ಜ.2 ರಂದು ಕೊಲ್ಲೂರಿನಲ್ಲಿ ಭಜನಾ ಅಭಿಮಾನ-ಅಭಿಯಾನ ಉದ್ಘಾಟನೆ

JANANUDI.COM NETWORK


ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್
ಕುಂದಾಪುರ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕುಂದಾಪುರ ತಾಲೂಕು, ಮುಕಾಂಬಿಕಾ ದೇವಸ್ಥಾನ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ದ್ವಿತೀಯ ವರ್ಷದ ಭಜನಾ ಅಭಿಮಾನ-ಅಭಿಯಾನ ಉದ್ಘಾಟನೆ ಜ.2ರಂದು ಭಾನುವಾರ ಬೆಳಿಗ್ಗೆ 8.30ರಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸ್ವರ್ಣ ಮಂಟಪದಲ್ಲಿ ಜರುಗಲಿದೆ.
ಬೆಳಿಗ್ಗೆ ಗಂಟೆ 8.30ಕ್ಕೆ ಭವ್ಯ ಮೆರವಣಿಗೆ, 9.30ರಿಂದ ಹಿರಿಯ ಭಜನಾ ತರಬೇತಿದಾರರು ಮೈಸೂರು ರಾಜೇಶ್ ಪಡಿಯಾರ್ ಇವರಿಂದ ಕುಣಿತ ಮತ್ತು ಕುಳಿತು ಭಜನಾ ತರಬೇತಿ ನಡೆಯಲಿದೆ. ಪೂರ್ವಾಹ್ನ ಗಂಟೆ 11ಕ್ಕೆ ಉಡುಪಿ ಶ್ರೀ ಸೋದೆ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದಾರೆ.
ತಿಂಗಳ ಭಜನಾ ಅಭಿಮಾನ-ಅಭಿಯಾನವನ್ನು ಮಾಣಿಲ ಶ್ರೀ ಮೋಹನ್ ದಾಸ ಪರಮಹಂಸ ಸ್ವಾಮೀಜಿ, ವಾರದ ಭಜನೆಗೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಆಶಯದ ಮಾತುಗಳನ್ನಾಡಲಿದ್ದಾರೆ. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಮೊದಲಾದವರು ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.