ಶ್ರೀನಿವಾಸಪುರ:ಪಟ್ಟಣದ ಮಾರುತಿ ಸಭಾ ಭವನವನ್ನು ಮಾ.3 ರಂದು ಲೋಕಾರ್ಪಣೆ ಮಾಡಲಾಗುವುದು

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದಲ್ಲಿ ಮಾರುತಿ ಸಭಾ ಭವನವನ್ನು ಮಾ.3 ರಂದು ಬೆಳಿಗ್ಗೆ 9.35 ಗಂಟೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ತಾಲ್ಲೂಕು ಆರ್ಯವೈಶ್ಯ ಮಂಡಳಿ ಟ್ರಸ್ಟ್ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್ ಹೇಳಿದರು.
ಪಟ್ಟಣದ ಮಾರುತಿ ಸಭಾ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭಲ್ಲಿ ಭವನ ಉದ್ಘಾಟನೆಯ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಅದೇ ದಿನ ಬೆಳಿಗ್ಗೆ 10.30 ರಿಂದ ಸೀತಾರಾಮ ಕಲ್ಯಾಣೋತ್ಸವ ಏರ್ಪಡಿಸಲಾಗಿದೆ. ಇದರ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್, ಕರ್ನಾಟಕ ಆರ್ಯವೈಶ್ಯ ಮಹಾ ಸಭಾ ಅಧ್ಯಕ್ಷ ಆರ್.ಪಿ.ರವಿಶಂಕರ್, ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ, ಮಾಜಿ ಸದಸ್ಯ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ, ಮಾಜಿ ವಿಧಾನ ಪರಿಷತ್ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ತಾಲ್ಲೂಕು ಆರ್ಯವೈಶ್ಯ ಮಂಡಳಿ ಟ್ರಸ್ಟ್ ಕಾರ್ಯದರ್ಶಿ ಸೂರ್ಯನಾರಾಯಣಶೆಟ್ಟಿ, ಮುಖಂಡರಾದ ಎಂ.ಆರ್.ಆನಂದ್, ವೈ.ಆರ್.ನಾಗೇಂದ್ರ ಬಾಬು, ಸತ್ಯನಾರಾಯಣಶೆಟ್ಟಿ, ಪಾಡುರಂಗಯ್ಯ ಶೆಟ್ಟಿ, ಬದ್ರಿನಾಥ್, ಮೋಹನ್, ಅಮರನಾಥ್, ಅಮರನಾಥ್, ಸುರೇಶ್ ಬಾಬು ಇದ್ದರು
.