ಉಪ್ಪುಂದ ಚಂದ್ರಶೇಖರ ಹೊಳ್ಳ ದಂಪತಿಗೆ ಸನ್ಮಾನ

ಗ್ರಾಮೀಣಾಭಿವೃದ್ಧಿ ಹಾಗೂ ಕುಂದ ಕನ್ನಡ ಸಾಹಿತ್ಯ ಅಭಿವೃದ್ಧಿಯಲ್ಲಿ ಉತ್ತಮ ಸಾಧನೆ ಮಾಡಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ ಕುಂದ ಅಧ್ಯಯನ ಕೇಂದ್ರ ಉಪ್ಪುಂದ ಸಂಸ್ಥೆಯ ಮುಖ್ಯಸ್ಥ ಉಪ್ಪುಂದ ಚಂದ್ರಶೇಖರ ಹೊಳ್ಳ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ವರಮಹಾಲಕ್ಷ್ಮಿ ಹೊಳ್ಳ ದಂಪತಿಯನ್ನು ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಅವರ ಉಪ್ಪುಂದದ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ್, ಸುರೇಖಾ ಪುರಾಣಿಕ, ಕಾರ್ಯದರ್ಶಿ ಸಚಿನ್ ನಕ್ಕತ್ತಾಯ, ಮಾಜಿ ಅಧ್ಯಕ್ಷ ಯು.ಎಸ್ ಶೆಣೈ ಹಾಗೂ ಲೇಖಕ ಕೋ. ರಮಾನಂದ ಕಾರಂತ ಹೊಳ್ಳ ದಂಪತಿಯನ್ನು ಗೌರವಿಸಿದರು.