HOLY ROSARY CHURCH, KUNDAPUR – 450 th JUBILEE SOUVENIR 2021

ವಿದ್ಯಾರ್ಥಿಗಳುು ಮಾದಕ ಪದಾರ್ಥ ಸೇವನೆಯಿಂದ ದೂರವಿರಬೇಕು : ಪೊಲೀಸ್ ಇನ್ಸ್‍ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ

ಶ್ರೀನಿವಾಸಪುರ: ವಿದ್ಯಾರ್ಥಿಗಳುು ಮಾದಕ ಪದಾರ್ಥ ಸೇವನೆಯಿಂದ ದೂರವಿರಬೇಕು ಎಂದು ಪೊಲೀಸ್ ಇನ್ಸ್‍ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಪೊಲೀಸ್ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಅಂತರ ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಮಾದಕ ವಸ್ತು ವಿರೋಧಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಮಾದಕ ವಸ್ತು ಸೇವನೆ ಮತ್ತು ಅಕ್ರಮ ಮಾರಾಟ ಕಾನೂನು ಬಾಹಿರ. ನಗರ ಪ್ರದೇಶದ ಕೆಲವು ವಿದ್ಯಾರ್ಥಿಗಳು ಅಂಥ ದಂಧೆಯಲ್ಲಿ ತೊಡಗಿರುವುದು ದುರದೃಷ್ಟಕರ ಬೆಳವಣಿಗೆ. ಮಾನವೀಯತೆ ಮರೆಯುವಂತೆ ಮಾಡುವ, ಅಪರಾಧ ಪ್ರೋತ್ಸಾಹಿಸುವ ಹಾಗೂ ಆರೋಗ್ಯಕ್ಕೆ ಮಾರಕವಾದ ಮಾದಕ ದ್ರವ್ಯ ಸೇವನೆ ಮಾಡಬಾರದು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಮಾತನಾಡಿ, ಮದ್ಯಪಾನ ಮತ್ತು ಅಮಲು ಪದಾರ್ಥ ಸೇವನೆ ಮನುಷ್ಯನ್ನು ದುರ್ಬಲಗೊಳಿಸುತ್ತದೆ. ಮಾದಕ ಪದಾರ್ಥಕ್ಕೆ ದಾಸನಾದ ವ್ಯಕ್ತಿ ಮಾನವೀಯತೆ ಮರೆತು ವರ್ತಿಸುವುದುಂಟು. ಆದ್ದರಿಂದಲೇ ಗಾಂಧೀಜಿ ಮದ್ಯಪಾನ ವ್ಯಕ್ತಿಯ ಆತ್ಮವನ್ನು ಕೊಲ್ಲುತ್ತದೆ ಎಂದು ಹೇಳಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿಗಳು ಜನರಲ್ಲಿ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಅದು ಬಡತನ ಮತ್ತು ಅಪರಾಧಕ್ಕೆ ಕಾರಣವಾಗುತ್ತದೆ ಎಂಬ ಸತ್ಯ ತಿಳಿಸಬೇಕು. ಯಾವುದೇ ಕಾರಣಕ್ಕೂ ಮಾದಕ ಪದಾರ್ಥ ಮುಟ್ಟಬಾರದು ಎಂದು ಹೇಳಿದರು.
ವಿದ್ಯಾರ್ಥಿನಿಯರು, ಶಿಕ್ಷಕರು ಹಾಗೂ ಉಪನ್ಯಾಸಕರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಅಮಲು ಪದಾರ್ಥ ಸೇವನೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಿದರು.
ಉಪ ಪ್ರಾಂಶುಪಾಲ ಶ್ರೀಧರ್, ತಾಲ್ಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣಿ ಇದ್ದರು.

St Agnes PU College : Leadership Training Session

Mangalore : Albert Einstein once said, “A leader is one who out of clutter, brings out simplicity,… out of discord, harmony… and out of difficulty, opportunity.” Being a leader is not easy as it requires tremendous courage, vision, hard work and willingness to take risks.

 St Agnes PU College conducted a session on leadership for the newly elected student cabinet members, class representatives of I and II PUC and their assistants on 24 June 2023. The purpose of the workshop was to tap into their latent potential, and bring it to the fore while also streamlining it. The cabinet members were inspired and girded by a sense of purpose to set forth and draw a blue print for the new academic year 2023-24.

Fr Felix Victor, a dynamic trainer was the resource person for the day.He spoke on the traits of a good leader and how these qualities can be learned and implemented. Through this interactive session, he exhorted them to establish clear communication with their peers and emphasized the need for honesty and integrity. He also said that the ability to think on their feet and face challenges head on, staying focused were all indicators of a good leader.

Sr Janet Sequeira, the Vice Principal welcomed the resource person. MsPrival Dsouza, the College President proposed the vote of thanks.

ಗಡಿನಾಡಿನ ಕನ್ನಡ ಪತ್ರಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಐಎಫ್ ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೇರಳ ರಾಜ್ಯ ಕಾಸರಗೋಡು ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಸುಬ್ಬಯ್ಯಕಟ್ಟಿ ಅವರ ನೇತೃತ್ವದ ನಿಯೋಗ ಹೊರನಾಡಿನ ಕನ್ನಡ ಪತ್ರಕರ್ತರ ಸಮಸ್ಯೆ ಬಗ್ಗೆ ಗಮನಸೆಳೆಯಿತು.

ಮಾಧ್ಯಮ ಅಕಾಡೆಮಿ ಸೇರಿದಂತೆ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳಲ್ಲಿ ಗಡಿನಾಡಿನ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕೇರಳ ಘಟಕದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕನ್ನಡ ಪುಸ್ತಕ ನೀಡಿ ಅಭಿನಂದಿಸಲಾಯಿತು.
ಹೊರನಾಡಿನ ಕನ್ನಡಿಗರ ಬೇಡಿಕೆಗಳ ಬಗ್ಗೆ ಗಮನ‌ಹರಿಸುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಮುಸ್ಲಿಮ್ಸ್ ಎಂಪ್ಲಾಯೇಸ್ ಅಸೋಸಿಯೇಷನ್ ವತಿಯಿಂದ ನೂತನ ಜಿಲ್ಲಾಧಿಕಾರಿಗಳಾದ ಅಭಿನಂದನೆ

ಶ್ರೀನಿವಾಸಪುರ: ತಾಲೂಕಿನ ಮುಸ್ಲಿಮ್ಸ್ ಎಂಪ್ಲಾಯೇಸ್ ಅಸೋಸಿಯೇಷನ್ ವತಿಯಿಂದ ಕೋಲಾರದ ನೂತನ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ನಿಯೋಗದಲ್ಲಿ ಮುಸ್ಲಿಮ್ಸ್ ಎಂಪ್ಲಾಯೇಸ್ ಅಸೋಸಿಯೇಷನ್ ಸಲೀಂ ಅಹ್ಮದ್ ಅಬ್ದುಲ್ ವಾಜಿದ್, ಮೊಹಮ್ಮದ್ ಅಲಿ, ಮೊಹಮ್ಮದ್ ಸಾದಿಕ್, ಅಕ್ಮಲ್ ಪಾಷಾ, ತಾಜ್ ಪಾಷಾ, ಸೈಯದ್ ಗೌಸ್, ನಾಸೀರ್ ಪಾಷ ಉಪಸ್ಥಿತರಿದ್ದರು.

ಸಂತ ಮೇರಿ ಪ.ಪೂ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

ಕುಂದಾಪುರದ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 26.06.2023 ರಂದು ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ಖ್ಯಾತ ಮನೋರೋಗ ವೈದ್ಯರಾದ ಶ್ರೀ ಪ್ರಕಾಶ ತೋಳಾರ್ ರವರ ಘನ ಉಪಸ್ಥಿತಿಯಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಪ್ರಖ್ಯಾತ ವೈದ್ಯರಾದ ಗೌರವಾನ್ವಿತ ಶ್ರೀ ಪ್ರಕಾಶ್ ತೋಳಾರ್ ರವರು ಮುಖ್ಯ ಅತಿಥಿಗಳಾಗಿ ದೀಪವನ್ನು ಬೆಳಗುವದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸು ತುಂಬಾ ಪ್ರಾಮುಖ್ಯವಾದುದು. ಈ ಮಾದಕ ಸೇವನೆ ತಕ್ಷಣಕ್ಕೆ ಮಾನಸಿಕ ನೆಮ್ಮದಿಯನ್ನು ನೀಡುವುದಾಗಿದ್ದರೂ ನಮ್ಮನ್ನು ಸಮಸ್ಯೆಯ ಸುಳಿಯಲ್ಲಿ ಸಿಲುಕಿಸುತ್ತದೆ ಎನ್ನುತ್ತಾ, ಮಾದಕ ಸೇವನೆಯಿಂದ ನಮ್ಮ ಅಂಗಾಂಗಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದರು.ಅಲ್ಲದೆ ವಿದ್ಯಾರ್ಥಿಗಳು ಅರಿವು ಮೂಡಿಸಿಕೊಳ್ಳಬೇಕು ಎನ್ನುತ್ತಾ ಅನೇಕ ಎಚ್ಚರಿಕೆಯ,ಕಿವಿ ಮಾತುಗಳನ್ನಾಡುತ್ತಾ,ವಿದ್ಯಾರ್ಥಿಗಳ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರೇಷ್ಮಾ ಫೆರ್ನಾಂಡಿಸ್ ರವರು ಅಧ್ಯಕ್ಷ ಸ್ಥಾನ ವಹಿಸಿ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿ, ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ತಿಳಿಸಿದರು. ಉಪ ಪ್ರಾಂಶುಪಾಲರಾದ ಶ್ರೀಮತಿ ಮಂಜುಳಾ ನಾಯರ್ ರವರು ಸಭೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ ಮಾಡಿಸಲಾಯಿತು.

ಕಾರ್ಯಕ್ರಮ ಪ್ರಾರ್ಥನೆಯಿಂದ ಪ್ರಾರಂಭವಾಗಿ, ವಿದ್ಯಾರ್ಥಿಗಳಾದ ಕುಮಾರಿ ಅಮೃತಾ ಹಾಗೂ ಪ್ರಗತಿ ಕ್ರಮವಾಗಿ ಸ್ವಾಗತಿಸಿ,ವಂದಿಸಿದರು. ಕುಮಾರಿ ನಂದಿತಾ ಹಾಗೂ ಕುಮಾರಿ ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು.

ಪಿಯುಸ್ ನಗರ ಚರ್ಚಿನ ಧರ್ಮಗುರುಗಳ ಜನ್ಮದಿನದ ವಜ್ರೋತ್ಸವ ಆಚರಣೆ


ಕುಂದಾಪುರ, ಜೂ.26: ಪಿಯುಸ್ ನಗರ ಚರ್ಚಿನ ಧರ್ಮಗುರು ವಂ|ಆಲ್ಬರ್ಟ್ ಕ್ರಾಸ್ತಾ ಇವರ ಜನ್ಮದಿನದ ವಜ್ರೋತ್ಸವವನ್ನು ಜೂ.25 ರಂದು ಬಹಳ ಅದ್ದೂರಿಯಿಂದ ಆಚರಿಸಲಾಯಿತು. ಕುಂದಾಪುರ ವಲಯ ಪ್ರಧಾನರಾದ ಕುಂದಾಪುರ ರೋಜರಿ ಮಾತಾ ಚರ್ಚಿನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ, ಕಟ್ಕರೆ ಬಾಲಯೇಸುವಿನ ಆಶ್ರಮದ ಮುಖ್ಯಸ್ಥರಾದ ಧರ್ಮಗುರು ವಂ|ಪ್ರವೀಣ್ ಪಿಂಟೊ ಹಾಗೂ ಧರ್ಮಗುರು ವಂ|ಜೋನ್ ಸಿಕ್ವೇರಾ, ಇವರೂಂದಿಗೆ ಅಂದು ಪೂರ್ವಾಹ್ನಾ ಕ್ರತಜ್ಞತಾ ಬಲಿದಾನವನ್ನು ವಂ|ಆಲ್ಬರ್ಟ್ ಕ್ರಾಸ್ತಾ ಅರ್ಪಿಸಿದರು.
ನಂತರ ನಡೆದ ಅಭಿನಂದನಾ ಸಮಾರಂಭಕ್ಕೆ ವಂ|ಆಲ್ಬರ್ಟ್ ಕ್ರಾಸ್ತಾರವರನ್ನು ಬ್ಯಾಂಡ್ ವಾದ್ಯಗಳ ಸಮ್ಮೇಳನದೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಸ್ವಾಗತ ನ್ರತ್ಯದೊಂದಿಗೆ ಕಾರ್ಯಕ್ರಮ ಆರಂಭವಾಗಿ ಪಾಲನ ಮಂಡಳಿ ಉಪಾಧ್ಯಕ್ಷ ಜೆಮ್ಸ್ ಡಿಮೆಲ್ಲೊ ಸ್ವಾಗತಿಸಿದರು. ಪಾಲನ ಮಂಡಳಿ ಮಾಜಿ ಉಪಾಧ್ಯಕ್ಷ ವಾಲ್ಟರ್ ಫೆರ್ನಾಂಡಿಸ್ ಧರ್ಮಗುರುಗಳಿಗೆ ಶುಭ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ವಂ|ಆಲ್ಬರ್ಟ್ ಕ್ರಾಸ್ತಾ ರವರನ್ನು ಧರ್ಮಕೇಂದ್ರದ ಪರವಾಗಿ ವೇದಿಕೆಯಲ್ಲಿ ಇದ್ದ ಗಣ್ಯರು ಫಲ ಪುಷ್ಪ ನೀಡಿ ಸನ್ಮಾನಿಸಿದರು. ಪಾಲನ ಮಂಡಳಿ ಕಾರ್ಯದರ್ಶಿ ರೇಶ್ಮಾ ಡಿಸೋಜಾ ಸನ್ಮಾನ ಪತ್ರವನ್ನು ವಾಚಿಸಿದರು. ಧರ್ಮಗುರುಗಳ ಕುಟುಂಬದವರೂ ಧರ್ಮಗುರುಗಳನ್ನು ಸನ್ಮಾನಿಸಿದರು.
ಧರ್ಮಗುರು ವಂ|ಜೋನ್ ಸಿಕ್ವೇರಾ “ಶುಭ ಹಾರೈಸಿ 60 ವರ್ಷ ಮುಗಿದಿದೆ ಇನ್ನೂ ಧರ್ಮಗುರುಗಳು ತಮ್ಮ ಆರೋಗ್ಯದ ಕಡೆ ಗಮನ ನೀಡಬೇಕು” ಎಂದು ಕಿವಿ ಮಾತು ಹೇಳಿದರು. ವಂ|ಆಲ್ಬರ್ಟ್ ಕ್ರಾಸ್ತಾರವರ ಸಹೋದರ ಮ್ಯಾಕ್ಸಿಮ್ ಕ್ರಾಸ್ತಾ ಬಾಲ್ಯದ ನೆನಪುಗಳನ್ನು ಸ್ಮರಿಸಿದರು. ಕುಂದಾಪುರ ರೋಜರಿ ಮಾತಾ ಚರ್ಚಿನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊರವರು ಪಿಯುಸ್ ನಗರ ಧರ್ಮಪ್ರಜೆಗಳ ಬಗ್ಗೆ ಹೇಳುತ್ತಾ, ಧರ್ಮಗುರುಗಳ ಮೇಲಿರುವ ಅಭಿಮಾನ ಪ್ರೀತಿ ಉಲ್ಲೇಖಿಸಿ ಪ್ರಶಂಸಿ, ಧರ್ಮಗುರುಗಳಿಗೆ ಶುಭ ಹಾರೈಸಿದರು.
ವಂ|ಆಲ್ಬರ್ಟ್ ಕ್ರಾಸ್ತಾರವರು ತಮ್ಮ ಜನ್ಮದಿನಾಚರಣೆಯನ್ನು ಧರ್ಮಪ್ರಜೆಗಳು ವಿಜ್ರಂಭಣೆಯಿಂದ ಆಚರಿಸಿದಕ್ಕೆ ಹಾಗೂ ಅವರ ಮುಕ್ತ ಮನಸಿಗೆ, ಸಹಕಾರಕ್ಕೆ ಧರ್ಮಪ್ರಜೆಗಳನ್ನು ಕ್ರತ್ಞತೆ ಸಲ್ಲಿಸಿ ಪಾಲನ ಮಂಡಳಿಯ ಕಾರ್ಯಾಕಾರಿ ಸಮಿತಿ ಸದಸ್ಯರಿಗೆ ಹೂ ಗುಚ್ಛ ನೀಡಿ ಅಭಿನಂದಿಸಿದರು. ವೇದಿಕೆಯಲ್ಲಿ ವಂ|ಫಾ|ಪ್ರವೀಣ್ ಪಿಂಟೊ, ಸಿಸ್ಟರ್ ಲಿಡಿಯಾ ಉಪಸ್ಥಿತರಿದ್ದರು. ಆಯೋಗಳ ಸಂಚಾಲಕಿ ಲೀನಾ ತಾವ್ರೊ ಧನ್ಯವಾದಗಳನ್ನು ಅರ್ಪಿಸಿದರು. ಎವ್ಲಿನ್ ಫೆರ್ನಾಂಡಿಸ್ ಕಾರ್ಯಕ್ರ ನಿರೂಪಿಸಿದರು.

ಟಿವಿಗಾಗಿ ಎರಡು ಜೀವಗಳ ದುರಂತ ಸಾವು : ದಂಪತಿಗಳ ದಾರುಣ ಅಂತ್ಯ – ಅನಾಥರಾದರು ಇಬ್ಬರು ಮಕ್ಕಳು

ಕಾರ್ಕಳ, ಜೂ 25:  ತಾಲೂಕಿನ ನಲ್ಲೂರು ಹುರ್ಲಾಡಿ ಎಂಬಲ್ಲಿ ಮುಂಬಯಿಯ ಸಾಹುಕಾರ ಊರಿನ  ತೋಟದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಸಿದ್ದಿ ಜನಾಂಗದ ದಂಪತಿಗಳ ನಡುವೆ ರವಿವಾರ ಬೆಳಿಗ್ಗೆ ಟಿವಿ ಮಾರಾಟದ ವಿಚಾರದಲ್ಲಿ ಜಗಳ ಉಂಟಾಗಿದ್ದು ಇದರಿಂದ ನೊಂದ ಪತ್ನಿ ಕೆರೆಯೊಂದಕ್ಕೆ ಹಾರಿದಳು, ಆಕೆಯ ರಕ್ಷಣೆಗೆ ಮುಂದಾದ ಆಕೆಯ ಪತಿಯೂ ಕೂಡಾ ಅದೇ ಕೆರೆಗೆ ಹಾರಿದ್ದಾನೆ, ಆದರೆ ಅವರಿಬ್ಬರೂ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಅವರು ಮೂಲತಹ ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ಧಿ (40) ಹಾಗೂ ಯಶೋಧಾ (32) ಎಂಬವರು ದುರಂತ ಸಾವಿಗೆ ಒಳಗಾದ ದಂಪತಿ ಎಂದು ಗುರುತಿಸಲಾಗಿದೆ.

ಸಿದ್ದಿ ಜನಾಂಗದವರಾಗಿದ್ದ ಇವರು ಕಳೆದ ಎರಡು ವರ್ಷಗಳಿಂದ ಮುಂಬಯಿ ಹೋಟೆಲ್ ಉದ್ಯಮಿ ನಲ್ಲೂರು ಹುರ್ಲಾಡಿ ರಘುವೀರ್ ಶೆಟ್ಟಿ ಅವರ ತೋಟದ ಕೆಲಸ ಮಾಡಿಕೊಂಡಿದ್ದರು. ಉತ್ತಮ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದ ದಂಪತಿಗಳ ನಡುವೆ ಇತ್ತೀಚಿನ ದಿನಗಳಲ್ಲಿ ಇಮ್ಯಾನುಲ್ ಸಿದ್ಧಿ (40) ಕುಡಿತದ ಚಟ ಹೊಂದಿಕೊಂಡಿದ್ದನು ಎಂದು. ತಿಳಿದುಬಂದಿದೆ. ದಂಪತಿಗಳ ಇಬ್ಬರು ಮಕ್ಕಳುಗಳಾದ ಸಾಲೂವ್ (11) ಐರೀನ್(10) ಸ್ಥಳೀಯ ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದರು. ಮಕ್ಕಳಿಂದ ದೊರಕಿದ ಮಾಹಿತಿ ಪ್ರಕಾರ ರವಿವಾರ ಬೆಳಿಗ್ಗೆ ಇಮ್ಯಾನುಲ್ ಸಿದ್ಧಿ ತನ್ನ ಪತ್ನಿಯಲ ಜೊತೆ ಮನೆಯಲ ಟಿ ವಿ ಯನ್ನು ಮಾರಾಟ ಮಾಡುವ ಬಗ್ಗೆ ಮಾತು ಬೆಳೆಸಿದ್ದಾನೆ.. ಅದಕ್ಕೆ ಪತ್ನಿ ಯಶೋಧ ಆಕ್ಷೇಪ ವ್ಯಕ್ತ ಪಡಿಸಿದಾಗ ಅವರೊಳಗೆ ಜಗಳ ಏರ್ಪಟ್ಟು,  ಯಶೋಧ ಮನೆಯಿಂದ ಓಡಿ ಹೋಗಿ ಸಮೀಪದ ಕೆರೆಗೆ ಹಾರಿದ್ದಾಳೆ, ಪತ್ನಿಯ ಜೀವ ಕಾಪಾಡಲು ಅದೇ ಕೆರೆಗೆ ಹಾರಿದ್ದಾನೆ, ಆದರೆ ಇಮ್ಯಾನುಲ್ ಸಿದ್ಧಿ ಎರಡು ಮೂರು ಸಲ ನೀರಿನಿಂದ ಮೇಲೆ ಕೆಳಗೆ ಹೋದರೂ ನಾಲ್ಕನೇ ಬಾರಿ ಆತ ಕೂಡಾ ಅದೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇಮ್ಯಾನುಲ್ ಸಿದ್ಧಿ ಈಜುಗಾರನಾಗಿದ್ದರೂ ಪತ್ನಿಯನ್ನು ರಕ್ಷಿಸಲು ಅಸಾಧ್ಯವಾಗಿ ಅದೇ ಕೆರೆಯಲ್ಲಿ ಆತ್ಮಹತ್ಯೆ ಗೈದಿರಬೇಕೆಂದು ಶಂಕಿಸಲಾಗಿದೆ. ಈ ಎಲ್ಲಾ ದೃಶ್ಯಾವಳಿಯು ದಂಪತಿಯ ಮಕ್ಕಳು ಕಣ್ಣಾರೆ ಕಂಡಿದ್ದಾರೆ ಒಟ್ಟಾರೆಯಾಗಿ ಕುಡಿತ ಮತ್ತು ಟಿವಿ ದೆಸೆಯಿಂದ ಎರಡು ಜೀವ ಹೋಗಿ ಪುಟ್ಟ ಮಕ್ಕಳು ಅನಾಥರಾಗಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಎಸ್ ಐ ತೇಜಸ್ವಿ ಹಾಗೂ ಪೊಲೀಸ್ ಸಿಬ್ಬಂದಿಗಳು ಅಗಮಿಸಿ ಅಗತ್ಯ ಮಾಹಿತಿಗಳನ್ನು ಕಲೆಹಾಕಿ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿಸಲಾಗಿದೆ. ಶವಗಳನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ

.

ಶ್ರೀನಿವಾಸಪುರ:ಕನ್ಯಕಾ ಪರಮೇಶ್ವರಿ ದೇವಾಲಯದ 32ನೇ ವಾರ್ಷಿಕೋತ್ಸವ

ಶ್ರೀನಿವಾಸಪುರ: ಕನ್ಯಕಾ ಪರಮೇಶ್ವರಿ ದೇವಾಲಯದಲ್ಲಿ ಆರ್ಯವೈಶ್ಯ ಮಂಡಳಿ ಟ್ರಸ್ಟ್, ಲಲಿತಾ ಮಹಿಳಾ ಸಂಘ ಹಾಗೂ ವಾಸವಿ ಯುವಕದ ವತಿಯಿಂದ ಶನಿವಾರ ದೇವಾಲಯದ 32ನೇ ವಾರ್ಷಿಕೋತ್ಸವ ಆಚರಿಸಲಾಯಿತು. ವಾರ್ಷಿಕೋತ್ಸವ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದೇವಾಲಯದಲ್ಲಿ ದೇವಿ ವಿಗ್ರಹಕ್ಕೆ ವಿಶೇಷ ಅಲಂಕಾರ ಹಾಗೂ ಅಕ್ಕಿ ಅಭಿಷೇಕ ಮಾಡಲಾಯಿತು. ಲಲಿತಾ ಮಹಿಳಾ ಮಂಡಳಿ ಸದಸ್ಯರ ವತಿಯಿಂದ ಕನ್ಯಕಾಪರಮೇಶ್ವರಿ ಕುರಿತ ಭಕ್ತಿ ಗೀತೆಗಳ ಗಾಯನ ಏರ್ಪಡಿಸಲಾಗಿತ್ತು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಗಣನೀಯ ಸಾಧನೆ ಮಾಡಿದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಪುರಸ್ಕಾರ ನೀಡಲಾಯಿತು. ಪಿಯುಸಿ ವಿಜ್ಞಾನ ವಿಷಯದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಗಂಗೋತ್ರಿ ಪಿಯು ಕಾಲೇಜಿನ ವಿದ್ಯಾರ್ಥಿ ಎಸ್.ಎಂ.ಕೌಶಿಕ್, ಸ್ನಾತಕೋತ್ತರ ಪದವಿ ಪಡೆದ ಎಂ.ಬಿ.ಮೃದುಲ ಸುರೇಖಾ ಹಾಗೂ ಪಿ.ಎಸ್.ನಾಗಧೀರಜ್ ಅವರಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಆರ್ಥಿಕ ನೆರವು ನೀಡಲಾಯಿತು.
ತಾಲ್ಲೂಕು ಆರ್ಯವೈಶ್ಯ ಟ್ರಸ್ಟ್ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್, ಕಾರ್ಯದರ್ಶಿ ಕೆ.ವಿ.ಸೂರ್ಯನಾರಾಯಣಶೆಟ್ಟಿ, ರಾಜ್ಯ ಆರ್ಯವೈಶ್ಯ ಮಹಾಸಭಾದ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಆರ್.ಅಮರನಾಥ್ ಕಾರ್ಯಕ್ರಮದ ನೇತೃತ್ವ ಹಿಸಿದ್ದರು.

ನೀಲಟೂರು ಗ್ರಾಮದಲ್ಲಿ ಶನಿವಾರ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ

ಶ್ರೀನಿವಾಸಪುರ: ತಾಲ್ಲೂಕಿನ ನೀಲಟೂರು ಗ್ರಾಮದಲ್ಲಿ ಶನಿವಾರ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಪ್ರಸಾದ್ (33) ಕೊಲೆಯಾದ ಯುವಕ.
ಪ್ರಸಾದ್ ಮತ್ತು ಕಿರಣ್ ಕುಟುಂಬದ ಮಧ್ಯೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಾವಿನ ಕಾಯಿ ಕೀಳುವ ವಿಚಾರದಲ್ಲಿ ಜಗಳವಾಗಿದೆ. ಕಿರಣ್, ಪ್ರಸಾದ್ ಮುಖಕ್ಕೆ ಕಾರದ ಪುಡಿ ಎರಚಿ ಕಬ್ಬಿಣದ ರಾಡ್ ಮತ್ತು ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಪ್ರಸಾದ್ ಅವರನ್ನು ಆಂಬುಲೆನ್ಸ್‍ನಲ್ಲಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ಹೇಳಲಾಗಿದೆ.
ಆರೋಪಿ ಕಿರಣ್ ಶ್ರೀನಿವಾಸಪುರ ಪೊಲೀಸರಿಗೆ ಶರಣಾಗಿದ್ದು, ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನೀಲಟೂರಿನಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.