ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಮತ ನಾರಾಯಣಸ್ವಾಮಿ, ಉಪಾಧ್ಯಕ್ಷರಾಗಿ ಲಕ್ಷ್ಮಿ ಕೆ.ಪಿ ನಾಗೇಶ್ ಆಯ್ಕೆ

ಶ್ರೀನಿವಾಸಪುರ: ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಮತ ನಾರಾಯಣಸ್ವಾಮಿ, ಉಪಾಧ್ಯಕ್ಷರಾಗಿ ಲಕ್ಷ್ಮಿ ಕೆ.ಪಿ ನಾಗೇಶ್ ಬುಧವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
16 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಮಮತ ನಾರಾಯಣಸ್ವಾಮಿ 8 ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭಾರತಿ 7 ಮತ ಪಡೆದಿದ್ದಾರೆ. 1 ಮತ ತಿರಸ್ಕರಿಸಲ್ಪಟ್ಟಿದೆ. ಉಪಾಧ್ಯಕ್ಷೆ ಲಕ್ಷ್ಮಿ ಕೆ.ಪಿ.ನಾಗೇಶ್ 10 ಮತ ಪಡೆದು ಗೆದ್ದಿದ್ದಾರೆ. ಪ್ರತಿಸ್ಪರ್ಧಿ ಅಮಡಪ್ಪ 6 ಮತ ಪಡೆದಿದ್ದಾರೆ.
ಚುನಾವಣಾಧಿಕಾರಿಯಾಗಿ ಕೆ.ಸಿ.ಮಂಜುನಾಥ್, ಪಿಡಿಒ ಚಿನ್ನಪ್ಪ ಚುನಾವಣಾ ಕರ್ತವ್ಯ ನಿರ್ವಹಿಸಿದರು.
ಚುನಾವಣೆ ಮುಗಿದ ಬಳಿಕ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಗೆದ್ದ ಅಭ್ಯರ್ಥಿಗಳು ಹಾಗೂ ಜೆಡಿಎಸ್ ಮುಖಂಡರೊಂದಿಗೆ ಸಂತೋಷ ಹಂಚಿಕೊಂಡರು. ರಾಮಚಂದ್ರೇಗೌಡ, ಕೆ.ಪಿ.ನಾಗೇಶ್, ಎಂ.ಆರ್.ರಾಜಣ್ಣ, ರಮೇಶ್, ನಾರಾಯಣಸ್ವಾಮಿ ಇದ್ದರು.