ಭಾರತೀಯ ರೆಡ್ ಕ್ರಾಸ್ : ಜನ ಔಷಧಿ ದಿವಸದ ಆಚರಣೆಯ ಕೊನೆಯ ದಿನ ಜನ ಔಷಧಿ ಕೇಂದ್ರದ ಎದುರು ಮಾತ್ರ್ ಶಕ್ತಿ ಅಭಿಯಾನ ಕಾರ್ಯಕ್ರಮ

ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಯಿಂದ ಜನ ಔಷಧಿ ದಿವಸದ ಕೊನೆಯ ದಿನದಂದು ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ದ ಎದುರು ಮಾತ್ರ್ ಶಕ್ತಿ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ವಹಿಸಿ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿ ಗಳಾಗಿ ಲಯನ್ ಪಿ.ಡಿ.ಜಿ. – ವಿ. ಜಿ ಶೆಟ್ಟಿ (ರೆಡ್ ಕ್ರಾಸ್ ರಾಜ್ಯ ಶಾಖೆಯ ಸಮಿತಿ ಸದಸ್ಯರು ಕೂಡಾ) ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ರೆಡ್ ಕ್ರಾಸ್ ಕುಂದಾಪುರ ಶಾಖೆಯ ಕಾರ್ಯ ವೈಖರಿಯನ್ನು ಕೊಂಡಾಡಿದರು. 25 ಜನ ಮಹಿಳೆಯರನ್ನು ಸನ್ಮಾನಿಸಲಾಯಿತು. ಉಪ ಸಭಾಪತಿ ಡಾ. ಉಮೇಶ್ ಪುತ್ರನ್ ಸ್ವಾಗತಿಸಿದರು. ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ ವಂದಿಸಿದರು. ಡಾ. ಸೋನಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ದಲ್ಲಿ ರೆಡ್ ಕ್ರಾಸ್ ಸಮಿತಿಯ ಸದಸ್ಯರುಗಳಾದ ಶಿವರಾಮ ಶೆಟ್ಟಿ (ಖಜಾಂಚಿ) ಗಣೇಶ್ ಆಚಾರ್ಯ, ಎ. ಮುತ್ತಯ್ಯ ಶೆಟ್ಟಿ, ಸೀತಾರಾಮ ನಕ್ಕತ್ತಾಯ, ಸದಾನಂದ ಶೆಟ್ಟಿ, ಅಬ್ದುಲ್ ಬಶೀರ್, ದಿನಕರ ಅರ್ ಶೆಟ್ಟಿ, ಸುಧಾಕರ ಶೆಟ್ಟಿ ಹುಂತ್ರಿಕೆ ಮತ್ತು ಶಂಕರ್ ಶೆಟ್ಟಿ ಉಪಸ್ಥಿತರಿದ್ದರು.