ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್ :67ನೇ ಕನ್ನಡ ರಾಜ್ಯೋತ್ಸವ ಆಚರಣೆ

ಮಂಗಳೂರು : 67ನೇ ಕನ್ನಡ ರಾಜ್ಯೋತ್ಸವವನ್ನು 2022ರ ನವಂಬರ್ 1ರಂದು ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್, ಮಂಗಳೂರು ಇಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಲೆಯ ಪ್ರಾಂಶುಪಾಲರು ಎಲ್ಲರನ್ನೂ ಉದ್ದೇಶಿಸಿ ಮಾತನಾಡುತ್ತಾ ಪ್ರದೇಶಗಳಿಗೆ ಅನುಗುಣವಾಗಿ ಕನ್ನಡ ಭಾಷೆಯ ಭಿನ್ನತೆಯ ಕುರಿತು ಹೇಳಿದರು. ‘ಕನ್ನಡವನ್ನು ಉಳಿಸಿ ಬೆಳೆಸಿ’ ಎಂದು ಕರೆ ನೀಡಿದರು. 6ನೇ ತರಗತಿಯ ಭವಿಷ್ ಎಸ್ ಶೆಟ್ಟಿಯವರು ಸ್ವಾಗತಿಸಿದರು. ವಿದ್ಯಾರ್ಥಿಗಳು ಸಮೂಹ ಗೀತೆ ಹಾಗೂ ನಾಡಗೀತೆಯನ್ನು ಹಾಡಿದರು. 9ನೇ ತರಗತಿಯ ಆಲಿವರ್ ರಾಯನ್ ಬ್ರ್ಯಾಗ್ಸ್ ದಿನದ ಮಹತ್ವವನ್ನು ತಿಳಿಸಿದರು.

ಶಾಲೆಯ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿ. ನಿತೀಶ್ ಕುಮಾರ್ ರವರು ವಂದನಾರ್ಪಣೆಗೈದರು, ದರ್ಶನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮವು ನಾಡಗೀತೆಯೊಂದಿಗೆ ಮುಕ್ತಾಯಗೊಂಡಿತು.