ತಲ್ಲೂರಿನ ಸರಕಾರಿ ಪ್ರೌಢ ಶಾಲೆಯಲ್ಲಿ ನೂತನವಾಗಿ ಇಂಟರ್ಯಾಕ್ಟ ಕ್ಲಬ್ ಉದ್ಘಾಟನೆ.

ರೋಟರಿ ಕ್ಲಬ್ ಕುಂದಾಪುರ ದಕ್ಷಿಣವು ಮಾತೃ ಸಂಸ್ಥೆಯಾಗಿ ತಲ್ಲೂರಿನ ಸರಕಾರಿ ಪ್ರೌಢ ಶಾಲೆಯಲ್ಲಿ ಹೊಸದಾಗಿ ಇಂಟರ್ಯಾಕ್ಟ ಕ್ಲಬ್ ಪ್ರಾರಂಭಿಸಿದರು. ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ರೋ. ಸತ್ಯನಾರಾಯಣ ಪುರಾಣಿಕ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿದರು.
ಇಂಟರ್ಯಾಕ್ಟ ಸಂಯೋಜಕಿ ರೋ. ಜುಡಿತ್ ಮೆಂಡೋನ್ಸಾ ಇಂಟರ್ಯಾಕ್ಟ ಕ್ಲಬ್ ನ ಧ್ಯೇಯ ಉದ್ದೇಶಗಳ ಬಗ್ಗೆ ತಿಳಿಸಿದರು.ಕಾರ್ಯದರ್ಶಿ ಸಚಿನ್ ನಕ್ಕತ್ತಾಯ, ಶಾಲಾ ಮುಖ್ಯೋಪಾಧ್ಯಾಯ ಶ್ರೀಮತಿ ಬೀರಮ್ಮ ಹಾಗೂ ಶಿಕ್ಷಕರಾದ ಶ್ರೀ ಚೆನ್ನಯ್ಯ ಪಾಲ್ಗೊಂಡಿದ್ದರು.

ರೋಟರಿ ಕುಂದಾಪುರ ದಕ್ಷಿಣದ ಸದಸ್ಯರಾದ ರೋ. ಶೋಭಾ ಪಿ ಭಟ್ ತಮ್ಮ ಹುಟ್ಟು ಹಬ್ಬವನ್ನು ವಿಶೇಷ ಮಕ್ಕಳ ವಸತಿ ಶಾಲೆ ಮಾನಸ ಜ್ಯೋತಿಯಲ್ಲಿ ಹಣ್ಣು ಹಂಪಲು ಹಂಚಿ, ದೇಣಿಗೆಯನ್ನು ನೀಡಿ, ಮಕ್ಕಳೊಂದಿಗೆ ಆಚರಿಸಿಕೊಂಡರು.
ರೋಟರಿ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಮಾಜಿ ಅಧ್ಯಕ್ಷರಾದ ರೋ. ಕೆ.ಪಿ.ಭಟ್ , ಕಾರ್ಯದರ್ಶಿ ರೋ. ಸಚಿನ್ ನಕ್ಕತ್ತಾಯ ಹಾಗೂ ಶೋಭಾ ಭಟ್ ರ ಮಕ್ಕಳು ಮತ್ತು ಮೊಮ್ಮಕ್ಕಳು ಪಾಲ್ಗೊಂಡಿದ್ದರು.