ಕುಂದಾಪುರ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿನಿ ಪೂರ್ವಿಕಾಳಿಂದ ಭರತನಾಟ್ಯದಲ್ಲಿ ರಾಜ್ಯಮಟ್ಟದ ಸಾಧನೆ


ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿಕಾ ಇವರು ರಾಜ್ಯಮಟ್ಟದ ಕಲೋತ್ಸವ 2022 ಸ್ಪರ್ಧೆಯ ಭರತನಾಟ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನಗಳಿಸಿರುತ್ತಾಳೆ. ಪೂರ್ವಿಕಾಳ ಈ ಉತ್ತಮ ಕಲಾಸಾಧನೆಯನ್ನು ಮೆಚ್ಚಿ, ಕಾಲೇಜಿನ ಸಂಚಾಲಕರಾದ ಶ್ರೀ ಬಿ.‌ಎಮ್. ಸುಕುಮಾರ್ ಶೆಟ್ಟಿ ಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿದ್ದಾರೆ.