

ಶ್ರೀನಿವಾಸಪುರ: ಕೋಲಾರದಿಂದ ಶ್ರೀನಿವಾಸಪುರಕ್ಕೆ ಬಂದ ಜೆಡಿಎಸ್ ವಿಜೇತ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಅವರನ್ನು ಪಟ್ಟಣದ ಹೊರವಲಯದ ವೇಣು ವಿದ್ಯಾಸಂಸ್ಥೆ ಸಮೀಪ ಬರುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿ.ಕೆ.ವೆಂಕಟಶಿವಾರೆಡ್ಡಿ ಮತದಾರರಿಗೆ ಕೃತಜ್ಞತೆ ಅರ್ಪಿಸಿ ಮಾತನಾಡಿ, ‘ಇದು ನನ್ನ ಗೆಲುವಲ್ಲ. ಸಮಾಜದ ಎಲ್ಲ ವರ್ಗದ ಸ್ವಾಭಿಮಾನಿ ಮತದಾರರ ಗೆಲುವು. ಕ್ಷೇತ್ರದ ಸರ್ವಜನಾಂಗದ ಗೆಲುವು. ಈಗ 144ನೇ ಸೆಕ್ಷನ್ ಜಾರಿಯಲ್ಲಿದೆ. ನಾಲ್ಕೈದು ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಅರ್ಪಿಸಲಾಗುವುದು. ಗಲಾಟೆಗೆ ಆಸ್ಪದ ನೀಡಬಾರದು ಎಂದು ಹೇಳಿದರು. ಎಂದು ಹೇಳಿದರು.
ಮುಖಂಡರಾದ ಬಿ.ವಿ.ಶಿವಾರೆಡ್ಡಿ, ಆರ್.ನಾರಾಯಣಸ್ವಾಮಿ, ಎಂ.ವಿ.ಶ್ರೀನಿವಾಸ್, ಶೇಷಾಪುರ ಗೋಪಾಲ್, ಗಾಯಿತ್ರಿ ಮುತ್ತಪ್ಪ ಇದ್ದರು.
