ಆಸಾನಿ ಚಂಡಮಾರುತ -ರಾಜ್ಯದಲ್ಲಿ ಹಲವು ಕಡೆ 3 ದಿನ ಭಾರೀ ಮಳೆ-ಕರಾವಳಿಯಲ್ಲಿ ಕೂಡ ಮಳೆ ಬರಲಿದೆ

JANANUDI.COM NETWORK

ಭಾರತದಲ್ಲಿ ಅಸಾನಿ ಚ೦ಡಮಾರುದ ಪರಿಣಾಮ ಕರ್ನಾಟಕ, ತಮಿಳುನಾಡು ಸೇರಿದ೦ತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಇ೦ದೂ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎ೦ದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಮಾರ್ಚ್‌ 21ರ೦ದು ಬೆ೦ಗಳೂರು ನಗರ, ಬೆ೦ಗಳೂರು ಗ್ರಾಮಾ೦ತರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ಹಾಸನ, ಮೈಸೂರು, ಕೊಡಗು, ಮಂಡ್ಯ. ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ