ಕಟ್ಟೆ ಗೋಪಾಲಕೃಷ್ಣ ರಾವ್  ಆತ್ಮಹತ್ಯೆ  ಪ್ರಕರಣದಲ್ಲಿ ಮೊಳಹಳ್ಳಿ ಗಣೇಶ ಶೆಟ್ಟಿ ಬಂಧನ

JANANUDI.COM NETWORK

ಕುಂದಾಪುರ: ಕೋಟೇಶ್ವರದ ಅಂಕದಕಟ್ಟೆ ಎಂಬಲ್ಲಿ ಗುರುವಾರ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಉದ್ಯಮಿ ಚಾರ್ಟೆಡ್ ಎಕಾಂವ್ಟೆಡ್  ಮೊಳಹಳ್ಳಿ ಗಣೇಶ ಶೆಟ್ಟಿಯವರನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ.    ಮೃತರ ಪುತ್ರ ಸುಧೀಂದ್ರ ಕಟ್ಟೆ ತಂದೆಯ ಸಾವಿಗೆ ಮೊಳಹಳ್ಳಿ  ಗಣೇಶ ಶೆಟ್ಟಿ ಮತ್ತು ಬ್ರೊಕರ್ ಇಸ್ಮಾಯಿಲ್ ಅವರ ಪ್ರಚೋದನೆಯೇ ಕಾರಣ ಎಂದು ದೂರು ನೀಡಿದ್ದು ಸೆಕ್ಷನ್ 306 ಪ್ರಕಾರ ಪ್ರಕರಣ ದಾಖಲಾಗಿತ್ತು. ಪ್ರಕರಣ ಅರೋಪಿಗಳ ಪ್ಯೆಕಿ ಗಣೇಶ ಶೆಟ್ಟಿ ಬಂಧಿಸಲ್ಪಟ್ಟಿದ್ದು ಇನ್ನು ಇಸ್ಮಾಯಿಲ್ ಬಂಧನಕ್ಕೆ ಬಲೆಬೀಸಲಾಗಿದೆ