HOLY ROSARY CHURCH, KUNDAPUR – 450 th JUBILEE SOUVENIR 2021

ಸೇಂಟ್ ಆಗ್ನೆಸ್ ಪಿಯು ಕಾಲೇಜು ವಾರ್ಷಿಕ ಪರೀಕ್ಷೆಯ ಸಾಧಕರಿಗೆ ಸನ್ಮಾನ – ‘ಕೆರಿಯರ್ ಎಕ್ಸ್‌ಪೋ’ ಕಾರ್ಯಕ್ರಮ

“ಉತ್ತಮ ಕೆಲಸವನ್ನು ಮಾಡಲು ಏಕೈಕ ಮಾರ್ಗವೆಂದರೆ ನೀವು ಮಾಡುವ ಕೆಲಸವನ್ನು ಪ್ರೀತಿಸುವುದು. ನೀವು ಇನ್ನೂ ಕೆಲಸವನ್ನು ಅದನ್ನು ಪಡೆದುಕೊಳ್ಳದಿದ್ದರೆ ಅದನ್ನು, ಹುಡುಕುತ್ತಲೇ ಇರಿ”

ಸೇಂಟ್ ಆಗ್ನೆಸ್ ಪಿಯು ಕಾಲೇಜು ವಾಣಿಜ್ಯ ಮತ್ತು ಕಲಾ ವಿಭಾಗಗಳ ಮಾರ್ಚ್ 2023 ರ II PUC ವಾರ್ಷಿಕ ಪರೀಕ್ಷೆಯ ಸಾಧಕರಿಗೆ ಜುಲೈ 22, 2023 ರಂದು ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 9.15 ಕ್ಕೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು ಹೇಳಿದರು.

ಈ ಕಾರ್ಯಕ್ರಮವು ‘ಕೆರಿಯರ್ ಎಕ್ಸ್‌ಪೋ’ ಜೊತೆಗೆ ವಿದ್ಯಾರ್ಥಿಗಳಿಗೆ ತೆರೆದಿರುವ ವಿವಿಧ ವೃತ್ತಿ ಮಾರ್ಗಗಳ ಬಗ್ಗೆ ಎಚ್ಚರವಹಿಸಲು ಅನುವು ಮಾಡಿಕೊಡುತ್ತದೆ. ಕಾರ್ಯಕ್ರಮವು Ms ಕ್ಯಾರೊಲಿನ್ ಡಿಕುನ್ಹಾ ಮತ್ತು ತಂಡದ ನೇತೃತ್ವದ ಭಾವಪೂರ್ಣ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು.

ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಟಾಪರ್‌ಗಳು, ಉತ್ತಮ ಅಂಕ ಗಳಿಸಿದವರು ಮತ್ತು ಡಿಸ್ಟಿಂಕ್ಷನ್ ಪಡೆದವರನ್ನು ಪ್ರಾಂಶುಪಾಲರಾದ ಶ್ರೀ ನೊರಿನ್ ಡಿಸೋಜಾ, ಮುಖ್ಯ ಅತಿಥಿಗಳಾದ ಶ್ರೀಮತಿ ಸಂಧ್ಯಾನಾಯಕ್, ಶ್ರೀಮತಿ ಶಾಂತಿ ನಜರೆತ್ ಮತ್ತು ಶ್ರೀ ರಾಡ್ನಿ ವಾಝೋನೂರೆಡ್ ವಿದ್ಯಾರ್ಥಿಗಳಿಗೆ ಅಸಾಧಾರಣ ಶೈಕ್ಷಣಿಕ ಸಾಧನೆಗಾಗಿ ಶ್ರೇಷ್ಠ ಪ್ರಮಾಣಪತ್ರವನ್ನು ನೀಡಿದರು.

ಕಲಾ ವಿಭಾಗದಲ್ಲಿ ಟಾಪರ್ ಆದ ಶ್ರೀಮತಿ ಸಂಹಿತಾ ಪ್ರಭು ಮತ್ತು ವಾಣಿಜ್ಯ ವಿಭಾಗದಲ್ಲಿ ಅಗ್ರಮಾನ್ಯರಾದ ಶ್ರೀಮತಿ ರೆನಿಶಾ ವಿಯೋಲಾ ಡಿಸೋಜಾ ತಮ್ಮ ಸ್ಪೂರ್ತಿದಾಯಕ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಪರೀಕ್ಷೆಯಲ್ಲಿ ಅಭೂತಪೂರ್ವ ಶೈಕ್ಷಣಿಕ ಸಾಧನೆಗಾಗಿ ಮಂಗಳೂರು ಸೇಂಟ್ ಆಗ್ನೆಸ್ ಕಾಲೇಜು (ಸ್ವಾಯತ್ತ) ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸಂಧ್ಯಾನಾಯಕ್ ಅವರು ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸಂಧ್ಯಾನಾಯಕ್, ಕಾರ್ಯದರ್ಶಿ ಅಭ್ಯಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಶಾಂತಿ ನಜರೆತ್, ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನ (ಸ್ವಾಯತ್ತ) ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ರೋಡ್ನಿವಾಜ್ ಅವರು ವೃತ್ತಿ ಮಾರ್ಗದರ್ಶನ ಅಧಿವೇಶನದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

“ಸಂಪನ್ಮೂಲ ವ್ಯಕ್ತಿಗಳು ಸರಿಯಾದ ವೃತ್ತಿಯನ್ನು ಆರಿಸಿಕೊಳ್ಳುವುದು ಒಬ್ಬರ ಜೀವನದಲ್ಲಿ ಮಹತ್ವದ ಮತ್ತು ಪ್ರಮುಖ ನಿರ್ಧಾರವಾಗಿದೆ” ಎಂದು ಒತ್ತಿ ಹೇಳಿದರು. ಜೀವನದಲ್ಲಿ ಯಾವುದೇ ವೃತ್ತಿಯನ್ನು ಮುಂದುವರಿಸಲು ಅಗತ್ಯವಾದ ಕಠಿಣ ಪರಿಶ್ರಮ, ಶಿಸ್ತು ಮತ್ತು ಪರಿಕಲ್ಪನೆಯ ಜ್ಞಾನದ ಮೇಲೆ ಒತ್ತು ನೀಡಬೇಕೆಂದು ಹೇಳಿದರು. ಅವರ ತಂಡದಿಂದ ಆತ್ಮವಿಶ್ವಾಸ ಮೂಡಿಸುವ ಚಟುವಟಿಕೆಗಳು ನಡೆದವು.

ಕಾರ್ಯಕ್ರಮವನ್ನು ಮಾನವಿಕ ವಿಭಾಗದ ಎಚ್‌ಒಡಿ ಶ್ರೀಮತಿ ಜ್ಯೋತಿ ಎಂ ಪಿಂಟೋ, ಕಂಪ್ಯೂಟರ್ ಸೈನ್ಸ್ ವಿಭಾಗದ ಎಚ್‌ಒಡಿ ಶ್ರೀಮತಿ ಪ್ರೀಮಾ ಪಿರೇರಾ ಅವರು ಸಂಯೋಜಿಸಿದರು. ಶ್ರೀಮತಿ ಲೊವಿನಾ ಆರನ್ಹಾ, ವಾಣಿಜ್ಯ ವಿಭಾಗದವರು ಸನ್ಮಾನ ಸಮಾರಂಭದ ಜವಾಬ್ದಾರಿಯನ್ನು ವಹಿಸಿಕೊಂಡರು,ಗಣಕ ವಿಜ್ಞಾನ ವಿಭಾಗದ ಶ್ರೀಮತಿ ಶುಭವಾಣಿ ಸ್ವಾಗತಿಸಿದರು.

ಮಾನವಿಕ ವಿಭಾಗದ ಶ್ರೀಮತಿ ಅವಿತಾ ಡಿಸೋಜಾ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಕನ್ನಡ ವಿಭಾಗದ ಶ್ರೀಮತಿ ಶೈಲಜಾ ಧನ್ಯವಾದವಿತ್ತರು.

ಆಟಗಳು ದೈಹಿಕ, ಮಾನಸಿಕವಾಗಿ ಧೈರ್ಯ,ಸ್ಥೈರ್ಯ ಜೀವರಕ್ಷಣಾ ಕೌಶಲ್ಯಗಳನ್ನು ಬೆಳಸುವಂತಾಗುತ್ತದೆ-ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ 1 : ಆಟಗಳು ದೈಹಿಕ, ಮಾನಸಿಕವಾಗಿ ಧೈರ್ಯ,ಸ್ಥೈರ್ಯ ಹಾಗು ಜೀವರಕ್ಷಣಾ ಕೌಶಲ್ಯಗಳನ್ನು ಬೆಳಸುವಂತಾಗುತ್ತದೆ. ಹಾಗು ಕ್ರೀಡೆಗಳಿಂದ ಪ್ರೀತಿ,ಒಗ್ಗಟಿನಬಲ, ಏಕಾಗ್ರತೆ,ಕ್ರಿಯಾಶೀಲತೆ,ಬುದ್ದಿವಂತಿಕೆಯನ್ನು ಚುರುಕುಗೊಳಿಸುವಂತಾಗುತ್ತದೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲೂಕಿನ ರಾಯಲ್ಪಾಡು ಗ್ರಾಮದ ಸರ್ಕಾರಿ ಪ್ರೌಡಶಾಲಾವರಣದಲ್ಲಿ ಸೋಮವಾರ ರಾಯಲ್ಪಾಡು ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ಬೆನ್ನೆಲುಬಾದ ವಿದ್ಯಾರ್ಥಿಗಳು ಕೆಟ್ಟಹವ್ಯಾಸಗಳಿಗೆ ತಮ್ಮ ಅಮೂಲ್ಯವಾದ ಜೀವನವನ್ನು ಬಲಿಕೊಡದೆ ಆರೋಗ್ಯವಂತ ಜೀವನವನ್ನು ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗುಂಡು ಉತ್ತಮ ಸಾಧನೆಯ ಮೂಲಕ ದೇಶದ ಘನತೆ ಗೌರವವನ್ನು ಕಾಪಾಡುವಂತೆ ಕರೆನೀಡಿದರು.
ರಾಯಲ್ಪಾಡು ಗ್ರಾಮದಲ್ಲಿ ನಾನು ಪ್ರಾಥಮಿಕ ಶಾಲೆ ಓದಿರುತ್ತೇನೆ ಎಂದು ಹೇಳಿ ತಮ್ಮ ಶಾಲೆಯ ದಿನಗಳನ್ನು ಸ್ಮರಿಸಿ ಕೊಂಡು , ನಾನು ಪ್ರತಿದಿನ ಯೋಗಾಭ್ಯಾಸವನ್ನು ಮಾಡುತ್ತೇನೆ ನೀವು ಸಹ ಪ್ರತಿ ದಿನ ಯೋಗ ಮತ್ತು ಧ್ಯಾನವನ್ನು ಮಾಡಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತಹೇಳಿದರು.
ತಾಲೂಕಿನ ಸರ್ಕಾರಿ ಶಾಲೆಗಳ ದುರಸ್ಥಿ ಕಾಮಗಾರಿಗಳಿಗಾಗಿ 2ಕೋಟಿ ರೂಗಳ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿ ರಾಯಲ್ಪಾಡು ಶಾಲಾ ಕಾಲೇಜು ಆವರಣದಲ್ಲಿ ಬೇಕಾಗಿರುವ ಮೂಲ ಭೂತ ಸೌಲಭ್ಯ ಕಲ್ಪಸಿಕೊಡುವುದಾಗಿ ಭರವಸೆ ನೀಡಿದರು.
ವಿದಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ ಆಗಬೇಕಾದರೆ ದೈಹಿಕ ಮುಖ್ಯ . ಶಾಲೆಗಳಲ್ಲಿ ವಿಷಯವಾರು ಶಿಕ್ಷಕರು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದದು ದೈಹಿಕ ಶಿಕ್ಷಕರು. ದೇಶದಲ್ಲಿ 143 ಕೋಟಿ ಜನಸಂಖ್ಯೆ ಇದ್ದು, 35 ಕೋಟಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಸಾಮಾನ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು , ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಇಂದಿನ ಸರ್ಕಾರವು ಅದರ ಗಮನಿಸಿ, ಪರಿಹಾರ ನೀಡುತ್ತದೆ ಎಂದು ನಾನು ಭಾವಿಸುತ್ತಿದ್ದಾನೆ ಎಂದರು. ಸಾಮಾನ್ಯವಾಗಿ ಎಲ್ಲಾ ಶಾಲೆಗಳಲ್ಲಿ ದೈಹಿಕ ಶಿಕ್ಷಕ ಭರ್ತಿ ನೀಡಿ ಕ್ರೀಡೆಗಳಿಗೆ ಸರ್ಕಾರಗಳು ವಿಶೇಷ ಪ್ರೋತ್ಸಾಹವನ್ನು ನೀಡಿದರೆ ವಿಶ್ವ ಮಟ್ಟದಲ್ಲಿ ನಡೆಯುವ ಒಲಂಪಿಕ್ ಹಾಗು ಇತರೆ ಕ್ರೀಡಾಕೂಟಗಳಲ್ಲಿ ಎಲ್ಲಾ ದೇಶಗಳನ್ನು ನಮ್ಮ ದೇಶದ ಕ್ರೀಡಾಪಟುಗಳು ಹೆಚ್ಚಿ ಸಾಧನೆ ಮಾಡುತ್ತಾರೆ ಎಂದರು.
ಸಾಮಾನ್ಯವಾಗಿ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ದೈಹಿಕವಾಗಿ ಹಾಗು ಮಾನಸಿಕವಾಗಿ ಭಲಾಡ್ಯರು , ಆ ವಿದ್ಯಾರ್ಥಿಗಳು ಹೋಬಳಿ, ತಾಲೂಕು , ಜಿಲ್ಲಾ , ರಾಜ್ಯ ಮಟ್ಟದಲ್ಲಿ ಗೆಲುವು ಸಾಧನೆ ಮಾಡಲು ಸಾಧ್ಯ ಎಂದರು. ದೇಶದಲ್ಲಿ ನಮ್ಮ ರಾಜ್ಯವು ಶಿಕ್ಷಣ ಕ್ಷೇತ್ರದಲ್ಲಿ 2ನೇ ಸ್ಥಾನದಲ್ಲಿ ಇದೆ ಎಂದು ಮಾಹಿತಿ ನೀಡಿದರು.
ಸರ್ಕಾರದಿಂದ ಸಾಮಾನ್ಯವಾಗಿ ಇಂತಹ ಕಾರ್ಯಕ್ರಮಗಳಿಗೆ ಅನುದಾನ ಬರುವುದಿಲ್ಲ. ಸಂಘ, ಸಂಸ್ಥೆಗಳ ಹಾಗೂ ದಾನಿಗಳ ಬಳಿ ಬಿಕ್ಷೆ ಬೇಡುವ ಪರಿಸ್ಥಿತಿ ಎಂದು ಬೇಸರ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ನಿಮ್ಮ ಜೀವನದ ಗುರಿಯನ್ನು ಮಟ್ಟುವಂತೆ ಸಲಹೆ ನೀಡಿದರು.
ಜಿಂಕಲವಾರಿಪಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮಗಳು ನಡೆಯಿತು. ಕ್ರೀಡಾ ವಿದ್ಯಾರ್ಥಿಗಳಿಗೆ ವಕೀಲ ಕೆ.ವಿ.ಶಿವಾರೆಡ್ಡಿ ಊಟದ ವ್ಯವಸ್ಥೆ ಮಾಡಿದ್ದರು.
ಇಒ ವಿ.ಕೃಷ್ಣಪ್ಪ, ಬಿಇಒ ಉಮಾದೇವಿ, ಜಿ.ಪಂ.ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ ಮಾತನಾಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಲೋಚನ, ಬಿಆರ್‍ಸಿ ಕೆ.ಸಿ.ವಸಂತ, ಇಸಿಒ ಹನುಮೇಗೌಡ, ಪಿಎಸ್‍ಐ ಯೋಗೇಶ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ವೆಂಕಟಸ್ವಾಮಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬೈರೆಡ್ಡಿ, ನೌಕರರ ಸಂಘದಾ ತಾಲೂಕು ಅಧ್ಯಕ್ಷ ಬಂಗವಾದಿ ನಾಗರಾಜ್, ಗೌನಿಪಲ್ಲಿ ಗ್ರಾ.ಪಂ. ಅಧ್ಯಕ್ಷ ಶೇಷಾದ್ರಿ, ಯರ್ರಂವಾರಿಪಲ್ಲಿ ಗ್ರಾ.ಪಂ. ಉಪಾಧ್ಯಕ್ಷ ವೈ.ಆರ್.ಶ್ರೀನಿವಾಸರೆಡ್ಡಿ, ಪಿಡಿಒ ನರೇಂದ್ರಬಾಬು, ಗ್ರಾ.ಪಂ.ಮಾಜಿ ಸದಸ್ಯ ಸಿಮೆಂಟ್‍ನಾರಾಯಣಸ್ವಾಮಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಶಶಿಕುಮಾರ್, ಮುಖಂಡ ಶ್ರೀರಾಮರೆಡ್ಡಿ, ಮದರಂಕಪಲ್ಲಿ ಶಂಕರರೆಡ್ಡಿ, ಆಂಜಿ, ಚಕ್ಕಾ ಲಕ್ಷ್ಮೀನಾರಾಯಣಶೆಟ್ಟಿ, ಸುಬ್ರಮಣಿ, ಕಾವೇರಿ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಮಹೇಶ್, ತಾಲೂಕು ಪ್ರೌಡಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎನ್.ರಾಮಚಂದ್ರ, ಶಾಲೆಯ ಮುಖ್ಯ ಶಿಕ್ಷಕ ಪಿ.ಮಾರಣ್ಣ, ಸಿಆರ್‍ಪಿ ವರದರೆಡ್ಡಿ, ರಾಯಲ್ಪಾಡು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಂ.ಕೆ.ವೆಂಕಟರಮಣ, ಮಂಜೇಶ್ ಹಾಗೂ ಹೋಬಳಿಯ ಎಲ್ಲಾ ಕ್ಲಸ್ಟರ್‍ಗಳ ಸಿಆರ್‍ಪಿಗಳು, ಪ್ರಾಥಮಿಕ , ಪ್ರೌಡಶಾಲೆಗಳ ಶಿಕ್ಷಕ ಸಂಘಗಳ ಪದಾಧಿಕಾರಿಗಳು ಇದ್ದರು.

ಶ್ರೀನಿವಾಸಪುರ:ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಪುರಸಭೆ ಆವರಣದಲ್ಲಿನ ದಾಖಲಾತಿ ಕೇಂದ್ರಗಳ ಪ್ರಯೋಜನ ಪಡೆಯಿರಿ

ಶ್ರೀನಿವಾಸಪುರ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಪಟ್ಟಣದ ಪುರಸಭೆ ಆವರಣದಲ್ಲಿ ಸ್ಥಾಪಿಸಲಾಗಿರುವ ಎರಡು ದಾಖಲಾತಿ ಕೇಂದ್ರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪುರಸಭೆ ಕಂದಾಯ ಅಧಿಕಾರಿ ವಿ.ನಾಗರಾಜ್ ಹೇಳಿದರು.
ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಭಾಗ್ಯಲಕ್ಷಿ ಯೋಜನೆ ಫಲಾನುಭವಿಗಳಿಗೆ, ಫಲಾನುಭವಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಯೋಜನೆ ಲಾಭ ಪಡೆಯುವ ಉದ್ದೇಶದಿಂದ ಎಲ್ಲ ಬ್ರೌಸಿಂಗ್ ಕೇಂದ್ರಗಳ ಮುಂದೆ ಮಹಿಳೆಯರು ಜಾತ್ರೆಯಂತೆ ನೆರೆದಿದ್ದಾರೆ. ದಟ್ಟಣೆ ತಪ್ಪಿಸುವುದಕ್ಕಾಗಿಯೇ ಇಲ್ಲಿ ಎರಡು ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.
ಫಲಾನುಭವಿಗಳು ತಲಾ ರೂ.12 ನೀಡಿ ಹೆಸರು ನೋಂದಾಯಿಸಬಹುದು. ನೋಂದಾವಣೆಗೆ ಕಾಲ ನಿಗದಿಪಡಿಸಿಲ್ಲ. ಹಾಗಾಗಿ ಫಲಾನುಭವಿಗಳು ಗಾಬರಿಗೊಳ್ಳದೆ ಸಾವಕಾಶವಾಗಿ ನೋಂದಾವಣೆ ಮಾಡಿಸಬೇಕು. ನೂಕುನುಗ್ಗಲಿಗೆ ಅವಕಾಶ ನೀಡಬಾರದು ಎಂದು ಹೇಳಿದರು.
ಪುರಸಭೆ ಕಂದಾಯ ನಿರೀಕ್ಷಕ ಎನ್.ಶಂಕರ್, ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಸಿಬ್ಬಂದಿ ಶ್ರೀನಾಥ್, ಕೀರ್ತನಾ ಇದ್ದರು.

ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆಯಾ ಶಾಲೆಯ ಹಳೆ ವಿದ್ಯಾರ್ಥಿಗಳು ಕೈ ಜೋಡಿಸಬೇಕು : ಸಿ.ಆರ್.ಅಶೋಕ್

ಶ್ರೀನಿವಾಸಪುರ: ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆಯಾ ಶಾಲೆಯ ಹಳೆ ವಿದ್ಯಾರ್ಥಿಗಳು ಕೈ ಜೋಡಿಸಬೇಕು. ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ವಿಷಯಕ್ಕೆ ಆದ್ಯತೆ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಹೇಳಿದರು.
ಮಾರೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿ, ಸರ್ಕಾರಿ ಶಾಲಾ ಶಿಕ್ಷಕ ಎಸ್.ಆರ್.ಧರ್ಮೇಶ್, ಪ್ರತಿ ತಿಂಗಳೂ ತಮ್ಮ ಸಂಬಳದಲ್ಲಿ ರೂ.10 ಸಾವಿರ ತೆಗೆದಿಟ್ಟು ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಅಗತ್ಯಗಳಿಗೆ ಬಳಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಂಸ್ಕಾರ ಪಡೆದುಕೊಳ್ಳಬೇಕು. ಗುರು ಹಿರಿಯರನ್ನು ಗೌರವಿಸುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಬೇಕು. ಪ್ರಚಾರಕ್ಕಾಗಿ ಹಾತೊರೆಯದೆ, ದಾನಿ ಧರ್ಮೇಶ್ ಅವರಂತೆ ಎಲೆ ಮರೆ ಕಾಯಿಯಂತೆ ಸೇವೆ ಮಾಡಬೇಕು ಎಂದು ಹೇಳಿದರು.
ತಾಲ್ಲೂಕು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕಿ ಸುಲೋಚನ ಮಾತನಾಡಿ, ಶಿಕ್ಷಣ ಬದಲಾವಣೆಯ ಸಾಧನ. ಯಾವುದಾದರೂ ಹುದ್ದೆ ಪಡೆಯುವ ಉದ್ದೇಶದಿಂದ ಮಾತ್ರ ಓದಬಾರದು. ಜ್ಞಾನಾರ್ಜನೆ ಶಿಕ್ಷಣದ ಗುರಿಯಾಗಬೇಕು. ಪೋಷಕರು ಮಕ್ಕಳ ಕೈಗೆ ಮೊಬೈಲ್‍ಗೆ ಬದಲಾಗಿ ಪುಸ್ತಕ ಕೊಡಬೇಕು. ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಧರ್ಮೇಶ್ ತಾವು ದುಡಿದು ಗಳಿಸಿದ ಹಣದಿಂದ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಇಷ್ಟದ ಬಟ್ಟೆ ಕೊಡಿಸಿದ್ದಾರೆ. ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಈ ಕೊಡುಗೆ ಸರ್ಕಾರದ ಸೌಲಭ್ಯಕ್ಕೆ ಪೂರಕವಾಗಿದೆ. ವಿದ್ಯಾರ್ಥಿಗಳು ದಾನಿಗಳ ಕೊಡುಗೆ ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯವಸ್ಥಾಪಕರಾದ ಗಿರೀಶ್ ಬಾಬು, ಪುರುಷೋತ್ತಮರೆಡ್ಡಿ, ಮುಖ್ಯ ಶಿಕ್ಷಕ ಮುನಿಶಾಮಿ, ಹಳೆ ವಿದ್ಯಾರ್ಥಿನಿ ಶುಭ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಇಷ್ಟದ ಬಟ್ಟೆ ವಿತರಿಸಲಾಯಿತು. ಅತಿಥಿಗಳನ್ನು ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು.
ಮುಖ್ಯ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್, ಶಿಕ್ಷಕರಾದ ಸೊಣ್ಣಪ್ಪ, ಜಯಮ್ಮ, ನಾಗಿರೆಡ್ಡಿ, ವೆಂಕಟಲಕ್ಷ್ಮಮ್ಮ, ರಾಮಕೃಷ್ಣಪ್ಪ, ರಾಮರೆಡ್ಡಿ, ನಾಗರಾಜಪ್ಪ, ಎಸ್‍ಡಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಅಂತರ ರಾಷ್ಟ್ರೀಯ ಕ್ರಿಡಾಪಟು ನಿಶಾಂತ್ ಕುಮಾರ್ ಇದ್ದರು.

.

ಮಂಗಳೂರು : ಬೊಂದೇಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಟ್ಯಾಲೆಂಟ್ ಫೆಸ್ಟ್’

ಮಂಗಳೂರು, ಜುಲೈ 24 ಹಾಗೂ 25 ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಟ್ಯಾಲೆಂಟ್ ಫೆಸ್ಟ್ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ತುಳು ರಂಗಭೂಮಿ ಮತ್ತು ತುಳು ಚಲನಚಿತ್ರೋದ್ಯಮದ ಖ್ಯಾತ ನಟ ಭೋಜರಾಜ್ ವಾಮಂಜೂರ್ ಇವರು ನೆರವೇರಿಸಿದರು. ವಿವಿಧ ಹಾಸ್ಯ ಹಾಗೂ ಹಾಡುಗಳ ಮುಖಾಂತರ ಮಕ್ಕಳನ್ನು ರಂಜಿಸಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಮಾರ್ಗದರ್ಶನವನ್ನು ನೀಡಿದರು. ಅಧ್ಯಕ್ಷೀಯ ಭಾಷಣದಲ್ಲಿ ವಂದನೀಯ ಗುರು ಆಂಡ್ರ್ಯೂ ಲಿಯೋ ಡಿಸೋಜಾ ರವರು

ತಮ್ಮ ಸಂದೇಶದಲ್ಲಿ, ಪ್ರತಿಯೊಬ್ಬ ಮಗುವಿಗೆ ಒಂದಲ್ಲ ಒಂದು ರೀತಿಯ ಪ್ರತಿಭೆ ಇದೆ. ಅದನ್ನು ಹುಡುಕಿ ಪ್ರೋತ್ಸಾಹಿಸಿದಾಗ ಪ್ರತಿಭೆಯು ಹೊರ ಚಿಮ್ಮುತ್ತದೆ. ನಾಚಿಕೆ ಭಯ ಮತ್ತು ಹಿಂಜರಿಕೆಯನ್ನು ಬಿಟ್ಟು ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಬೆಳೆಸಲು ಕರೆಕೊಟ್ಟರು. ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲರಾದ ವಂದನೀಯ ಪೀಟರ್ ಗೊನ್ಸಾಲ್ವಿಸ್ ವಂದನೀಯ ಲ್ಯಾನ್ಸಿ ಡಿಸೋಜಾ ಹಾಗೂ ಶಾಲಾ ನಾಯಕ ತೇಜಸ್ ಮತ್ತು ಶಾಲಾ ಉಪ ನಾಯಕಿ ಮೇಘನ್ ವೇದಿಕೆಯಲ್ಲಿ ಆಸೀನರಾಗಿದ್ದರು. 

ತದನಂತರ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ತರಗತಿ ವಾರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು.

ಅಧಿಕಾರಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ದಾಳಿ ; ಅವಾಗ ಲಂಚದ ಹಣವನ್ನೇ ನುಂಗಿದ ಭೂಪ


ಜಬಲ್ಪುರ್: ಮಧ್ಯ ಪ್ರದೇಶದ ಕತ್ನಿ ಎಂಬಲ್ಲಿ ಕಂದಾಯ ವಿಭಾಗದ ಅಧಿಕಾರಿಯೊಬ್ಬರು ತಾವು ಲಂಚ ಸ್ವೀಕರಿಸುತ್ತಿದ್ದಾಗ ಆಗಮಿಸಿದ ಲೋಕಾಯುಕ್ತ ವಿಶೇಷ ಪೊಲೀಸ್‌ ಎಸ್ಟಾಬ್ಲಿಶ್ಮೆಂಟ್‌
ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನು ಕಂಡು ದಂಗಾಗಿ ಲಂಚವಾಗಿ ಸ್ವೀಕರಿಸಿದ ಆತ ರೂ. 5,000 ಹಣವನ್ನೇ ಜಗಿದು ನುಂಗಿಬಿಟ್ಟಿದ್ದಾನೆ.

ಕಂದಾಯ ವಿಭಾಗದ ಅಧಿಕಾರಿ ಪಟ್ವಾರಿ ಗಜೇಂದ್ರ ಸಿಂಗ್‌ ಎಂಬವರು ಸೋಮವಾರ ತಮ್ಮ ಖಾಸಗಿ ಕಚೇರಿಯಲ್ಲಿ ರೂ. 5,000 ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಅಧಿಕಾರಿ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆಂದು ಬರ್ಖೇಡಾ ಗ್ರಾಮದ ವ್ಯಕ್ತಿಯೊಬ್ಬರು ಲೋಕಾಯುಕ್ತದ ಬಳಿ ದೂರೂ ನೀಡಿದ್ದರು. ಲಂಚ ಸ್ವೀಕರಿಸಿದಾಕ್ಷಣ ಲೋಕಾಯುಕ್ತ ಅಧಿಕಾರಿಗಳನ್ನ ಗಮನಿಸಿದ ಸಿಂಗ್‌ ಏನು ಮಾಡಬೇಕೆಂದು ತೋಚದೆ ನೋಟುಗಳನ್ನು ನುಂಗಿ ಬಿಟ್ಟಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ವೈದ್ಯರ ಸಹಾಯದಿಂದ ಹಣವನ್ನು ಹೊರಗೆ ತೆಗೆಯಲು ಪ್ರಯತ್ನ ಪಟ್ಟರು. ಹಣ ಸುರುಳಿ ರೂಪದಲ್ಲಿ ವಾಂತಿ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.  ಈಗ ಅವರು ಚೆನ್ನಾಗಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು ತನಿಖೆ ಮುಂದುವರಿದಿದೆ.

ಹಣ ಜಗಿದು ನುಂಗುವ ದ್ರಶ್ಯದ ವಿಡೀಯೊ ಲಬ್ದವಾಗಿದೆ

ಮಣಿಪುರ ಮಹಿಳೆಯರ ವಿವಸ್ತ್ರ ಪ್ರಕರಣ – ಈ ತನಕ 7 ಆರೋಪಿಗಳ ಬಂದನ : ಹಿಂಸಾಚಾರದಲ್ಲಿ -160 ಕ್ಕೂ ಹೆಚ್ಚು ಜನರ ಸಾವು, 256 ಚರ್ಚುಗಳಿಗೆ ಬೆಂಕಿ

ಇಂಫಾಲ, ಜು.25: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಬಲ್ ಜಿಲ್ಲೆಯಿಂದ ಸೋಮವಾರ ಸಂಜೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು,  ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಬಂದಿಸಿದಂತಾಗಿದೆ ಎಂದು ತಿಳಿದು ಬಂದಿದೆ.

      ಮೇ 4 ರಂದು ಇಬ್ಬರು ಮೈತೆಯಿ ಬುಡಕಟ್ಟು ಮಹಿಳೆಯರ ವಿವಸ್ತ್ರ ಪ್ರಕರಣದಲ್ಲಿ ಭಾಗವಹಿಸಿದ 14 ಜನರನ್ನು ವೀಡಿಯೊ ಮುಖಾಂತರ ಪೊಲೀಸರು ಮೊದಲು ಗುರುತಿಸಿದ್ದರು.

       ಇಬ್ಬರು ಮಹಿಳೆಯರನ್ನು ಅಪಹರಿಸಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯ 26 ಸೆಕೆಂಡುಗಳ ವಿಡಿಯೋ ಜುಲೈ 19 ರಂದು ಹೊರಬಿದ್ದಿತ್ತು, ವೀಡಿಯೊದಲ್ಲಿ ಕಂಡುಬರುವ ಮಹಿಳೆಯರಲ್ಲಿ ಒಬ್ಬರು ಮಾಜಿ ಸೈನಿಕರ ಪತ್ನಿಯಾಗಿದ್ದು, ಅವರ ಸೈನಿಕ ಪತಿ ಅಸ್ಸಾಂ ರೆಜಿಮೆಂಟ್‌ನಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸಿದ್ದಾರೆ ಹಾಗೆ ಕಾರ್ಗಿಲ್ ಯುದ್ಧದಲ್ಲಿ ಸಹ ಹೋರಾಡಿದ್ದಾರೆ ಎಂದು ತಿಳಿದು ಬಂದಿದೆ.

       ಕಾಂಗ್‌ಪೊಕ್ಪಿ ಜಿಲ್ಲೆಯ ಸೈಕುಲ್ ಪೊಲೀಸ್ ಠಾಣೆಯಲ್ಲಿ ಒಂದು ತಿಂಗಳ ಹಿಂದೆ ಜೂನ್ 21 ರಂದು ವೀಡಿಯೊಗೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಅದರೆ ವೀಡಿಯೊ ಈಗ ವೈರಲ್ ಆದುದರಿಂದ ಈಗ ಕ್ರಮ ತೆಗೆದುಕೊಳ್ಳಲಾಗಿ. ಮೇ 3 ರಂದು ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ, ಜೂನ್ ೧೩ ರಂದೇ 256 ಚರ್ಚುಗಳಿಗೆ ಬೆಂಕಿ ಹಚ್ಚಿದ್ದಾರೆ ಅಥವಾ ಧ್ವಂಸ ಮಾಡಿದ್ದಾರೆಂದು ಟೆಲಿಗ್ರಾಫ್ ವಾರ್ತೆ ಸಂಸ್ಥೆ ಪ್ರಕಟಿಸಿದೆ. ಪರಿಶಿಷ್ಟ ಪಂಗಡದ (ST) ಸ್ಥಾನಮಾನಕ್ಕಾಗಿ ಮೈತೆಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಬೆಟ್ಟದ ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಲಾಗಿತ್ತು. ಅದಕ್ಕೆ ಪ್ರತೀಕಾರವಾಗಿ ಕುಕ್ಕಿ ಜನಾಂಗದ ಮೇಲೆ ಮೈತೆಯಿ ಜನಾಂಗ ಅಮಾನವೀಯ ರೀತಿಯಲ್ಲಿ ಹಿಂಸಾಚಾರ ಎಸಗಿದೆ      ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ, ಆದರೆ ನಾಗಾಗಳು ಮತ್ತು ಕುಕಿಗಳನ್ನು ಒಳಗೊಂಡಿರುವ ಬುಡಕಟ್ಟು ಜನಾಂಗದವರು ಶೇಕಡಾ 40 ರಷ್ಟಿದ್ದಾರೆ ಮತ್ತು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ

ಶ್ರೀನಿವಾಸಪುರದಲ್ಲಿ ಅಬಕಾರಿ ಪೊಲೀಸರ ದಾಳಿ :730 ಗ್ರಾಮ್ ಗಾಂಜ ವಶ

ಶ್ರೀನಿವಾಸಪುರ: ದಿನಾಂಕ 23.07 2023 ರಂದು ಸಂಜೆ ಶ್ರೀನಿವಾಸಪುರ ನಗರದ ಜಗಜೀವನ್ ರಾಮ್ ಪಾಳ್ಯ ಮುಳ್ಬಾಗಲು ರಸ್ತೆಯ ದರ್ಗಾ ಬಳಿ ದಾಳಿ ಮಾಡಿ ಸಲ್ಮಾನ್ ಎಂಬುವರು TATA ACE tempo ವಾಹನದಲ್ಲಿ 430 gm ಒಣ ಗಾಂಜ ಹಾಗೂ ಮೊಹಮ್ಮದ್ ಹುಸೇನ್ ಸಾಬ್ ಎಂಬುವವರು TVS 50 ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ 300 gm ಒಣಗಿದ ಗಾಂಜಾ ವನ್ನು ಗಿರಾಕಿಗಳಿಗೆ ಮರಾಟಕ್ಕಾಗಿ ಸಾಗಾಟ ಮಾಡುತ್ತಿದ್ದದ್ದನ್ನು ಪತ್ತೆ ಹಚ್ಚಿ ಆರೋಪಿಗಳ ವಿರುದ್ಧ NDPS ಕಾಯ್ದೆ 1985 ರಡಿ 2 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ, ದಾಳಿಯಲ್ಲಿ ಶ್ರೀ ರೋಹಿತ್ ಬಿ ಎಸ್ ಅಬಕಾರಿ ನಿರೀಕ್ಷಕರು, ಶ್ರೀನಿವಾಸಪುರ ವಲಯ ಹಾಗೂ ಶ್ರೀಮತಿ ಪುಷ್ಪ ಅಬಕಾರಿ ನಿರೀಕ್ಷಕರು ಕೋಲಾರ ಉಪ ವಿಭಾಗ ರವರು ಮತ್ತು ಸಿಬ್ಬಂದಿಗಳಾದ ಮಂಜುನಾಥ್ ರಾಘವೇಂದ್ರ ಶಿವಾನಂದ್ ಈಶ್ವರ ಭಾಗವಹಿಸಿದ್ದರು. ಒಟ್ಟು 730 ಗ್ರಾಮ್ ಗಾಂಜವನ್ನು ವಶ ಪಡಿಸಿಕೊಳ್ಳಲಾಗಿದೆ

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಬಗ್ಗೆ ಪರಿಶೀಲಿಸಿ ಕ್ರಮ -ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪ್ರೆಸ್ ಕ್ಲಬ್ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಜಂಟಿಯಾಗಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು ಗ್ರಾಮೀಣ ಪತ್ರಕರ್ತರ ಬಗ್ಗೆ ನನ್ನ ಬಳಿ ಪ್ರಸ್ತಾಪಿಸಿದ್ದಾರೆ. ಈ ಬಾರಿ ಗ್ಯಾರಂಟಿ ಯೋಜನೆ ಜಾರಿ ಆದ್ಯತೆ ಆಗಿದ್ದರಿಂದ ಇದೆಲ್ಲಾ ಸಾಧ್ಯವಾಗಲಿಲ್ಲ. ಚರ್ಚೆ ಮಾಡಿ ಮುಂದಿನ ಕ್ರಮ ಜರುಗಿಸಲಾಗುವುದು. ಸುಮ್ಮನೆ ನಿಮಗೆ ಭರವಸೆ ಕೊಡುವುದಿಲ್ಲ. ನುಡಿದಂತೆ ನಡೆದು ಮಾಡಿ ತೋರಿಸುತ್ತೇವೆ ಎಂದರು.

ಪತ್ರಕರ್ತರ ಹಲವು ಬೇಡಿಕೆಗಳ ಬಗ್ಗೆ ಗಮನ ಸೆಳೆದಿದ್ದೀರಿ. ಹಂತ ಹಂತವಾಗಿ ಬೇಡಿಕೆ ಈಡೇರಿಸಲಾಗುವುದು. ಈ ಬಗ್ಗೆ ಶಿವಾನಂದ ಅವರ ಜೊತೆಗೆ ಚರ್ಚೆ ಮಾಡಲಾಗುವುದು. ಪತ್ರಕರ್ತರ ಹಿತ ಕಾಯಲು ಸರ್ಕಾರ ಬದ್ದವಾಗಿದೆ ಎಂದರು.

ಪ್ರೆಸ್ ಕ್ಲಬ್ ಜಾಗದ ಬಗ್ಗೆ ಶ್ರೀಧರ್ ಪ್ರಸ್ತಾಪಿಸಿದ್ದು, ಅರಕೆರೆ ಜಯರಾಂ ಗಮನ ಸೆಳೆದಿದ್ದಾರೆ. ನಿಮ್ಮನ್ನು ಯಾರೂ ಒಕ್ಕಲೆಬ್ಬಿಸುವುದಿಲ್ಲ. ನೀವು ಇದೇ ಜಾಗದಲ್ಲಿ ಮುಂದುವರಿಯುತ್ತೀರಿ ಎಂದು ಮುಖ್ಯಮಂತ್ರಿ ಅಭಯ ನೀಡಿದರು.

ನಾನು ಅತ್ಯಂತ ಸಂತೋಷದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪತ್ರಿಕಾ ದಿನಾಚರಣೆ ಉದ್ಘಾಟಿಸಿದ್ದೇನೆ. ಅನೇಕ ಹಿರಿಯ ಪತ್ರಕರ್ತರನ್ನು ಸನ್ಮಾನಿಸಿದ ಸೌಭಾಗ್ಯ ನನ್ನದು. ನಿಮಗೆಲ್ಲ ಪತ್ರಿಕಾ ದಿನಾಚರಣೆ ಶುಭಾಶಯ ಕೋರುತ್ತೇನೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪತ್ರಕರ್ತರನ್ನು ಯಶಸ್ವಿನಿ ಯೋಜನೆಗೆ ಸೇರಿಸಬೇಕು. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಬೇಕು. ಪತ್ರಕರ್ತರು ಮತ್ತು ಪತ್ರಿಕೆಗಳ ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಗಮನ ಸೆಳೆದರು.

ಚುನಾವಣೆ ಮುಂಚೆ ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಪತ್ರಕರ್ತರಿಗಾಗಿ 500 ಕೋಟಿ ಮೀಸಲಿಡುವ ಆಶ್ವಾಸನೆ ನೀಡಿದ್ದು ಅಭಿನಂದನಿಯ. ಅದನ್ನು ಕಾರ್ಯಗತ ಮಾಡಲು ಬಜೆಟ್ ನಲ್ಲಿ ಹಣ ನೀಡಬೇಕು ಎಂದು ತಗಡೂರು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪಿ.ರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ಬಗ್ಗೆ ಹಿರಿಯ ಪತ್ರಕರ್ತರಾದ ಪೂರ್ಣಿಮಾ, ಡಿ.ಉಮಾಪತಿ, ರವಿಹೆಗಡೆ ಅವರು ಮಾತನಾಡಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪ್ರಭಾಕರ್,ಶಾಸಕರಾದ ಅಜಯ್ ಸಿಂಗ್, ಗೋವಿಂದ ರಾಜು, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್, ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಬಿ.ಪಿ.ಮಲ್ಲಪ್ಪ, ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು ಮತ್ತಿತರರು ಹಾಜರಿದ್ದರು.

ಹಿಂದುಳಿದ ಪತ್ರಿಕೆಗಳಿಗೆ ಮುಖ್ಯಮಂತ್ರಿ ಅಭಯ:


ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಪತ್ರಕರ್ತರು ಹಿಂದುಳಿದ ಪತ್ರಿಕೆಗಳಿಗೆ ಜಾಹೀರಾತು ಸೇರಿದಂತೆ ಯೋಜನೆ ಮುಂದುವರಿಸುವಂತೆ ಗಮನ ಸೆಳೆದರು. ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದೆ ನನ್ನ ಅಧಿಕಾರಾವಧಿಯಲ್ಲಿಯೇ ಆ ವರ್ಗಕ್ಕೆ ಸೌಲಭ್ಯ ನೀಡಿದ್ದೆ. ತಾರತಮ್ಯ ಮಾಡದೆ ಜಾಹೀರಾತು ನೀಡಿಕೆ ಮತ್ತು ಹಿಂದುಳಿದ ವರ್ಗಗಳ ಪತ್ರಿಕೆಗಳಿಗೂ ಯೋಜನೆ ಮುಂದುವರಿಸುವುದಾಗಿ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.