ಕೋಲಾರ ಶ್ರೀನಿವಾಸಪುರ ರಾಯಲ್ಪಾಡು ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಭೇಟಿ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು . ಈ ಹಿಂದೆ ಸಹ ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊರರಾಜ್ಯದ ಮಹಾರಾಷ್ಟ್ರ ,ಆಂಧ್ರಪ್ರದೇಶ, ತಮಿಳುನಾಡು ,ರಾಜಕಾರಣಿಗಳು ಸಹ ದೇವರ ದರ್ಶನ ಪಡೆದಿದ್ದಾರೆ ಚಿತ್ರನಟ ಚಿರಂಜೀವಿ ಅವರು ಸಹ ಪ್ರಸಿದ್ಧ ಜ್ಯೋತಿಷ ತಜ್ಞರಾದ ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಬಳಿ ಭವಿಷ್ಯದ ಬಗ್ಗೆ ಚರ್ಚೆ ಆಶೀರ್ವಾದ ಪಡೆದು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಡಿ.ಕೆ.ಶಿವಕುಮಾರ್‌ ದೇವರ ದರ್ಶನ ಪಡೆದರು ಅರ್ಚಕರಾದ ವಿಶ್ವನಾಥಶಾಸ್ತ್ರಿ ಅವರು ವಿಶೇಷ ಪೂಜೆ ನೆರವೇರಿಸಿದರು . ನಂತರ ಪ್ರಸಿದ್ಧ ಜ್ಯೋತಿಷ ಶಾಸ್ತ್ರ ತಜ್ಞರಾದ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರ ಬಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದರು . ನಂತರ ಅವರನ್ನು ವೆಲ್ಲಾಲ ಸತ್ಯ ನಾರಾಯಣಶಾಸ್ತ್ರಿ ಮತ್ತು ಸಹೋದರ ವಿಶ್ವನಾಥಶಾಸ್ತ್ರಿ ಅವರು ದೇವಸ್ಥಾನ ಆವರಣದಲ್ಲಿ ಸನ್ಮಾನಿಸಿದರು . ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ , ನಿರ್ದೇಶಕ ಅನಿಲ್‌ಕುಮಾರ್‌ ಇದ್ದರು .