ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕ, ಜಿ. ಶಂಕರ್ ಫೆಮಿಲಿ ಟ್ರಸ್ಟ್ ಅಂಬಲಪಾಡಿ, ಭಾರತೀಯ ರೆಡ್ ಕ್ರಾಸ್ ಕುಂದಾಪುರ ಘಟಕದ ಆಶ್ರಯದಲ್ಲಿ ರಕ್ತದಾನ ಶಿಬಿರ

ಕುಂದಾಪುರ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ. ಶಂಕರ್ ಫೆಮಿಲಿ ಟ್ರಸ್ಟ್ ಅಂಬಲಪಾಡಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಇವರ ಸಹಯೋಗದೊಂದಿಗೆ ಆಯೋಜಿಸಿದ ರಕ್ತ ದಾನ ಶಿಬಿರವನ್ನು ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ದೀಪಬೆಳಗಿಸಿ ಉದ್ಘಾಟಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದಲ್ಲಿ ನಡೆದ ಈ ಕಾರ್ಯಕ್ರಮ ದಲ್ಲಿ ಮೊಗವೀರ ಯುವ ಸಂಘಟನೆಯ ಅಧ್ಯಕ್ಷರಾದ ಚಂದ್ರಹಾಸ ಕೋಣಿ, ನಿಕಟಪೂರ್ವ ಅಧ್ಯಕ್ಷರಾದ ಕೆ. ಕೆ ಕಾಂಚನ್, ಮಾಜೊ ಜಿಲ್ಲಾ ಯುವ ಅಧ್ಯಕ್ಷರಾದ ಸದಾನಂದ ಬಳ್ಕೂರ್, ನಿಕಟ ಪೂರ್ವ ಅಧ್ಯಕ್ಷರಾದ ಗಣೇಶ್ ಮೆಂಡನ್, ಬಗ್ವಾಡಿ ಹೋಬಳಿಯ ಕೋಶಾಧಿಕಾರಿ ಯಾದ ಸುಧಾಕರ ಕಾಂಚನ್, ರೆಡ್ ಕ್ರಾಸ್ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಗಣೇಶ್ ಆಚಾರ್ಯ ಮತ್ತು ಡಾ. ಸೋನಿ ಉಪಸ್ಥಿತರಿದ್ದರು.