ಹಾಲಾಡಿಯಲ್ಲಿ ಭಂಡಾರಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ

ಕುಂದಾಪುರ : ಡಿಸೆಂಬರ್ 23ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿ, ಹಾಲಾಡಿಯಲ್ಲಿ ಭಂಡಾರಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಶ್ರೀ ಜನಾರ್ಧನ, ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಹಾಲಾಡಿ ಇವರು ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ ನಾರಾಯಣ ಶೆಟ್ಟಿ ವಹಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ,ವಸಂತ್ ಕುಮಾರ್ ಶೆಟ್ಟಿ ನಿವೃತ್ತ ಶಿಕ್ಷಣಧಿಕಾರಿ ಬ್ರಹ್ಮಾವರ ವಲಯ, ಯಕ್ಷ ಗುರು ಐರೋಡಿ ಮಂಜುನಾಥ್ ಕುಲಾಲ್, ಹೇಮಾ ಗ್ರಾಮ ಪಂಚಾಯತ್ ಸದಸ್ಯರು ಹಾಲಾಡಿ, ಶಂಕರ್ ಐತಾಳ್,ಅಧ್ಯಕ್ಷರು ಗೀತಾ ಫೌಂಡೇಶನ್ ಕೋಟೇಶ್ವರ, ಶೇಖರ್. ಯು ಶಿಕ್ಷಣ ಸಂಯೋಜಕರು ಹಾಲಾಡಿ ವೃತ್ತ, ಗಣೇಶ ಎಂ.,ಅಧ್ಯಕ್ಷರು ಎಸ್ ಡಿ ಎಂ ಸಿ,ಸ.ಹಿ.ಪ್ರ ಶಾಲೆ, ಮೂದೂರಿ, ಸಂಜೀವ ನಾಯ್ಕ, ಮುಖ್ಯೋಪಾಧ್ಯಾಯರು ಸ.ಹಿ.ಪ್ರ ಶಾಲೆ, ಮುದೂರಿ,ಶ್ರೀ ರಮೇಶ್ ನಾಯ್ಕ, ಅಧ್ಯಕ್ಷರು, ಹಳೆ ವಿದ್ಯಾರ್ಥಿ ಸಂಘ, ಸ. ಹಿ. ಪ್ರಾ ಶಾಲೆ, ಮುದೂರಿ ಮತ್ತು ಗಣೇಶ್ ಮೊಗವೀರ ಅಧ್ಯಕ್ಷರು ಮೈತ್ರಿ ಯುವಕ ಮಂಡಲ ಮುದೂರಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಯಕ್ಷಗುರು ಯಕ್ಷಶ್ರೀ ಶ್ರೀ ಐರೋಡಿ ಮಂಜುನಾಥ ಕುಲಾಲ್ ಇವರನ್ನು ಸನ್ಮಾನಿಸಲಾಯಿತು.
ಈ ದಿನ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗುರು ಐರೋಡಿ ಮಂಜುನಾಥ್ ಕುಲಾಲ್ ಅವರ ನಿರ್ದೇಶನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರಸಂಗ ಮೀನಾಕ್ಷಿ ಕಲ್ಯಾಣ ನಡೆಯಿತು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾದ ರಾಮಚಂದ್ರ ಆಚಾರ್ ಸ್ವಾಗತಿಸಿ, ವಿದ್ಯಾರ್ಥಿನಿ ಚಿತ್ರ ವಂದಿಸಿ, ಸುಶ್ಮಿತಾ ನಿರೂಪಿಸಿ ಕಾರ್ಯಕ್ರಮ ನಿರ್ವಹಿಸಿದರು.