ಕುಂದಾಪುರ ಮಾ.15 : ಸ್ವರ್ಣ ಪಲ್ಲಕ್ಕಿ ಪುರಪ್ರವೇಶ


ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವರಿಗೆ ಸಮರ್ಪಣೆಯಾಗಲಿರುವ ಸ್ವರ್ಣ ಪಲ್ಲಕ್ಕಿಯ ಪುರಪ್ರವೇಶ ಮಾ.15 ರಂದು ಬುಧವಾರ ಜರುಗಲಿದೆ. ಅಂದು ಸಾಯಂಕಾಲ ಘಂಟೆ 6ಕ್ಕೆ ಸ್ವರ್ಣ ಪಲ್ಲಕ್ಕಿಯನ್ನು ಶಾಸ್ತ್ರಿ ಸರ್ಕಲ್‍ನಲ್ಲಿ ಸ್ವಾಗತಿಸಿ ಪುರ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಕೊಂಡೊಯ್ಯಲಾಗುವುದು ಎಂಬುದಾಗಿ ದೇವಳದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ.

ಮಾ.19 ಸ್ವರ್ಣ ಪಲ್ಲಕ್ಕಿ ಸಮರ್ಪಣೆ
ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವರಿಗೆ ಸ್ವರ್ಣ ಪಲ್ಲಕ್ಕಿಯ ಸಮರ್ಪಣಾ ಸಮಾರಂಭ ಮಾ.19 ರಂದು ಆದಿತ್ಯವಾರ ಜರುಗಲಿದೆ. ಅಂದು ಮಧ್ಯಾಹ್ನ ಘಂಟೆ 3ಕ್ಕೆ ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಸ್ವರ್ಣ ಪಲ್ಲಕ್ಕಿಯನ್ನು ಶ್ರೀ ದೇವರಿಗೆ ಸಮರ್ಪಿಸಲಿದ್ದಾರೆ ಎಂಬುದಾಗಿ ದೇವಳದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ.