ನಾರಾಯಣ ವಿಶೇಷ ಮಕ್ಕಳ ಶಾಲೆ ಯಲ್ಲಿ ವಿಶೇಷ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ

JANANUDI.COM NETWORK


ಕುಂದಾಪುರ, ಮಾ. 3: ದಿನಾಂಕ 02.03.2022ರಂದು ನಾರಾಯಣ ವಿಶೇಷ ಮಕ್ಕಳ ಶಾಲೆ ಯಲ್ಲಿ ವಿಶೇಷ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಕ್ರಮವು ಪಾಲಕರ ಸಭೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶರತ್ ಚಂದ್ರ ಶೆಟ್ಟಿ ನ್ಯಾಯವಾದಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಮಕ್ಕಳ ಹಕ್ಕುಗಳು, ಪೋಷಕರ ಮತ್ತು ಸಂಸ್ಥೆಯ ಜವಾಬ್ದಾರಿಗಳ ಬಗ್ಗೆ ಹಾಗೂ ವಿಶೇಷ ಮಕ್ಕಳಿಗೆ ಕಾನೂನಿನ ಲ್ಲಿ ಇರುವ ಅವಕಾಶಗಳ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ವಕೀಲರಾದ ಟಿ.ಬಿ ಶೆಟ್ಟಿ ಯವರು ಮಾತನಾಡಿ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ ಸಳ್ವಾಡಿ ನಿರಂಜನ ಹೆಗಡೆಯವರು ವಿಶೇಷ ಮಕ್ಕಳಿಗೆ ಸಮಾಜದ ಕಾಳಜಿಯ ಅವಶ್ಯಕತೆ ಇದೆ ಮತ್ತು ಈ ನಿಟ್ಟಿನಲ್ಲಿ ವಕೀಲರ ಸಂಘದಿಂದ ಸಾಧ್ಯ ವಾಗುವ ಎಲ್ಲಾ ನೆರವುಗಳನ್ನ ನೀಡಲಾಗುವುದು ಎಂದರು. ವಕೀಲರಾದ ರಾಜು ಪೂಜಾರಿಯವರು ಮತ್ತು ಪಂಚಾಯತ್ ಸದಸ್ಯರಾದ ಜುಡಿತ್ ಮೆಂಡೋನ್ಸಾರವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ರೇಮರವರು ಸ್ವಾಗತಿಸಿದರು ಮತ್ತು
ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು . ಸಹಶಿಕ್ಷಕಿ ಶ್ರೃತಿ ವಂದಿಸಿದರು. ಸಹ ಶಿಕ್ಷಕಿ ದೀಪಾ ಕಾರ್ಯಕ್ರಮ ನಿರೂಪಿಸಿದರು.