ತಾಡಿಗೋಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಮದ್ಯ ವಶ, ವ್ಯಕ್ತಿಯ ಬಂಧನ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಅಬಕಾರಿ ಇಲಾಖೆ ಅಧಕಾರಿಗಳು ತಾಲ್ಲೂಕಿನ ತಾಡಿಗೋಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮತಂಪಲ್ಲಿ ಕ್ರಾಸ್ ಸಮೀಪ ಕಾರೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ, ಮದ್ಯ ವಶಪಡಿಸಿಕೊಂಡಿದ್ದಾರೆ.
ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಗ್ಗೆ ಸಿಕ್ಕಿದ ಖಚಿತ ಸುಳಿವಿನ ಮೇರೆಗೆ, ಶುಕ್ರವಾರ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಕಾರಿನಲ್ಲಿದ ಸುರೇಶ್ ಎನ್ನುವ ವ್ಯಕ್ತಿಯನ್ನು ಬಂಧಿಸಿ, 34.56 ಲೀಟರ್ ಮದ್ಯ ಹಾಗೂ 54.6 ಲೀಟರ್ ಬಿಯರ್ ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅಬಕಾರಿ ಇನ್ಸ್‍ಪೆಕ್ಟರ್ ಬಿ.ಎಸ್.ರೋಹಿತ್, ಸಬ್ ಇನ್ಸ್‍ಪೆಕ್ಟರ್ ಕೃಷ್ಣಪ್ಪ, ಪೇದೆಗಳಾದ ಮಂಜುನಾಥ್, ರಾಘವೇಂದ್ರ ದಾಳಿಯಲ್ಲಿ ಭಾಗವಹಿಸಿದ್ದರು.