ಪ್ರಭಾವಿ ನಾಯಕ ರಿಯಾಜ್ ಪಟೇಲ್ ಮತ್ತು ಇತರರು ಕೈ ಪಾಲು

JANANUDI.COM NETWORK


ಬೆಳಗಾವಿ :ಜೆಡಿಎಸ್ ನಾಯಕ ಹಾಗೂ ಖಾನಾಪುರ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷ ರಿಯಾಜ್ ಪಟೇಲ್ ಹಾಗೂ ಇತರೆ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಬೆಳಗಾವಿಯ ಗಾಂಧಿಭವನದಲ್ಲಿ ಬುಧವಾರ (೨೨-೧೨-೨೧) ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ “ನಮ್ಮ ನಡೆ ಐಕ್ಯತೆ ಮತ್ತು ವಿಶ್ವಾಸದ ಕಡೆ” ಕಾರ್ಯಕ್ರಮದಲ್ಲಿ ಈ ನಾಯಕರು ಕೈ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ರಿಜ್ವಾನ್ ಅರ್ಶದ್, ಖನೀಜ್ ಫಾತಿಮಾ, ರಹೀಂ ಖಾನ್, ಎಂಎಲ್ಸಿಗಳಾದ ನಜೀರ್ ಅಹಮದ್, ಚನ್ನರಾಜ್ ಹಟ್ಟಿಹೊಳಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್, ಮಾಜಿ ಸಚಿವರಾದ ತನ್ವೀರ್ ಸೇಠ್, ಎ.ಬಿ. ಪಾಟೀಲ್, ವೀರಕುಮಾರ್ ಪಾಟೀಲ್, ಮುಖಂಡರಾದ ಫಿರೋಜ್ ಸೇಠ್, ನಿಕೇತ್ ರಾಜ್, ರಾಜು ಸೇಠ್, ಸಿಖ್ ಸಮುದಾಯದ ಓಂಕಾರ್ ಸಿಂಗ್ ಭಾಟಿಯಾ, ಕ್ರೈಸ್ತ ಧರ್ಮಗುರು ಬಿಷಪ್ ಡೆರಿಕ್ ಫರ್ನಾಂಡಿಸ್ ಮತ್ತಿತರ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.