ಭಾ. ರೆ. ಕ್ರಾ. ಸಂಸ್ಥೆ ಕುಂದಾಪುರ ಶಾಖೆಯಿಂದ ಕೇನ್ಸರ್ ರೋಗಿಗೆ ಹತ್ತು ಸಾವಿರ ರೂಪಾಯಿ ದೇಣಿಗೆ

ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಶಾಖೆ ಕೇನ್ಸರ್ ಕಾಯಿಲೆ ಯಿಂದ ಬಳಲುತ್ತಿರುವ ಜಗದೀಶ್ ಖಾರ್ವಿ ಇವರಿಗೆ ಹತ್ತು ಸಾವಿರ ರೂಪಾಯಿ ದೇಣಿಗೆ ಯನ್ನು ರೋಗಿಯ ಪುತ್ರ ನಿರಂಜನ್ ಇವರಿಗೆ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಹಸ್ತಾಂತರಿಸಿದರು. ಈ ದೇಣಿಗೆಯನ್ನು ನಮ್ಮ ಸದಸ್ಯರಾದ ಶ್ರೀಮತಿ ಪ್ರತಿಮಾ ಮತ್ತು ಡಾ. ದಿನಕರ ಶೆಟ್ಟಿ ಇವರು ಕೊಡಮಾಡಿದರು. ಈ ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾದ ಗಣೇಶ ಆಚಾರ್ಯ ಉಪಸ್ಥಿತರಿದ್ದರು