ಮಂಗಳೂರು:ಕಾರು ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ, ಪ್ರಪಾತಕ್ಕೆ ಉರುಳುದು ಸ್ವಲ್ಪದರಲ್ಲೇ ಪಾರಾಗಿ ಅದೃಷ್ಟವಶಾತ್ ಮೂವರು ಬಚಾವ್

ಮಂಗಳೂರು. ನಗರದ ಕದ್ರಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದಿದೆ. ಕಾರಿನಲ್ಲಿನಲ್ಲಿದ್ದವರು ಅದೃಷ್ಟವಶಾತ್ ಅಲ್ಪ ಸ್ವಲ್ಪ ಗಾಯಗಳಾಗಿ ಪಾರಾಗಿದ್ದಾರೆ. ಸ್ವಲ್ಪವೂ ಹೆಚ್ಚು ಕಡಿಮೆ ಆದಲ್ಲಿ ಕಾರು ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳಿ ದೊಡ್ಡ ಅನಾಹುತವಾಗುವುದು ತಪ್ಪಿದಂತಾಗಿದೆ.

   ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ್ಯರಾಗಿ ಪಾರಾಗಿದ್ದಾರೆ. ಶುಕ್ರವಾರ ತಡರಾತ್ರಿ ಸುಮಾರು 12.30ರ ವೇಳೆಗೆ ಅಪಘಾತ ನಡೆದಿದೆ. ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಅಲ್ಲಿದ್ದ ಪ್ರಪಾತದ ಹತ್ತಿರದಲ್ಲಿದ್ದ ಗಿಡ ಗಂಟಿಗಳ ಮಧ್ಯೆ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಗೆ ರಸ್ತೆಯ್ ಲೈಟ್ ಕಂಬ ಉರುಳಿ ದೂರಕ್ಕೆ ಎಸೆಯಲ್ಪಟ್ಟಿದೆ. ಸಂಚಾರಿ ಪೊಲೀಸರು ಪ್ರಕರಣವನ್ನು ದಾಖಲು ಮಾಡಿ ಕೊಂಡಿದ್ದಾರೆ.