

ಕಾರವಾರ ; ಕಥೊಲಿಕ್ ಅಸೋಸಿಯೇಷನ್ ಡಾಯಸಿಸ್ ಆಫ್ ಕಾರವಾರ ವತಿಯಿಂದ ಧರ್ಮಪ್ರಾಂತ್ಯದ ಮಟ್ಟದಲ್ಲಿ ರಾಜಕೀಯ ಜಾಗೃತಿ ಶಿಬಿರವನ್ನು 06-04-2025ರಂದು ಆದಿತ್ಯವಾರ ಕುಮಟಾ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರವಾರ ಧರ್ಮಪ್ರಾಂತ್ಯದ ಪ್ರಧಾನ ಧರ್ಮಗುರುಗಳಾದ ಮೊನ್ಸಿಜ್ಞೊರ್ ರಿಚರ್ಡ್ ರೊಡ್ರಿಗಸ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಅಖಿಲ ಭಾರತ ಕಥೊಲಿಕ್ ಯೂನಿಯನ್ ಇದರ ಕರ್ನಾಟಕ ಪ್ರಾಂತ್ಯದ ರಾಜ್ಯಾಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಶ್ರೀ ಆಲ್ವಿನ್ ಡಿಸೋಜರವರನ್ನು ಸನ್ಮಾನಿಸಲಾಯಿತು. ಇಂದಿನ ಪರಿಸ್ಥಿತಿಯಲ್ಲಿ ರಾಜಕೀಯಕ್ಕೆ ಕೊಂಕಣಿಗರ ಅಗತ್ಯತೆ ಬಗ್ಗೆ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು, ಮತ್ತು ಪ್ರಸ್ತುತ ರಾಜಕೀಯ ಆಗೂಹೋಗುಗಳ ಬಗ್ಗೆ ಶ್ರೀ ಆಲ್ವಿನ್ ಡಿಸೋಜರವರು ಮಾತಾನಾಡಿದರು. ಕಾರ್ಯಕ್ರಮದಲ್ಲಿ ಕಥೊಲಿಕ್ ಅಸೋಸಿಯೇಷನ್ ಡಯಾಸಿಸ್ ಆಫ್ ಕಾರವಾರದ ಅಧ್ಯಕ್ಷರಾದ ಶ್ರೀ ಜೋರ್ಜ್ ಫೆರ್ನಾಂಡಿಸ್, ಉಪಾಧ್ಯಕ್ಷರಾದ ಶ್ರೀ ಸ್ಟಿಫನ್ ರೊಡ್ರಿಗಸ್, ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

















