ಮೂಡುಬೆಳ್ಳೆ ಸಂತ ಲಾರೆನ್ಸ್ ಪ ಪೂ ಕಾಲೇಜಿನಲ್ಲಿ ಐ ಎ ಎಸ್ ಪರೀಕ್ಷಾ ತರಬೇತಿ.

JANANUDI.COMNETWORK


ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸರಿಯಾದ ಮಾರ್ಗದರ್ಶನ ಬೇಕು. ಈ ದಿಶೆಯಲ್ಲಿ ನ್ಯಾಶನಲ್ ಐ ಎ ಎಸ್ ಅಕಾಡೆಮಿಯು ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡುತ್ತಿದೆ. ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದು ಸರಕಾರಿ ಉದ್ಯೋಗ ಪಡೆಯಲು ಪ್ರಯತ್ನಶೀಲರಾಗಬೇಕು ಎಂದು ಸುನೀಲ್ ಬಿ ಎನ್ ಹೇಳಿದರು. ಅವರು ಮೂಡುಬೆಳ್ಳೆ ಸಂತ ಲಾರೆನ್ಸ್ ಪ ಪೂ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೆಶಕರಾದ ಜೊಸೆಫ್ ಡಿಸೋಜ ವಂದಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ಪ್ರಮಿತಾ ವೀರಾ ನಿರ್ವಹಿಸಿದರು. ವಾಣಿಜ್ಯ ಶಾಸ್ತಾ ಉಪನ್ಯಾಸಕಿ ಜೆಸಿಂತಾ ನತಾಲಿಯಾ ಲೊಬೊ ಪ್ರಾಸ್ತಾವಿಕವಾಗಿ ಮಾತನಾಡಿದರು.