ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ಮಾಹಿತಿ ಮತ್ತು ಉಚಿತ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ

JANANUDI.COM NETWORK

ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ದಿನಾಂಕ ೨೨.೧೨.೨೦೨೧ ರಂದು ಪಾಲಕರ ಸಭೆಯಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ನ ಕುರಿತಂತೆ ಮಾಹಿತಿ ಕಾರ್ಯಾಗಾರ ಮತ್ತು ನಾರಾಯಣ ವಿಶೇಷ ಶಾಲೆಯ ಮಕ್ಕಳಿಗೆ ಉಚಿತ ಮಣಿಪಾಲ ಆರೋಗ್ಯ ಕಾರ್ಡ್ ನ ವಿತರಣೆ ನಡೆಯಿತು. ಮಣಿಪಾಲ ಕೆ.ಎಮ್.ಸಿ ಮಾರ್ಕೆಟಿಂಗ್ ವಿಭಾಗದ ಮುಖ್ಯ ಪ್ರಬಂಧಕರಾದ ಸಚಿನ್ ಕಾರಂತ್ ಮಣಿಪಾಲ ಆರೋಗ್ಯ ಕಾರ್ಡ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಮತ್ತು ಅದರ ಉಪಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ವಿಶೇಷವಾಗಿ ನಾರಾಯಣ ವಿಶೇಷ ಮಕ್ಕಳ ಶಾಲೆಯ ಎಲ್ಲಾ ಮಕ್ಕಳಿಗೂ ಉಚಿತ ಆರೋಗ್ಯ ಕಾರ್ಡ್ ನ್ನು ಅತಿಥಿಗಳು ವಿತರಿಸಿದರು. ಕಾರ್ಯಕ್ರಮದಲ್ಲಿ ಎಂಡೋಸಲ್ಫಾನ್ ಪೀಡಿತ ಏರಿಯಗಳಲ್ಲಿ ಬಳಲುತ್ತಿರುವ ವಿಶೇಷ ಚೇತನ ಮಕ್ಕಳ ದತ್ತಾಂಶ ಕಲೆಹಾಕುವ ಕುರಿತಂತೆ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಶ್ರೀಮತಿ ತಿಲೋತ್ತಮ ನಾಯಕ್ ರವರು ಮಕ್ಕಳ ಪೋಷಕರಿಗೆ ಮಾಹಿತಿಯನ್ನು ನೀಡಿದರು.
ಸಮಾರಂಭದಲ್ಲಿ ಕೆ.ಎಮ್.ಸಿ ಮಣಿಪಾಲ ಮಾರ್ಕೆಟಿಂಗ್ ವಿಭಾಗದ ಪ್ರಬಂಧಕರಾದ ಮೋಹನ್, ಎಕ್ಸಿಕ್ಯೂಟಿವ್ ಅನಿಲ್ ಮತ್ತು ಏಜೆಂಟ್ ರಕ್ಷಿತ್ ಶೆಟ್ಟಿ ವಂಡ್ಸೆರವರು ಉಪಸ್ಥಿತರಿದ್ದರು. ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು ಮುಖ್ಯ ಶಿಕ್ಷಕಿ ಪ್ರೇಮಾ ರವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಶ್ರುತಿರವರು ಧನ್ಯವಾದಗೈದರು
.