

ಶ್ರೀನಿವಾಸಪುರ: ಗಡಿ ಭಾಗದಲ್ಲಿ ಕನ್ನಡ ಆಡು ಭಾಷೆಯಾಗಿ ರಾರಾಜಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದಲ್ಲಿ ಜನ ಜಾಗೃತಿ ವೇದಿಕೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಗಡಿ ಭಾಗದಲ್ಲಿ ಕನ್ನಡ ಜನರ ಹೃದಯದ ಭಾಷೆಯಾಗಿದೆ ಎಂದು ಹೇಳಿದರು.
ಈಗ ಗಡಿ ಭಾಗದಲ್ಲಿ ಕನ್ನಡ ಭಾಷಾ ಬಳಕೆ ಸುಧಾರಿಸಿದೆ. ಹೆಚ್ಚಿನ ಸಂಖ್ಯೆಯ ಪೋಷಕರು ತಮ್ಮ ಮಕ್ಕಳನ್ನು ಕನ್ನಡದಲ್ಲಿ ಮಾನಾಡುತ್ತಿದ್ದಾರೆ. ಹಾಗಾಗಿ ಕನ್ನಡ ಹೆಚ್ಚು ಪ್ರಿಯವಾಗುತ್ತಿದೆ. ಹಿರಿಯ ತಲೆಮಾರಿನ ಜನರು ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಜಿ.ಎನ್.ಸುಧೀಂದ್ರ, ಮುಖಂಡರಾದ ಕಾರ್ ಬಾಬು, ಪೂಲ ಶಿವಾರೆಡ್ಡಿ, ಹಳೆಪೇಟೆ ಮಂಜುನಾಥರೆಡ್ಡಿ, ಸಿ.ಮುನಿಯಪ್ಪ, ರಂಗಪ್ಪ, ರಘು, ಸಿ.ರವಿ