ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಕೋಣಿ ಮಾನಸ ಜ್ಯೋತಿ ವಿಶೇಷ ಚೇತನರ ಶಾಲಾ ಮಕ್ಕಳಿಗೆ ಉಪಹಾರ ಮತ್ತು ಶಾಲೆಗೆ ಹತ್ತು ಸಾವಿರ ರೂಪಾಯಿ ದೇಣಿಗೆ

ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಕೋಣಿ ಮಾನಸ ಜ್ಯೋತಿ ವಿಶೇಷ ಚೇತನರ ಶಾಲೆಗೆ ಬೇಟಿ ನೀಡಿ ಮಕ್ಕಳಿಗೆ ಉಪಹಾರ ಅಲ್ಲದೇ ಶಾಲೆಗೆ ಹತ್ತು ಸಾವಿರ ರೂಪಾಯಿ ದೇಣಿಗೆ ನೀಡಲಾಯಿತು. ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಯವರು ಶಾಲೆಯ ವಾರ್ಡನ್ ಗೆ ಹಸ್ತಾಂತರಿಸಿದರು. ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಎ. ಮುತ್ತಯ್ಯ ಶೆಟ್ಟಿ ಮತ್ತು ಸಿಭಂದಿಗಳು ಉಪಸ್ಥಿತರಿದ್ದರು.