮೊದಲು-ದ್ವಿತೀಯ ಪಿಯುಸಿಗೆ 2ನೇ ಪೂರಕ ಪರೀಕ್ಷೆ – ನೋಂದಣಿ-ಅಕ್ರಂ ಪಾಷಾ

ಕೋಲಾರ:- ಶೈಕ್ಷಣಿಕ ಇತಿಹಾಸದಲ್ಲೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ 2ನೇ ಪೂರಕ ಪರೀಕ್ಷೆ ನಡೆಸಲು ಸರ್ಕಾರ ಆದೇಶಿಸಿದ್ದು, ಅದರಂತೆ ಆ.21 ರಿಂದ ಜಿಲ್ಲೆಯ ಒಟ್ಟು 6 ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿರುವುದರಿಂದ ಸಕಲ ಸಿದ್ದತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಕಳೆದ ಮಾರ್ಚ್ ವಾರ್ಷಿಕ ಪರೀಕ್ಷೆ, ಮೇ ಪೂರಕ ಪರೀಕ್ಷೆ ಹಾಗೂ ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯುಸಿ ಅನುತ್ತೀರ್ಣರಾದ ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದು, ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್,ಮುಳಬಾಗಿಲು ಮತ್ತು ಶ್ರೀನಿವಾಸಪುರಗಳಲ್ಲಿ ತಲಾ ಒಂದೊಂದು ಕೇಂದ್ರದಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸುಗಮ ಪರೀಕ್ಷೆಗಾಗಿ ಎಲ್ಲಾ ಸಿದ್ದತೆಗಳನ್ನು ಕೈಗೊಂಡಿದ್ದು, ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯಗಳ ಕುರಿತು ಗಮನಹರಿಸಲಾಗಿದೆ ಎಂದು ತಿಳಿಸಿದ್ದಾರೆ.

200ಮೀ.ವ್ಯಾಪ್ತಿ ನಿಷೇಧಾಜ್ಞೆ ಜಾರಿ


ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದು, ಈ ಭಾಗದಲ್ಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ನಡೆಯುವ ಸಂದರ್ಭದಲಿ ಬಂದ್ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಗುರುತಿನ ಚೀಟಿ ಹೊಂದಿರುವ ಪರೀಕ್ಷಾ ಸಿಬ್ಬಂದಿ,ಪ್ರವೇಶಪತ್ರ ಇರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್, ಕೈಗಡಿಯಾರ, ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವುದಕ್ಕೂ ನಿಷೇಧವಿದ್ದು, ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್ ಸೆಟ್ ಮೊಬೈಲ್ ಬಳಸಲು ಅವಕಾಶವಿದೆ, ಇತರೆ ಪರೀಕ್ಷಾ ಸಿಬ್ಬಂದಿಯೂ ಮೊಬೈಲ್ ತರುವಂತಿಲ್ಲ, ಪರೀಕ್ಷಾ ಕೇಂದ್ರಗಳಿಗೆ ಫೋಟೋಗ್ರಾಫರ್, ವೀಡಿಯೋ ಗ್ರಾಫರ್‍ಗಳಿಗೂ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷಾ ಕಾರ್ಯಕ್ಕೆ ಪರೀಕ್ಷಾ ವಿಷಯಕ್ಕೆ ಸಂಬಂಧಿಸಿದ ಉಪನ್ಯಾಸಕರನ್ನು ಆಯಾ ದಿನ ನೇಮಿಸಿಕೊಳ್ಳಬಾರದು ಎಂದು ತಿಳಿಸಿರುವ ಅವರು, ಪರೀಕ್ಷಾ ದುರಾಚಾರಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರಪ್ಪ ಮಾತನಾಡಿ, ಸುಗಮ ಪರೀಕ್ಷೆಗಾಗಿ ಕೇಂದ್ರ ಕಚೇರಿಯ ಜಾಗೃತದಳ, ಉಪನಿರ್ದೇಶಕರ ಕಚೇರಿಯ ಜಾಗೃದಳ, ಪದವಿ ಪೂರ್ವ ಶಿಕ್ಷಣ ಇಲಾಖೆಯ ತಾಲ್ಲೂಕು ಜಾಗೃದಳ ಹಾಗೂ ಪ್ರತಿ ಕೇಂದ್ರಕ್ಕೂ ಸ್ಥಾನಿಕ ಜಾಗೃತಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

ವೇಳಾಪಟ್ಟಿ ಪ್ರಕಟ


ಆ.21 ಕನ್ನಡ, ಆ.22 ರಂದು ಐಚ್ಚಿಕ ಕನ್ನಡ, ರಸಾಯನ ಶಾಸ್ತ್ರ, ಬೇಸಿಕ್ ಗಣಿತ, ಆ.23 ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಆ.24 ರಂದು ಲಾಜಿಕ್, ಹಿಂದೂಸ್ತಾನಿ ಮ್ಯೂಸಿಕ್, ಬ್ಯುಸಿನೆಸ್ ಸ್ಟಡೀಸ್, ಆ.25 ರಂದು ಇತಿಹಾಸ, ಸ್ಟಾಟಿಸ್ಟಿಕ್ಸ್, ಆ.26 ರಂದು ಇಂಗ್ಲೀಷ್, ಆ.28 ರಂದು ಜಿಯಾಗ್ರಫಿ, ಪಿಸಿಯಾಲಜಿ, ಭೌತಶಾಸ್ತ್ರ, ಆ.29 ರಂದು ಅಕೌಂಟೆನ್ಸಿ, ಜಿಯಾಲಜಿ, ಎಜುಕೇಷನ್, ಹೋಂ ಸೈನ್ಸ್, ಆ.30 ರಂದು ರಾಜ್ಯಶಾಸ್ತ್ರ ಮತ್ತು ಗಣಿತ, ಜೂ.1 ರಂದು ಲಾಜಿಕ್, ಹಿಂದೂಸ್ತಾನಿ ಮ್ಯೂಸಿಕ್, ಬಿಸಿನೆಸ್ ಸ್ಟಡೀಸ್, ಆ.31 ರಂದು ಹಿಂದಿ, ಸೆ.1 ರಂದು ಅರ್ಥಶಾಸ್ತ್ರ, ಬಯಾಲಜಿ, ಆ.2 ರಂದು ತಮಿಳು, ತೆಲುಗು, ಮಲಯಾಳಂ,ಮರಾಠಿ, ಉರ್ದು, ಸಂಸ್ಕøತ, ಫ್ರೇಂಚ್ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ಪರೀಕ್ಷೆ ಬರೆಯಲು ಸಲಹೆ ನೀಡಿರುವ ಅವರು, ಸರ್ಕಾರ ಒಂದು ಶೈಕ್ಷಣಿಕ ವರ್ಷದಿಂದ ಮಕ್ಕಳು ವಂಚಿತರಾಗಬಾರದು ಎಂದು ಕಲ್ಪಿಸಿರುವ ಈ ಸುವರ್ಣಾವಕಾಶವನ್ನು ಬಳಸಿಕೊಂಡು ಉತ್ತೀರ್ಣರಾಗಿ ಮುಂದಿನ ಕಲಿಕೆ ಮುಂದುವರೆಸಲು ತಿಳಿಸಿ ಶುಭ ಕೋರಿದ್ದಾರೆ.

ಕುಂದಾಪುರದಲ್ಲಿ “ಜ್ಞಾನೋದಯ” ಸ್ಪರ್ಧೆ

ಭಂಡಾರ್‍ಕಾರ್ಸ್ ಪ.ಪೂ.ಕಾಲೇಜು ಕುಂದಾಪುರ ಹಾಗೂ ಕುಂದಪ್ರಭ ಸಂಸ್ಥೆಯ ಸಹಯೋಗದಲ್ಲಿ “ಜ್ಞಾನೋದಯ” ಎಂಬ ಸಾಮಾನ್ಯ ಜ್ಞಾನ ಸ್ಪರ್ಧೆ ಸೆ.9 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಭಂಡಾರ್‍ಕಾರ್ಸ್ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಈ ವಿಶೇಷ ಸ್ಪರ್ಧೆ ಏರ್ಪಡಿಸಲಾಗಿದ್ದು ಪ್ರತಿಯೊಂದು ಪ್ರೌಢಶಾಲೆಯಿಂದ ಕನಿಷ್ಟ 5 ಹಾಗೂ ಗರಿಷ್ಟ 10 ಮಂದಿ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ.
ಈ ಸಾಮಾನ್ಯಜ್ಞಾನ ಸ್ಪರ್ಧೆ ಕುಂದಾಪುರ-ಬೈಂದೂರು ತಾಲೂಕಿನ ವಿಷಯದಲ್ಲೇ ನಡೆಯುತ್ತದೆ. ಸ್ಪರ್ಧೆಯ ಪ್ರಶ್ನೆಗಳು ತಾಲೂಕಿನ ಪ್ರಕೃತಿ, ಭೌಗೋಳಿಕ, ಇತಿಹಾಸ, ರಾಜಕೀಯ, ವೃತ್ತಿ, ಉದ್ಯಮ, ಸಾಹಿತ್ಯ, ಸಂಗೀತ, ಸಂಸ್ಕøತಿ, ಚಲನಚಿತ್ರ, ಮಹಾಪುರುಷರು, ನದಿ, ಸಾಗರ ವಿಷಯಗಳೊಂದಿಗೆ ನಿತ್ಯೋಪಯೋಗಿ ವಸ್ತುಗಳು ಹೂವು, ಹಣ್ಣು ಆಹಾರ ಪದಾರ್ಥಗಳ ಬಗ್ಗೆಯೂ ಇರುತ್ತದೆ. ಹೆಚ್ಚು ಅಂಕ ಪಡೆದ ಶಾಲೆಗೆ “ಜ್ಞಾನೋದಯ ಪಾರಿತೋಷಕ” ನೀಡಲಾಗುತ್ತದೆ. ವೈಯಕ್ತಿಕವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ಆಕರ್ಷಕ ಬಹುಮಾನದೊಂದಿಗೆ ಗೌರವ ನೀಡಲಾಗುತ್ತದೆ. ಪ್ರಥಮ 25 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಗುತ್ತದೆ. ಭಾಗವಹಿಸುವವರು ಡಾ. ಜಿ. ಎಂ. ಗೊಂಡ, ಪ್ರಾಂಶುಪಾಲರು, “ಜ್ಞಾನೋದಯ ಸ್ಪರ್ಧೆ”, ಭಂಡಾರ್‍ಕಾರ್ಸ್ ಪ.ಪೂ. ಕಾಲೇಜು ಕುಂದಾಪುರ-576201 ಇವರಿಗೆ ಆಗಸ್ಟ್ 31ರೊಳಗೆ ಹೆಸರು ಕಳುಹಿಸಿಕೊಡಬೇಕೆಂದು ಕುಂದಪ್ರಭ ಸಂಸ್ಥೆಯ ಅಧ್ಯಕ್ಷ ಯು. ಎಸ್. ಶೆಣೈ ತಿಳಿಸಿದ್ದಾರೆ.