

ನಂದಳಿಕೆಃಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸನ್ನಿಧಿಯಲ್ಲಿ ನಂದಳಿಕೆ ಚಾವಡಿ ಅರಮನೆ ಸುಂದರರಾಮ ಹೆಗ್ಡೆ ಯವರ ಶುಭ ಆಶೀರ್ವಾದದೊಂದಿಗೆ ಬೆಲ್ಮಣ್ಣು ಪುರುಷೋತ್ತಮ ಸ್ವಾಮಿಯವರ ನೇತೃತ್ವದಲ್ಲಿ ಬರುವ ದಿನಾಂಕ ಜನವರಿ 13ರ ಶನಿವಾರದಂದು ಬೆಳಿಗ್ಗೆ 5:30 ರಿಂದ ಇರುಮುಡಿ . ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಅಯ್ಯಪ್ಪ ದೇವರ ಮಹಾಪೂಜೆ ಮತ್ತು ಮಹಾ ಅನ್ನಸಂತರ್ಪಣೆ ನೆರವೇರಲಿರುವುದು.ಈ ದೇವತಾ ಕಾರ್ಯದಲ್ಲಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದವನ್ನು ಸ್ವೀಕರಿಸಬೇಕಾಗಿ ವಿನಂತಿಸುವ ಅಯ್ಯಪ್ಪ ಭಕ್ತವೃಂದ ನಂದಳಿಕೆ.