

ಕೋಲಾರ ತಾಲೂಕು ಮಾರ್ಜೇನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ವಿದ್ಯಾಶ್ರೀ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಸ್ಮರಣೆಗಾಗಿ ಪಂಚಾಯ್ತಿ ಆವರಣದಲ್ಲಿ ಸಸಿ ನೆಟ್ಟರು. ಪಿಡಿಒ ನಾರಾಯಣಸ್ವಾಮಿ ಇತರೇ ಸದಸ್ಯರು ಹಾಜರಿದ್ದರು.


ಕೋಲಾರ:- ದೇಶವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಲು ಶ್ರಮಿಸಿದ ಮಹನೀಯರ ತ್ಯಾಗ,ಬಲಿದಾನ ಮಾಡಿದ್ದಾರೆ ಅವರ ತ್ಯಾಗ ವ್ಯರ್ಥವಾಗದಂತೆ ನಾವೆಲ್ಲಾ ದೇಶದ ಘನತೆ ಹೆಚ್ಚಿಸೋಣ, ದೇಶಕ್ಕಾಗಿ ನಾವು ಎಂದು ಸಾರೋಣ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಎಸ್ಡಿಎಂಸಿ ಅಧ್ಯಕ್ಷ ಎ.ಮಹೇಂದ್ರ ಕರೆ ನೀಡಿದರು.
ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ಗಾಂಧೀಜಿ,ಪಟೇಲ್,ನೆಹರು,ತಿಲಕ್,ನೇತಾಜಿ,ಅಜಾದ್,ಭಗತ್ಸಿಂಗ್ ಮತ್ತಿತರ ಸಾವಿರಾರು ಮಂದಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ್ದಾರೆ, ಅವರ ತ್ಯಾಗ,ಬಲಿದಾನದಿಂದ ನಾವಿಂದು ಸಂಭ್ರಮಿಸುತ್ತಿದ್ದೇವೆ ಎಂದರು.
ಪರಕೀಯರ ದಾಳಿಯಿಂದ ಬಿಡುಗಡೆಯಾದ ಈ ದಿನವನ್ನು ನಾವು ಸಂಭ್ರಮದಿಂದ ಆಚರಿಸುತ್ತಿದ್ದೇವೆ, 77 ವರ್ಷಗಳಲ್ಲಿ ನಮ್ಮ ದೇಶ ಅನೇಕ ರೀತಿಯಲ್ಲಿ ಸಾಧನೆ ಮಾಡಿದೆ, ಮೋದಿಯವರು ಬಂದ ಮೇಲೆ ದೇಶ ಇಂದು ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ ಎಂದರು.
ಕಾಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕಿ ಸಿದ್ದೇಶ್ವರಿ, ನಮ್ಮ ರಾಷ್ಟ್ರಧ್ವಜಕ್ಕೆ ಗೌರವ ನೀಡಬೇಕು, ಮಕ್ಕಳು 77ನೇ ವರ್ಷದ ಸ್ವಾತಂತ್ರ್ಯ ಸಂಭ್ರಮವನ್ನು ಕಲಿಕೆಯಲ್ಲಿ ಸಾಧನೆ ಮಾಡುವ ಸಂಕಲ್ಪದೊಂದಿಗೆ ಆಚರಿಸಬೇಕು, ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಿ, ಸಮಾಜಕ್ಕೆ ಹೊರೆಯಾಗದೇ ಆಸ್ತಿಯಾಗಿ ಎಂದು ಕಿವಿಮಾತು ಹೇಳಿದರು.
ಗ್ರಾ.ಪಂ ಮಾಜಿ ಸದಸ್ಯ ಎ.ಶ್ರೀಧರ್ ಮಾತನಾಡಿ, ಸ್ವಾತಂತ್ರ್ಯ ಪಡೆದದ್ದರ ಹಿಂದೆ ನೂರಾರು ವರ್ಷಗಳ ಹೋರಾಟವಿದೆ, ಅವರ ಹೋರಾಟ ಇಂದು ಫಲ ನೀಡಿದೆ, ನಾವೆಲ್ಲಾ ಖುಷಿಯಿಂದ ಇದ್ದೇವೆ, ಈ ದೇಶದ ಘನತೆಗೆ ಕುತ್ತು ಬಾರದಂತೆ ನಾವು ನಡೆದುಕೊಳ್ಳಬೇಕಾಗಿದೆ, ವಿದ್ಯಾರ್ಥಿಗಳು ದೇಶಕ್ಕಾಗಿ ನಾವು ಎಂದು ಸಂಕಲ್ಪ ಮಾಡಬೇಕು, ಅನೇಕ ಮಹನೀಯರ ತ್ಯಾಗ,ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ಬಂದಿದೆ, ಅದನ್ನು ಉಳಿಸಿಕೊಳ್ಳೋಣ, ಉತ್ತಮ ಶಿಕ್ಷಣ ಪಡೆದು ದೇಶಪ್ರೇಮ ಬೆಳೆಸಿಕೊಳ್ಳೋಣ ಎಂದರು.
ಶಿಕ್ಷಕರಾದ ಎಂ.ಆರ್.ಗೋಪಾಲಕೃಷ್ಣ ಹಾಗೂ ವೆಂಕಟರೆಡ್ಡಿ ಮಾತನಾಡಿ, ನಾವು ಓದಿ ದೇಶಕ್ಕಾಗಿ ಕೆಲಸ ಮಾಡುವ ಪ್ರತಿಜ್ಞೆ ಮಾಡಬೇಕು ದುಶ್ಚಟಗಳಿಂದ ದೂರವಾಗಿ ಉತ್ತಮ ಸಮಾಜ ನಿರ್ಮಿಸುವ ಹೊಣೆ ನಮ್ಮಮೇಲಿದೆ ಹಿರಿಯರು ತಂದುಕೊಟ್ಟಿರುವ ಸ್ವಾತಂತ್ರ್ಯದ ಹಿಂದೆ ಇರುವ ಹೋರಾಟದ ಕುರಿತು ಮಕ್ಕಳಿಗೆ ತಿಳಿಸಿಕೊಟ್ಟರು.
5ಸಾವಿರ ನೆರವಿತ್ತ ಯೋಧರ ಕುಟುಂಬ
ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯ ಯೋಧ ಆನಂದ್ ತಮ್ಮ ತಾಯಿ ಆಂಜಿನಮ್ಮ ಅವರ ನೆನಪಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿ ಕೆ.ಆರ್.ರಾಘವೇಂದ್ರ ಅವರಿಗೆ 5 ಸಾವಿರ ರೂ ನಗದು,ನೆನೆಪಿನ ಕಾಣಿಕೆಯ ಪುರಸ್ಕಾರ ನೀಡಿ ಸನ್ಮಾನಿಸಿದರು. ಮೂರ್ತಿ ಮಕ್ಕಳಿಗೆ ಪ್ರೇರಣೆಯ ಮಾತುಗಳನ್ನಾಡಿದರು. ಇವರೊಂದಿಗೆ ಸಹೋದರರಾದ ಶಂಕರ್,ಆನಂದ್,ಶೇಖರ್, ಅಶೋಕ್, ಗೋವಿಂದರಾಜು, ಎಸ್ಡಿಎಂಸಿ ಸದಸ್ಯ ರಾಮಚಂದ್ರಪ್ಪ ಜೊತೆಯಾದರು.
ಮಕ್ಕಳಿಗೆ ಗ್ರಾ.ಪಂ ಶುಭಾಷಯ
ಗ್ರಾ.ಪಂ ಅಧ್ಯಕ್ಷೆ ರೇಣುಕಾಂಭ ಮುನಿರಾಜು, ಸದಸ್ಯರಾದ ನಾರಾಯಣಸ್ವಾಮಿ, ಎಸ್ಡಿಎಂಸಿ ಉಪಾಧ್ಯಕ್ಷೆ ಲಕ್ಷ್ಮಿ, ಮಾಜಿ ಅಧ್ಯಕ್ಷರಾದ ಮುಳ್ಳಹಳ್ಳಿ ಮಂಜುನಾಥ್, ಮುನಿರಾಜು, ಮುನಿಯಪ್ಪ, ಮುಖಂಡ ನಾರಾಯಣಶೆಟ್ಟಿ,ಎಸ್ಡಿಎಂಸಿ ಸದಸ್ಯ ವೆಂಕಟಾಚಲಪತಿ ಮಕ್ಕಳಿಗೆ ಶುಭ ಕೋರಿದರು.
ಎಸ್ಡಿಎಂಸಿ ಅಧ್ಯಕ್ಷ ಎ.ಮಹೇಂದ್ರ ತಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರಾಗಿದ್ದು ಅವರ ನೆನಪಿನಲ್ಲಿ ಮಕ್ಕಳಿಗೆ ಲಡ್ಡು ವಿತರಿಸಿದರು. ಎಸ್ಡಿಎಂಸಿ ಸದಸ್ಯ ರಾಘವೇಂದ್ರ ಮಕ್ಕಳಿಗೆ ಸಿಹಿ ಹಾಗೂ ಪೆನ್ ವಿತರಿಸಿದರು.
ಶಾಲಾ ಮಕ್ಕಳು ನಡೆಸಿಕೊಟ್ಟ ಸಾಂಸ್ಕøತಿಕ ಕಾರ್ಯಕ್ರಮಗಳು ಮನಸೋರೆಗೊಂಡವು. ಗ್ರಾ.ಪಂ ಗ್ರಂಥಾಲಯದ ಅಜಯ್ ನಡೆಸಿಕೊಟ್ಟಿದ್ದ ಸಣ್ಣ ಕಥೆ ಬರೆಯುವ ಸ್ಪರ್ಧೆಯಲ್ಲಿ ವಿಜೇತರಾದ ಭವಿಷ್,ಅಮೂಲ್ಯ, ಶೈಲಜಾ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಬಹುಮಾನ ಪಡೆದಿದ್ದು, ಅವರಿಗೆ ನಗದು ಪುರಸ್ಕಾರವನ್ನು ಗ್ರಾ.ಪಂ ಅಧ್ಯಕ್ಷೆ ರೇಣುಕಾಂಭ ವಿತರಿಸಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಕಾರ್ಯದರ್ಶಿ ಪ್ರಮೀಳಾ, ಮುಖಂಡರಾದ ಮುರಳಿ, ಪ್ರಕಾಶ್,ಸಚಿನ್, ಸತೀಶ್,ಹರ್ಷವಧನ್, ಶಿಕ್ಷಕರಾದ ಭವಾನಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ವೇತಾ, ಸುಗುಣಾ, ಫರೀದಾ, ಶ್ರೀನಿವಾಸಲು,ರಮಾದೇವಿ, ಡಿ.ಚಂದ್ರಶೇಖರ್ ಮತ್ತಿತರರಿದ್ದರು.
ಚಿತ್ರಶೀರ್ಷಿಕೆ:(ಫೊಟೊ-16ಕೋಲಾರ8):ಕೋಲಾರ ತಾಲ್ಲೂಕು ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಎಸ್ಡಿಎಂಸಿ ಅಧ್ಯಕ್ಷ ಎ.ಮಹೇಂದ್ರ ನೆರವೇರಿಸಿ ಧ್ವಜವಂದನೆ ಸಲ್ಲಿಸಿದರು.


ಕೋಲಾರ: ಅನೇಕರ ತ್ಯಾಗಬಲಿದಾನಗಳ ಹೋರಾಟದಿಂದ ದೇಶದಲ್ಲಿ ಬ್ರಿಟೀಷರ ಅಂಧಕಾರ ಆಡಳಿತ ತೊಲಗಿ ಸ್ವಾತಂತ್ರ್ಯದ ಜ್ಯೋತಿ ಬೆಳಗುವಂತಾಯಿತು, ಈ ಜ್ಯೋತಿ ಪ್ರತಿ ಭಾರತೀಯರ ಮನೆ ಮನಗಳಲ್ಲಿ ಪ್ರಜ್ವಲಿಸಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ ಹೇಳಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾರತ ಸೇವಾದಳ ಜಿಲ್ಲಾ ತಾಲೂಕು ಸಮಿತಿ, ಹಳೇ ಮಾಧ್ಯಮಿಕ, ಉರ್ದು ಪ್ರಾಥಮಿಕ ಶಾಲೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 77 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಸ್ವಾತಂತ್ರ್ಯ ಎಂದಿಗೂ ಸ್ವೇಚ್ಛಾಚಾರವಾಗಬಾರದು ಎಂದು ಎಚ್ಚರಿಸಿದ ಅವರು, ಪ್ರತಿ ಭಾರತೀಯರು ದೇಶದ ಐಕ್ಯತೆಗಾಗಿ ದುಡಿದರೆ ವಿಶ್ವದಲ್ಲಿಯೇ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದರು.
ಧ್ವಜಾರೋಹಣ ನೆರವೇರಿಸಿದ ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಆಚರಿಸುತ್ತಿರುವ ಈ ಹೊತ್ತಿನಲ್ಲಿ ದೇಶದಲ್ಲಿರುವ ಪ್ರಾಕೃತಿಕ, ಸಾಮಾಜಿಕ, ರಾಜಕೀಯ, ಭಾಷೆ, ಆಹಾರ, ಉಡುಗೆ, ಬದುಕಿನ ವೈವಿಧ್ಯತೆಯನ್ನು ಕಾಪಾಡಿಕೊಂಡು ದೇಶದ ಏಕತೆ ಕಾಪಾಡುವ ಸವಾಲು ಎದುರಾಗಿದ್ದು, ಇದಕ್ಕಾಗಿ ಪ್ರತಿ ಭಾರತೀಯನು ಶ್ರಮಿಸಬೇಕೆಂದರು.
ಭಾರತ ಸೇವಾದಳ ಜಿಲ್ಲಾ ಗೌರವಾಧ್ಯಕ್ಷ ಸಿ.ಎಂ.ಆರ್ ಶ್ರೀನಾಥ್ ಮಾತನಾಡಿ, ಸ್ವಾತಂತ್ರ್ಯವನ್ನು ಅನುಭವಿಸುವುದರ ಜೊತೆಗೆ, ಸಂವಿಧಾನದ ಆಶಯಗಳಾದ ಸೌಹಾರ್ದತೆ, ಸಮಾನತೆಯನ್ನು ಸ್ವಾಭಿಮಾನದಿಂದ ಕಾಪಾಡಿಕೊಂಡು ದೇಶವನ್ನು ಮುನ್ನಡೆಸಬೇಕೆಂದರು.
ರೋಟರಿ ಸೆಂಟ್ರಲ್ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ದೇಶದ ಗಡಿ ಕಾಯುವ ಯೋಧ, ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತ, ಆರೋಗ್ಯ ಕಾಪಾಡುತ್ತಿರುವ ವೈದ್ಯ ಹಾಗೂ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಸೇವೆಯನ್ನು ಸ್ಮರಿಸಬೇಕೆಂದರು.
ವಿದ್ಯಾರ್ಥಿಗಳಾದ ಫಿಜಾ ಪರ್ವೀನ್ ಹಾಗೂ ಚೇತನ್ ಸ್ವಾತಂತ್ರ್ಯೋತ್ಸವ ಕುರಿತು ಭಾಷಣ ಮಾಡಿದರು.
ಭಾರತಸೇವಾದಳ ಜಿಲ್ಲಾ ಕಾರ್ಯದರ್ಶಿ ಎಸ್.ಸುಧಾಕರ್, ತಾಲೂಕು ಅಧ್ಯಕ್ಷ ಶ್ರೀರಾಮ್, ಪದಾಕಾರಿಗಳಾದ ಕೆ.ಜಯದೇವ್, ಗೋಕುಲ ಚಲಪತಿ, ಮುನಿವೆಂಕಟಯಾದವ್, ಪೈಂಟರ್ ಬಷೀರ್, ಬಿಇಒ ಕಚೇರಿ ಸಿಬ್ಬಂದಿ, ಹಳೇ ಮಾಧ್ಯಮಿಕ ಶಾಲಾ ಹಾಗೂ ಉರ್ದು ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಮಕ್ಕಳಿಗೆ ರೋಟರಿ ಸೆಂಟ್ರಲ್ ಹಾಗೂ ಸೇವಾದಳವತಿಯಿಂದ ಸಿಹಿ ವಿತರಿಸಲಾಯಿತು.
ಭಾರತ ಸೇವಾದಳ ಜಿಲ್ಲಾ ಸಂಘಟಕ ಎಂ.ಬಿ.ದಾನೇಶ್ ಕಾರ್ಯಕ್ರಮವನ್ನು ನಿರ್ವಹಿಸಿದರು.


ಕೋಲಾರ,ಆ.15: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಕಛೇರಿಯ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಂಘದ ಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ಧ್ವಜಾರೋಹಣವನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್.ಗಣೇಶ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ ಸುರೇಶ್ಕುಮಾರ್, ಹಿರಿಯ ಪತ್ರಕರ್ತರಾದ ಬಿ.ಸುರೇಶ್, ಅಬ್ಬಣಿ ಶಂಕರ್, ಕೆ.ಬಿ.ಜಗದೀಶ್, ಕೋ.ನಾ.ಮಂಜುನಾಥ್, ಎಸ್.ಸಚ್ಚಿದಾನಂದ, ಪ್ರಕಾಶ್ ಮಾಮಿ, ಸಿ.ಜಿ.ಮುರಳಿ, ರಾಜೇಂದ್ರಸಿಂಹ, ಅಯ್ಯೂಬ್ ಖಾನ್, ಆಸೀಫ್ ಪಾಷ, ಮಹೇಶ್, ಸ್ಕಂದಕುಮಾರ್, ಎಸ್ ಸೋಮಶೇಖರ್, ಸಮೀರ್ ಅಹಮದ್, ಎಸ್.ರವಿಕುಮಾರ್, ಲಕ್ಷ್ಮೀಪತಿ, ಶಿವಶಂಕರ್, ವೆಂಕಟೇಶಪ್ಪ, ಅಮರ್, ಮಂಜುನಾಥ್, ನವೀನ್, ರಘುರಾಜ್, ರಾಘವೇಂದ್ರ, ಸಿ.ಅಮರೇಶ್, ಪುರುಷೋತ್ತಮ, ಎನ್.ಸತೀಶ್, ಪವನ್, ಸುಧಾಕರ್, ರವಿ, ಮಂಜುನಾಥ್, ಸೈಯದ್ ತಬ್ರೇಜ್, ಮುಕ್ತಿಯಾರ್ ಅಹಮ್ಮದ್, ಶ್ರೀನಿವಾಸ್ ಉಪಸ್ಥಿತರಿದ್ದರು.




ಶ್ರೀನಿವಾಸಪುರ: ವಿದ್ಯಾರ್ಥಿಗಳು ದೇಶದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರಿಂದ ಸ್ಫೂರ್ತಿ ಪಡೆದು ರಾಷ್ಟ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಐಪಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.
ವಿಐಪಿ ಶಾಲಾ ಆಟದ ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಾತಂತ್ಯ ಯೋಧರು ತ್ಯಾಗ ಬಲಿದಾನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಸ್ವಾತಂತ್ರ್ಯಾನಂತರ ದೇಶ ಪ್ರಗತಿ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದರು.
ಪ್ರತಿಯೊಬ್ಬರೂ ದೇಶದ ಕಾನೂನು ಗೌರವಿಸಬೇಕು. ದೇಶದ ಹಿತ ರಕ್ಷಣೆಗೆ ಪೂರಕವಲ್ಲದ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸಬಾರದು. ಸ್ವಾತಂತ್ರ್ಯ ಸಂಗ್ರಾಮದ ಚರಿತ್ರೆ ಓದಬೇಕು. ಸ್ವಾತಂತ್ರ್ಯದ ಮಹತ್ವ ಅರಿಯಬೇಕು ಎಂದು ಹೇಳಿದರು.
ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಡಾ. ಕವಿತಾ ಸ್ವಾತಂತ್ರ್ಯ ದಿನಾಚರಣೆ ಮಹತ್ವ ಕುರಿತು ಮಾತನಾಡಿದರು. ಮುಖ್ಯ ಶಿಕ್ಷಕಿ ಮಂಜಿತ್ ಕೌರ್ ಇದ್ದರು.
ಶಾಲಾ ವಿದ್ಯಾರ್ಥಿಗಳು ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ದೇಶ ಭಕ್ತಿ ಗೀತೆಗಳ ಗಾಯನ ಏರ್ಪಡಿಸಲಾಗಿತ್ತು. ಸ್ವಾತಂತ್ರ್ಯ ದಿನಾಚರಣೆ ವಿಶೇಷ ಕ್ರೀಡಾ ಕೂಟದಲ್ಲಿ ವಿಜೇತರಾಗಿದ್ದ ಕ್ರೀಡಾಪಟುಗಳು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಯಿತು.



ಶ್ರೀನಿವಾಸಪುರ: ಸ್ವಾತಂತ್ರ್ಯದ ಸವಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಿಗಬೇಕು ಎಂಬ ಆಶಯ ಸಾಕಾರಗೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು ಎಂದು ಹೇಳಿದರು.
ಕ್ಷೇತ್ರದ ಯುವ ಸಮುದಾಯಕ್ಕೆ ಉದ್ಯೋಗಾವಕಾಶ ಒದಗಿಸುವ ಉದ್ದೇದಿಂದ ಪಟ್ಟಣದ ಹೊರವಲಯದಲ್ಲಿ ಕೈಗಾರಿಕಾ ವಲಯ ನಿರ್ಮಿಸಲಾಗುವುದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪಟ್ಟಣದಲ್ಲಿ ನವನಗರ ಯೋಜನೆ ಜಾರಿಗೆ ತಂದು ನಾಗರಿಕರಿಗೆ ಅಗತ್ಯವಾದ ರಸ್ತೆ, ಒಳಚರಂಡಿ ನಿರ್ಮಿಸಲಾಗುವುದು. ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಮೊದಲ ಅದ್ಯತೆ ನೀಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಯೋಧರನ್ನು ಸ್ಮರಿಸಬೇಕು. ಅವರ ತ್ಯಾಗ, ಬಳಿದಾನ ದೇಶದ ಸ್ವಾತಂತ್ರ್ಯ ರಕ್ಷಣೆಗೆ ಸ್ಫೂರ್ತಿಯಾಗಬೇಕು. ವಿವಿಧತೆಯಲ್ಲಿ ಏಕತೆ ನೀತಿ ಮುಂದುವರಿಯಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕರಿ ಕೃಷ್ಣಪ್ಪ, ಪ್ರಾಂಶುಪಾಲ ರಾಮಾಂಜನೇಯಪ್ಪ ಸ್ವಾತಂತ್ರ್ಯದ ಮಹತ್ವ ಕುರಿತು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಮ್ಮ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುರಾಜರಾವ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬೈರೆಡ್ಡಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಆರ್.ದಯಾನಂದ, ತಾಲ್ಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣಿ, ವೆಂಕಟಸ್ವಾಮಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ಗಣೇಶ್, ಮುಖಂಡ ಶೇಷಾಪುರ ಗೋಪಾಲ್ ಮತ್ತಿತರರು ಇದ್ದರು.
ಸಮಾರಂಭದಲ್ಲಿ ಪೊಲೀಸ್, ಗೃಹರಕ್ಷಕ ದಳ ಹಾಗೂ ವಿದ್ಯಾರ್ಥಿಗಳಿಂದ ಪಥಸಂಚಲನ ಏರ್ಪಡಿಸಲಾಗಿತ್ತು. ಬೇರೆ ಬೇರೆ ಶಾಲಾ ವಿದ್ಯಾರ್ಥಿಗಳಿಂದ ದೇಶ ಭಕ್ತಿಗೆ ಸಂಬಂಧಿಸಿದ ನೃತ್ಯ ಹಾಗೂ ಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯರು ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.


ಕುಂದಾಪುರ,16: ಸಂತ ಜೋಸೆಪರ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇವರ ಆಶ್ರಯದಲ್ಲಿ 15-08-2023 ರಂದು “ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಕಾನೂನು ಅರಿವು” ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ರೋ.ಜಗನ್ನಾಥ್ ಮೊಗೆರ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ವಕೀಲರಾದ ವೈ ಶರತ್ ಕುಮಾರ್ ಶೆಟ್ಟಿ ಇವರು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಕಾನೂನು ಅರಿವು ಮಾಹಿತಿ ನೀಡಿದರು. ವ್ಯಕ್ತಿಯ ವ್ಯಕ್ತಿತ್ವದ ವಿಕಸನಕ್ಕೆ ಅಗತ್ಯವಾದ ಸಾಮಾಜಿಕ ಮತ್ತು ರಾಜಕೀಯ ವಾತಾವರಣವನ್ನು ಮೂಲಭೂತ ಹಕ್ಕುಗಳು ಎಂದು ಕರೆಯುತ್ತಾರೆ. ನಮ್ಮ ಸಂವಿಧಾನದ ಮೂರನೇ ಭಾಗದಲ್ಲಿ ಮೂಲಭೂತ ಹಕ್ಕುಗಳನ್ನು ಅಳವಡಿಸಲಾಗಿದೆ. ಈ ಹಕ್ಕುಗಳು ಪ್ರಜಾಪ್ರಭುತ್ವದ ಯಶಸ್ವಿಗೆ ಅಗತ್ಯವಾದವುಗಳು. ಮೂಲಭೂತ ಕರ್ತವ್ಯಗಳ ಬಗ್ಗೆ ಪ್ರಸ್ತಾವಿಸುತ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಮೂಲಭೂತ ಹಕ್ಕುಗಳಿರುವಂತೆ ಕರ್ತವ್ಯಗಳಿಗೆ ನ್ಯಾಯಾಲಯದ ರಕ್ಷಣೆ ಇರುವುದಿಲ್ಲ. ಕರ್ತವ್ಯಗಳನ್ನು ಉಲ್ಲಂಘಿಸಿದವರಿಗೆ ಸಾಮಾನ್ಯ ಕಾನೂನಿನ ಅನ್ವಯ ಶಿಕ್ಷೆ ವಿಧಿಸಲಾಗುತ್ತದೆ’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಶುಭ ಹಾರೈಸಿದರು. ಶಿಕ್ಷಕರಾದ ಮೈಕಲ್ ಪುಟಾರ್ಡೊ ಸ್ವಾಗತಿಸಿದರು. ಶಿಕ್ಷಕಿ ಸರಸ್ವತಿಯವರು ವಂದಿಸಿದರು. ಶಿಕ್ಷಕ ಅಶೋಕ್ ದೇವಾಡಿಗ ನಿರೂಪಿಸಿದರು. ರೋಟರಿ ಕಾರ್ಯದರ್ಶಿಯಾಗಿರುವ ರೋ. ಡಾ. ವಿಲಾಸ್ ಕೃತಿಕ್ ಸದಸ್ಯರಾದ ರೋ.ವಿನ್ಸೆಂಟ್ ಬರೆಟ್ಟೊ , ರೋ. ನಟರಾಜ್, ರೋ. ಕೌಶಿಕ್ ಇವರು ಉಪಸ್ಥಿತರಿದ್ದರು. ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







ಕುಂದಾಪುರ: ಆಟೋರಿಕ್ಷಾ ,ಟ್ಯಾಕ್ಸಿ ,ಮೆಟಾಡೊರ್, ಡ್ರೈವರ್ ಅಸೋಸಿಯೇಷನ್ ನಿಂದ ಸ್ವಾತಂತ್ರ್ಯ 77 ನೇ ದಿನಾಚರಣೆಯನ್ನು ಆಚರಿಸಲಾಯಿತು. ’ಸ್ವಾತಂತ್ರ್ಯ ,ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಲವು ರೀತಿಯಲ್ಲಿ ಧಕ್ಕೆ ಬರುತ್ತಿದೆ. ನಾವೆಲ್ಲರೂ ಒಂದಾಗಿ ಇವುಗಳ ಸಂರಕ್ಷಣೆಯ ಸಂಕಲ್ಪ ತೊಡಬೇಕಾಗಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಅಸೋಸಿಯೇಷನ್ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಯವರು ಮಾತನಾಡಿ ದೇಶದ ಇಂದಿನ ಸರ್ವತೋಮುಖ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಕಾರಣ ಎಂದು ಹೇಳಿ ಎಲ್ಲರನ್ನೂ ಸಭೆಗೆ ಸ್ವಾಗತಿಸಿದರು.
ಸಭೆಯಲ್ಲಿ ಪುರಸಭೆ ಸದಸ್ಯರಾದ ಚಂದ್ರಶೇಖರ್ ಖಾರ್ವಿ, ಅಬು ಅಹಮ್ಮದ್, ಸೋಶಿಯಲ್ ಮೀಡಿಯಾ ಅಧ್ಯಕ್ಷರಾದ ರೋಷನ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಉಪಸಮಿತಿಗಳ ಅಧ್ಯಕ್ಷರಾದ ಚಂದ್ರ ಅಮೀನ್, ಅಶ್ವತ್ ಕುಮಾರ್, ಮುನಾಫ್ ಕೋಡಿ, ಶಶಿಕುಮಾರ್, ಮಾಜಿ ಪುರಸಭಾ ಅಧ್ಯಕ್ಷರಾದ ಹಾರುನ್ ಸಾಹೇಬ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರೇವತಿ ಶೆಟ್ಟಿ, ಅಸೋಸಿಯೇಷನ್ ಗೌರವ ಅಧ್ಯಕ್ಷರಾದ ವಕ್ವಾಡಿ ಭಾಸ್ಕರ್ ಪೂಜಾರಿ ,ಉಪಾಧ್ಯಕ್ಷರಾದ ಶೇಖರ ಪೂಜಾರಿ ತಲ್ಲೂರು, ಜೇಮ್ಸ್ ರೆಬೆಲ್ಲೊ ಹೆಮ್ಮಾಡಿ ,ವಿ ಎನ್ ಗುಂಡ ಪಾರಿಜಾತ, ಭಾಸ್ಕರ ಪೂಜಾರಿ ಕಂಡ್ಲೂರು ,ಕಾಂಗ್ರೆಸ್ ಪಕ್ಷದ ನಾಯಕರುಗಳಾದ ಎಚ್ ಗಂಗಾಧರ ಶೆಟ್ಟಿ, ಅಭಿಜಿತ್ ಪೂಜಾರಿ, ಅಶೋಕ್ ಸುವರ್ಣ, ಮಧುಕರ, ಆಶಾ ಕರ್ವಾಲ್ಲೊ, ಸುಭಾಷ್ ಪೂಜಾರಿ, ಸದಾನಂದ ಖಾರ್ವಿ, ಜ್ಯೋತಿ ಕೆ, ಶೋಭಾ ಸಚ್ಚಿದಾನಂದ, ಸುವರ್ಣ ಅಲ್ಮೇಡಾ, ಶಶಿ ರಾಜ್ ಪೂಜಾರಿ, ಕೇಶವ ಭಟ್, ವೇಲಾ ಬ್ರಗಾಂಜ , ಜ್ಯೋತಿ ಮೊಗವೀರ, ಜೋಸೆಫ್ ರೆಬೆಲ್ಲೊ, ಡೊಲ್ಫಿ ಡಿಕೋಸ್ತ, ವಿವೇಕಾನಂದ, ಕೆ ಸುರೇಶ, ನಾಗರಾಜ ನಾಯ್ಕ, ಪ್ರೀತಮ್ ಕರ್ವಾಲ್ಲೊ ,ದಿನೇಶ್ ಬೆಟ್ಟ, ಗುಲಾಬಿ, ಡೆಪೋಡಿಲ್ ಕ್ರಾಸ್ಟೋ , ಸೂರ್ಯನಾರಾಯಣ, ಇಬ್ರಾಹಿಂ, ಸಂತೋಷ್ ಖಾರ್ವಿ ,ಬಾಲಾ ಬಸ್ರೂರ್, ನರೇಂದ್ರ ಗಾಣಿಗ, ಪ್ರಕಾಶ್, ಸುರೇಶ್ ಸಂಗಮ್, ಭಾಸ್ಕರ, ಆನಂದ ,ಅಜಿತ್ ಕುಮಾರ್, ರತ್ನಾಕರ್ ಶೆಟ್ಟಿ ,ಜನಾರ್ದನ್ ಖಾರ್ವಿ, ಕೆ ಅಶೋಕ್ ,ಮಂಜುನಾಥ , ಪಿಯುಸ್ ಡಿಸೋಜ, ವಿಶ್ವನಾಥ ಪೂಜಾರಿ, ಎಂ ಉದಯಕುಮಾರ್, ಶಶಿಧರ, ಕಿರಣ್, ಬಸ್ತು, ಅಶೋಕ ಡಿಸೋಜಾ ವಿಜಯ ಪೂಜಾರಿ ತಲ್ಲೂರು ಫೆಲಿಕ್ಸ್ ತಲ್ಲೂರು ಇನ್ನಿತರರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ಕಾರ್ಯಕ್ರಮವನ್ನು ನಿರೂಪಿಸಿ, ಅಸೋಶಿಯೇಶನ್ ನಾ ಕಾರ್ಯದರ್ಶಿ ಮಾಣಿ ಉದಯ್ ಅವರು ವಂದಿಸಿದರು. ಸಭೆಯ ನಂತರ ಅಸೋಸಿಯೇಷನ್ ನಾ ಸದಸ್ಯರು ವಾಹನಗಳ ಜಾಥ ಕುಂದಾಪುರದ ಪ್ರಮುಖ ರಸ್ತೆಯಲ್ಲಿ ನಡೆಸಿದರು.






ಕುಂದಾಪುರ,17,ಉಪ ವಿಭಾಗೀಯ ಕುಂದಾಪುರ ಸಾರ್ವಜನಿಕ ಆಸ್ಪತ್ರೆಗೆ ಅಪ್ರಿಶಿಯೇಶನ್ ಪ್ರಶಸ್ತಿ ಲಭಿಸಿದೆ. ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಡೆದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಆಯುಷ್ಠಾನ್ ಭರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ- ಆರೋಗ್ಯ ಕರ್ನಾಟಕ (AB -PMJAY -ARK ) ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಂಬಂಧ ಜಿಲ್ಲಾ ಮಟ್ಟದಿಂದ ಪ್ರಶಂಸಾ ಪ್ರಮಾಣಪತ್ರವನ್ನು ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಇವರು ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾ. ರಾಬರ್ಟ್ ರೆಬೆಲ್ಲೊ ಇವರಿಗೆ ನೀಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಇತರ ಅಧಿಕಾರಿಯವರು. ಉಪಸ್ಥಿತರಿದ್ದರು. ಆಯುಷ್ಯಾನ್ ಭರತ್ ಪ್ರಧಾನ ಮಂತ್ರಿ ಜನಾರೋಗ್ಯ ಅಯೋಜನೆಯಡಿ ಜಿಲ್ಲಾವಾರು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಹಾಗೂ ನೊಂದಾಯಿತ ಖಾಸಗಿ ಆಸ್ಪತ್ರೆಗಳು ಸಾಧಿಸಿರುವ ಕಾರ್ಯಕ್ಷಮತೆ ಹಾಗೂ ಯೋಜನೆಯ ಸದ್ಗಳಕೆ ಆಧಾರದ ಮೇಲೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಹಿಂದಿನ ಸಾಲಿನಲ್ಲಿ ಕಾಯಕಲ್ಪ ಪ್ರಶಸ್ತಿ ಹಾಗೂ ಲಕ್ಷ್ಯ ಪ್ರಶಸ್ತಿಯು ಲಭಿಸಿರುವುದು ಹೆಮ್ಮೆಯ ವಿಷಯವಾಗಿದೆಯೆಂದು ಡಾ. ರಾಬರ್ಟ್ ರೆಬೆಲ್ಲೊ ತಿಳಿಸಿದ್ದಾರೆ





