ಕುಂದಾಪುರ ರೋಜರಿ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ 2022-23ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಪ್ರಶಸ್ತಿ

ಕುಂದಾಪುರ: ಕುಂದಾಪುರದ ರೋಜರಿ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ 2022-23ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಪ್ರಶಸ್ತಿ ಲಭಿಸಿದೆ. ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಆ.19 ರಂದು ಮಂಗಳೂರಿನಲ್ಲಿ ಜಿಲ್ಲಾ ಬ್ಯಾಂಕಿನ ಉತ್ಕೃಷ್ಠ ಸಹಕಾರಿ ಸೌಧದಲ್ಲಿ ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಮ್‌. ಎನ್‌. ರಾಜೇಂದ್ರ ಕುಮಾರ್‌ ಪ್ರಶಸ್ತಿಯನ್ನು
ಪ್ರದಾನ ಮಾಡಿದರು
.

`ರೋಜರಿ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾದ ಜೋನ್ಸನ್ ಡಿಆಲ್ಮೇಡಾ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೇಬಲ್‌ ಡಿಆಲ್ಮೇಡಾ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್‌ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್‌, ನಿರ್ದೇಶಕರಾದ ಎಸ್‌.ರಾಜು ಪೂಜಾರಿ, ಎಂ. ಮಹೇಶ ಹೆಗ್ಡೆ, ಬಿ.ನಿರಂಜನ್‌, ಟಿ.ಜಿ.ರಾಜಾರಾಮ
ಭಟ್‌, ಎಂ.ವಾದಿರಾಜ ಶೆಚ್ಚಿ, ಐಕಳಬಾವ ದೇವಿಪ್ರಸಾದ್‌ ಶಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರಿಶ್ಚಂದ್ರ ಎಂ, ಜೈರಾಜ್‌ ಬಿ. ರೈ, ಬಿ.ಅಶೋಕ್‌ ಕುಮಾರ್‌ ಶಟ್ಟಿ, ರಾಜೇಶ್‌ ರಾವ್‌, ಸದಾಶಿವ ಉಳ್ಳಾಲ್‌ ಮತ್ತೀತರರು ಉಪಸ್ಥಿತರಿದ್ದರು.