HOLY ROSARY CHURCH, KUNDAPUR – 450 th JUBILEE SOUVENIR 2021

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ‘ ಆಝಾದಿ ಕಾ ಅಮೃತ್ ಮಹೋತ್ಸವ್’ ದ ಅಂಗವಾಗಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಆಶ್ರಯದಲ್ಲಿ  ‘ಹರ್ ಘರ್ ಧ್ಯಾನ್’

ಯುವಜನರನ್ನು ಮಾನಸಿಕ ಆರೋಗ್ಯ ಶಿಕ್ಷಣದಲ್ಲಿ ತೊಡಗಿಸಿಕೊಳ್ಳಲು ಮತ್ತು ಧ್ಯಾನವನ್ನು ನಿಯಮಿತ ಅಭ್ಯಾಸವಾಗಿ ತೆಗೆದುಕೊಳ್ಳಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ‘ ಹರ್ ಘರ್ ಧ್ಯಾನ್ ‘ ಕಾರ್ಯಕ್ರಮವನ್ನು ಸಂಸ್ಕೃತಿ ಸಚಿವಾಲಯ‌ದ ಸಹಯೋಗದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಆಶ್ರಯದಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಯಿತು. ಆರ್ಟ್ ಆಪ್ ಲಿವಿಂಗ್ ನ ಉಡುಪಿ ಘಟಕದ ಸದಸ್ಯರಾದ  ಶ್ರೀಮತಿ ಶೈಲಜಾ ಇವರು ಸುಧಾರಿತ ಆರೋಗ್ಯ ಮತ್ತು ಕ್ಷೇಮಕ್ಕಾಗಿ ಧಾನ್ಯ- ಸಂಬಂಧಿ ಕೆಲವು ಆಸನಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಆರ್ಟ್ ಆಫ್ ಲಿವಿಂಗ್ ನ ಕುಂದಾಪುರ ಘಟಕದ ಸದಸ್ಯೆ ಶ್ರೀಮತಿ ಮಂಜುಶ್ರೀ ಇವರು ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ವಿವಿಧ ಆಸನಗಳ ಪ್ರಾತ್ಯಕ್ಷಿಕೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜೆಸಿಐ ಕುಂದಾಪುರ ಸಿಟಿ ಯ ವತಿಯಿಂದ ‘ನ್ಯಾಷನಲ್ ಲೆವೆಲ್ ಟ್ಯಾಲೆಂಟ್ ಸರ್ಚ್’  ಪರೀಕ್ಷೆ‌

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜೆ.ಸಿ.ಐ ಕುಂದಾಪುರ ಸಿ ಟಿ ಯ ವತಿಯಿಂದ ‘ ನ್ಯಾಷನಲ್ ಲೆವೆಲ್  ಟ್ಯಾಲೆಂಟ್ ಸರ್ಚ್ ‘ ಯೋಜನೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪರೀಕ್ಷಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.  ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿ, ಜೆಸಿ.ಐ ಕುಂದಾಪುರ ಸಿಟಿ ಯ ಅಧ್ಯಕ್ಷರಾದ ಜೆಸಿ ಡಾ. ಸೋನಿ ಡಿಕೊಸ್ಟಾ, ಸ್ಥಾಪಕ ಅಧ್ಯಕ್ಷರಾದ ಜೆಸಿ ಹುಸೇನ್ ಹೈಕಾಡಿ, ಜೆಸಿ ರಾಜೇಶ್ ಹೆಬ್ಬಾರ್, ಮಹಿಳಾ ಜೆಸಿ ಸಂಯೋಜಕಿ ಜೆಸಿ ಪ್ರೇಮಾ ಡಿ ಕುನ್ಹಾ, ಜೆಸಿ ಅನಿತಾ ಡಿಸೋಜಾ ರವರು ಉಪಸ್ಥಿತರಿದ್ದರು. 

ರಾಜೀವ್‌ ಗಾಂಧಿ ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿ ಅರ್ಪಿತಾ ಡಿಸೋಜಾಅವರಿಗೆ ಮನೋವಿಜ್ಞಾನ ಮತ್ತು ಸಮಾಜಶಾಸ್ತ್ರದಲ್ಲಿ ನಾಲ್ಕನೇ ರೇಂಕ್

ಮಂಗಳೂರು, ಆಗಸ್ಟ್‌ 8, 2023: ಅರ್ಪಿತ ಡಿಸೊಜಾ, ಮಂಗಳೂರಿನ ಸಿಟಿ ಕಾಲೇಜ್‌ ಆಫ್‌ ಫಿಜಿಯೊಥೆರಪಿ
ಕಾಲೇಜಿನ ವಿದ್ಯಾರ್ಥಿಯಾಗಿರುವ ಇವರು ಪ್ರತಿಷ್ಠಿತ ರಾಜೀವ್‌ ಗಾಂಧಿ ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿ
ಮನೋವಿಜ್ಞಾನ ಮತ್ತು ಸಮಾಜಶಾಸ್ತ್ರ ವಿಷಯಗಳಲ್ಲಿ ನಾಲ್ಕನೇ ರ್ಯಾಂಕ್‌ ಪಡೆದಿದ್ದಾರೆ. ಇವರು ಡೊಡ್ಡ ಮೂಲೆ ಹೌಸ್‌, ಕಯ್ಯಾರ್‌, ಕಾಸರಗೋಡು ನಿವಾಸಿಗಳಾದ ಅಲ್ಬರ್ಟ್‌ ಡಿಸೊಜಾ ಮತ್ತು ಸೆಲೀನ್‌ ಮಚಾದೊವರ ಮಗಳಾಗಿದ್ದಾರೆ.

ಹಿರಿಯ ಸಹಕಾರಿ ಧುರೀಣ – ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲ ಪೂಜಾರಿ ಇನ್ನಿಲ್ಲ

ಕುಂದಾಪುರ: ಹಿರಿಯ ಸಹಕಾರಿ ಧುರೀಣ, ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ಬಸ್ರೂರು ಕೋಟಿ ಚೆನ್ನಯ್ಯ ಗರಡಿಯ ಮುಖ್ಯಸ್ಥರಾದ ಗೋಪಾಲ ಪೂಜಾರಿ (68 ವ) ಆ.8ರಂದು ಹೃದಯಘಾತದಿಂದ ನಿಧನರಾದರು.

ಸಹಕಾರ ಕ್ಷೇತ್ರದಲ್ಲಿ ಸುದೀರ್ಫ ಅವಧಿಯಿಂದ ಗುರುತಿಸಿಕೊಂಡಿದ್ದ ಅವರು ಕಳೆದ 25 ವರ್ಷಗಳಿಗೂ ಹೆಚ್ಚು ಕಾಲ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘವನ್ನು ಮುನ್ನಡೆಸಿದ್ದರು. ಬಸ್ರೂರು ಗರಡಿಯ ಪಾತ್ರಿಗಳಾಗಿ, ಗರಡಿಯ ಅಭಿವೃದ್ಧಿಯಲ್ಲಿ
ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಸ್ರೂರು ಪರಿಸರದ ಧಾರ್ಮಿಕ, ಸಹಕಾರ, ಸಾಮಾಜಿಕ ಕ್ಷೇತ್ರಗಳಲ್ಲಿ ಸತ್ರೀಯವಾಗಿ ತೊಡಗಿಸಿಕೊಳ್ಳುತ್ತಿದ್ದರು. ಮೃತರು ಪತ್ನಿ, ಸಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತು ಬಿಆರ್‌ಎಸ್ ಅವಿಶ್ವಾಸ ನಿರ್ಣಯ ಮಂಡನೆ

ನವದೆಹಲಿ:ಆ.೮: ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದ ವಿಚಾರವಾಗಿ ಪ್ರತಿಪಕ್ಷಗಳು ಮೋದಿ  ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿವೆ. ಕಾಂಗ್ರೆಸ್  ಸಂಸದ ಗೌರವ್ ಗೊಗೊಯ್ ಅವರು ಲೋಕಸಭೆಯಲ್ಲಿ ಬುಧವಾರ ಅವಿಶ್ವಾಸ ನಿರ್ಣಯದ ಕುರಿತು ನೋಟಿಸ್ ನೀಡಿದರು. ಕಾಂಗ್ರೆಸ್ ಮಾತ್ರವಲ್ಲದೆ ತೆಲಂಗಾಣದ ಆಡಳಿತ ಪಕ್ಷ ಬಿಆರ್‌ಎಸ್ ಕೂಡ ಪ್ರತ್ಯೇಕ ಅವಿಶ್ವಾಸ ನಿರ್ಣಯ ಮಂಡಿಸಿದೆ.

      ಸಭಾಪತಿ ಓಂಬಿರ್ಲಾ ಅವಿಶ್ವಾಸ ನಿರ್ಣಯ ನೋಟಿಸ್‌ ಸ್ವೀಕರಿಸಿದ್ದು, ಶೀಘ್ರದಲ್ಲಿ ಚರ್ಚೆಗೆ ದಿನಾಂಕ ನಿಗದಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮಣಿಪುರದ ಬಗ್ಗೆ ಮೌನ ತಾಳಿರುವ ಪ್ರಧಾನಿಯಿಂದ ಹೇಳಿಕೆಗಳು ಬರಬೇಕು ಎಂದು ನಿರ್ಧರಿಸಿರುವ ವಿಪಕ್ಷಗಳು ಕಡೆಯ ಅಸ್ತ್ರ ಎನ್ನುವಂತೆ ಅವಿಶ್ವಾಸ ನಿರ್ಣಯ ಮಂಡಿಸಿವೆ. ಆದರೆ ಇದಕ್ಕೆ ಪ್ರತ್ಯುತ್ತರ ನೀಡಲು ಸರ್ಕಾರವೂ ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದೆ ಹೇಳಲಾಗುತ್ತದೆ.     

    ತಮ್ಮ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಉತ್ತರ ನೀಡಲಿದ್ದಾರೆ. ಇದರಲ್ಲಿ ಎರಡು ರೀತಿಯಲ್ಲಿ ಪ್ರತಿಪಕ್ಷಗಳನ್ನು ಟಾರ್ಗೆಟ್ ಮಾಡಬಹುದು ಎನ್ನಲಾಗುತ್ತಿದೆ. ಮೊದಲನೆಯದಾಗಿ ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಬಿಜೆಪಿಯೇತರ ರಾಜ್ಯಗಳ ಅಂಕಿ ಅಂಶಗಳು ಮತ್ತು ಘಟನೆಗಳನ್ನು ಉಲ್ಲೇಖಿಸಿ ಮತ್ತು ಎರಡನೆಯದಾಗಿ ಭ್ರಷ್ಟಾಚಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ. ಮಣಿಪುರದ ಹಿಂಸಾಚಾರವನ್ನು ಪ್ರಸ್ತಾಪಿಸಿ ಅದಕ್ಕಿಂತ ಹೆಚ್ಚು, ಕಾಂಗ್ರೆಸ್ ಆಡಳಿತದಲ್ಲಿ ನಡೆದ ಪ್ರಮುಖ ಘಟನೆಗಳನ್ನು ಉಲ್ಲೇಖಿಸಬಹುದು ಎಂದು ಅನುಮಾನ ಪಡಲಾಗಿದೆ.

ಪಿಯುಸ್ ನಗರ ಚರ್ಚ್ – ’ತೋಮಸ್ ಡಿಮೆಲ್ಲೊ ಏಜ್ಯುಕೇರ್ ಚಾರಿಟೇಬಲ್ ಟ್ರಸ್ಟ್”  ಆಶ್ರಯದಲ್ಲಿ ಸ್ಕಾಲರ್ಶಿಪ್ ವಿತರಣೆ

ಕುಂದಾಪುರ, ಆ.8; ಪಿಯುಸ್ ನಗರ್ ಚರ್ಚಿನಲ್ಲಿ ದಿನಾಂಕ 5 ರಂದು ದಿವಂಗತ ತೋಮಸ್ ಡಿಮೆಲ್ಲೊ ಇವರ ಏಜ್ಯುಕೇರ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪಿಯುಸ್  ನಗರ ಚರ್ಚಿನ ಕೆಥೊಲಿಕ್ ಸಭಾ ಹಾಗೂ ಸಂತ ವಿಶೆಂತ್ ಪಾವ್ಲ್ ಸಭಾ ಸಂಘಟನೆ ಜೊತೆಗೂಡಿ , ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಅಂಕ ಪಡೆದ 19 ಮಕ್ಕಳಿಗೆ ಸ್ಕಾಲರ್ಶಿಪ್ ವಿತರಿಸಲಾಯಿತು.

      ಪಿಯುಸ್  ನಗರ ಚರ್ಚಿನ ಸಭಾಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಪಿಯುಸ್ ನಗರ್ ಚರ್ಚಿನ ಧರ್ಮಗುರುಗಳಾದ ವಂ| ಆಲ್ಬರ್ಟ್ ಕ್ರಾಸ್ತಾ ಅಧ್ಯಕ್ಷತೆ ವಹಿಸಿ ’ಈ ರೀತಿಯ ಒಂದು ಕಾರ್ಯಕ್ರಮ ಅರ್ಥಪೂರ್ಣವಾದಂತದು, ಇದರಲ್ಲಿ ಸೇವೆಯ ಮನೋಭಾವನೆ ಇದೆ’ ಎಂದು ಸಂದೇಶ ನೀಡಿದರು ಏಜ್ಯುಕೇರ್ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ| ಕುಲ್ದೀಪ್ ಡಿಮೆಲ್ಲೊ ಮಾತನಾಡಿ ’ಈ ಒಂದು ಸ್ಕಾಲರ್ಶಿಪ್ ನೀಡುವ ಯೋಜನೆ ನಮ್ಮ ತಂದೆಯವರ ಕನಸಾಗಿತ್ತು. ಸಮುದಾಯದ ಮಕ್ಕಳು ಶಿಕ್ಷಣದಲ್ಲಿ ಮುಂದೆ ಬರಬೇಕು ಎಂಬದು ಅವರ ಆಸೆಯಾಗಿತ್ತು. ಆ ಆಸೆಗಳನ್ನು ನಾವು ಅವರ ಮಕ್ಕಳು ಈಡೇರಿಸುತ್ತಾ ಇದ್ದೇವೆ’ ಎಂದು ತಿಳಿಸಿದರು. ಪಾಲನ ಮಂಡಳಿ ಉಪಾಧ್ಯಕ್ಷರಾದ  ಜೇಮ್ಸ್ ಡಿಮೆಲ್ಲೊ ಹಿತನುಡಿಗಳನ್ನಾಡಿದರು. ವೇದಿಕೆಯಲ್ಲಿ ಅತಿಥಿಗಳಾದ ಡಾ| ಜಾನ್ಸನ್ ಡಿಲೀಮಾ, ಡಾ| ಮಧು ಡಿಲೀಮಾ, ಪಾಲನ ಮಂಡಳಿ  ಕಾರ್ಯದರ್ಶಿ ರೇಶ್ಮಾ ಡಿಸೋಜ, ಚರ್ಚ್ ಆಯೋಗಗಳ ಸಂಯೋಜಕಿ ಲೀನಾ ತಾವ್ರೊ ಉಪಸ್ಥಿತರಿದ್ದರು. ವೇದಿಕೆಯಲ್ಲಿದ್ದ ಗಣ್ಯರು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಿಸಿದರು. ಕಥೊಲಿಕ್ ಸಭಾ ಕಾರ್ಯದರ್ಶಿ ಪ್ರಮೀಳಾ ಡೆಸಾ ಸ್ವಾಗತಿಸಿದರು.  ಕಥೊಲಿಕ್ ಸಭಾದ ಅಧ್ಯಕ್ಷರಾದ ಅಲೆಕ್ಸಾಂಡರ್ ಲೂವಿಸ್ ಲೂವಿಸ್ ಧನ್ಯವಾದಗಳನ್ನು ಸಲ್ಲಿಸಿದರು. ಕಾರ್ಯಕ್ರಮವನ್ನು ನ್ಯಾನ್ಸಿ ವಾಜ್ ನಿರೂಪಿಸಿದರು.

ಪಟ್ಟಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನಾಡಪ್ರಭು ಕೆಂಪೇಗೌಡ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು:ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಪಟ್ಟಣದಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಆ.27 ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಕೆಂಪೇಗೌಡ ಜಯಂತಿ ಆಚರಿಸುವ ಕುರಿತು ಚರ್ಚಿಸಲು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಯಾವುದೇ ಒಂದು ಸಮುದಾಯಕ್ಕೆ ಮೀಸಲಾಗದಂತೆ ಎಚ್ಚರಿಕೆ ವಹಿಸಬೇಕು. ಆಚರಣೆ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿರಬೇಕು. ಸಮುದಾಯ ಸಾಂಘಿಕವಾಗಿ ಜಯಂತಿ ಆಚರಿಸಬೇಕು. ಜಯಂತಿ ಸಮಾರಂಭದಲ್ಲಿ ಸಮಾಜದ ಎಲ್ಲ ವರ್ಗದ ಜನರೂ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಜಯಂತಿ ಆಚರಣೆಗೆ ಮೊದಲು ಸಮುದಾಯದ ಮುಖಂಡರು ಇನ್ನೊಂದು ಪೂರ್ವಭಾವಿ ಸಭೆ ನಡೆಸಿ, ಆಚರಣೆ ಬಗ್ಗೆ ರೂಪರೇಷೆ ರೂಪಿಸಬೇಕು ಎಂದು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆಗೆ ಮೊದಲು ಪಟ್ಟಣದಲ್ಲಿ ಹದಗೆಟ್ಟಿರುವ ರಸ್ತೆಗಳಿಗೆ ಡಾಂಬರು ಹಾಕಬೇಕು. ಚಿಂತಾಮಣಿ ಸರ್ಕಲ್‍ನಿಂದ ಬಸ್ ನಿಲ್ದಾಣದ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಮುಗಿಸಬೇಕು. ಸ್ವಚ್ಛತೆ ಕಾಪಾಡಬೇಕು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್ ಮಾತನಾಡಿ, ಆ.15 ರಂದು ಬೆಳಿಗ್ಗೆ 9 ಗಂಟೆಗೆ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಏರ್ಪಡಿಸಲಾಗಿದೆ. ತಾಲ್ಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಾರಂಭದಲ್ಲಿ ಭಾಗವಹಿಸಬೇಕು. ಹಿಂದಿದ ದಿನ ರಾತ್ರಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂದಾರ ಮಾಡಬೇಕು. ಕೆಂಪೇಗೌಡ ಜಯಂತಿ ಸಮಾರಂಭ ಆ.27ರಂದು ಮಧ್ಯಾಹ್ನ ಅದೇ ಮೈದಾನದಲ್ಲಿ ನಡೆಯಲಿದೆ. ನಿಯಮಾನುಸಾರ ಜಯಂತಿ ಆಚರಣೆಗೆ ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವೇಣುಗೋಪಾಲರೆಡ್ಡಿ, ಮಾಜಿ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ, ಕಾರ್ಯದರ್ಶಿ ಮೀಸಗಾನಹಳ್ಳಿ ವೆಂಕಟರೆಡ್ಡಿ, ಭೈರವೇಶ್ವರ ವಿದ್ಯಾ ನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್.ಗೊಪಾಲಕೃಷ್ಣ, ಲಕ್ಷ್ಮಣರೆಡ್ಡಿ ಮಾತನಾಡಿ ಆಚರಣೆ ಕುರಿತು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಮಂಜುನಾಥ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ತೋಟಗಾರಿಕಾ ಇಲಾಖೆ
ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್, ಬೆಸ್ಕಾಂ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ನಾಗರಾಜು, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ಆರ್.ದಯಾನಂದ್ ಮತ್ತಿತರರು ಇದ್ದರು.

ಪಟ್ಟಣದ ರಾಜದಾನಿ ಪೆಟ್ರೋಲ್ ಬಂಕ್ ಸಿಎನ್‌ಜಿ ಗ್ಯಾಸ್ ಬಂಕಿಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಚಾಲನೆ:ಸಿಎನ್‌ಜಿ ಗ್ಯಾಸ್ ಬಳಿಕೆ ಹೊರೆ ಕಡಿಮೆ

ಶ್ರೀನಿವಾಸಪುರ : ಇತ್ತೀಚಿಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಹೆಚ್ಚಾಗಿರುವ ನಿಟ್ಟಿನಲ್ಲಿ ಗ್ರಾಹಕರ ಮೇಲೆ ಹೊರೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಿಎನ್‌ಜಿ ಗ್ಯಾಸ್ ಬಳಿಸಿಕೊಳ್ಳುವುದರ ಮೂಲಕ ಹಣದ ಹೊರೆ ಕಡಿಮೆ ಮಾಡಿಕೊಳ್ಳುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಗ್ರಾಹಕರಲ್ಲಿ ಮನವಿ ಮಾಡಿಕೊಂಡರು.
ಪಟ್ಟಣದ ರಾಜದಾನಿ ಪೆಟ್ರೋಲ್ ಬಂಕ್ ಸಭಾಂಗಣದಲ್ಲಿ ಸೋಮವಾರ ಸಿಎನ್‌ಜಿ ಗ್ಯಾಸ್ ಬಂಕಿಗೆ ಚಾಲನೆ ನೀಡಿ ಮಾತನಾಡಿದರು.
ರೀಜನಲ್ ಮ್ಯಾನೇಜರ್ ವೆಂಕಟೇಶ್ ಮಾತನಾಡಿ ಕೋಲಾರ ಜಿಲ್ಲೆಯಲ್ಲಿ ೬ ಕೇಂದ್ರಗಳನ್ನು ತರೆಯಲಾಗಿದ್ದು, ಮೊದಲ ಭಾರಿಗೆ ಶ್ರೀನಿವಾಸಪುರದಲ್ಲಿ ಎಜಿಪಿ,ಸಿಎನ್‌ಜಿ ಗ್ಯಾಸ್ ಬಂಕ್‌ನ್ನು ತೆರೆಯಲಾಗಿದ್ದು, ೧ ಕೆಜಿ ಗ್ಯಾಸ್‌ಗೆ ೮೦ರೂ, ೧ ಕೆಜಿ ಗ್ಯಾಸ್‌ಗೆ ೫೦ ಕಿಮೀ ಪ್ರಯಣಸಬಹುದು ಎಂದು ತಿಳಿಸುತ್ತಾ, ಗ್ಯಾಸ್ ಕಿಟ್ ಮಾರುಕಟ್ಟೆ ಬೆಲೆ ೨೦ ಸಾವಿರ, ಆದರೆ ನಾವು ನಮ್ಮ ಕಂಪನಿ ಕಡೆಯಿಂದ ಗ್ಯಾಸ್ ಕಿಟ್‌ನ್ನು ಸಬ್ಸಿಡಿ ದರದಲ್ಲಿ ೧ ಸಾವಿರಕ್ಕೆ ಕೊಡಲಾಗುವುದು . ಗ್ರಾಹಕರು ಈ ಒಂದು ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ರಿವಿಜನಲ್ ಮುಖ್ಯ ಕೆಆರ್ ವೆಂಕಟೇಶ್ ಮಾತನಾಡಿ ನಮ್ಮ ಕಂಪನಿಯಿಂದ ಗ್ರಾಹಕರ ಗ್ಯಾಸ್‌ಗೆ ಸಂಬಂದಿಸಿದ ಸಮಸ್ಯೆಗಳನ್ನು ಸ್ಪಂದಿಸುವ ನಿಟ್ಟಿನಲ್ಲಿ ೨೪/೭ ಗಂಟೆಗಳು ನಿಮ್ಮ ಸೇವೆಗಾಗಿ ನಮ್ಮ ಸಿಬ್ಬಂದಿಗಳು ಇರುತ್ತಾರೆ ಎಂದು ಮಾಹಿತಿ ನೀಡಿದರು.
ಪುರಸಭೆ ಉಪಾಧ್ಯಕ್ಷೆ ಆಯೀಷನಯಾಜ್, ಸದಸ್ಯ ಏಜಾಜ್‌ಪಾಷ, ಜಿಲ್ಲಾ ಪಂಚಾಯಿತಿ ಮಾಜಿ ಸದ್ಯಸ ತೂಪಲ್ಲಿ ಆರ್.ನಾರಾಯಣಸ್ವಾಮಿ, ರಾಜದಾನಿ ಪೆಟ್ರೋಲ್ ಬಂಕ್ ಮಾಲೀಕರು ಮುಜಾಯಿದ್‌ಅನ್ಸಾರಿ, ಜಾಹಿದ್ ಅನ್ಸಾರಿ ,ಅಬಿದ್ ಅನ್ಸಾರಿ, ಮುಖಂಡರಾದ ಲಕ್ಷö್ಮಣರೆಡ್ಡಿ,ಮನು,ಎಪಿಜಿ ಗ್ಯಾಸ್ ಕಂಪನಿ ಜಿಲ್ಲಾ ವ್ಯವಸ್ಥಾಪಕ ಎಸ್.ಆರ್.ಅಶಿತ್, ಅಮೀರ್ ಖಾನ್, ಮಹೇಶ್,ಸುರೇಶ್, ಭಾರತ್ ಪೆಟ್ರೋಲಿಯಂ ವ್ಯವಸ್ಥಾಪಕ ಶುಭಂಸಿಂಗ್, ವಸೀಂ ಇದ್ದರು.

ಅಡ್ಡಗಲ್ ಗ್ರಾಮದ ಶಾಲೆಯ ಅಪ್ರಾಪ್ತ ಬಾಲಕಿಯನ್ನು ಹೆದರಿಸಿ ಲೈಂಗಿಕವಾಗಿ ಬಳಕೆ ಆಪಾದನೆ : ಶಿಕ್ಷಕನ ಬಂಧನ

ಶ್ರೀನಿವಾಸಪುರ: ತಾಲ್ಲೂಕಿನ ಅಡ್ಡಗಲ್ ಗ್ರಾಮದ ಖಾಸಗಿ ಶಾಲೆಯೊಂದರ ಅಪ್ರಾಪ್ತ ಬಾಲಕಿಯೊಬ್ಬಳನ್ನು ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡ ಆಪಾದನೆ ಮೇಲೆ ಶಾಲೆಯ ಶಿಕ್ಷಕ ಶಿವಕುಮಾರ್ ಅವರನ್ನು ಗೌನಿಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಅಡ್ಡಗಲ್ ಗ್ರಾಮದ ಆದರ್ಶ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ನನ್ನ ಮಗಳು, ಮನೆಗೆ ಬಂದು ಹೊಟ್ಟೆ ನೋವೆಂದು ಹೇಳಿದಳು. ಚಿಂತಾಮಣಿ ಆಸ್ಪತ್ರೆಯಲ್ಲಿ ತೋರಿಸಿದೆವು. ವೈದ್ಯರು ಸ್ಕ್ಯಾನಿಂಗ್ ಮಾಡಿಸಲು ಹೇಳಿದರು. ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭ ಧರಿಸಿರುವ ವಿಷಯ ತಿಳಿದು ಬಂತು. ಆ ಬಗ್ಗೆ ವಿಚಾರಿಸಿದಾಗ ಅದೇ ಶಾಲೆಯ ಶಿಕ್ಷಕ ಶಿವಕುಮಾರ್, ಸುಮಾರು 9 ತಿಂಗಳಿಂದ ಶಾಲೆ ಬಿಟ್ಟನಂತರ ಬಾಲಕಿಯನ್ನು ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ತಿಳಿದುಬಂದಿತು. ನನ್ನ ಮಗಳು ಗರ್ಭ ಧರಿಸಲು ಕಾರಣನಾದ ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಾಲಕಿ ತಂದೆ ಶನಿವಾರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಗೌನಿಪಲ್ಲಿ ಪೊಲೀಸರು ಆರೋಪಿ ಶಿಕ್ಷಕ ಶಿವಕುಮಾರ್‍ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.