ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ

JANANUDI.COM NETWORK

ಕುಂದಾಪುರ, ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಕಾರ್​ಗೆ ಕೆ ಎಸ್ ಆರ್ ಟಿ ಸಿ ರಸ್ತೆ ಕ್ರಾಸ್ ಮಾಡುವ ಸಂಧರ್ಭ ಬಿಡದಿ ಸಮೀಪದ ಕಸದಂಬ ಹೋಟೇಲ್ ಮುಂಭಾಗದಲ್ಲಿ ಪೆಟ್ರೋಲ್ ಹಾಕಿಕೊಂಡ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಕಾರು ಅಪಘಾತಕ್ಕಿಡಾಗಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಸಚಿವರು ಸೇರಿ ಯಾರಿಗೂ ಅಪಾಯವಾಗಿಲ್ಲ. ಕಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೆ ಎಸ್ ಆರ್ ಟಿ ಸಿ ಬಸ್ ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿತ್ತು. ಅಪಘಾತದಲ್ಲಿ ಕಾರಿನ‌ ಒಂದು ಭಾಗ ಸಂಪೂರ್ಣ ಜಖಂ ಗೊಂಡಿದೆ