

ಶ್ರೀನಿವಾಸಪುರ : ತಾಲೂಕಿನ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿರುವುದು ಶ್ಲಾಘನೀಯ. ಇದೇ ರೀತಿಯಾಗಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ಉನ್ನತ ವ್ಯಾಸಂಗ ಪಡೆದು, ಉನ್ನತ ಪದವಿಯನ್ನು ಪಡೆದು, ತಾಯಿ, ತಂದೆ, ಶಿಕ್ಷಕರಿಗೆ ಒಳ್ಳೇಯ ಹೆಸರು ತರುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.
ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶುಕ್ರವಾರ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇತ್ತೀಚಿಗೆ ನಡೆದ ವಿಧಾನಸಭಾ ಕಲಾಪದಲ್ಲಿ ಎತ್ತಿಹೊಳೆ ನೀರುನ್ನ ನಮಗೆ ಹರಿಸುವಂತೆ ಚರ್ಚೆ ಮಾಡಿದ್ದು, ಈ ಬೇಡಿಕೆಗೆ ಸರ್ಕಾರ ಸಕಾರ್ಮತಕವಾದ ಉತ್ತರವನ್ನು ನೀಡಿದ್ದು ಅತಿ ಶೀಘ್ರವಾಗಿ ತಾಲೂಕಿನ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರನ್ನ ಹರಿಸುವುದಾಗಿ ಭರವಸೆ ನೀಡಿದರು. ಇದರೊಂದಿಗೆ ಅನೇಕ ಕಾರ್ಯಕ್ರಮಗಳ ರೂಪರೇಷಗಳನ್ನು ಹಮ್ಮಿಕೊಂಡಿದ್ದೇನೆ. 25 ಕೋಟಿ ವೆಚ್ಚದಲ್ಲಿ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳನ್ನು ಹಾಗು ತಾಲೂಕಿನ ವಿವಿಧ ಗ್ರಾಮಪಂಚಾಯತಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
ತಹಶೀಲ್ದಾರ್ ಜಿ.ಎನ್.ಸುದೀಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಬೈರೇಗೌಡ, ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಲೋಚನ, ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ, ಪಿಎಸ್ಐ ಜಯರಾಮ್, ಪುರಸಭೆ ಅಧ್ಯಕ್ಷ ಬಿ.ಆರ್.ಭಾಸ್ಕರ್, ಉಪಾಧ್ಯಕ್ಷೆ ಸುನಿತ, ಸದಸ್ಯ ಆನಂದ್ , ಕೊಮುಲ್ ನಿರ್ದೇಶಕ ಕೆ.ಕೆ.ಮಂಜುನಾಥರೆಡ್ಡಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೆಡ್ಡಪ್ಪ, ಕಾರ್ಯದರ್ಶಿ ರಘುನಾಥರೆಡ್ಡಿ, ಟಿಪಿಒ ವೆಂಕಟಸ್ವಾಮಿ , ಪುರಸಭೆ ನಾಮಿನಿ ಸದಸ್ಯರಾದ ನರಸಿಂಹಮೂರ್ತಿ, ಹೇಮಂತ್, ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಮಂಜುನಾಥ್, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


