ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆ :ರಕ್ಷಕ-ಶಿಕ್ಷಕ ಸಭೆ

ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಶಾಲಾ ಸಭಾಂಗಣದಲ್ಲಿ ಜೂ.10 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಜಂಟಿ ಕಾರ್ಯದರ್ಶಿಗಳಾದ ಸಿಸ್ಟರ್ ಸುಪ್ರಿಯ ಇವರು ವಹಿಸಿ ಪ್ರತಿ ಮಗುವಿನ ಸಮಗ್ರ ಬೆಳವಣಿಗೆಗೆ ರಕ್ಷಕ -ಶಿಕ್ಷಕರ ಪಾತ್ರ ಮಹತ್ತರವಾದದ್ದು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರೋ, ರಾಜು ಪೂಜಾರಿ ಇವರು ಮಕ್ಕಳು ಶಿಸ್ತು ಹಾಗೂ ಸಂಸ್ಕಾರವನ್ನು ಮನೆಯಲ್ಲಿಯೇ ಕಲಿಯಬೇಕು. ಪೋಷಕರು ಮಕ್ಕಳೆದುರು ಎಂದಿಗೂ ಸುಳ್ಳನ್ನು ಹೇಳಬಾರದು. ಮಕ್ಕಳನ್ನು ಪ್ರೀತಿಯಿಂದ ಮಾತನಾಡಿಸಿ ಅವರ ಆಗುಗಳನ್ನು ಹೋಗುಗಳನ್ನು ವಿಚಾರಿಸುತ್ತಿರಬೇಕು. ಎಲ್ಲಾ ಮಕ್ಕಳಲ್ಲಿ ಸಾಮರ್ಥ್ಯ ಇದೆ ಪೋಷಕರು ಅವರಿಗೆ ಬೇಕಾಗುವ ಸಾಮಗ್ರಿಗಳನ್ನು ಒದಗಿಸಬೇಕು. ಮನೆಯ ಕಷ್ಟದ ಪರಿಸ್ಥಿತಿಯನ್ನು ಮಕ್ಕಳಲ್ಲಿ ಅರಿವು ಮೂಡಿಸಬೇಕು. ಮಕ್ಕಳು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಸಾವಧಾನದಿಂದ ಉತ್ತರಿಸಬೇಕು. ನಿಮ್ಮ ಮಕ್ಕಳನ್ನು ಬೇರೆ ಮಕ್ಕಳೊಂದಿಗೆ ಹೋಲಿಸಬೇಡಿ ಎಂದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು ಶಾಲಾ ವರದಿ ವಾಚಿಸಿದರು.ಶಿಕ್ಷಕರಾದ ಸರ್ ಮೈಕಲ್ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಸರಸ್ವತಿ ಇವರು ವಂದಿಸಿದರು. ಶಿಕ್ಷಕ ಅಶೋಕ್ ದೇವಾಡಿಗ ನಿರೂಪಿಸಿದರು. ಶಿಕ್ಷಕರ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.