ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವನಸೀರ್ ಅಹಮದ್‍ರಿಗೆ ಕೋಲಾರ ಕಾಂಗ್ರೆಸ್ ಅಭಿನಂದನೆ

ಕೋಲಾರ:- ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಸಿದ್ದರಾಮಯ್ಯ ನೀಡಿರುವ ಭರವಸೆಗಳ ಈಡೇರಿಕೆಗೆ ನಿರಂತರವಾಗಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಭರವಸೆ ನೀಡಿದರು.
ಇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆತ್ಮೀಯವಾಗಿ ಸನ್ಮಾನಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.
ಕೋಲಾರಕ್ಕೆ ಸಿದ್ದರಾಮಯ್ಯ ಅವರೇ ಅಭ್ಯರ್ಥಿಯಾಗಿ ಶಾಸಕರಾಗಬೇಕಾಗಿತ್ತು ಆದರೆ ಕಾರಣಾಂತರಗಳಿಂದ ಈ ಅವಕಾಶ ಕೊತ್ತೂರು ಮಂಜುನಾಥ್ ಅವರ ಪಾಲಾಗಿದೆ, ಅವರೂ ಸಹಾ ಅಭಿವೃದ್ದಿಯ ಪರವಾಗಿದ್ದು, ಉತ್ತಮ ಕಾರ್ಯ ಮಾಡಲಿದ್ದಾರೆ ಎಂದರು.
ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ಆಶಯದೊಂದಿಗೆ ವಿವಿಧ ಸಭೆಗಳಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಕೋಲಾರದ ಅಭಿವೃದ್ದಿಗೆ ಅವರು ನೀಡಿದ್ದ ಭರವಸೆಗಳ ಈಡೇರಿಕೆಗೆ ಬದ್ದರಾಗಿದ್ದು, ಎಲ್ಲಾ ಅಭಿವೃದ್ದಿ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ಅವರ ಗಮನಸೆಳೆಯುವುದಾಗಿ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಜಿಲ್ಲಾ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್, ಅಲ್ಪಸಂಖ್ಯಾತವಿಭಾಗದ ಅಧ್ಯಕ್ಷ ಇಕ್ಬಾಲ್ ಅಹಮದ್, ಕ್ಯಾಲನೂರು ಬಾಬು, ಕಾರ್ಮಿಕ ಘಟಕದ ಯಲ್ಲಪ್ಪ, ಹಾರೋಹಳ್ಳಿ ಶ್ರೀನಿವಾಸ್,ಮೋಚಿಪಾಳ್ಯ ನಾಗೇಶ್, ಗಾಂಧಿನಗರ ರಾಮಣ್ಣ, ನಾಗರಾಜ್,ಹಾರೋಹಳ್ಳಿ ರೆಡ್ಡಿ, ನರಸಾಪುರ ಸಾಹಿದ್,ಗ್ರಾಮಾಂತರ ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷ ಜಗನ್,ಚನ್ನಸಂದ್ರದ ಮುನಿರಾಜು, ವೆಂಕಟೇಶ್, ದೇವಪಲ್ಲಿ ಸೀನಪ್ಪ ಮತ್ತಿತರರಿದ್ದರು.