ಕುಂದಾಪುರ:ಆರ್. ಎನ್. ಶೆಟ್ಟಿ‌ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ

ಮೊಬೈಲ್, ಟಿ.ವಿ ಯಂಥ ಯಾವುದೇ ತಾಂತ್ರಿಕ ಉಪಕರಣಗಳಿಲ್ಲದ ಪ್ರಾಚೀನ ಕಾಲದಿಂದಲೂ ಗುರುವೇ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಶಕ್ತಿಯಾಗಿದ್ದರು. ಇಂದಿಗೂ ವಿದ್ಯಾರ್ಥಿ- ಶಿಕ್ಷಕ ಸಂಬಂಧ ನಾಜೂಕತೆಯಿಂದ ಕೂಡಿದ್ದಾಗಿದೆ. ಪ್ರತಿಯೊಂದು ವಿಷಯವನ್ನು ಕೂಲಂಕಷವಾಗಿ ಗಮನಿಸುವ ವಿದ್ಯಾರ್ಥಿಗಳಿಗೆ ಶಿಕ್ಷಕರೂ ಎಲ್ಲ ಆಯಾಮಗಳಿಂದಲೂ ಆದರ್ಶರಾಗಿರಬೇಕು’ಎಂದು ಆರ್‌. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆಯ ಪ್ರಯಕ್ತ ಆಯೋಜಿಸಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಸಂಖ್ಯಾಶಾಸ್ತ್ರ ಪಾಧ್ಯಾಪಕರಾದ ಪ್ರೊ.ಬಾಲಕೃಷ್ಣ ಭಟ್ ರವರು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಶಿಕ್ಷಕರು ತರಗತಿಯ ಒಳಗೂ- ಹೊರಗೂ ವಿದ್ಯಾರ್ಥಿಗಳ ಜೀವನವನ್ನು ಉತ್ತಮವಾಗಿ ರೂಪಿಸುವ ವಿಧಾನಗಳನ್ನು ತಿಳಿದುಕೊಳ್ಳುತ್ತಿರಬೇಕು ಎಂದು ಅಭಿಪ್ರಾಯ ಪಟ್ಟರು.ಮುಖ್ಯ ಅತಿಥಿಯವರಾದ ಶ್ರೀ ಬಾಲಕೃಷ್ಣ ಭಟ್ ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರಿಮತಿ ಅರುಣಾ ಐತಾಳ್ ಧನ್ಯವಾದ ಸಲ್ಲಿಸಿದರು‌. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ‌‌‌ ನಾಗರತ್ನಾ ರವರು ಕಾರ್ಯಕ್ರಮ ನಿರೂಪಿಸಿದರು.