ಜೆಡಿಎಸ್‍ಗೆ ಮತ ನೀಡಿದರೆ ಬಿಜೆಪಿಗೆ ಮತ ನೀಡಿದಂತಾಗುತ್ತದೆ ಶಾಸಕ ಜಮೀರ್ ಅಹ್ಮದ್ ಹೇಳಿದರು.

ಶ್ರೀನಿವಾಸಪುರ: ಜೆಡಿಎಸ್‍ಗೆ ಮತ ನೀಡಿದರೆ ಬಿಜೆಪಿಗೆ ಮತ ನೀಡಿದಂತಾಗುತ್ತದೆ ಎಂದು ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಹೇಳಿದರು.
ತಾಲ್ಲೂಕಿನ ಗೌನಿಪಲ್ಲಿಯಲ್ಲಿ ಬುಧವಾರ ಏರ್ಪಡಿಸಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸಂಯುಕ್ತ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಹೋಟೆಲ್ ವಾಸ್ತವ್ಯ ಮಾಡಿ ಜನರಿಂದ ದೂರವಾದರು. ಕೊನೆಗೆ ಬಿಜೆಪಿಗೆ ಅಧಿಕಾರ ಬಿಟ್ಟುಕೊಟ್ಟರು ಎಂದು ಹೇಳಿದರು.
ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾತನಾಡಿ, ಅಂದು ಗಾಂಧೀಜಿ ಅವರ ಹತ್ಯೆ ಮಾಡಿದ ಸಂಘಟನೆಗೆ ಸೇರಿದವರು ಇಂದು ದೇಶ ಆಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಂದಾಗಿ ದೇಶಕ್ಕೆ ದರಿದ್ರ ಆವರಿಸಿದೆ. ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಿಂಚತ್ತೂ ಕರುಣೆಯಿಲ್ಲ. ಮೋದಿ ಸೂಟು ಧರಿಸಿ ಸುಳ್ಳು ಹೇಳುತ್ತಾರೆ ಎಂದು ಹೇಳಿದರು.
ಅಲ್ಪ ಸಂಖ್ಯಾತ ಹೆಣ್ಣು ಮಕ್ಕಳು ಹಿಜಾಬ್ ಧರಿಸಿದರೆ ಆಗುವ ನಷ್ಟವಾದರೂ ಏನು. ಒಂದು ಸಮುದಾಯದ ಸಾಂಸ್ಕøತಿಕ ಪರಂಪರೆಗೆ ಗೌರವ ನೀಡದೆ, ಅವರ ಭಾವನೆಗಳನ್ನು ಘಾಸಿಗೊಳಿಸಲಾಗಿದೆ. ರಾಹುಲ್ ಗಾಂಧಿ ತಮ್ಮ ಪ್ರಾಣದ ಮೇಲೆ ಹಂಗು ತೊರೆದು, ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಭಾರತ್ ಜೋಡೊ ಯಾತ್ರೆ ನಡೆಸಿದರು. ಸಮಾನತೆ, ಸೌಹಾರ್ದತೆ ಹಾಗೂ ಸೋದರತ್ವಕ್ಕಾಗಿ ಪಾದಯಾತ್ರೆ ಮಾಡಿದರು ಎಂದು ಹೇಳಿದರು.
ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುತ್ತಾರೆ. ಅವರು ಮತ್ತೆ ಮುಖ್ಯ ಮಂತ್ರಿ ಆಗಬೇಕು ಎಂಬುದು ಜನರ ಇಚ್ಛೆಯಾಗಿದೆ. ಬಿಜೆಪಿ ತುಂಬಿರುವ ಕತ್ತಲೆ ಕಳೆಯುವ ಶಕ್ತಿ ಕಾಂಗ್ರೆಸ್‍ಗೆ ಮಾತ್ರ ಇದೆ ಎಂದು ಅಭಿಪ್ರಾಯಪಟ್ಟರು.
ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕಮೀಷನ್ ದಂಧೆಯಲ್ಲಿ ಮುಳುಗಿ ಜನರ ಸಮಸ್ಯೆಗಳಿಗೆ ಗಮನ ನೀಡುತ್ತಿಲ್ಲ. ಇದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕೆಸಿ ವ್ಯಾಲಿ ಯೋಜನೆ ಜಾರಗೆ ಕಾಂಗ್ರೆಸ್ ಕಾರಣ, ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿದ್ದಾಗ 1300 ಕೋಟಿ ಮಂಜೂರು ಮಾಡಲಾಗಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಎತ್ತಿಹ ಹೊಳೆ ಯೋಜನೆ ಸ್ಥಗಿತಗೊಂಡಿದೆ ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಮುಖಂಡರಾದ ದಿಂಬಾಲ ಅಶೋಕ್, ಎಂ.ಶ್ರೀನಿವಾಸನ್, ಮ್ಯಾಕಲ ನಾರಾಯಣಸ್ವಾಮಿ, ಸಿ.ಎಂ.ಮುನಿಯಪ್ಪ, ಎನ್.ಮುನಿಸ್ವಾಮಿ, ಎನ್.ಜಿ.ಬ್ಯಾಟಪ್ಪ, ಅಕ್ಬರ್ ಷರೀಫ್, ಬಿ.ಜಿ.ಸೈಯದ್ ಖಾದರ್, ಸಂಜಯ್‍ರೆಡ್ಡಿ, ಗೊಲ್ಲಹಳ್ಳಿ ಶಿವಪ್ರಸಾದ್, ಅಂಬರೀಶ್, ಶಶಿಕುಮಾರ್, ವಿ.ಮುನಿಯಪ್ಪ ಇದ್ದರು.