HOLY ROSARY CHURCH, KUNDAPUR – 450 th JUBILEE SOUVENIR 2021

ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ಕುರಿತು ಕಾರ್ಯಗಾರ

ದೀಕ್ಷಾರಂಭ 2023 ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಕಾರ್ಯಕ್ರಮದ ನಾಲ್ಕನೇ ದಿನವಾದ 26 ಆಗಸ್ಟ್ 2023 ರಂದು ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ಕುರಿತು ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಫಿನ್ ಕ್ಯೂರಿಯಸ್ ಸಂಸ್ಥೆ ಬೆಂಗಳೂರು ಇದರ ಸಂಸ್ಥಾಪಕರಾದ ಸಿಎ ಗಣೇಶ್ ಶೆಟ್ಟಿ ಆಗಮಿಸಿ ವಿಷಯದ ಕುರಿತು ಮಾತನಾಡಿದರು ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ವಿಷಯಕ್ಕೆ ಸಂಬಂಧಿಸಿದಂತೆ ಇರುವ ವಿಪ್ರಲ ಅವಕಾಶವನ್ನು ತೆರೆದಿಟ್ಟರು. ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟಾಕ್ಸಿಶನ್ ಕೋರ್ಸ್ ವಾಣಿಜ್ಯ ಮತ್ತು ನಿರ್ವಹಣೆ ವಿಭಾಗದ ವಿದ್ಯಾರ್ಥಿಗಳಿಗೆ ಸೀಮಿತವಾಗಿರದೆ ಕಂಪ್ಯೂಟರ್ ಸೈನ್ಸ್ ಪದವೀಧರರು ತೆಗೆದುಕೊಳ್ಳಬಹುದು ಎನ್ನುವುದರ ಬಗ್ಗೆ ಸ್ಪಷ್ಟ ವಿವರಣೆ ನೀಡಿದರು ಇದಕ್ಕೆ ಸಂಬಂಧಿಸಿದಂತೆ ಟೆಕ್ನೋ ಫಂಕ್ಷನ್ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ವಾಣಿಜ್ಯ ಜೊತೆ ಜೊತೆಯಲ್ಲಿ ಹೇಗೆ ಕಾರ್ಯಚರಿಸುತ್ತದೆ ಎನ್ನುವುದರ ಕುರಿತು ವಿಸ್ತಾರವಾಗಿ ವಿವರಿಸಿದರು. ಐ ಎಂ ಜೆ ವಿದ್ಯಾಸಂಸ್ಥೆ ಮತ್ತು ಫಿನ್ ಕ್ಯೂರಿಯಸ್ ಸಂಸ್ಥೆಯ ನಡುವೆ ಶೈಕ್ಷಣಿಕ ಒಡಂಬಡಿಕೆ ಇದ್ದು ಕುಂದಾಪುರದಲ್ಲಿ ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ಕೋರ್ಸ್ ನೀಡುತ್ತಿರುವ ಏಕೈಕ ಪದವಿ ಕಾಲೇಜು ಆಗಿದೆ. ಈ ಕೋರ್ಸ್ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೂ ಲಭ್ಯವಿದ್ದು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಪ್ರತಿ ವಿದ್ಯಾರ್ಥಿಗಳು ಉದ್ಯೋಗ ಖಾತರಿ ನೆರವನ್ನು ಸಂಸ್ಥೆ ನೀಡುತಿದೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್, ಉಪ ಪ್ರಾಂಶುಪಾಲರಾದ ಪ್ರೊ. ಜಯಶೀಲ್ ಕುಮಾರ್ ಹಾಗೂ ಉಪನ್ಯಾಸಕರು ಉಪಸಿತರಿದ್ದರು ಪಾವನ ಎಂ ರವರು ಗಣ್ಯರನ್ನು ಉಪಚರಿಸಿದರು.

ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯುತ್ಸವ ಏರ್ಪಾಡು

ಶ್ರೀನಿವಾಸಪುರ: ಪಟ್ಟಣದಲ್ಲಿ ತಾಲ್ಲೂಕು ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೆ.2 ರಂದು ಬೆಳಿಗ್ಗೆ 10 ಗಂಟೆಗೆ ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯುತ್ಸವ ಏರ್ಪಡಿಸಲಗಿದೆ ಎಂದು ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲರೆಡ್ಡಿ ತಿಳಿಸಿದರು.
ಪಟ್ಟಣದ ಭೈರವೇಶ್ವರ ವಿದ್ಯಾ ನಿಕೇತನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಕೆಂಪೇಗೌಡರ ಜಯಂತ್ಯುತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಯಿಂದ ಮುಳಬಾಗಿಲು ವೃತ್ತದಿಂದ ಮೆರವಣಿಗೆ ಹಾಗೂ ಮಧ್ಯಾಹ್ನ 12 ಗಂಟೆಗೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ, ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಎಂ.ಎಲ್.ಅನಿಲ್ ಕುಮಾರ್, ಮಾಜಿ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ, ರಾಜ್ಯ ಮಾವು ಮಹಾ ಮಂಡಳಿ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ಡಿ.ಕೆ.ರಮೇಶ್, ಯಲವಹಳ್ಳಿ ರಮೇಶ್, ಟಿ.ಕೋನಪ್ಪರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.
ಟ್ರಸ್ಟ್‍ನ ಮಾಜಿ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ಮಾತನಾಡಿ, ಒಕ್ಕಲಿಗ ಸಮುದಾಯದ ಸಾಧಕರಾದ ಎಂ.ಶ್ರೀರಾಮರೆಡ್ಡಿ, ಬಿ.ಎನ್.ರಮೇಶ್, ಡಿ.ದೇವರಾಜ್, ಎಂ.ಎನ್.ಅನುಚೇತ್, ಬಿ.ಎಲ್.ನಾಗೇಶ್, ಸುಭಾಷ್, ವಸಂತ ಕುಮಾರ್, ಎ.ಎನ್.ಕೃಷ್ಣಾರೆಡ್ಡಿ, ಕೆ.ಎಸ್.ನಾಗರಾಜ್ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಭೈರವೇಶ್ವರ ವಿದ್ಯಾ ನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಮಾತನಾಡಿ, ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಯಿಂದ ಆಗಮಿಸುವ ಕೆಂಪೇಗೌಡರ ಭಾವ ಚಿತ್ರ ಹೊತ್ತ ಪಲ್ಲಕಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಈ ಸಂದರ್ಭದಲ್ಲಿ ಕಲಾವಿದರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಕಲಾ ಕ್ಷೇತ್ರಗಳಲ್ಲಿನ ಕಲಾವಿದರು ಮೆರವಣಿಗೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ. ಜಯಂತ್ಯುತ್ಸವ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿದ್ದು, ಸಮಾಜದ ಎಲ್ಲ ಸಮುದಾಯದ ಜನರೂ ಭಾಗವಹಿಸುವಂತೆ ಕೋರಲಾಗಿದೆ ಎಂದು ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆ ಪರಿಷ್ಕರಣೆ 

ಶ್ರೀನಿವಾಸಪುರ : ಶ್ರೀನಿವಾಸಪುರ ತಾಲ್ಲೂಕಿನ ಸ್ಥಿರಾಸ್ತಿಗಳ ಮಾರುಕಟ್ಟೆ ದರಗಳನ್ನು 2023-24ನೇ ಸಾಲಿನ ತಾಲೂಕು ಮಾರುಕಟ್ಟೆ ಮೌಲ್ಯಮಾಪನ ಉಪ ಸಮಿತಿ ಸಭೆಯಲ್ಲಿ ಪರಿಷ್ಕರಿಸಲಾಗಿದೆ. ಪರಿಷ್ಕರಿಸಿದ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರಗಳ ಕರಡು ಪ್ರತಿಯನ್ನು ಸಾರ್ವಜನಿಕ ಸಲಹೆ ಸೂಚನೆ ಮತ್ತು ಆಕ್ಷೇಪಣೆಗಳಿಗಾಗಿ ಶ್ರೀನಿವಾಸಪುರ ಉಪ ನೊಂದಣಿ ಕಚೇರಿಯಲ್ಲಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಸಲಹೆ ಸೂಚನೆ ಆಕ್ಷೇಪಣೆ ಇದ್ದರೆ ಸೆಪ್ಟೆಂಬರ್ 14ರ ಒಳಗೆ ಶ್ರೀನಿವಾಸಪುರ ಉಪ ನೊಂದಣಾ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ, ಆಸ್ತಿ ಮೌಲ್ಯ ಮಾಪನ ಸಮಿತಿಗೆ ಲಿಖಿತ ರೂಪದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಶ್ರೀನಿವಾಸಪುರ ಉಪ ನೊಂದಣಾ ಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಜೂನಿಯರ್ ರೆಡ್‍ಕ್ರಾಸ್ ಸಂಘದ ಉದ್ಘಾಟನೆ

ಕುಂದಾಪುರ: ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಇಲ್ಲಿ ಜೂನಿಯರ್ ರೆಡ್‍ಕ್ರಾಸ್ ಸಂಘದ ಉದ್ಘಾಟನೆಯು ಸಂತ ಮೇರಿ ಹಾಗೂ ಹೋಲಿ ರೋಜರಿ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೇಜ್ ಶಾಂತಿ ಡಿಸೋಜಾರವರು ವಹಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅತಿಥಿಗಳನ್ನು ಸ್ವಾಗತಿಸಿದರು.
ಕುಂದಾಪುರ ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ ರೆಡ್‍ಕ್ರಾಸ್ ಸಂಸ್ಥೆಯ ಧ್ಯೇಯೊದ್ದೇಶಗಳು ಹಾಗೂ ಮೂಲಭೂತ ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಇನ್ನೋರ್ವ ಮುಖ್ಯ ಅತಿಥಿ ಕುಂದಾಪುರ ರೆಡ್‍ಕ್ರಾಸ್ ಸಂಸ್ಥೆಯ ಖಜಾಂಜಿ ಶ್ರೀ ಶಿವರಾಮ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ರೆಡ್‍ಕ್ರಾಸ್‍ನ ಪ್ರತಿಜ್ಞಾ ವಿಧಿ ಭೋಧಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ರೆಡ್‍ಕ್ರಾಸ್ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಡಾ. ಸೋನಿ ಡಿ’ಕೋಸ್ಟಾ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಶುಚಿತ್ವದ ಕುರಿತಾದ ಮಾಹಿತಿಯನ್ನು ನೀಡಿದರು.
ಶಾಲಾ ಆಡಳಿತ ಮಂಡಳಿಯ ಸದಸ್ಯರೂ ಆದ ಸೋನಿ ಡಿ’ಕೋಸ್ಟಾರವರ ಸಮಾಜ ಸೇವೆಗಾಗಿ ್ಲ ಶಾಲಾವತಿಯಿಂದ ಅವರನ್ನು ಸನ್ಮಾನಿಸಲಾಯಿತು. ರೆಡ್‍ಕ್ರಾಸ್ ಸಂಸ್ಥೆಯ ಸದಸ್ಯರಾದ ಶ್ರೀ ಗಣೇಶ್ ಆಚಾರ್‍ರವರು ಉಪಸ್ಥಿತರಿದ್ದರು. ಜೂನಿಯರ್ ರೆಡ್‍ಕ್ರಾಸ್‍ನ ಅಧ್ಯಕ್ಷೆ ಕುಮಾರಿ ಧನ್ಯಶ್ರೀಯವರಿಗೆ ರೆಡ್‍ಕ್ರಾಸ್‍ನ ಬ್ಯಾಡ್ಜ್ ನೀಡಲಾಯಿತು.
ಶಿಕ್ಷಕಿ ಕುಮಾರಿ ರಂಜಿತಾರವರು ಸನ್ಮಾನಿತರನ್ನು ಪರಿಚಯಿಸಿದರು. ಶಿಕ್ಷಕಿ ಹಾಗೂ ಜೂನಿಯರ್ ರೆಡ್‍ಕ್ರಾಸ್‍ನ ಸಂಯೋಜಕಿ ಶ್ರೀಮತಿ ನಿಖಿತಾ ಶೆಟ್ಟಿಯವರು ವಂದನಾರ್ಪಣೆಗೈದರು. ಈ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಮಮತಾರವರು ನಿರೂಪಿಸಿದರು.

ಶ್ರೀನಿವಾಸಪುರ ಬೆಸ್ಕಾಂ ಇಲಾಖೆ ಮುಂಭಾಗದಲ್ಲಿ ವಿದ್ಯುತ್‍ನಲ್ಲಿ ಅಡಚಣೆ ಸರಿಪಡಿಸುವಂತೆ ಕಛೇರಿ ಬಳಿ ಪ್ರತಿಭಟನೆ

ಶ್ರೀನಿವಾಸಪುರ 2 : ಪಟ್ಟಣದ ಬೆಸ್ಕಾಂ ಇಲಾಖೆ ಮುಂಭಾಗ ಬುಧವಾರ ಕರ್ನಾಟಕ ರಾಜ್ಯ ಹಸಿರು ಸೇನೆ ಸಂಘದವತಿಯಿಂದ ವಿದ್ಯುತ್‍ನಲ್ಲಿ ಅಡಚಣೆ ಸರಿಪಡಿಸುವಂತೆ ಕಛೇರಿ ಬಳಿ ಪ್ರತಿಭಟನೆ ನಡೆಸಿ ಎಇಇ ಅಧಿಕಾರಿ ರಾಮತೀರ್ಥರವರಿಗೆ ಮನವಿ ಪತ್ರನೀಡಿದರು.
ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಮಾತನಾಡಿ ಸರ್ಕಾರ ರೈತರ ಪಂಪುಸೆಟ್‍ಗಳಿಗೆ ಏಳು ತಾಸು ವಿದ್ಯುತ್ ನೀಡುತ್ತವೆಂದು ಹೇಳಿದ್ದರು ಸಹ ಈಗ ಮೂರು ತಾಸು ಸಹ ವಿದ್ಯುತ್ ನೀಡುತ್ತಿಲ್ಲ ಇದರಿಂದ ತೋಟಗಾರಿಕೆ ಬೆಳೆಗಳಿಗೆ ತೊಂದರೆಯಾಗಿದ್ದು ಬೆಳೆಗಳು ಒಣಗುತ್ತಿವೆ.
ಲೋಡ್ ಶೆಡ್ಡಿಂಗ್ ನೆಪದಲ್ಲಿ ಸಾಯಂಕಾಲ ವಿದ್ಯುತ್‍ನ್ನು ಕಡಿತಗೊಳಿಸಿ ವಿದ್ಯಾರ್ಥಿಗಳಿಗೆ ಓದಿಕೊಳ್ಳಲು ತುಂಬಾ ಅನಾನುಕೂಲವಾಗುತ್ತಿದೆ ಮತ್ತು ವಿದ್ಯುತ್‍ನ್ನು ಸರಿಯಾಗಿ ಸಮರ್ಪಕವಾಗಿ ನೀಡುತ್ತಿಲ್ಲ . ಆದ ಕಾರಣ ಶ್ರೀನಿವಾಸಪುರ ತಾಲೂಕಿನ ರೈತರ ಪಂಪುಸೆಟ್‍ಗಳಿಗೆ ಮತ್ತು ಸಾರ್ವಜನಿಕರಿಗೆ ಸಮರ್ಪಕವಾದ ವಿದ್ಯುತ್ ಸರಬರಾಜು ಮಾಡುತ್ತಿಲ್ಲ.
ಶ್ರೀನಿವಾಸಪುರ ಬೆಸ್ಕಾಂ ಇಲಾಖೆ ಲೋಡ್ ಶೆಡ್ಡಿಂಗ್ ನೆಪದಲ್ಲಿ ರೈತರ ಪಂಪು ಸೆಟ್‍ಗಳಿಗೆ ನೀಡುತ್ತಿರುವ ವಿದ್ಯುತ್ ಮತ್ತು ಸಾರ್ವಜನಿಕರಿಗೆ ನೀಡುತ್ತಿರುವ ವಿದ್ಯುತ್‍ನಲ್ಲಿ ತೊಂದರೆ ನೀಡುತ್ತಿದ್ದು , ಸರ್ಕಾರವು ರೈತರ ಪಂಪುಸೆಟ್‍ಗಳಿಗೆ ಸರ್ಮಪಕವಾಗಿ ವಿದ್ಯುತ್ ಸರಬಾರಜು ಮಾಡಿ ಸರಿಪಡಿಸುವಂತೆ ಒತ್ತಾಯಿಸಿದರು .
ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ತಾಲೂಕು ಅಧ್ಯಕ್ಷ ಎನ್.ಜಿ.ಶ್ರೀರಾಮಿರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಬೈರೆಡ್ಡಿ, ರೈತಮುಖಂಡರಾದ ರಾಮೇಗೌಡ, ನಾರಾಯಣಸ್ವಾಮಿ, ವೀರಪ್ಪರೆಡ್ಡಿ, ಗಂಗಾಧರ್, ಹೆಬ್ಬಟ್ಟ ರಮೇಶ್, ಶ್ರೀಧರ್, ನಾಗದೇನಹಳ್ಳಿ ಚಂದ್ರಶೇಖರ್, ಅಬ್ಬಣಿ ಶ್ರೀನಿವಾಸ್ ಇದ್ದರು.
30 ಎಸ್‍ವಿಪುರ್ 2 : ಪಟ್ಟಣದ ಬೆಸ್ಕಾಂನ ಎಇಇ ಅಧಿಕಾರಿ ರಾಮತೀರ್ಥರವರಿಗೆ ಕರ್ನಾಟಕ ರಾಜ್ಯ ಹಸಿರು ಸೇನೆ ಸಂಘದವತಿಯಿಂದ ಮನವಿ ಪತ್ರ ನೀಡಲಾಯಿತು.

ಮಹಿಳೆಯರು ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು : ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಮಹಿಳೆಯರು ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು. ಯೋಜನೆ ಲಾಭ ಪಡೆಯಲು ತಪ್ಪದೆ ಅರ್ಜಿ ಸಲ್ಲಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಬುಧವಾರ ಏರ್ಪಡಿಸಿದ್ದ ಗೃಹ ಲಕ್ಷ್ಮಿ ಯೋಜನೆ ಜಾರಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಈ ಯೋಜನೆಯಿಂದ ಬಡ ಕುಟುಂಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ನೆರವು ದೊರೆತಂತಾಗಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಸೂರಿಲ್ಲದೆ ಪರಿತಪಿಸುತ್ತಿರುವ ಎಲ್ಲ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುವುದು. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು. ಅಗತ್ಯ ಇರುವ ಕಡೆ ಒಳಚರಂಡಿ ನಿರ್ಮಿಸಲಾಗುವುದು. ಒಳ ಚರಂಡಿ ನಿರ್ವಹಣೆ ಸರಿಯಿಲ್ಲದೆ ಕೆಲವು ಕಡೆ ದುರ್ನಾತ ಬೀರುತ್ತಿದೆ. ಅದನ್ನು ಸರಿಪಡಿಸಲಾಗುವುದು. ತಾಲ್ಲೂಕಿನಿಂದ ನೆರೆಯ ಆಂಧ್ರಪ್ರದೇಶಕ್ಕೆ ಹರಿದು ಹೋಗುವ ಮಳೆ ನೀರನ್ನು ದಕ್ಷಿಣಾಭಿಮುಖವಾಗಿ ಹರಿಸಿ, ರೋಣೂರು ಕೆರೆ ಸೇರಿದಂತೆ, ಅಮಾನಿಕೆರೆಗೆ ಹರಿಸಲಾಗುವುದು. ಕೆರೆ ಅಭಿವೃದ್ಧಿಪಡಿಸಿ ಬೋಟಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್ ಮಾತನಾಡಿ, ಗೃಹ ಲಕ್ಷ್ಮಿ ಯೋಜನೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಡ ಕುಟುಂಬಗಳ ಪಾಲಿಗೆ ವರದಾನವಾಗಿದೆ. ಯೋಜನೆ ಹಣದಿಂದ ಮಹಿಳೆಯರಿಗೆ ಮಾತ್ರವಲ್ಲದೆ, ಕುಟುಂಬದ ಎಲ್ಲ ಸದಸ್ಯರಿಗೆ ಅನುಕೂಲವಾಗುತ್ತದೆ. ಇನ್ನೂ ಅರ್ಜಿ ಸಲ್ಲಿಸದಿದಿರುವ ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ವಿ.ನಾಗರಾಜು, ಎನ್.ಶಂಕರ್, ನಾಗರಾಜ್, ಸಬ್ಬೀರ್, ಆನಂದ್, ಎಂ.ಶ್ರೀನಿವಾಸನ್, ಕೆ.ಜಿ.ರಮೇಶ್, ಮನು ಇದ್ದರು.

ರಾಜಕೀಯ ದಿಗ್ಗಜರಿಂದ ಕ್ರೀಡಾ ಚಟುವಟಿಕೆಗಳಿಗೆ ನೆರವಾಗುವಂತಹ ಪುಸ್ತಕಗಳ, ಕೈಪಿಡಿಗಳ ಬಿಡುಗಡೆ

ಕೋಲಾರ ತಾಲ್ಲೂಕಿನ ಕ್ಯಾಲನೂರು ಕೆಪಿಎಸ್ ಶಾಲೆಯ ದೈಹಿಕ ಶಿಕ್ಷಕ ಡಾ.ಜಿ.ಎಂ.ಶ್ರೀನಿವಾಸ್ ಅವರು ಕ್ರೀಡಾಚಟುವಟಿಕೆಗಳಿಗೆ ನೆರವಾಗಲು ಬರೆದಿರುವ ನಾಲ್ಕು ಪುಸ್ತಕಗಳಾದ ಥ್ರೋಬಾಲ್ ನವೀನ ನಿಯಮಗಳು, ಕಬಡ್ಡಿ ನವೀನ ನಿಯಮಗಳು, ಕರಾಟೆ ಕೈಪಿಡಿ ಮತ್ತು ಸ್ಪರ್ಧಾತ್ಮಕ ಸಾಹಿತ್ಯ ಕೈಪಿಡಿಗಳನ್ನು ಮೂಡಬಿದರೆಯಲ್ಲಿ ನಡೆದ ರಾಜ್ಯಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಭಾಧ್ಯಕ್ಷ ಅಬ್ದುಲ್ ಖಾದರ್, ಎಂಎಲ್‍ಸಿ ಅರುಣ ಷಹಾಪುರ,ಪುಟ್ಟಣ್ಣ, ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಸ್.ಚೌಡಪ್ಪ, ಮುಡಬಿದರೆ ಭಾವನಾ ಮತ್ತಿತರರಿದ್ದರು.

ಕುಂದಾಪುರದಲ್ಲಿ ಎಕಾ ಕಾಲದಲ್ಲಿ ಮೂರು ಕಡೆ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ – ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಶೋಭಾಲಕ್ಷ್ಮೀ ಚಾಲನೆ

ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ತಾಲೂಕು ಆಡಳಿತ, ಮಕ್ಕಳ ಅಭಿವೃದ್ದಿ ಇಲಾಖೆ ಕುಂದಾಪುರ ತಾಲೂಕು, ಕುಂದಾಪುರ ಪುರಸಭೆ ವತಿಯಿಂದ ನಡೆದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯನ್ನು ಕುಂದಾಪುರದ ತಹಶೀಲ್ದಾರ್ ಶೋಭಾಲಕ್ಷ್ಮೀ ಉದ್ಘಾಟಿಸಿದರು.

   ಉದ್ಘಾಟನೆ ಮಾಡಿದ ಅವರು ಮಹಿಳೆಯರಿಗೆ ನಾ- ನಾಯಕಿ ಎಂದು ಪುನರುಚ್ಚಸಿ ಹೇಳಿ ಎಂದು ಹೇಳಿದರು. ಒಂದು ಕುಟುಂಬದಲ್ಲಿ ಹಾಲಿಗೆ ದಿನ ಒಂದರಂತೆ ರೂ.೫೦ ಬೇಕು ಅದಕ್ಕೆ ನೀವು ಯಾರ ಹತ್ತಿರವೂ ಕೇಳಬೇಕಾಗಿಲ್ಲ. ನಾರಿಯರಿಗೆ ಇದರಿಂದ ಆರ್ಥಿಕ ಸಹಾಯವಾಗುತ್ತೆ, ನಾರಿ ಅಂದರೆ ಲಕ್ಷ್ಮಿ, ನಾರೀಯರ ಸಬಲೀಕರಣವಾಗ ಬೇಕು” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯ 155 ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿ ಹಾಗೂ ಪ್ರತಿ ನಗರ ಸ್ಥಳೀಯ ಸಂಸ್ಥೆಯ 52 ವಾರ್ಡ್‌ಗಳಲ್ಲಿ ಹಾಗೂ 6 ತಾಲೂಕು ಕೇಂದ್ರಗಳಲ್ಲಿ ಮತ್ತು 1 ಜಿಲ್ಲಾ ಕೇಂದ್ರದಲ್ಲಿ ಸೇರಿದಂತೆ ಒಟ್ಟು 114 ಸ್ಥಳಗಳಲ್ಲಿ ಏಕ ಕಾಲದಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. 2.48 ಸಾವಿರ ಫಲಾನುಭವಿಗಳು ಈಗಾಲೇ ನೋಂದಾಯಿಸಿಕೊಂಡಿದ್ದಾರೆ. ನೀವು ಈಗ ನೊಂದಾಯಿಸಿ ಕೊಂಡವರಿಗೆ ಈ ಯೋಜನೇಯನ್ನು ತಿಳಿಸಬೇಕು ಎಂದು ಅವಾಗ ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳಾ ಸಬಲೀಕರಣಕ್ಕೆ ಪೂರಕವಾಗುತ್ತದೆ’ ಎಂದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ ವರ್ಣೆಕರ್, ಪುರಸಭಾ ಮುಖ್ಯಾಧಿಕಾರಿ ಮಂಜುನಾಥ, ಪುರಸಭಾ ಸದಸ್ಯ ಶ್ರೀಧರ ಶೇರೆಗಾರ್, ದೇವಕಿ ಸಣ್ಣಯ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ, ಕಲಾವತಿ ಮತ್ತು ಇನ್ನಿತರ ಕಾಂಗ್ರೆಸ್ ನಾಯಕರುನ್ಉಪಸ್ಥಿತರಿದ್ದರು.ಕಾಂಗ್ರೆಸ್ ಕಾರ್ಯಕರ್ತರು ಮಹಿಳೆಯರಿಗೆ ಸಂತೋಷವನ್ನು ಇಮ್ಮಡಿಕೊಳಿಸಲು ಸಿಹಿ ಹಂಚಿ ಸಂತೋಷವನ್ನು ವ್ಯಕ್ತಪಡಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಯೋಜನಾಧಿಕಾರಿ ಅನುರಾಧ ಹಾದಿಮನೆ ಸ್ವಾಗತಿಸಿದರು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ್ ಆರ್ ವಂದಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಒಂದೇ ಕಾಲದಲ್ಲಿ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಮತ್ತು ಕಲಾಮಂದಿರದಲ್ಲಿ ಒಟ್ಟಾರೆ ಮೂರು ಕಡೆ ಗೃಹಲಕ್ಷ್ಮೀ ಯೋಜನೆ ಉದ್ಘಾಟನ ಕಾರ್ಯಕ್ರಮ ನದೆಯಿತು.

ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದ ಛಾಯಚಿತ್ರಗಳು

ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಛಾಯಚಿತ್ರಗಳು

MITK, Moodlakatte Tuberculosis & AIDs Awareness Program/ಎಂಐಟಿ ಕುಂದಾಪುರ : ಏಡ್ಸ್ ಮತ್ತು ಟಿಬಿ ನಿಯಂತ್ರಣ ಜಾಗೃತಿ ಕಾರ್ಯಕ್ರಮ

NSS & YRC unit of MIT Kundapura in association with Rotary club Kundapura district AIDs  and TB Control  division Udupi, organized Tuberculosis  and AID’s awareness program at MIT Kundapura.

President of the Rotary Mr. Nagaraj Naik spoke the occasion. Senior Treatment Supervisor Sri Gurudas of General Hospital Kundapura spoke on the control of TB and for AID’s control Personnel Counselor Smt. Nalinakshi of general Hospital Kundapura gave the awareness to the students. Principal of the collage Dr. Abdul Kareem, Vice Principal Prof. Melwin D’Souza Brand Building Director Dr. Ramkrishna Hegde, Institute NSS Co-ordinator Prof. Balnageshwar S and YRC Co-Ordinator and coordinator of the programme Prof Varun Kumar Ex. Rotary Secretary Naveen D’Souza ,  Secretary Prashanth Hawaldar  member Geetha Mukundan, Staff & students were present the occasion. Prof. Akshatha Naik hosted the programme.  

ಎಂಐಟಿ ಕುಂದಾಪುರ : ಏಡ್ಸ್ ಮತ್ತು ಟಿಬಿ ನಿಯಂತ್ರಣ ಜಾಗೃತಿ ಕಾರ್ಯಕ್ರಮ

ಎಂಐಟಿ ಕುಂದಾಪುರದ ಎನ್‌ಎಸ್‌ಎಸ್ ಮತ್ತು ವೈಆರ್‌ಸಿ ಘಟಕವು ರೋಟರಿ ಕ್ಲಬ್ ಕುಂದಾಪುರ ಜಿಲ್ಲಾ ಏಡ್ಸ್ ಮತ್ತು ಟಿಬಿ ನಿಯಂತ್ರಣ ವಿಭಾಗ ಉಡುಪಿಯ ಸಹಯೋಗದಲ್ಲಿ ಕ್ಷಯ ಮತ್ತು ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಎಂಐಟಿ ಕುಂದಾಪುರದಲ್ಲಿ ಆಯೋಜಿಸಿತು.

ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ನಾಗರಾಜ ನಾಯ್ಕ ಮಾತನಾಡಿದರು. ಜನರಲ್ ಆಸ್ಪತ್ರೆ ಕುಂದಾಪುರದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಶ್ರೀ ಗುರುದಾಸ್ ಅವರು ಟಿಬಿ ನಿಯಂತ್ರಣದ ಕುರಿತು ಮಾತನಾಡಿದರು ಮತ್ತು ಸಿಬ್ಬಂದಿ ಸಲಹೆಗಾರರಾದ ಕುಂದಾಪುರ ಜನರಲ್ ಆಸ್ಪತ್ರೆಯ ಶ್ರೀಮತಿ. ನಳಿನಾಕ್ಷಿ ಅವರು ವಿದ್ಯಾರ್ಥಿಗಳಿಗೆ ಏಡ್ಸ್/ಎಚ್‌ಐವಿ ಕುರಿತು ಜಾಗೃತಿ ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ, ಉಪಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿ’ಸೋಜಾ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗಡೆ, ಸಂಸ್ಥೆಯ ಎನ್‌ಎಸ್‌ಎಸ್ ಸಂಯೋಜಕ ಪ್ರೊ.ಬಾಲನಾಗೇಶ್ವರ್ ಎಸ್ ಮತ್ತು ವೈಆರ್‌ಸಿ ಸಂಯೋಜಕ ಹಾಗೂ ಕಾರ್ಯಕ್ರಮದ ಸಂಯೋಜಕ ಪ್ರೊ.ವರುಣ್ ಕುಮಾರ್, ಮಾಜಿ ರೋಟರಿ ಕಾರ್ಯದರ್ಶಿ ನವೀನ್ ಡಿಸೋಜ, ಹಾಲಿ ಕಾರ್ಯದರ್ಶಿ ಪ್ರಶಾಂತ್ ಹವಾಲ್ದಾರ್, ಸದಸ್ಯೆ ಗೀತಾ ಮುಕುಂದನ್, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೊ.ಅಕ್ಷತಾ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.