HOLY ROSARY CHURCH, KUNDAPUR – 450 th JUBILEE SOUVENIR 2021

ಕುಂದಾಪುರ ಹೋಲಿ ರೋಜರಿ ಮಾತಾ ಚರ್ಚಿನಲ್ಲಿ ಕಾರ್ಮೆಲ್ ಮಾತೆಯ ಹಬ್ಬ

ಕುಂದಾಪುರ, ಜು.16: ಕುಂದಾಪುರ ಹೋಲಿ ರೋಜರಿ ಮಾತಾ ಚರ್ಚಿನಲ್ಲಿ  ಸ್ಥಳಿಯ ಸಂತ ಜೋಸೆಫ್ ಕಾನ್ವೆಂಟಿನ ಆಪೊಸ್ತಲಿಕ್  ಕಾರ್ಮೆಲ್ ಸಂಸ್ಥೆಯ ಧರ್ಮ ಭಗಿನಿಯರು, ತಮ್ಮ ಪಾಲಕಿ ಕಾರ್ಮೆಲ್ ಮಾತೆಯ ಹಬ್ಬವನ್ನು ಜುಲಾಯ್ 16 ರಂದು ಆಚರಿಸಿದರು.
ಹಬ್ಬದ ಬಲಿದಾನವನ್ನು ರೋಜರಿ ಮಾತಾ ಚರ್ಚಿನ ಪ್ರಧಾನ ಧರ್ಮಗುರು ಅ|ವಂ| ಅ|ವಂ|ಸ್ಟ್ಯಾನಿ ತಾವ್ರೊ  ದಿವ್ಯ ಬಲಿ ಪೂಜೆಯನ್ನು ಅರ್ಪಿಸಿ ಕಾರ್ಮೆಲ್  ಮಾತೆಯ ಮಹತ್ವವನ್ನು ವಿವರಿಸಿ “ದೇವರ ವಾಕ್ಯಗಳು ಮುತ್ತಿನಂತೆ, ಅವಗಳನ್ನು ಕಳೆದುಕೊಳ್ಳದೆ ಸಂಪಾದಿಸಿಕೊಳ್ಳಬೇಕು. ಕಾರ್ಮೆಲ್ ಮಾತೆ ನಮ್ಮ ರಕ್ಷಕಿ, ಅವಳು ಕಾರ್ಮೆಲ್ ಮೇಳದ ಧರ್ಮಗುರುಗಳಿಗೆ ಪೋಷಾಕನ್ನು ನೀಡಿ ಇದು ನಿಮಗೆ ರಕ್ಷಾ ಕವಚಾ, ಇದನ್ನು ಧರಿಸಿದರೆ ನಿಮಗೆ ಮತ್ತು ನಿಮ್ಮ ಆತ್ಮಕ್ಕೆ ರಕ್ಷೆ ಸಿಗುವುದು ಎಂದು ತಿಳಿಸಿ” ಕಾರ್ಮೆಲ್ ಮಾತೆ ಬೆಂತಿಣ್ ಗಳನ್ನು ಆಶಿರ್ವದಿಸಿದರು. ಕಾರ್ಮೆಲ್ ಮೇಳದ ಧರ್ಮಭಗಿನಿಯರು ಬೆಂತಿಣ್ ಗಳನ್ನು ಭಕ್ತಾಧಿಗಳಿಗೆ ವಿತರಿಸಿದರು. ಅಂದಿನ ದಿವ್ಯ ಬಲಿದಾನದ ಪ್ರಾರ್ಥನ ವಿಧಿಯಲ್ಲಿ ಕಾರ್ಮೆಲ್ ಮೇಳದ ಧರ್ಮಭಗಿನಿಯರು ಭಾಗಿಯಾದರು. ಸಹಾಯಕ ಧರ್ಮಗುರು ವಂ| ಅಶ್ವಿನ್ ಅರಾನ್ನಾ ಸಹಕರಿಸಿದರು.
    ಕಾನ್ವೆಂಟಿನ ನೂತನ ಮುಖ್ಯಸ್ಥೆ ಭಗಿನಿ ಸುಪ್ರಿಯಾ, ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಭಗಿನಿ ಆಶಾ, ಇತರ ಸಂತ ಜೋಸೆಫ್ ಕಾನ್ವೆಂಟಿನ ಕಾರ್ಮೆಲ್ ಭಗಿನಿಯರು ಹಾಗೂ ಕಾರ್ಮೆಲ್ ಭಗಿನಿಯರ ಸಹಾಯಕರ ಬ್ಲೊಸಮ್ ಪಂಗಡದವರು ಹಾಜರಿದ್ದು, ಈ ಹಬ್ಬದ ದಿವ್ಯ ಬಲಿಪೂಜೆಯಲ್ಲಿ ಹಲವಾರು ಭಕ್ತರು ಹಾಜರಿದ್ದರು.

ಕುಂದಾಪುರದಲ್ಲಿ ಜನಸಾಮನ್ಯರ ದಿನ ; ಕಥೊಲಿಕ್ ಸಭೆಗೆ ಸೇವೆ ಸಲ್ಲಿಸಿದ ಅಧ್ಯಕ್ಷರುಗಳಿಗೆ ಸನ್ಮಾನ


ಕುಂದಾಪುರ, ಜು. 16: ಕುಂದಾಪುರ ಹೋಲಿ ರೋಜರಿ ಚರ್ಚಿನ ಜನಸಾಮಾನ್ಯರ ಆಯೋಗ ಮತ್ತು ಕುಂದಾಪುರ ಘಟಕ ಕಥೊಲಿಕ್ ಸಭಾ ವತಿಯಿಂದ ಮೊದಲು ಚರ್ಚಿನನಲ್ಲಿ ಕ್ರತ್ಞತಾ ಬಲಿದಾನವನ್ನು ಅರ್ಪಿಅಸಾಲಾಯಿತು.
ನಂತರ ನೆಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ| ಸ್ಟ್ಯಾನಿ ತಾವ್ರೊ ಮುಖ್ಯ ಅತಿಥಿಯಾಗಿ 1981 ಇಸವಿಯಿಂದ ನಡೆದು ಬಂದ ಕಥೊಲಿಕ್ ಸಭಾ ಸಂಘಟನೇಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅಧ್ಯಕ್ಷರುಗಳಿಗೆ ಶಾಲು ಹೊದೆಸಿ ಹೂ ನೀಡಿ ಸನ್ಮಾನಿಸಲಾಯಿತು.
ಕಥೊಲಿಕ್ ಸಭಾದ ಅಧ್ಯಕ್ಷರಾಗಿ ಈ ಹಿಂದೆ ಸೇವೆ ಸಲ್ಲಿಸಿದ ವಿಕ್ಟರ್ ಡಿಸೋಜಾ, ವಿನಯ ಪಾಯ್ಸ್, ಜೊನ್ಸನ್ ಡಿಆಲ್ಮೆಡಾ, ವಿನೋದ್ ಕ್ರಾಸ್ಟೊ, ವಿಲ್ಸನ್ ಒಲಿವೆರಾ, ಎಲಿಜಬೆತ್ ಡಿಸೋಜಾ, ವಿಲ್ಸನ್ ಡಿಆಲ್ಮೇಡಾ, ಶೈಲಾ ಡಿಆಲ್ಮೇಡಾ, ವಾಲ್ಟರ್ ಡಿಸೋಜಾ ಮತ್ತು ಬರ್ನಾಡ್ ಡಿಕೋಸ್ತಾ ಇವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ನಿಧನರಾಗಿದ್ದ ಫಿಲಿಪ್ ಗೊನ್ಸಾಲ್ವಿಸ್ ಪರವಾಗಿ ಅವರ ಸಂಬಂಧಿ ಫಿಲಿಫ್ ಗೊನ್ಸಾಲ್ವಿಸ್, ಜೆ.ಬಿ.ಡಿಸೋಜಾರ ಪರವಾಗಿ ಅವರ ಪತ್ನಿ ಆಯ್ರಿನ್ ಡಿಸೋಜಾ, ಜೇಕಬ್ ಡಿಸೋಜಾರ ಪರವಾಗಿ ಅವರ ಪತ್ನಿ ಆಲಿಸ್ ಡಿಸೋಜಾ, ಡೋರಾ ಲೋಬೊರ ಪರವಾಗಿ ಅವರ ಪತಿ ಸ್ಟ್ಯಾನಿ ಲೋಬೊ, ಇವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿ ಅ|ವಂ| ಸ್ಟ್ಯಾನಿ ತಾವ್ರೊ ಮಾತನಾಡಿ ಪವಿತ್ರ ಸಭೆ ಮುನ್ನೆಡೆಯಲು ಜನಸಾಮಾನ್ಯರ ಅವಶ್ಯಕತೆ ತುಂಬ ಇದೆ, ಪವಿತ್ರ ಸಭೆಗಾಗಿ ಮತ್ತು ನಮ್ಮ ಸಮಾಜಕ್ಕಾಗಿ ಸೇವೆ ನೀಡುವ ಕಥೊಲಿಕ್ ಸಭಾ ಸಂಸ್ಥೆ ನಮಗೆ ತುಂಬಾ ಹೆಮ್ಮೆಯ ಸಂಸ್ಥೆ, ಅದು ಯಾವಾಗಲೂ ಜನಸಾಮಾನ್ಯರಿಗಾಗಿ ಸೇವೆ ನೀಡುತ್ತಿದೆ’ ಎಂದು ಶ್ಲಾಘಿಸಿದರು. ಸನ್ಮಾನ ಕಾರ್ಯಕ್ಕೆ ಸಹಕರಿಸಿದ ಇನ್ನೊರ್ವ ಅತಿಥಿ ವರ್ಕರ್ಸ್ ಇಂಡಿಯಾ, ಫೆಡೆರೇಶನ್ ಆಲ್ ಇಂಡಿಯಾ ಕಥೊಲಿಕ್ ಬಿಷಪ್ ಕೊನ್ಫೆರೆನ್ಸ್ ಇದರ ಖಜಾಂಚಿ ಕಿರಣ್ ಕ್ರಾಸ್ಟೊ ಮಾತನಾಡಿ ‘ಕುಂದಾಪುರದಲ್ಲಿ ಜನಸಾಮನ್ಯರ ಸಂಘ ಚಟುವಟಿಕೆಗಳು 1977 ರಲ್ಲೇ ಪ್ರಾರಂಭಗೊಂಡಿದ್ದು, ಆಗಲೇ ಜನಸಾನ್ಯರಲ್ಲಿ ನಾಯಕತ್ವ ಗುಣಗಳಿಂದ ಮುನ್ನೆಲೆಗೆ ಬಂದಿದ್ದರು, ಇಂದು ಕಥೊಲಿಕ್ ಸಭಾ ಬಲಗೊಳ್ಳಲು ಕುಂದಾಪುರವೇ ಕಾರಣವಾಗಿದೆ. ಕುಂದಾಪುರ ಘಟಕ ಮಾಡುವ ಕಾರ್ಯವಿಧಾನಗಳು ಎಲ್ಲಾ ಕಥೊಲಿಕ್ ಸಭಾ ಘಟಕಗಳಿಗೆ ಪ್ರೇರಣೆಯಾಗಿದೆ” ಎಂದು ತಿಳಿಸಿದರು. ಕುಂದಾಪುರ ಘಟಕ ಅವರನ್ನು ಸನ್ಮಾನಿಸಿತು. ರೋಜರಿ ಚರ್ಚಿನ ಪಾಲನ ಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ, ಕಾರ್ಯದರ್ಶಿ ಆಶಾ ಕರ್ವಾಲ್ಲೊ ಮತ್ತು ಆಯೋಗಗಳ ಸಂಯೋಜಕಿ ಪ್ರೇಮಾ ಡಿಕುನ್ಹಾ ಇವರನ್ನು ಕೂಡ ಜನಸಾಮಾನ್ಯರ ದಿನಾಚರಣೆಯ ಪರವಾಗಿ ಸನ್ಮಾನಿಸಲಾಯಿತು. ಕುಂದಾಪುರ ವಲಯ ಕಥೊಲಿಕ್ ಸಭಾ ಅಧ್ಯಕ್ಷ ‘ಕಥೊಲಿಕ್ ಸಭೆಯ ಸದಸ್ಯರಾಗಲು ಯುವಕರು ಹೆಚ್ಚು ಆಸಕ್ತಿ ವಹಿಸಬೇಕೆಂದು’ ಆಗ್ರಹಿಸಿದರು. ಅತಿಥಿಯಾಗಿ ಆಗಮಿಸಿದ್ದ ಪ್ರಸಿದ್ದ ಹಾಸ್ಯ ನಟ ಅವರನ್ನು ಕೂಡ ಅವರ ಕಲಾ ಸೇವೆಗೆ ಸನ್ಮಾನಿಸಲಾಯಿತು.
ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ, ಕಥೊಲಿಕ್ ಸಭಾ ನಿರ್ಗಮನ ಅಧ್ಯಕ್ಷ ಬರ್ನಾಡ್ ಡಿಕೋಸ್ತಾ. ರೋಜರಿ ಚರ್ಚಿನ ಪಾಲನ ಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ, ಕಾರ್ಯದರ್ಶಿ ಆಶಾ ಕರ್ವಾಲ್ಲೊ ಮತ್ತು ಆಯೋಗಗಳ ಸಂಯೋಜಕಿ ಪ್ರೇಮಾ ಡಿಕುನ್ಹಾ ವೇದಿಕೆಯಲಿದ್ದು, ಕಥೊಲಿಕ್ ಸಭಾದ ಅಧ್ಯಕ್ಷೆ ಶೈಲಾ ಡಿಆಲ್ಮೇಡಾ ಸ್ವಾಗತಿಸಿದರು, ಕಾರ್ಯದರ್ಶಿ ಕಾರ್ಯಕ್ರಮದ ಸಂಚಾಲಕ ವಾಲ್ಟರ್ ಡಿಸೋಜಾ ಧನ್ಯವಾದ ಅರ್ಪಿಸಿದರು. ಆಲ್ಡ್ರಿನ್ ಡಿಸೋಜಾ ನಿರೂಪಿಸಿದರು.

ಸೇಂಟ್ ಆಗ್ನೆಸ್ ಪಿಯು ಕಾಲೇಜು ‘ಪರಿಸರ ವಾರ’ವನ್ನು ಆಚರಿಸಿತು


ಮಂಗಳೂರು; ‘ಪರಿಸರ ವಾರ’ ಎಂಬುದು ವಿದ್ಯಾರ್ಥಿಗಳಿಗೆ ನಮ್ಮ ಪರಿಸರವನ್ನು ಕಲಿಯಲು ಮತ್ತು ಅರ್ಥಮಾಡಿಕೊಳ್ಳಲು ಒಂದು ಅಸಾಧಾರಣ ಅವಕಾಶವಾಗಿದೆ. ನಮ್ಮ ಜೀವನದಲ್ಲಿ ಮರಗಳು ಮತ್ತು ಕಾಡುಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಸೇಂಟ್ ಆಗ್ನೆಸ್ ಪಿಯು ಕಾಲೇಜು ‘ಪರಿಸರ ವಾರ’ವನ್ನು ಆಚರಿಸಿತು. ಇದರ ದೃಷ್ಟಿಯಿಂದ, ಜೀವಶಾಸ್ತ್ರ ವಿಭಾಗವು ಈ ಕೆಳಗಿನ ಚಟುವಟಿಕೆಗಳನ್ನು ಆಯೋಜಿಸಿದೆ.

  • ‘ಅಂತರರಾಷ್ಟ್ರೀಯ ರಾಗಿ ವರ್ಷ – 2023’ ಸ್ಮರಣಾರ್ಥವಾಗಿ ರಾಗಿಗಳ ರಂಗೋಲಿ ಪ್ರದರ್ಶನ
  • ನೆಡುತೋಪು ಕುರಿತು ಜಾಗೃತಿ ಮೂಡಿಸಲು ಸಸಿಗಳ ಪ್ರದರ್ಶನ.
  • ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರದ ರಕ್ಷಣೆಯನ್ನು ಉತ್ತೇಜಿಸುವ ಸಲುವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಿದ ಉಪಯುಕ್ತ ಪ್ಲಾಸ್ಟಿಕ್ ಉತ್ಪನ್ನಗಳ ಪ್ರದರ್ಶನ.
  • ಪರಿಸರ ಸಮಸ್ಯೆಗಳಿಗೆ ಸಂಬಂಧಿಸಿದ ಪೋಸ್ಟರ್‌ಗಳ ಪ್ರದರ್ಶನ.
  • ವಿದ್ಯಾರ್ಥಿಗಳಿಂದ ಸ್ಕಿಟ್ ರೂಪದಲ್ಲಿ ಪರಿಸರ ಜಾಗೃತಿ ಚಟುವಟಿಕೆ.
    ಹೀಗಾಗಿ ಪರಿಸರ ಸಪ್ತಾಹವು ಪರಿಸರವನ್ನು ರಕ್ಷಿಸಲು ಮತ್ತು ನಮ್ಮ ಗ್ರಹ ಭೂಮಿಯನ್ನು ಒಗ್ಗೂಡಿಸಲು ಮತ್ತು ಉಳಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಅವಕಾಶವನ್ನು ಒದಗಿಸಿದೆ.

ಕಟ್ಕರೆ ಬಾಲ ಯೇಸುವಿನ ಆಶ್ರಮದಲ್ಲಿ ಕಾರ್ಮೆಲ್ ಮಾತೆಯ ಭಕ್ತಿ ಪೂರ್ವಕ ಹಬ್ಬ

ಕುಂದಾಪುರ, ಜು.16: ಕೊಟೇಶ್ವರ ಕಟ್ಕರೆ ಕಾರ್ಮೆಲ್ ಮೇಳದ ಧರ್ಮಗುರುಗಳ ಬಾಲ ಯೇಸುವಿನ ಆಶ್ರಮದಲ್ಲಿ ತಮ್ಮ ಮೇಳದ ಪಾಲಕಿಯಾದ ಕಾರ್ಮೆಲ್ ಮಾತೆಯ ಹಬ್ಬವನ್ನು ಜು. 15 ರಂದು ಭಕ್ತಿಪೂರ್ವಕವಾದ ದಿವ್ಯ ಬಲಿದಾನ ಅರ್ಪಿಸುವ ಮೂಲಕ ಆಚರಿಸಲಾಯಿತು.

     ಹಬ್ಬದ ಈ ಬಲಿದಾನವನ್ನು ಉಡುಪಿ ಧರ್ಮಪ್ರಾಂತ್ಯದ ಅ|ವಂ|ಮೊನ್ಸಿಂಜೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಇವರ ನೇತ್ರತ್ವದಲ್ಲಿ ನಡೆಯಿತು. ಅವರು ಕಾರ್ಮೆಲ್ ಮಾತೆಯ ವಿಶೇಷತೆಯನ್ನು ತಿಳಿಸಿ “ಕಾರ್ಮೆಲ್ ಮಾತೆ, ಕಾರ್ಮೆಲ್ ಮೇಳದ ಧರ್ಮಗುರುಗಳಿಗೆ ಕಾರ್ಮೆಲ್ ಗುಡ್ಡೆಯಲ್ಲಿ ಮೇರಿ ಮಾತೆ ಕಾರ್ಮೆಲ್ ಮಾತೆಯ ರೂಪದಲ್ಲಿ ಪ್ರತ್ಯೆಕ್ಷೆಯಾಗಿ, ಧರ್ಮಗುರುಗಳಿಗೆ ರಕ್ಷಣೆ ನೀಡುತ್ತೇನೆಂದು, ಪವಿತ್ರವಾದ ಪೋಷಾಕನ್ನು ಧರಿಸಲು ನೀಡಿದಳು, ಇದನ್ನು ನೀವು ಧರಿಸಿದರೆ ನೀವು ರಕ್ಷಣೆಗೆ ಪಾತ್ರರಾಗುತ್ತೀರಿ, ನಿಮ್ಮ ಆತ್ಮವು ನಾಶವಾಗಲಾರದು,  ಎಂದು ಹೇಳಿದಳು. ಅಂದು ಅದು ದೊಡ್ಡ ಪೋಷಾಕಾಗಿತ್ತು, ಥರಹ ನಾವು ಅದನ್ನು ಕೊರಳಲ್ಲಿ ಧರಿಸುತೀದ್ದೆವೆ, ನಾವು ಕಾರ್ಮೆಲ್ ಮಾತೆಯನ್ನು ಪ್ರೀತಿಸೋಣ, ಕಾರ್ಮೆಲ್ ಮಾತೆಯ ಸಾಂಗಾತ್ಯ ನಮಗೆ ಶಕ್ತಿ ನೀಡಲಿ” ಎಂದು ಅವರು  ತಮ್ಮ ಸಂದೇಶದಲ್ಲಿ ತಿಳಿಸಿದರು.       

    ಕುಂದಾಪುರ ವಲಯ ಪ್ರಧಾನರಾದ ಅ|ವಂ|ಸ್ಟ್ಯಾನಿ ತಾವ್ರೊ, ವಂ|ಧರ್ಮಗುರು ಸುನೀಲ್ ವೇಗಸ್, ವಂ|ಧರ್ಮಗುರು ಎಡ್ವಿನ್ ಡಿಸೋಜಾ, ವಂ|ಧರ್ಮಗುರು ಆಲ್ಬರ್ಟ್ ಕ್ರಾಸ್ತಾ, ವಂ|ಧರ್ಮಗುರು ರೆಜಿನಾಲ್ಡ್ ಪಿಂಟೊ, ವಂ|ಧರ್ಮಗುರು ಅನಿಲ್ ಕರ್ನೇಲಿಯೊ. ಕುಂದಾಪುರದ ಸಹಾಯಕ ಧರ್ಮಗುರು ವಂ|ಫಾ|ಅಶ್ವಿನ್ ಅರನ್ನಾ, ಕಟ್ಕೆರೆ ಬಾಲ ಯೇಸುವಿನ ಕಾರ್ಮೆಲ್ ಆಶ್ರಮದ ಧರ್ಮಗುರುಗಳಾದ ವಂ|ಧರ್ಮಗುರು ಜೋನ್ ಸಿಕ್ವೇರಾ, ವಂ|ಧರ್ಮಗುರು ಜೋ ತಾವ್ರೊ, ವಂ|ಧರ್ಮಗುರು ಫ್ರಾನ್ಸಿಸ್ ಡಿಸೋಜಾ ಮತ್ತು ಹಲವಾರು ಅತಿಥಿ ಧರ್ಮಗುರುಗಳು ದಿವ್ಯ ಬಲಿ ಪೂಜೆಯನ್ನು ಅರ್ಪಿಸಿದರು.    

   ಕೊಟೇಶ್ವರ ಇಗರ್ಜಿ ಮತ್ತು ಕಟ್ಕರೆ ಬಾಲಯೇಸುವಿನ ಆಶ್ರಮದ ಮುಖ್ಯಸ್ಥರಾದ ವಂ|ಧರ್ಮಗುರು ಪ್ರವೀಣ್ ಪಿಂಟೊ ಸ್ವಾಗತಿಸಿ ಕೊನೆಗೆ ವಂದಿಸಿದರು. ಕಟ್ಕೆರೆ ಬಾಲ ಯೇಸು ಆಶ್ರಮದ ಸಹಾಯಕ ವಂ|ಧರ್ಮಗುರು ಜೋ ಸಿದ್ದಕಟ್ಟೆ ದಾನಿಗಳ ಹಾಗೂ ಪೂಜೆ ನಿವೇದನೆ ಮಾಡಿಕೊಂಡವರ ಹೆಸರುಗಳನ್ನು ವಾಚಿಸಿದರು.  ವಂ|ಫಾ| ಆಲ್ವಿನ್ ಸಿಕ್ವೇರಾ ನಿರ್ದೇಶನದಲ್ಲಿ ಕುಂದಾಪುರ ಚರ್ಚ್ ಗಾಯನ ಪಂಗಡ ದಿವ್ಯ ಬಲಿಪೂಜೆಗೆ ಭಕ್ತಿ ಗೀತೆ ಹಾಡಿ ಸಹಕರಿಸಿತು. ಈ ಕಾರ್ಮೆಲ್ ಮಾತೆಯ ಹಬ್ಬಕ್ಕೆ ಅನೇಕ ಧರ್ಮಭಗಿನಿಯಯರು ಹಾಜರಿದ್ದು, ಕುಂದಾಪುರ ವಲಯ ಹಾಗೂ ಇತರ ಕಡೆಯಿಂದ ಭಕ್ತಾಧಿಗಳು ಈ ಹಬ್ಬದಲ್ಲಿ ಪಾಲ್ಗೊಂಡರು.

ಸರಳ ಇಂಗ್ಲೀಷ್ ಕಲಿಕೆಗೆ ಪೂರಕ ಚಟುವಟಿಕೆ ಆಧಾರಿತ ಪುಸ್ತಕಗಳನ್ನು ಕೊರವಡಿ ಅಂಗನವಾಡಿ ಕೇಂದ್ರಕ್ಕೆ ಉಚಿತ ಕೊಡುಗೆ ನೀಡಿದ ಗೌತಮ್ ಶೆಟ್ಟಿ

ಕುಂದಾಪುರ: ಇಲ್ಲಿಗೆ ಸಮೀಪದ ಕೊರವಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ದಿನಾಂಕ 12 ಜುಲೈ, 2023ರಂದು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಛೇರ್ಮನ್ ಹಾಗೂ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷ ರಾಗಿರುವ ಶ್ರೀಯುತ ಗೌತಮ್ ಶೆಟ್ಟಿ ಮೂಲಕ ಸರಳ ಇಂಗ್ಲಿಷ್ ಕಲಿಕೆಗೆ ಪೂರಕವಾಗಿರುವ ಚಟುವಟಿಕೆ ಆಧಾರಿತ ಪುಸ್ತಕಗಳನ್ನುಉಚಿತವಾಗಿ ವಿತರಿಸಲಾಯಿತು.

”ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಶಿಕ್ಷಿತ ಮಗು ರಾಷ್ಟ್ರವನ್ನು ನಿರ್ಮಿಸುತ್ತದೆ” ಎಂಬ ಚಿಂತನೆಯನ್ನು ದಾನಿಗಳಾದ ಗೌತಮ್ ಶೆಟ್ಟಿಯವರು ಹೊಂದಿದ್ದು ಅವರ ಬೆಂಬಲದೊಂದಿಗೆ ಮಕ್ಕಳ ಶಿಕ್ಷಣದ ಅಭಿವೃದ್ಧಿಗಾಗಿ ಶಾಲಾ ಮಕ್ಕಳಿಗೆ ಉಪಯೋಗವಾಗುವ ಪುಸ್ತಕಗಳನ್ನು ಅವರು ಪ್ರಾಯೋಜಿಸಿದ್ದಾರೆ. ಇದು ಗೌತಮ್ ಶೆಟ್ಟಿಯವರ ಒಂದು ಸೂಕ್ಷ್ಮ ಯೋಜನೆ. ಬಡ ಶಾಲಾ ಮಕ್ಕಳು ಈ ಶಾಲಾ ಶಿಕ್ಷಣ ಪುಸ್ತಕಗಳಿಂದ ಪ್ರಯೋಜನ ಪಡೆಯಲಿದ್ದಾರೆ.

ಬಡ ವಂಚಿತ ಮಕ್ಕಳಿಗೆ ಅವರ ಅಧ್ಯಯನದ ಸಮಯದಲ್ಲಿ ಯಾವುದೇ ರೀತಿಯ ಅನಾನುಕೂಲತೆ ಉಂಟಾಗದಂತೆ ಶಿಕ್ಷಣದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಯೋಜನೆಯ ಮೂಲಕ, ಶಿಕ್ಷಣದ ಅಭಿವೃದ್ಧಿಗೆ ಸ್ವಲ್ಪ ಪ್ರಯತ್ನ ಮಾಡಿದರೆ ವಂಚಿತ ಬಡ ಮಕ್ಕಳ ಭವಿಷ್ಯ ಬದಲಾಗಲಿದೆ ಮತ್ತು ಅನಕ್ಷರತೆ ನಿವಾರಣೆಯಾಗುತ್ತದೆ ಎನ್ನುವುದು ಗೌತಮ್ ಶೆಟ್ಟಿಯವರ ಚಿಂತನೆ.

ಈ ಕಾರ್ಯಕ್ರಮಕ್ಕೆ ಶಾಲಾ ಸಿಬ್ಬಂದಿ, ಪೋಷಕರು ಹಾಗೂ ಮಕ್ಕಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಈ ಸಂಧರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ್ ಹತ್ವಾರ್ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಶ್ರೀಮತಿ ಪ್ರಭಾವತಿ ಶೆಟ್ಟಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಸರೋಜಾ, ಅಂಗನವಾಡಿ ಹಿತೈಷಿ ದಿನೇಶ್, ಮುಖ್ಯ ಶಿಕ್ಷಕಿ ಮಾಲತಿ ಶೆಟ್ಟಿ,ದಿನೇಶ್ ಮೊಗವೀರ ಉಪಸ್ಥಿತರಿದ್ದರು. ಸಹಶಿಕ್ಷಕಿ ನೇತ್ರಾ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶಾಂತಿ ಡಿಸೋಜಾ, ಶ್ರೀಮತಿ ಶೋಭಾ ಪೂಜಾರ್ತಿ, ಅತಿಥಿ ಶಿಕ್ಷಕಿ ಸುದೀಪ, ಗೌರವ ಶಿಕ್ಷಕಿಯರಾದ ಜ್ಯೋತಿ, ಪ್ರಮೀಳಾ, ಕಾವ್ಯ, ಅಂಗನವಾಡಿ ಸಹಾಯಕಿ ಪದ್ಮಾವತಿ ಸಹಕರಿಸಿದರು. ಅಂಗನವಾಡಿ ಶಿಕ್ಷಕಿ ಶ್ರೀಮತಿ ಶೋಭಾ ವಂದನಾರ್ಪಣೆಗೈದರು.

ವರದಕ್ಷಿಣೆಯಾಗಿ ಕಾರು ಕೊಡದಿದ್ದಕ್ಕೆ ಕೇವಲ ಎರಡು ಗಂಟೆಯೊಳಗೆ ತಲಾಖ್

ಆಗ್ರಾ: ವರದಕ್ಷಿಣೆಯಾಗಿ ಕೊಡದಿದ್ದಕ್ಕೆ ಕಾರು ವರನೊಬ್ಬ ಕೇವಲ ಎರಡು ಗಂಟೆಯೊಳಗೆ ಮದುವೆಯಾದ ಎರಡೇ ಗಂಟೆಯಲ್ಲಿ ತನ್ನ ಪತ್ನಿಗೆ ತಲಾಖ್‌ ನೀಡಿರುವ ಅಘಾತಕಾರಿ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.

 ಇದೀಗ ಪೊಲೀಸರು ವರ ಮೊಹಮ್ಮದ್‌ ಆಸಿಫ್‌ ಸೇರಿದಂತೆ ಅರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.   ಈ ಕುರಿತು  ವಧುವಿನ ಸಹೋದರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣೆಕ್ಕೆ ಪ್ರತಿಕ್ರಿಯಿಸಿರುವ ವಧುವಿನ ಸಹೋದರ ಕಮ್ರಾನ್‌ ವಾಸಿ ನನ್ನ ಇಬ್ಬರು ಸಹೋದರಿಯರಾದ ಡಾಲಿ ಹಾಗೂ ಗೌರಿಗೆ ಒಂದೇ ದಿನ ಮದುವೆ ನಿಶ್ಚಯ ಮಾಡಲಾಗಿತ್ತು. ಮದುವೆಯಾದ ಬಳಿಕ ತನ್ನ ಓರ್ವ ತಂಗಿ ಗೌರಿ ತನ್ನ ಪತಿಯ ಮನೆಯವರೊಂದಿಗೆ ಮನೆಗೆ ಹೋಗಿದ್ದಾಳೆ. ಆದರೆ ಡಾಲಿಯ ಪತಿ ಮೊಹಮ್ಮದ್‌ ಆಸಿಫ್‌ ತನಗೆ ಪರದಕ್ಷಿಣೆಯಲ್ಲಿ ಕಾರು ಕೊಡಲಿಲ್ಲ ಎಂದು ತಗಾದೆ ತೆಗೆದಿದ್ದಾನೆ. ಇದಕ್ಕೆ ಒತ್ತು ನೀಡಿ ವರನ ಮನೆಯ ಕಡೆಯವರೂ ಇದೇ ವಿಚಾರದಲ್ಲಿ ತಗಾದೆ ತೆಗೆದು ಕಾರನ್ನು ಕೊಡಿಸುವಂತೆ ಕೇಳಿದ್ದಾರೆ. ಇಲ್ಲದಿದ್ದಲ್ಲಿ, ತಕ್ಷಣವೇ ಐದು ಲಕ್ಷ ರೂ. ಹಣ ಕೊಡುವಂತೆ ಬೇಡಿಕೆಯಿಟ್ಟಿದ್ದಾರೆ.

    ಈ ವೇಳೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸಮಯ ಕೇಳಿದ್ದಕ್ಕಾಗಿ ಅವರು ಕುಪಿತಗೊಂಡು ಆತನ ಕುಟುಂಬಸ್ಥರು ಸ್ಥಳದಲ್ಲಿಯೇ ವರನ ಕಡೆಯಿಂದ ಮೂರು ಬಾರಿ ತಲಾಖ್‌ ಹೇಳಿಸಿ ಹೊರಟು ಹೋಗಿದ್ದಾರೆ.  ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪರ ಮೊಹಮ್ಮದ್‌ ಅಸಿಫ್‌ ಹಾಗೂ ಅತನ ಕುಟುಂಬಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿದೆ

ರೈತರು,ಪಿಂಚಣಿದಾರರು ಕಂದಾಯ ಹಾಗೂ ಪಿಂಚಣಿ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು : ತಹಶೀಲ್ದಾರ್ ಶಿರಿನ್ ತಾಜ್

ಶ್ರೀನಿವಾಸಪುರ: ರೈತರು ಹಾಗೂ ವಿವಿಧ ಯೋಜನೆಗಳ ಪಿಂಚಣಿದಾರರು ಕಂದಾಯ ಹಾಗೂ ಪಿಂಚಣಿ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ತಾಲ್ಲೂಕಿನ ರೋಣೂರಿನ ನಾಡ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಂದಾಯ ಹಾಗೂ ಪಿಂಚಣಿ ಅದಾಲತ್‍ಗೆ ಚಾಲನೆ ನೀಡಿ ಮಾತನಾಡಿ, ಕೃಷಿಕರು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ತಾಲ್ಲೂಕು ಕಚೇರಿಗೆ ಬರುವುದನ್ನು ತಪ್ಪಿಸಲು ಹೋಬಳಿ ಕೇಂದ್ರದಲ್ಲಿ ಅದಾಲತ್ ನಡೆಸಲಾಗುತ್ತಿದೆ ಎಂದು ಹೇಳಿದರು.
ಅದಾಲತ್‍ನಲ್ಲಿ ಪಹಣಿ ಕಾಲಂ ನಂಬರ್ 3 ಮತ್ತು 9 ತಿದ್ದುಪಡಿಗೆ ಸಂಬಂಧಿಸಿದಂತೆ 9 ಪ್ರಕರಣಗಳು, 11ಇ ತಿದ್ದುಪಡಿಗೆ ಸಂಬಂಧಿಸಿದಂತೆ 24 ಪ್ರಕರಣಗಳ ಪೈಕಿ ಪಣಣಿಗೆ ಸಂಬಂಧಿಸಿದ 10, 3 ಮತ್ತು 9 ತಿದ್ದುಪಡಿಗೆ ಸಂಬಂಧಿಸಿದ 8 ಪ್ರಕರಣ ಸೇರಿದಂತೆ ಒಟ್ಟು 51 ಕಡತ ವಿಲೇವಾರಿ ಮಾಡಲಾಯಿತು.
ಉಪ ತಹಶೀಲ್ದಾರ್ ಕೆ.ಎಲ್.ಜಯರಾಮ್, ಕಂದಾಯ ನಿರೀಕ್ಷಕ ವಿನೋದ್ ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಇದ್ದರು.

ದೇಶವು ಪ್ರಗತಿಯತ್ತಾ ಸಾಗಲು ಯುವ ಜನತೆ ಸತ್ಪ್ರಜೆಗಳಾದರೆ ಮಾತ್ರ ಸಾಧ್ಯ – ಪಿಡಿಒ ನರೇಂದ್ರಬಾಬು

ಶ್ರೀನಿವಾಸಪುರ 1 : ದೇಶಕ್ಕೆ ಬೆನ್ನೆಲುಬಾದ ಆರೋಗ್ಯವಂತ ಯುವಕರೇ ದೇಶದ ಆಸ್ತಿ , ದೇಶವು ಪ್ರಗತಿಯತ್ತಾ ಸಾಗಲು ಯುವ ಜನತೆ ಸತ್ಪ್ರಜೆಗಳಾದ ಮಾತ್ರ ಸಾಧ್ಯ . ಆದ್ದರಿಂದ ಆರೋಗ್ಯವಂತ ಸಮಾಜಕ್ಕೆ ಯುವ ಸಮುದಾಯ ಇರಲೇಬೇಕು ಎಂದು ಪಿಡಿಒ ನರೇಂದ್ರಬಾಬು ಹೇಳಿದರು.
ರಾಯಲ್ಪಾಡು ಪ್ರೌಡಶಾಲೆಯಲ್ಲಿ ಗುರುವಾರ ಹೋಬಳಿಯ ಮಟ್ಟದ 2023-24 ನೇ ಸಾಲಿನ 6 ದಿನಗಳ ಕ್ರೀಡಾಕೂಟದ ಪೂರ್ವಭಾವಿ ಸಭೆಯನ್ನು ಉದ್ಗಾಟಿಸಿ ಮಾತನಾಡಿದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಯು ಒಂದು ಅವಿಬಾಜ್ಯ ಅಂಗ ಕ್ರೀಡೆಯಲ್ಲಿ ಪಾಲ್ಗೂಳ್ಳುವುದರಿಂದ ವಿದ್ಯಾರ್ಥಿಗಳಿಗೆ ಓದುವುದಕ್ಕೆ ಮನಸ್ಸು ಉಲ್ಲಾಸವಾಗಿ ,ಏಕಾಗ್ರತೆಯು ಬೆಳೆಯುತ್ತದೆ ಎಂದು ತಿಳಿಸಿದರು. ಕ್ರೀಡೆಗಳು ಎಂದ ಮೇಲೆ ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೊಬಾವ ಮರೆಯಬೇಕು ಎಂದರು.
ಇದೇ ತಿಂಗಳು 24 ರಿಂದ 29 ರ ವರೆಗೆ ನಡೆಯುವ ಕ್ರೀಡಾಕೂಟಕ್ಕೆ ಬೇಕಾದ ಊಟದ , ಬಹುಮಾನಗಳ ವ್ಯವಸ್ಥೆ ಹಾಗೂ ಇತರೆ ಕ್ರೀಡೆಗಳಿಗೆ ಬೇಕಾದ ಸೌಲಭ್ಯಗಳ ಕುರಿತು ಚರ್ಚಿಲಾಯಿತು.
ಹೋಬಳಿ ಮಟ್ಟದ ಕ್ರೀಡಾಕೂಟಗಳ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಕೆ.ಎನ್.ರಾಮಚಂದ್ರ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಆಟವು ಒಂದು ಅಂಗವಾಗಿದ್ದು, ಶಿಕ್ಷಕರು ತಮ್ಮ ತಮ್ಮ ಶಾಲೆಗಳಿಗೆ ಸಂಬಂದಿಸಿದ ಕ್ರೀಡಾಶಕ್ತಿ ಇರುವಂತಹ ವಿದ್ಯಾರ್ಥಿಗಳನ್ನು ಕ್ರೀಡಾಕೂಟಕ್ಕೆ ಕರೆತರುವುದು ಎಂದು ಸಲಹೆ ನೀಡಿದರು. ಹೋಬಳಿ ಮಟ್ಟ ಕ್ರೀಡಾಕೂಟವನ್ನು ದಾನಿಗಳು, ಗ್ರಾಮಸ್ಥರು, ಪ್ರಾಥಮಿಕ , ಪ್ರೌಡಶಾಲಾ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಗ್ರಾಮದ ಮುಖಂಡರಾದ ಸಿಮೆಂಟ್‍ನಾರಾಯಣಸ್ವಾಮಿ, ಸಿ.ಎಸ್.ವೆಂಕಟರಮಣಪ್ಪ, ಆಂಜಿ, ಸಿ.ವಿ.ಮಂಜುನಾಥ್, ಚಕ್ಕಾ ಅಪ್ಪಿ, ಮುಖ್ಯ ಶಿಕ್ಷಕ ಪಿ.ಮಾರಣ್ಣ, ಸಿಆರ್‍ಪಿ ವರದರೆಡ್ಡಿ, ಮುಖ್ಯ ಶಿಕ್ಷಕರಾದ ಎಂ.ಕೆ.ವೆಂಕಟರಮಣ, ಮಂಜೇಶ್, ಕಾವೇರಿ ಶಾಲೆಯ ಮುಖ್ಯ ಶಿಕ್ಷಕ ಮಹೇಶ್, ತಪಸ್ವಿ ಶಾಲೆಯ ಶಿಕ್ಷಕ ಬಾಬು, ವಾಸವಿ ಶಾಲೆಯ ಶಿಕ್ಷಕ ಲಲಿತ , ಪ್ರೌಡಶಾಲಾ ಕಚೇರಿ ಸಿಬ್ಬಂದಿ ಆರೀಫ್ ಇದ್ದರು.

ಮಂಗಳೂರು:ಕಾರು ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ, ಪ್ರಪಾತಕ್ಕೆ ಉರುಳುದು ಸ್ವಲ್ಪದರಲ್ಲೇ ಪಾರಾಗಿ ಅದೃಷ್ಟವಶಾತ್ ಮೂವರು ಬಚಾವ್

ಮಂಗಳೂರು. ನಗರದ ಕದ್ರಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದಿದೆ. ಕಾರಿನಲ್ಲಿನಲ್ಲಿದ್ದವರು ಅದೃಷ್ಟವಶಾತ್ ಅಲ್ಪ ಸ್ವಲ್ಪ ಗಾಯಗಳಾಗಿ ಪಾರಾಗಿದ್ದಾರೆ. ಸ್ವಲ್ಪವೂ ಹೆಚ್ಚು ಕಡಿಮೆ ಆದಲ್ಲಿ ಕಾರು ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳಿ ದೊಡ್ಡ ಅನಾಹುತವಾಗುವುದು ತಪ್ಪಿದಂತಾಗಿದೆ.

   ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ್ಯರಾಗಿ ಪಾರಾಗಿದ್ದಾರೆ. ಶುಕ್ರವಾರ ತಡರಾತ್ರಿ ಸುಮಾರು 12.30ರ ವೇಳೆಗೆ ಅಪಘಾತ ನಡೆದಿದೆ. ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಅಲ್ಲಿದ್ದ ಪ್ರಪಾತದ ಹತ್ತಿರದಲ್ಲಿದ್ದ ಗಿಡ ಗಂಟಿಗಳ ಮಧ್ಯೆ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಗೆ ರಸ್ತೆಯ್ ಲೈಟ್ ಕಂಬ ಉರುಳಿ ದೂರಕ್ಕೆ ಎಸೆಯಲ್ಪಟ್ಟಿದೆ. ಸಂಚಾರಿ ಪೊಲೀಸರು ಪ್ರಕರಣವನ್ನು ದಾಖಲು ಮಾಡಿ ಕೊಂಡಿದ್ದಾರೆ.