

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರು ತಾಲೂಕು ಆಯುಷ್ ಆಸ್ಪತ್ರೆ ಕುಂದಾಪುರ ಇಲ್ಲಿಗೆ ರೂಪಾಯಿ 56,600 ಮೌಲ್ಯದ ಔಷಧ ಗಳನ್ನು ಉಚಿತವಾಗಿ ನೀಡಿದರು. ಇದನ್ನು ಆಯುಷ್ ಆಸ್ಪತ್ರೆಯ ವೈದ್ಯರಾದ ಅಶೋಕ್ ಎಚ್. ಇವರಿಗೆ ರೆಡ್ ಕ್ರಾಸ್ ಸಭಾಪತಿ ಎಸ್. ಜಯಕರ ಶೆಟ್ಟಿ ಹಸ್ತಾಂತರಿಸಿದರು. ಈ ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಗಣೇಶ್ ಆಚಾರ್ಯ, ಸದಾನಂದ ಶೆಟ್ಟಿ ಮತ್ತು ಬಿ. ಎಮ್. ಚಂದ್ರಶೇಖರ್ ಹಾಗೂ ಆಸ್ಪತ್ರೆಯ ಸಿಭಂಧಿಗಳು ಉಪಸ್ಥಿತರಿದ್ದರು.
