ಕುಂದಾಪುರ : ಎಮ್.ಸಿ.ಸಿ. ಬ್ಯಾಂಕಿನಿಂದ ಶಾಲಾ ವಿದ್ಯಾಥಿಗಳಿಗೆ ಪುಸ್ತಕ ಮತ್ತು ಕೊಡೆಗಳ ವಿತರಣೆ


ಕುಂದಾಪುರ,ಜೂ.16: ಕುಂದಾಪುರ ರೋಜರಿ ಚರ್ಚಿನ, ಸಂತ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಯ ಸಂತ ಮೇರಿಸ್ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಸಂತ ಮೇರಿಸ್ ಪ್ರೌಢ ಶಾಲೆ, ಹೋಲಿ ರೋಜರಿ ಆಂಗ್ಲಾ ಮಾದ್ಯಮ ಶಾಲೆ ಮತ್ತು ಸಂತ ಮೇರಿಸ್ ಪದವಿ ಪೂ.ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ ಎಮ್.ಸಿ.ಸಿ. ಬ್ಯಾಂಕ್ ವತಿಯಿಂದ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಪುಸ್ತಕ ಮತ್ತು ಕೊಡೆಗಳ ವಿತರಣೆಯನ್ನು ಇತ್ತೀಚೆಗೆ ಮಾಡಿದರು. ವಿತರಣೆಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಶಪ್ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊರವರು ಸಹಕರಿಸಿದರು.


ಈ ಸಂದರ್ಭದಲ್ಲಿ ಸಂತ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ, ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ, ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ, ಸಂತ ಮೇರಿಸ್ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯಿನಿ ಡೋರಾ ಡಿಸೋಜಾ, ಹೋಲಿ ರೋಜರಿ ಆಂಗ್ಲಾ ಮಾದ್ಯಮ ಶಾಲೆಯ ಮುಖ್ಯೋಪಾದ್ಯಾಯಿನಿ ಸಿಸ್ಟರ್ ತೆರೆಜಾ ಶಾಂತಿ, ಸಂತ ಮೇರಿಸ್ ಪದವಿ ಪೂ.ಕಾಲೇಜಿನ ಪ್ರಾಂಶುಪಾಲೆ ರೇಶ್ಮಾ ಫೆರ್ನಾಂಡಿಸ್, ಬ್ಯಾಂಕಿನ ನಿರ್ದೇಶಕರಾದ ಡಾ.ಜೆರಾಲ್ಡ್ ಪಿಂಟೊ ಮತ್ತು ಕಿರಣ್ ಕ್ರಾಸ್ಟೊ ಉಪಸ್ಥಿತರಿದ್ದರು. ಸಂತ ಮೇರಿಸ್ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯಿನಿ ಅಸುಂಪ್ತಾ ಲೋಬೊ ಸ್ವಾಗತಿಸಿದರು. ಪ್ರಾದ್ಯಪಕ ನಾಗರಾಜ ಶೆಟ್ಟಿ ವಂದಿಸಿದರು. ದೈಹಿಕ ಶಿಕ್ಷಕ ಚಂದ್ರಶೇಖರ್ ಬೀಜಾಡಿ ನಿರೂಪಿಸಿದರು
.