ಸಚಿವ ವಿ.ಸೋಮಣ್ಣಗೆ ಬಂಧನದ ಭೀತಿ ಎದುರಾಗಿದೆ 

 JANANUDI.COM NETWORK

ಬೆಂಗಳೂರು, ಮಾ. 28 :ಸಚಿವ ವಿ.ಸೋಮಣ್ಣಗೆ ಬಂಧನ ಭೀತಿ ಎದುರಾಗಿದೆ ಕಾರಣ ಸಚಿವ ವಿ.ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಎದುರಾಗಿದೆ . ಹಾಗಾಗಿ  ಸಚಿವ ವಿ.ಸೋಮಣ್ಣಗೆ ಬಂಧನ ಭೀತಿ ಎದುರಾಗಿದೆ. ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ಮಾರ್ಚ್‌ 30ಕ್ಕೆ ಮುಂದೂಡಿದೆ. ಇನ್ನು ಆಕ್ಷೇಪಣೆ ಸಲ್ಲಿಸಲು ದೂರುದಾರರ ಪರ ವಕೀಲರಿಗೆ ಸೂಚನೆ ನೀಡಿಲಾಗಿದೆ. ಸೋಮಣ್ಣ ಶಾಸಕನಾಗುವ ಮೊದಲಿನ ಆದಾಯ, ನಂತರದ ಆದಾಯ ಗಳಿಕೆ, ಆಸ್ತಿಯ ಸೂಕ್ತ ತನಿಖೆ ಮಾಡಿ ವಿವರಣೆ ನೀಡುವಲ್ಲಿ ಪೊಲೀಸರು ವಿಫಲವಾಗಿದ್ದು, ಅಸಮರ್ಪಕ ತನಿಖೆ ಎಂದು ಕೋರ್ಟ್‌ ಅಭಿಪ್ರಾಯ ಪಟ್ಟಿದೆ. ಇನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಸೋಮಣ್ಣ ಅವರಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಏಪ್ರಿಲ್‌ 16ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್‌ ನೀಡಿತ್ತು.