

ಮೂಡ್ಲಕಟ್ಟೆ ಎಂ.ಐ.ಟಿ ಕುಂದಾಪುರದ ಸಾವಿಷ್ಕರ್-2026 ಎರಡನೇ ದಿನದ ಸಂಜೆಯ ಕಾರ್ಯಕ್ರಮದಲ್ಲಿ ಖ್ಯಾತ ಅಂತರಾಷ್ಟ್ರೀಯ ಮಟ್ಟದ ಸಂಗೀತ ನಿರ್ದೇಶಕರಾದ ಶ್ರೀ ರವಿ ಬಸ್ರೂರು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಐ ಎಂ ಜೆ ವಿದ್ಯಾಸಂಸ್ಥೆಗಳ ಚೇರ್ಮನ್ ರಾದ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ, ಐ ಎಂ ಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್ ಎನ್ ಭಟ್ ಹಾಗೂ ಎಂ ಐ ಟಿ ಕುಂದಾಪುರದ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

